
We will reduce terrorists to dust, their handlers will face unimaginable punishment: PM Modi in Lok Sabha
July 29th, 05:32 pm
Prime Minister Narendra Modi, speaking in the Lok Sabha during the special discussion on Operation Sindoor, strongly defended the military action taken in response to the April 22 terror attack in Pahalgam. He took sharp aim at the Congress, accusing it of undermining the morale of the armed forces. “India received support from across the world, but it is unfortunate that the Congress could not stand with the bravery of our soldiers,” the Prime Minister said.
PM Modi addresses the Lok Sabha during special discussion on Operation Sindoor
July 29th, 05:00 pm
Prime Minister Narendra Modi, speaking in the Lok Sabha during the special discussion on Operation Sindoor, strongly defended the military action taken in response to the April 22 terror attack in Pahalgam. He took sharp aim at the Congress, accusing it of undermining the morale of the armed forces. “India received support from across the world, but it is unfortunate that the Congress could not stand with the bravery of our soldiers,” the Prime Minister said.
TMC hatao, Bangla bachao: PM Modi in Durgapur, West Bengal
July 18th, 05:00 pm
In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”PM Modi calls for a Viksit Bengal at Durgapur rally!
July 18th, 04:58 pm
In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”ರೋಜ್ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.ಬಿಹಾರದ ಸಿವಾನ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 01:00 pm
ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು
June 20th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 06th, 12:50 pm
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 06th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.ಸಿಕ್ಕಿಂ@50 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 29th, 10:00 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಒ.ಪಿ. ಪ್ರಕಾಶ್ ಮಾಥುರ್ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ದೋರ್ಜಿ ತ್ಸೆರಿಂಗ್ ಲೆಪ್ಚಾ ಜಿ ಮತ್ತು ಡಾ. ಇಂದ್ರಾ ಹ್ಯಾಂಗ್ ಸುಬ್ಬಾ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ!‘ಸಿಕ್ಕಿಂ@50’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 29th, 09:45 am
ಗ್ಯಾಂಗ್ಟಾಕ್ ನಲ್ಲಿ ಇಂದು ನಡೆದ 'ಸಿಕ್ಕಿಂ@50' ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. 'ಪ್ರಗತಿಯು ಉದ್ದೇಶವನ್ನು ಸಂಧಿಸುವ ಮತ್ತು ಪ್ರಕೃತಿಯು ಬೆಳವಣಿಗೆಯನ್ನು ಪೋಷಿಸುವ ಸ್ಥಳ' ಎಂಬುದು ಈ ಕಾರ್ಯಕ್ರಮದ ವಿಷಯವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಸಿಕ್ಕಿಂ ರಾಜ್ಯ ಸ್ಥಾಪನೆಯ 50 ನೇ ವಾರ್ಷಿಕೋತ್ಸವದ ಈ ವಿಶೇಷ ದಿನದಂದು ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು. ಜನರ ಉತ್ಸಾಹ, ಶಕ್ತಿ ಮತ್ತು ಉತ್ಸಾಹವನ್ನು ಖುದ್ದಾಗಿ ವೀಕ್ಷಿಸಲು ಬಯಸಿದ್ದೆ, ಆದರೆ ಪ್ರತಿಕೂಲ ಹವಾಮಾನದಿಂದಾಗಿ ತಾವು ಹಾಜರಿರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಸಿಕ್ಕಿಂಗೆ ಭೇಟಿ ನೀಡಿ ಅವರ ಸಾಧನೆಗಳು ಮತ್ತು ಆಚರಣೆಗಳಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದರು. ಕಳೆದ 50 ವರ್ಷಗಳ ಅವರ ಸಾಧನೆಗಳನ್ನು ಆಚರಿಸುವ ದಿನ ಇದು ಎಂದು ಪ್ರಧಾನಿ ಹೇಳಿದರು, ಈ ಭವ್ಯ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವಲ್ಲಿ ಶ್ರಮಿಸಿದ ಸಿಕ್ಕಿಂ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಸಿಕ್ಕಿಂ ರಾಜ್ಯದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಅವರು ಮತ್ತೊಮ್ಮೆ ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು.ಗುಜರಾತ್ನ ದಾಹೋದ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 11:45 am
ಗುಜರಾತ್ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು
May 26th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.ಎಬಿಪಿ ನೆಟ್ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 06th, 08:04 pm
ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.ಎಬಿಪಿ ನೆಟ್ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 06th, 08:00 pm
ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.ರೋಜ್ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 02:00 pm
ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
April 24th, 01:30 pm
ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.