ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

July 12th, 11:30 am

ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

July 12th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.

ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 06th, 08:04 pm

ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.

ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 06th, 08:00 pm

ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.

ಜಂಟಿ ಹೇಳಿಕೆ: ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ ಎರಡನೇ ಸಭೆ, ನವದೆಹಲಿ (ಫೆಬ್ರವರಿ 28, 2025)‌

February 28th, 06:25 pm

ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ (ಟಿಟಿಸಿ) ಎರಡನೇ ಸಭೆಯು ಫೆಬ್ರವರಿ 28, 2025 ರಂದು ನವದೆಹಲಿಯಲ್ಲಿ ನಡೆಯಿತು. ಭಾರತದ ಪರವಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್; ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು. ಯುರೋಪಿಯನ್ ಒಕ್ಕೂಟದ ಪರವಾಗಿ ತಂತ್ರಜ್ಞಾನ ಸಾರ್ವಭೌಮತ್ವ, ಭದ್ರತೆ ಮತ್ತು ಪ್ರಜಾಪ್ರಭುತ್ವದ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಶ್ರೀಮತಿ ಹೆನ್ನಾ ವಿರ್ಕ್ಕುನೆನ್, ವ್ಯಾಪಾರ ಮತ್ತು ಆರ್ಥಿಕ ಭದ್ರತೆ, ಅಂತರ-ಸಾಂಸ್ಥಿಕ ಸಂಬಂಧಗಳು ಮತ್ತು ಪಾರದರ್ಶಕತೆಯ ಆಯುಕ್ತೆ ಶ್ರೀ ಮರೋಸ್ ಸೆಫ್ಕೋವಿಕ್ ಮತ್ತು ಸ್ಟಾರ್ಟ್‌ಅಪ್‌, ಸಂಶೋಧನೆ ಮತ್ತು ನಾವೀನ್ಯತೆ ಆಯುಕ್ತೆ ಶ್ರೀಮತಿ ಎಕಟೆರಿನಾ ಜಹರೈವಾ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು.

ಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ

February 16th, 04:15 pm

ಭಾರತ್‌ ಮಂಟಪ್‌ ಇಂದು 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಆತಿಥ್ಯವಹಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಸಂಭ್ರಮಾಚರಣೆ ಮಾತ್ರವಲ್ಲ, ವಿಕಸಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ)ದ ವಿಪುಲ ಸಾದ್ಯತೆಗಳನ್ನು ಪ್ರತಿಬಿಂಬಿಸುತ್ತದೆ. ನಾವು ನೆಟ್ಟ ಬೀಜವು ಈಗ ವೇಗವಾಗಿ ಬೃಹತ್ ಆಲದ ಮರವಾಗಿ ಬೆಳೆಯುತ್ತಿರುವುದು ರಾಷ್ಟ್ರಕ್ಕೆ ಅಪಾರ ಸಂತೋಷದ ವಿಷಯ. ಭಾರತ್ ಟೆಕ್ಸ್ ಪ್ರಮುಖ ಜಾಗತಿಕ ಜವಳಿ ಕಾರ್ಯಕ್ರಮವಾಗಿ ವಿಕಸನಗೊಳ್ಳುತ್ತಿದೆ. ಈ ಬಾರಿ, ಮೌಲ್ಯ ಚಿತ್ರಪಟಲವನ್ನು ಸಂಪೂರ್ಣವಾಗಿ ಪ್ರತಿನಿಧಿಸಲಾಗುತ್ತದೆ, ಇದರಲ್ಲಿ 12 ಸಂಬಂಧಿತ ಗುಂಪುಗಳು ಒಟ್ಟಾಗಿ ಭಾಗವಹಿಸುತ್ತವೆ. ಹೆಚ್ಚುವರಿಯಾಗಿ, ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮ ನಾಯಕರ ನಡುವಿನ ಒಳಗೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಭಾರತ್ ಟೆಕ್ಸ್ ಒಂದು ಪ್ರಬಲ ವೇದಿಕೆಯಾಗಿ ಹೊರಹೊಮ್ಮುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ಪಾಲುದಾರರ ಬದ್ಧತೆಯ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಭಾರತ್‌ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

February 16th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ್ ಮಂಟಪದಲ್ಲಿ ಭಾರತ್ ಟೆಕ್ಸ್‌ 2025 ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು. ನಂತರ ನೆರದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರನ್ನೂ ಭಾರತ್‌ ಟೆಕ್ಸ್‌ 2025ಗೆ ಸ್ವಾಗತಿಸಿದರು ಮತ್ತು ಭಾರತ್‌ ಮಂಟಪ್‌ 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಬಗ್ಗೆ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದ ವಿಕಸಿತ ಭಾರತದ ಭವಿಷ್ಯದ ಬಗ್ಗೆ ಒಂದು ಒಳನೋಟವನ್ನು ನೀಡಿತು ಎಂದು ಅವರು ಹೇಳಿದರು. ಭಾರತ್ ಟೆಕ್ಸ್ ಈಗ ಬೃಹತ್ ಜಾಗತಿಕ ಜವಳಿ ಕಾರ್ಯಕ್ರಮವಾಗುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮೌಲ್ಯ ಸರಣಿಯ ಚಿತ್ರಪಟಲಕ್ಕೆ ಸಂಬಂಧಿಸಿದ ಎಲ್ಲಾ ಹನ್ನೆರಡು ಸಮುದಾಯಗಳು ಈ ಬಾರಿ ಕಾರ್ಯಕ್ರಮದ ಭಾಗವಾಗಿವೆ ಎಂದು ಅವರು ಹೇಳಿದರು. ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳ ಪ್ರದರ್ಶನಗಳು ಸಹ ಇದ್ದವು ಎಂದು ಅವರು ಹೇಳಿದರು. ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮದ ನಾಯಕರಿಗೆ ಭಾರತ್ ಟೆಕ್ಸ್ ತೊಡಗಿಸಿಕೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಬಲವಾದ ವೇದಿಕೆಯಾಗುತ್ತಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ

February 04th, 07:00 pm

ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 04th, 06:55 pm

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಸಂಗ್ರಹಿಸುವ ಕಾರ್ಯವಿಧಾನಕ್ಕೆ ಸಂಪುಟ ಅನುಮೋದನೆ - ಎಥೆನಾಲ್ ಪೂರೈಕೆ ವರ್ಷ (ಇಎಸ್‌ವೈ) 2024-25ಕ್ಕೆ ಸಾರ್ವಜನಿಕ ವಲಯದ ಒಎಂಸಿಗಳಿಗೆ ಪೂರೈಕೆಗಾಗಿ ಎಥೆನಾಲ್ ಬೆಲೆಯ ಪರಿಷ್ಕರಣೆ

January 29th, 03:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ (ಸಿಸಿಇಎ), ಭಾರತ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ 2024ರ ನವೆಂಬರ್ 1ರಿಂದ ಆರಂಭವಾಗಿ 2025ರ ಅಕ್ಟೋಬರ್‌ 31ರವರೆಗಿನ 2024-25ನೇ ಎಥೆನಾಲ್ ಪೂರೈಕೆ ವರ್ಷಕ್ಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಖರೀದಿ ದರವನ್ನು ಪರಿಷ್ಕರಿಸಲು ಅನುಮೋದನೆ ನೀಡಿದೆ. ಅದರಂತೆ 2024-25 ರ ಎಥೆನಾಲ್ ಪೂರೈಕೆ ವರ್ಷ (2024ರ ನವೆಂಬರ್ 1 ರಿಂದ 2025ರ ಅಕ್ಟೋಬರ್ 31 ರವರೆಗೆ) ಸಿ ಹೆವಿ ಮೊಲಾಸಿಸ್ (ಸಿಎಚ್ ಎಂ) ನಿಂದ ಪಡೆದ ಇಬಿಪಿ ಕಾರ್ಯಕ್ರಮಕ್ಕಾಗಿ ಎಥೆನಾಲ್‌ನ ಒಳಗೊಂಡ ಕಾರ್ಖಾನೆ ಹೊರಗಿನ ಬೆಲೆಯನ್ನು ಲೀಟರ್‌ಗೆ 56.58 ರೂ.ಗಳಿಂದ 57.97 ರೂ.ಗೆ ನಿಗದಿಪಡಿಸಲಾಗಿದೆ.

India stands as an outstanding destination for every investor looking to shape their future in the mobility sector: PM

January 17th, 11:00 am

PM Modi inaugurated the Bharat Mobility Global Expo 2025, highlighting India's rapid transformation in the sector. He praised India’s future-ready motive industry, rising exports, and growing domestic demand, driven by Make in India and the aspirations of people.

ಭಾರತ ಚಲನಶೀಲತೆ ಜಾಗತಿಕ ವಸ್ತುಪ್ರದರ್ಶನ(ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ)-2025 ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

January 17th, 10:45 am

ನವದೆಹಲಿಯ ಭಾರತ್ ಮಂಟಪದಲ್ಲಿಂದು ಆಯೋಜಿಸಿದ್ದ ಭಾರತದ ಚಲನಶೀಲತೆಯ ಅತಿದೊಡ್ಡ ವಸ್ತು ಪ್ರದರ್ಶನ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025' ಅನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸರ್ಕಾರವನ್ನು ಸತತ 3ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದರು. ಕಳೆದ ವರ್ಷ ಜರುಗಿದ 800 ಪ್ರದರ್ಶಕರ ಸಂಖ್ಯೆ, 2.5 ಲಕ್ಷ ಪ್ರತಿನಿಧಿಗಳು ಭಾಗವಹಿಸಿದ್ದ ವಸ್ತು ಪ್ರದರ್ಶನಕ್ಕೆ ಹೋಲಿಸಿದರೆ, ಈ ವರ್ಷದ ವಸ್ತು ಪ್ರದರ್ಶನವು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರೆ 2 ಸ್ಥಳಗಳಲ್ಲಿ ನಡೆಯುವುದರೊಂದಿಗೆ ಹೆಚ್ಚಿನ ವಿಸ್ತರಣೆಯಾಗಿದೆ. ಮುಂದಿನ 5 ದಿನಗಳಲ್ಲಿ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರತಿನಿಧಿಗಳು ಭಾಗವಹಿಸುವ ಮೂಲಕ ಅನೇಕ ಹೊಸ ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಭಾರತದಲ್ಲಿ ಚಲನಶೀಲತೆಯ ಭವಿಷ್ಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ವಾತಾವರಣ ಇದೆ. ವಸ್ತು ಪ್ರದರ್ಶನಕ್ಕೆ ತಮ್ಮ ಭೇಟಿಯನ್ನು ಉಲ್ಲೇಖಿಸಿದ ಶ್ರೀ ಮೋದಿ, ಭಾರತದ ಆಟೋಮೋಟಿವ್ ಉದ್ಯಮವು ಅದ್ಭುತವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿದೆ, ಇದಕ್ಕಾಗಿ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.

ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

Mahayuti government stands firmly on the side of national unity and development: PM in Mumbai

November 14th, 02:51 pm

PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.

The Mahayuti government delivered on its promise to rename Aurangabad as Chhatrapati Sambhajinagar: PM Modi

November 14th, 02:40 pm

In a powerful address at a public meeting in Chhatrapati Sambhajinagar, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.

PM Modi delivers impactful addresses in Chhatrapati Sambhajinagar, Panvel & Mumbai, Maharashtra

November 14th, 02:30 pm

In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.

The unity of OBCs, SCs and STs is troubling Congress, and therefore they want the communities to fight each other: PM Modi in Pune

November 12th, 01:20 pm

In his final Pune rally, PM Modi said, Empowering Pune requires investment, infrastructure, and industry, and we’ve focused on all three. Over the last decade, foreign investment has hit record highs, and Maharashtra has topped India’s list of preferred destinations in the past two and a half years. Pune and nearby areas are gaining a major share of this investment.