Delegation of Special Envoys from the Republic of Korea meets Prime Minister

Delegation of Special Envoys from the Republic of Korea meets Prime Minister

July 17th, 06:40 pm

A delegation of Special Envoys from the Republic of Korea (ROK), led by Mr. Kim Boo Kyum, met the Prime Minister, Shri Narendra Modi in New Delhi today.

ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

July 12th, 11:30 am

ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

July 12th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.

The best days of India–Namibia relations are ahead of us: PM Modi in the parliament of Namibia

July 09th, 08:14 pm

PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.

Prime Minister addresses the Namibian Parliament

July 09th, 08:00 pm

PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.

ನಮೀಬಿಯಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 09th, 07:55 pm

ತಮ್ಮ ನಮೀಬಿಯಾ ಅಧಿಕೃತ ಪ್ರವಾಸದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಂಡ್‌ಹೋಕ್‌ ನಲ್ಲಿರುವ ಸ್ಟೇಟ್ ಹೌಸ್‌ ನಲ್ಲಿ ನಮೀಬಿಯಾ ಅಧ್ಯಕ್ಷರಾದ ಗೌರವಾನ್ವಿತ ಡಾ. ನೆಟುಂಬೊ ನಂದಿ-ನದೈತ್ವಾ ಅವರನ್ನು ಭೇಟಿಯಾದರು. ಸ್ಟೇಟ್ ಹೌಸ್‌ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷೆ ನಂದಿ-ನದೈತ್ವಾ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಅವರಿಗೆ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಭಾರತದಿಂದ ನಮೀಬಿಯಾ ಗೆ ಪ್ರಧಾನಮಂತ್ರಿ ಮಟ್ಟದಲ್ಲಿ ಈ ಭೇಟಿಯು 27 ವರ್ಷಗಳ ನಂತರ ನಡೆದಿದೆ. ಅಲ್ಲದೆ, ಈ ವರ್ಷದ ಮಾರ್ಚ್‌ ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅಧ್ಯಕ್ಷೆ ನಂದಿ-ನದೈತ್ವಾ ಅವರು ಆಯೋಜಿಸಿದ ಮೊದಲ ದ್ವಿಪಕ್ಷೀಯ ಅಧಿಕೃತ ಭೇಟಿ ಇದಾಗಿತ್ತು.

ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 09th, 06:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

July 08th, 08:30 pm

ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.

ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಉರುಗ್ವೆ ಅಧ್ಯಕ್ಷರನ್ನು ಭೇಟಿ ಮಾಡಿದರು

July 07th, 09:20 pm

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಒಳಗೊಂಡ ಚರ್ಚೆಗಳನ್ನು ನಡೆಸಿದರು. ಡಿಜಿಟಲ್ ಸಹಯೋಗ, ಐಸಿಟಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಯುಪಿಐ, ರಕ್ಷಣೆ, ರೈಲ್ವೆ, ಆರೋಗ್ಯ ಮತ್ತು ಔಷಧೀಯ, ಕೃಷಿ, ಇಂಧನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಪರ್ಕ ಕ್ಷೇತ್ರಗಳಲ್ಲಿನ ಸಹಕಾರವನ್ನು ಅವರು ಪರಿಶೀಲಿಸಿದರು. ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಬಲಪಡಿಸುವುದು ಚರ್ಚೆಯ ಪ್ರಮುಖ ಕ್ಷೇತ್ರವಾಗಿತ್ತು. ಹೆಚ್ಚಿನ ಆರ್ಥಿಕ ಸಾಮರ್ಥ್ಯ ಮತ್ತು ವ್ಯಾಪಾರದ ಅವಕಾಶಗಳನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿರುವ ಭಾರತ-ಮೆರ್ಕೋಸುರ್ ಆದ್ಯತಾ ವ್ಯಾಪಾರ ಒಪ್ಪಂದದ ವಿಸ್ತರಣೆಯಲ್ಲಿ ಎರಡೂ ಕಡೆಯವರು ಆಸಕ್ತಿ ವ್ಯಕ್ತಪಡಿಸಿದರು.

ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಮಲೇಷ್ಯಾದ ಪ್ರಧಾನಮಂತ್ರಿಯವರೊಂದಿಗೆ ಸಭೆ ನಡೆಸಿದರು

July 07th, 05:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಮಲೇಷ್ಯಾ ಪ್ರಧಾನಮಂತ್ರಿ ಘನತೆವೆತ್ತ ಅನ್ವರ್ ಬಿನ್ ಇಬ್ರಾಹಿಂ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ಅರ್ಜೆಂಟೀನಾದ ಅಧ್ಯಕ್ಷ ಜೇವಿಯರ್ ಮಿಲೀ ಅವರನ್ನು ಭೇಟಿಯಾದರು

July 06th, 01:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರ್ಜೆಂಟೀನಾದ ಅಧ್ಯಕ್ಷ ಘನತೆವೆತ್ತ ಜೇವಿಯರ್ ಮಿಲೀ ಅವರನ್ನು ಭೇಟಿ ಮಾಡಿದರು. ಕಾಸಾ ರೊಸಾಡಾಗೆ ಆಗಮಿಸಿದಾಗ ಅಧ್ಯಕ್ಷ ಮಿಲೀ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಿನ್ನೆ ಬ್ಯೂನಸ್ ಐರಿಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು. 57 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ವರ್ಷಗಳನ್ನು ಆಚರಿಸುತ್ತಿರುವುದರಿಂದ ಇದು ಭಾರತ-ಅರ್ಜೆಂಟೀನಾ ಸಂಬಂಧಗಳಿಗೆ ಮಹತ್ವದ ವರ್ಷವಾಗಿದೆ. ತಮಗೆ ಮತ್ತು ತಮ್ಮ ನಿಯೋಗಕ್ಕೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮಿಲೀ ಅವರಿಗೆ ಧನ್ಯವಾದ ಅರ್ಪಿಸಿದರು.

PM Modi conferred with highest national award, the ‘Order of the Republic of Trinidad & Tobago

July 04th, 08:20 pm

PM Modi was conferred Trinidad & Tobago’s highest national honour — The Order of the Republic of Trinidad & Tobago — at a special ceremony in Port of Spain. He dedicated the award to the 1.4 billion Indians and the historic bonds of friendship between the two nations, rooted in shared heritage. PM Modi also reaffirmed his commitment to strengthening bilateral ties.

ಘಾನಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 03rd, 01:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾದ ಅಧ್ಯಕ್ಷರಾದ, ಗೌರವಾನ್ವಿತ ಡಾ. ಜಾನ್ ಡ್ರಾಮಾನಿ ಮಹಾಮಾ ಅವರನ್ನು ಭೇಟಿ ಮಾಡಿದರು. ಜ್ಯೂಬಿಲಿ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಮಹಾಮಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಳೆದ ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಘಾನಾಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಡಿ ಇದಾಗಿದೆ.

ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

July 03rd, 12:32 am

ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 02-09)

June 27th, 10:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 02ರಿಂದ 3ರವರೆಗೆ ಘಾನಾಕ್ಕೆ ಭೇಟಿ ನೀಡಲಿದ್ದಾರೆ. ಇದು ಘಾನಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತದಿಂದ ಘಾನಾಕ್ಕೆ ಪ್ರಧಾನಮಂತ್ರಿ ಅವರ ಈ ಭೇಟಿ ಮೂರು ದಶಕಗಳ ನಂತರ ನಡೆಯುತ್ತಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಘಾನಾ ಅಧ್ಯಕ್ಷರೊಂದಿಗೆ ಬಲವಾದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಪರಿಶೀಲಿಸಲು ಮತ್ತು ಆರ್ಥಿಕ, ಇಂಧನ ಮತ್ತು ರಕ್ಷಣಾ ಸಹಯೋಗ ಮತ್ತು ಅಭಿವೃದ್ಧಿ ಸಹಕಾರ ಪಾಲುದಾರಿಕೆಯ ಮೂಲಕ ಅದನ್ನು ಹೆಚ್ಚಿಸಲು ಹೆಚ್ಚಿನ ಮಾರ್ಗಗಳ ಬಗ್ಗೆ ಚರ್ಚಿಸಲು ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸಲು ಮತ್ತು ಇಕೋವಾಸ್ (ಪಶ್ಚಿಮ ಆಫ್ರಿಕಾ ರಾಜ್ಯಗಳ ಆರ್ಥಿಕ ಸಮುದಾಯ) ಮತ್ತು ಆಫ್ರಿಕನ್ ಒಕ್ಕೂಟದೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ.

48ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

June 25th, 09:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌತ್‌ ಬ್ಲಾಕ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ತಡೆರಹಿತವಾಗಿ ಸಂಯೋಜಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನ ಉತ್ತೇಜಿಸುವ ಗುರಿ ಹೊಂದಿರುವ ಐಸಿಟಿ ಶಕ್ತ, ಬಹು ಮಾದರಿ ವೇದಿಕೆಯಾದ ಪ್ರಗತಿಯ 48ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 24th, 11:30 am

ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.

ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.

ಭಾರತ - ಕ್ರೊಯೇಷಿಯಾ ನಾಯಕರ ಹೇಳಿಕೆ

June 19th, 06:06 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭೇಟಿಯು ದ್ವಿಪಕ್ಷೀಯ ಪಾಲುದಾರಿಕೆಗೆ ಹೊಸ ವೇಗವನ್ನು ನೀಡಿದ್ದು, ವಿಶೇಷವಾಗಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಎರಡೂ ಆರ್ಥಿಕತೆಗಳ ಪೂರಕತೆಯನ್ನು ಎತ್ತಿ ತೋರಿಸಿದೆ. (i) ಕೃಷಿ ಸಹಕಾರದ ಕುರಿತಾದ ತಿಳುವಳಿಕಾ ಒಡಂಬಡಿಕೆ; (ii) ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಹಕಾರ ಕಾರ್ಯಕ್ರಮ; (iii) ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ (ಸಿ.ಇ.ಪಿ-CEP); ಮತ್ತು (iv) ಜಾಗ್ರೆಬ್ ವಿಶ್ವವಿದ್ಯಾಲಯದಲ್ಲಿ ಹಿಂದಿ ಪೀಠವನ್ನು ಸ್ಥಾಪಿಸುವ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿರುವುದನ್ನು ಇಬ್ಬರೂ ಪ್ರಧಾನಮಂತ್ರಿಗಳು ಸ್ವಾಗತಿಸಿದರು.