Quoteಅನುಮೋದಿತ ಯೋಜನೆಯು ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ಅನ್ನು ಕಡಿಮೆ ಅಂತರದ ರೈಲು ಮಾರ್ಗದ ಮೂಲಕ ಸಂಪರ್ಕಿಸುತ್ತದೆ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ನಡುವೆ ನೇರ ಸಂಪರ್ಕವಿಲ್ಲದ ಪ್ರದೇಶಗಳನ್ನು ಮಹಾರಾಷ್ಟ್ರದ 2 ಜಿಲ್ಲೆಗಳು ಮತ್ತು ಮಧ್ಯಪ್ರದೇಶದ 4 ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ
Quoteಯೋಜನೆಯ ಒಟ್ಟು ವೆಚ್ಚ 18,036 ಕೋಟಿ ರೂಪಾಯಿಗಳು ಮತ್ತು 2028-29 ರ ವೇಳೆಗೆ ಪೂರ್ಣಗೊಳ್ಳಲಿದೆ
Quoteಈ ಯೋಜನೆಯು ನಿರ್ಮಾಣದ ಸಮಯದಲ್ಲಿ ಸುಮಾರು 102 ಲಕ್ಷ ಮಾನವ ದಿನಗಳ ನೇರ ಉದ್ಯೋಗವನ್ನು ಸೃಷ್ಟಿಸುತ್ತದೆ
Quoteಈ ಯೋಜನೆಯು ಬಹು-ಮಾದರಿ ಸಂಪರ್ಕಕ್ಕಾಗಿ ಇದು ಒಂದು ಸಮಗ್ರ ಯೋಜನೆ ಮೂಲಕ ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ನ ಸಂಕಲ್ಪಸದೃಶವಾಗಿದೆ, - ಹಾಗೂ ಜನರು, ಸರಕು ಮತ್ತು ಸೇವೆಗಳ ಚಲನೆಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿ.ಸಿ.ಇ.ಎ.), ಕೇಂದ್ರ ರೈಲ್ವೆ ಸಚಿವಾಲಯದ ಅಡಿಯಲ್ಲಿ ಒಟ್ಟು ರೂ. 18,036 ಕೋಟಿಗಳ (ಅಂದಾಜು) ಹೊಸ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಹೊಸ ಮಾರ್ಗವು ಇಂದೋರ್ ಮತ್ತು ಮನ್ಮಾಡ್ ನಡುವೆ ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತದೆ, ಭಾರತೀಯ ರೈಲ್ವೆಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಈ ಯೋಜನೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನವಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿದೆ, ಇದು ಈ ಪ್ರದೇಶದ ಜನರನ್ನು "ಆತ್ಮನಿರ್ಭರ" ಮಾಡುವ ಮೂಲಕ ಈ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ ಅವರುಗಳಿಗೆ ಉದ್ಯೋಗ/ಸ್ವಯಂ ಉದ್ಯೋಗಗಳಿಗೆ ಅವಕಾಶಗಳನ್ನು ಹೆಚ್ಚಿಸುತ್ತದೆ.

ಈ ಯೋಜನೆಯು ಬಹು-ಮಾದರಿ ಸಂಪರ್ಕಕ್ಕಾಗಿ ಇದು ಒಂದು ಸಮಗ್ರ ಯೋಜನೆ ಮೂಲಕ ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ನ ಸಂಕಲ್ಪಸದೃಶವಾಗಿದೆ, - ಹಾಗೂ ಜನರು, ಸರಕು ಮತ್ತು ಸೇವೆಗಳ ಚಲನೆಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ.

ಈ ಯೋಜನೆಯು 2 ರಾಜ್ಯಗಳ 6 ಜಿಲ್ಲೆಗಳನ್ನು ಒಳಗೊಂಡಿದೆ, ಅಂದರೆ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ಅಸ್ತಿತ್ವದಲ್ಲಿರುವ ಭಾರತೀಯ ರೈಲ್ವೆಯ ನೆಟ್ವರ್ಕ್ ಅನ್ನು ಸುಮಾರು 309 ಕಿಮೀಗಳಷ್ಟು ಹೆಚ್ಚಿಸುತ್ತವೆ.

ಈ ಯೋಜನೆಯೊಂದಿಗೆ 30 ಹೊಸ ನಿಲ್ದಾಣಗಳನ್ನು ನಿರ್ಮಿಸಲಾಗುವುದು, ಇದು ಮಹತ್ವಾಕಾಂಕ್ಷೆಯ ಜಿಲ್ಲೆ ಬರ್ವಾನಿಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಹೊಸ ಲೈನ್ ಯೋಜನೆಯು ಸುಮಾರು 1,000 ಹಳ್ಳಿಗಳು ಮತ್ತು ಸುಮಾರು 30 ಲಕ್ಷ ಜನಸಂಖ್ಯೆಗೆ ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ. ಯೋಜನೆಯು ಮಧ್ಯ ಭಾರತದೊಂದಿಗೆ ದೇಶದ ಪಶ್ಚಿಮ / ನೈಋತ್ಯ ಭಾಗಗಳ ನಡುವೆ ಕಡಿಮೆ ದೂರದ ಮಾರ್ಗವನ್ನು ( ನೇರ ಮಾರ್ಗ) ಒದಗಿಸುವ ಮೂಲಕ ಈ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಇದು ಶ್ರೀ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನ ಸೇರಿದಂತೆ ಉಜ್ಜಯಿನಿ - ಇಂದೋರ್ ಪ್ರದೇಶದ ವಿವಿಧ ಪ್ರವಾಸಿ/ಧಾರ್ಮಿಕ ಸ್ಥಳಗಳಿಗೆ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸುತ್ತದೆ.

ಯೋಜನೆಯು ಜೆ.ಎನ್.ಪಿ.ಎ. ಮತ್ತು ಇತರ ರಾಜ್ಯದ ಪ್ರಮುಖ ಹಾಗೂ ಪ್ರಧಾನ( ಗೇಟ್ ವೇ ಪೋರ್ಟ್) ಬಂದರುಗಳಿಂದ ಪಿತಾಮ್ ಪುರ ಆಟೋ ಕ್ಲಸ್ಟರ್ ಗೆ (90 ದೊಡ್ಡ ಘಟಕಗಳು ಮತ್ತು 700 ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಹೊಂದಿದೆ) ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ. ಈ ಯೋಜನೆಯು ಮಧ್ಯಪ್ರದೇಶದ ಸಿರಿಧಾನ್ಯ  ಉತ್ಪಾದಿಸುವ ಜಿಲ್ಲೆಗಳಿಗೆ ಮತ್ತು ಮಹಾರಾಷ್ಟ್ರದ ಈರುಳ್ಳಿ ಉತ್ಪಾದಿಸುವ ಜಿಲ್ಲೆಗಳಿಗೆ ಪರಸ್ಪರ ನೇರ ಸಂಪರ್ಕವನ್ನು ಒದಗಿಸುತ್ತದೆ, ಇದು ದೇಶದ ಉತ್ತರ ಮತ್ತು ದಕ್ಷಿಣ ಭಾಗಗಳಿಗೆ ಸಂಪರ್ಕ ವಿತರಿಸಲು ಮತ್ತಷ್ಟು ಅನುಕೂಲವಾಗುತ್ತದೆ.

ಕೃಷಿ ಉತ್ಪನ್ನಗಳು, ರಸಗೊಬ್ಬರ, ಕಂಟೈನರ್ ಗಳು, ಕಬ್ಬಿಣದ ಅದಿರು, ಉಕ್ಕು, ಸಿಮೆಂಟ್, ಪಿ.ಒ.ಎಲ್. ಮುಂತಾದ ಸರಕುಗಳ ಸಾಗಣೆಗೆ ಇದು ಅತ್ಯಗತ್ಯ ಹಾಗೂ ಅತ್ಯುತ್ತಮ ಮಾರ್ಗವಾಗಲಿದೆ. ಇದರ ಸಾಮರ್ಥ್ಯ ವರ್ಧನೆಯ ಕಾರ್ಯವು ಸುಮಾರು 26 ಎಂ.ಟಿ.ಪಿ.ಎ. (ವರ್ಷಕ್ಕೆ ಮಿಲಿಯನ್ ಟನ್) ಪ್ರಮಾಣದ ಹೆಚ್ಚುವರಿ ಸರಕು ಸಾಗಣೆಗೆ ಕೂಡಾ ಕಾರಣವಾಗಲಿದೆ. ರೈಲ್ವೆ ಪರಿಸರ ಸ್ನೇಹಿ ಮತ್ತು ಇಂಧನ ದಕ್ಷ ಸಾರಿಗೆ ವಿಧಾನವಾಗಿದ್ದು, ಹವಾಮಾನ ಗುರಿಗಳನ್ನು ಸಾಧಿಸಲು ಮತ್ತು ದೇಶದ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ತೈಲ ಆಮದು (18 ಕೋಟಿ ಲೀಟರ್) ಕಡಿಮೆ ಮಾಡುತ್ತದೆ ಮತ್ತು ಇದು 5.5 ಕೋಟಿ ಮರಗಳ ನೆಡುವಿಕೆಗೆ (ಇಷ್ಟು ಗಾತ್ರದ ಮರಗಳು ಮಾಡಬಹುದಾದ ಪರಿಸರ ಪೂರಕ ಕೆಲಸಗಳಿಂದಾಗಿ 138 ಕೋಟಿ ಕೆಜಿಯಷ್ಟು ಕಾರ್ಬನ್ ಡೈಓಕ್ಸೈಡ್ ಕಡಿಮೆ ಹೊರಸೂಸುವಿಕೆ ಆಗುತ್ತದೆ) ಸಮಾನವಾಗಿದೆ.

 

  • Lal Singh Chaudhary October 07, 2024

    झुकती है दुनिया झुकाने वाला चाहिए शेर ए हिन्दुस्तान मोदी जी को बहुत-बहुत बधाई एवं हार्दिक शुभकामनाएं 🙏🙏🙏
  • Vivek Kumar Gupta October 05, 2024

    नमो ..🙏🙏🙏🙏🙏
  • Vivek Kumar Gupta October 05, 2024

    नमो ................🙏🙏🙏🙏🙏
  • Manish sharma October 04, 2024

    🇮🇳
  • Dheeraj Thakur September 27, 2024

    जय श्री राम. .
  • Dheeraj Thakur September 27, 2024

    जय श्री राम ,
  • கார்த்திக் September 22, 2024

    🪷ஜெய் ஸ்ரீ ராம்🌸जय श्री राम🪷જય શ્રી રામ🪷 🪷ಜೈ ಶ್ರೀ ರಾಮ್🪷జై శ్రీ రామ్🪷🌸JaiShriRam🪷🌸 🪷জয় শ্ৰী ৰাম🪷ജയ് ശ്രീറാം🪷ଜୟ ଶ୍ରୀ ରାମ🪷🌸
  • प्रभात दीक्षित September 22, 2024

    जय श्री राम राम
  • प्रभात दीक्षित September 22, 2024

    जय श्री राम की
  • प्रभात दीक्षित September 22, 2024

    जय श्री राम
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
India achieves 100 GW solar PV module capacity under ALMM: MNRE

Media Coverage

India achieves 100 GW solar PV module capacity under ALMM: MNRE
NM on the go

Nm on the go

Always be the first to hear from the PM. Get the App Now!
...
PM pays tribute to the resilience of Partition survivors on Partition Horrors Remembrance Day
August 14, 2025

Prime Minister Shri Narendra Modi today observed Partition Horrors Remembrance Day, solemnly recalling the immense upheaval and pain endured by countless individuals during one of the most tragic chapters in India’s history.

The Prime Minister paid heartfelt tribute to the grit and resilience of those affected by the Partition, acknowledging their ability to face unimaginable loss and still find the strength to rebuild their lives.

In a post on X, he said:

“India observes #PartitionHorrorsRemembranceDay, remembering the upheaval and pain endured by countless people during that tragic chapter of our history. It is also a day to honour their grit...their ability to face unimaginable loss and still find the strength to start afresh. Many of those affected went on to rebuild their lives and achieve remarkable milestones. This day is also a reminder of our enduring responsibility to strengthen the bonds of harmony that hold our country together.”