ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100ನೇ ಜನ್ಮ ವಾರ್ಷಿಕೋತ್ಸವ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 13th, 08:57 pm

ಅಸ್ಸಾಂ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಲಕ್ಷ್ಮಣ ಪ್ರಸಾದ್ ಆಚಾರ್ಯ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಯುವ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಜಿ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಭೂಪೇನ್ ಹಜಾರಿಕಾ ಜಿ ಅವರ ಸಹೋದರ, ಶ್ರೀಮತಿ ಹಜಾರಿಕಾ ಜಿ, ಭೂಪೇನ್ ಹಜಾರಿಕಾ ಜಿ ಅವರ ಸಹೋದರಿ ಶ್ರೀಮತಿ ಕವಿತಾ ಬರುವಾ ಜಿ, ಭೂಪೇನ್ ದಾ ಅವರ ಪುತ್ರ ಶ್ರೀ ತೇಜ್ ಹಜಾರಿಕಾ ಜಿ - ತೇಜ್, ನಾನು ನಿಮ್ಮನ್ನು 'ಕೆಮ್ ಚೋ!' ಎಂದು ಸ್ವಾಗತಿಸುತ್ತೇನೆ. ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ!

ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100 ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 13th, 05:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100 ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಅದ್ಭುತ ದಿನ ಮತ್ತು ಈ ಕ್ಷಣ ನಿಜಕ್ಕೂ ಅಮೂಲ್ಯವಾದುದು ಎಂದು ಹೇಳಿದರು. ತಾವು ಕಂಡ ಪ್ರದರ್ಶನಗಳು, ಉತ್ಸಾಹ ಮತ್ತು ಗಮನಿಸಿದ ಸಮನ್ವಯವು ಅತ್ಯಂತ ಹೃದಯಸ್ಪರ್ಶಿಯಾಗಿತ್ತು ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಉದ್ದಕ್ಕೂ ಪ್ರತಿಧ್ವನಿಸಿದ ಭೂಪೇನ್ ದಾ ಅವರ ಸಂಗೀತದ ಲಯವನ್ನು ಅವರು ಎತ್ತಿ ತೋರಿಸಿದರು. ಭೂಪೇನ್ ಹಜಾರಿಕಾ ಅವರನ್ನು ಉಲ್ಲೇಖಿಸುತ್ತಾ, ಪ್ರಧಾನಿಯವರು ತಮ್ಮ ಹಾಡಿನ ಕೆಲವು ಪದಗಳು ತಮ್ಮ ಮನಸ್ಸಿನಲ್ಲಿ ಪ್ರತಿಧ್ವನಿಸುತ್ತಲೇ ಇದ್ದವು. ಭೂಪೇನ್ ಅವರ ಸಂಗೀತದ ಅಲೆಗಳು ಎಲ್ಲೆಡೆ, ಅನಂತವಾಗಿ ಹರಿಯುತ್ತಿರಬೇಕೆಂದು ತಮ್ಮ ಹೃದಯವು ಬಯಸುತ್ತದೆ ಎಂದು ಅವರು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಪ್ರಧಾನಿಯವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಅಸ್ಸಾಂನ ಉತ್ಸಾಹವು ಇಲ್ಲಿನ ಪ್ರತಿಯೊಂದು ಕಾರ್ಯಕ್ರಮವು ಹೊಸ ದಾಖಲೆಯನ್ನು ಸ್ಥಾಪಿಸುತ್ತದೆ ಎಂದು ಅವರು ಹೇಳಿದರು, ಇಂದಿನ ಪ್ರದರ್ಶನಗಳು ಅಸಾಧಾರಣ ಸಿದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಗಮನಿಸಿದರು. ಅವರು ಎಲ್ಲಾ ಪ್ರದರ್ಶಕರನ್ನು ಅಭಿನಂದಿಸಿದರು ಮತ್ತು ಶ್ಲಾಘಿಸಿದರು.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ಡಿಸೆಂಬರ್ 6 ರಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಲಿರುವ ಪ್ರಧಾನಮಂತ್ರಿ

December 05th, 06:28 pm

ಈಶಾನ್ಯ ಭಾರತದ ಸಾಂಸ್ಕೃತಿಕ ಚೈತನ್ಯವನ್ನು ಪ್ರದರ್ಶಿಸುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಷ್ಟಲಕ್ಷ್ಮಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.