ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ದೇವ್ ದೀಪಾವಳಿಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ

November 05th, 10:44 pm

ಬಾಬಾ ವಿಶ್ವನಾಥನ ಪವಿತ್ರ ನಗರವು ಇಂದು ದೇವ್ ದೀಪಾವಳಿಯ ಅಪ್ರತಿಮ ಪ್ರಕಾಶದಿಂದ ಬೆಳಗುತ್ತಿದೆ. ಗಂಗಾ ಮಾತೆಯ ದಡದಲ್ಲಿ, ಕಾಶಿ ವಿಶ್ವನಾಥನ ಸನ್ನಿಧಿಯ ಸುತ್ತಮುತ್ತಲ ಘಾಟ್‌ ಗಳಲ್ಲಿ ಬೆಳಗಿದ ಲಕ್ಷಾಂತರ ದೀಪಗಳು ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯ ಶುಭಾಶಯಗಳನ್ನು ಹೊತ್ತಿವೆ ಎಂದು ಪ್ರಧಾನಿಗಳು ಸಂತಸ ಹಂಚಿಕೊಂಡಿದ್ದಾರೆ.

ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿ ಪ್ರಯುಕ್ತ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

November 05th, 10:08 am

ಇಂದು ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಿಸಿದ ಈ ದೈವಿಕ ಗಳಿಗೆಯು ಎಲ್ಲರಿಗೂ ಸಂತೋಷ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ. ಪವಿತ್ರ ಸ್ನಾನ, ದಾನ, ಆರತಿ ಮತ್ತು ಪೂಜೆಯೊಂದಿಗೆ ಸಂಬಂಧಿಸಿದ ನಮ್ಮ ಪವಿತ್ರ ಸಂಪ್ರದಾಯವು ಪ್ರತಿಯೊಬ್ಬರ ಜೀವನವನ್ನು ಬೆಳಗಿಸಲಿ ಎಂದು ಶ್ರೀ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ.

The opposition is not a ‘gathbandhan’ but a ‘gharbandhan’: PM Modi during the interaction with Mahila Karyakartas of Bihar

November 04th, 10:30 pm

PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.

PM Modi interacts with Mahila Karyakartas of Bihar under “Mera Booth, Sabse Mazboot” initiative

November 04th, 03:30 pm

PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.

ಛಠ್ ಮಹಾಪರ್ವದ ಕೊನೆಯ ದಿನದಂದು ಪ್ರಧಾನಮಂತ್ರಿ ಅವರಿಂದ ದೇಶದ ಜನತೆಗೆ ಶುಭಾಶಯ

October 28th, 07:56 am

ಛಠ್ ಪೂಜೆಯ ಕೊನೆಯ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಭಕ್ತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

October 26th, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.

ಛಠ್ ಪೂಜೆಯ ಪವಿತ್ರ ಖರ್ನಾ ಆಚರಣೆಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ

October 26th, 10:44 am

ಮಹಾಪರ್ವ ಛಠ್ ಪೂಜೆಯಂದು ಆಚರಣೆಯಾಗುವ ‘ಖರ್ನಾ’ದಿನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಈ ಪವಿತ್ರ ಹಬ್ಬಕ್ಕೆ ಸಂಬಂಧಿಸಿದ ಕಠಿಣ ಉಪವಾಸಗಳು ಮತ್ತು ವ್ರತ ಆಚರಣೆಗಳನ್ನು ಆಚರಿಸುವ ಎಲ್ಲರಿಗೂ ಅವರು ಮನಃಪೂರ್ವಕ ಗೌರವ ಸಲ್ಲಿಸಿದ್ದಾರೆ.

'ನಹಾಯ್-ಖಾಯ್' ಪವಿತ್ರ ಆಚರಣೆಯೊಂದಿಗೆ ಛತ್ ಮಹಾಪರ್ವ ಶುಭ ಆರಂಭದಲ್ಲಿ ಪ್ರಧಾನಮಂತ್ರಿ ಅವರಿಂದ ಶುಭಾಶಯ

October 25th, 09:06 am

ಇಂದು ಸಾಂಪ್ರದಾಯಿಕ ' ನಹಾಯ್-ಖಾಯ್ ' ಆಚರಣೆಯೊಂದಿಗೆ ಪ್ರಾರಂಭವಾಗುವ ಛತ್ ಮಹಾಪರ್ವದ ಪವಿತ್ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆ ಮತ್ತು ಪ್ರಪಂಚದಾದ್ಯಂತ ಇರುವ ಭಕ್ತರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲಾ ವ್ರತಗಳ ಅಚಲ ಭಕ್ತಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ಈ ನಾಲ್ಕು ದಿನಗಳ ಉತ್ಸವದಲ್ಲಿ ಆಳವಾದ ಸಾಂಸ್ಕೃತಿಕ ಮಹತ್ವವಿದೆ ಎಂದರು.

NDA freed Bihar from Naxalism and Maoist terror — now you can live and vote fearlessly: PM Modi in Begusarai

October 24th, 12:09 pm

Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.

We’re connecting Bihar’s heritage with employment, creating new opportunities for youth: PM Modi in Samastipur

October 24th, 12:04 pm

Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”

PM Modi addresses enthusiastic crowds in Bihar’s Samastipur and Begusarai

October 24th, 12:00 pm

Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”

ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

October 24th, 11:20 am

ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

October 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.

ಮುಂಬರುವ ಛಠ್ ಮಹಾ ಉತ್ಸವಕ್ಕೆ ಭಕ್ತಿಗೀತೆಗಳನ್ನು ಹಂಚಿಕೊಳ್ಳುವಂತೆ ನಾಗರಿಕರಿಗೆ ಪ್ರಧಾನಮಂತ್ರಿ ಆಹ್ವಾನ

October 24th, 10:39 am

ಛಠ್ ಹಬ್ಬದ ಆಚರಣೆಗೆ ದೇಶ ಸಜ್ಜಾಗುತ್ತಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛಠೀ ಮೈಯಾಗೆ ಸಮರ್ಪಿತವಾದ ಹಾಡುಗಳನ್ನು ಹಂಚಿಕೊಳ್ಳುವ ಮೂಲಕ ಭಕ್ತಿ ಮತ್ತು ಸಾಂಸ್ಕೃತಿಕ ಏಕತೆಯ ಚೈತನ್ಯದಲ್ಲಿ ಭಾಗಿಯಾಗುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಯೊಂದಿಗೆ ಛಠ್ ಉತ್ಸವದ ಗಾಢ ಸಂಬಂಧವನ್ನು ಹಾಗೂ ಬಿಹಾರ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ಭರದ ಸಿದ್ಧತೆಗಳ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ವಿವರಿಸಿದ್ದಾರೆ.

When the youth lead, the nation moves forward: PM Modi during Mera Booth Sabse Mazboot - Yuva Samvaad

October 23rd, 06:06 pm

Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.

PM Modi addresses the Yuva Karyakartas of Bihar during “Mera Booth, Sabse Mazboot – Yuva Samvaad” programme

October 23rd, 06:00 pm

Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.

ಭಾಯಿ ದೂಜ್ ಅಂಗವಾಗಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

October 23rd, 09:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾಯಿ ದೂಜ್ ಪವಿತ್ರ ಸಂದರ್ಭದಲ್ಲಿ ದೇಶಾದ್ಯಂತದ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಹೇಳಿದ್ದು, ಪ್ರಜಾಪ್ರಭುತ್ವ ಆದರ್ಶಗಳು ಮತ್ತು ಜಾಗತಿಕ ಶಾಂತಿಯ ಬದ್ಧತೆಯನ್ನು ಪುನರುಚ್ಚರಿಸಿದರು

October 22nd, 08:25 am

ದೀಪಗಳ ಹಬ್ಬದ ಸಂದರ್ಭದಲ್ಲಿ ಆತ್ಮೀಯ ದೀಪಾವಳಿ ಶುಭಾಶಯ ಮತ್ತು ದೂರವಾಣಿ ಕರೆಗಾಗಿ ಅಮೆರಿಕ ಅಧ್ಯಕ್ಷ ಘನತೆವೆತ್ತ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.