
ಶಾಹಿದ್ ದಿವಸದ ಅಂಗವಾಗಿ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
March 23rd, 09:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಾಹಿದ್ ದಿವಸದ ಅಂಗವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಗೌರವ ನಮನ ಸಲ್ಲಿಸಿ, ಅವರು ರಾಷ್ಟ್ರಕ್ಕಾಗಿ ಮಾಡಿರುವ ಅಪ್ರತಿಮ ತ್ಯಾಗವನ್ನು ಸ್ಮರಿಸಿದ್ದಾರೆ.
ಡಾ ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ
March 23rd, 09:02 am
ಡಾ ರಾಮ್ ಮನೋಹರ್ ಲೋಹಿಯಾ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಹಿಯಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರನ್ನು ದೂರದೃಷ್ಟಿಯ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಎಂದು ಸ್ಮರಿಸಿದ್ದಾರೆ.
ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಮಹಾತ್ಮಾ ಗಾಂಧಿ ಮತ್ತು ಎಲ್ಲರಿಗೂ ಪ್ರಧಾನಮಂತ್ರಿ ಅವರಿಂದ ಗೌರವ ನಮನ
March 12th, 09:01 am
ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿ, ಅದು ಭಾರತದ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಘಟ್ಟ ಎಂದು ವ್ಯಾಖ್ಯಾನಿಸಿದರು. ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಈ ಸತ್ಯಾಗ್ರಹವು ಸ್ವಾವಲಂಬನೆ ಮತ್ತು ಸ್ವಾತಂತ್ರ್ಯಕ್ಕಾಗಿ ರಾಷ್ಟ್ರವ್ಯಾಪಿ ಆಂದೋಲನದ ಕಿಚ್ಚು ಹೊತ್ತಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ತ್ಯಾಗ ಹಾಗೂ ಸತ್ಯ ಮತ್ತು ಅಹಿಂಸೆಗಾಗಿ ಅವರ ಅಚಲ ಬದ್ಧತೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಸಶಸ್ತ್ರ ಪಡೆಗಳು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿರುವುದು ವಿಶೇಷ ಕ್ಷಣಗಳಾಗಿವೆ : ಪ್ರಧಾನಮಂತ್ರಿ
January 30th, 07:00 pm
ಸಶಸ್ತ್ರ ಪಡೆಗಳು ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿದ ಗಣತಂತ್ರ ಆಚರಣೆಯ ಸಮಾರೋಪ (ಬೀಟಿಂಗ್ ರಿಟ್ರೀಟ್ ) ಸಮಾರಂಭದ ವಿಶೇಷ ಕ್ಷಣಗಳನ್ನು ಸೆರೆಹಿಡಿಯುವ ವೀಡಿಯೊವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.Netaji Subhas Chandra Bose's legacy will continue to inspire us in building a Viksit Bharat: PM Modi
January 23rd, 11:30 am
PM Modi addressed the nation on Parakram Diwas, paying tribute to Netaji Subhas Chandra Bose. He emphasized Netaji’s legacy of unity, sacrifice, and determination, urging everyone to step out of their comfort zones to achieve a Viksit Bharat. He highlighted the global opportunities for India and the need to stay united and vigilant against pisive forces."ಪರಾಕ್ರಮ್ ದಿವಸ್" ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
January 23rd, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ ಪರಾಕ್ರಮ್ ದಿವಸ್ ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು.Prime Minister pays homage to Netaji Subhas Chandra Bose
January 23rd, 08:53 am
On the occasion of Parakram Diwas today, the Prime Minister Shri Narendra Modi paid homage to Netaji Subhas Chandra Bose. He remarked that Netaji’s contribution to India’s freedom movement was unparalleled and he epitomised courage and grit.ಅಂಡಮಾನ್ ಮತ್ತು ನಿಕೋಬಾರ್ನಲ್ಲಿರುವ ದ್ವೀಪಗಳಿಗೆ ನಮ್ಮ ವೀರರ ಹೆಸರನ್ನು ಇಡುವುದು ದೇಶಕ್ಕೆ ಅವರು ಮಾಡಿದ ಸೇವೆಯನ್ನು ಮುಂದಿನ ಪೀಳಿಗೆಗೆ ನೆನಪಿಸುವ ಮಾರ್ಗವಾಗಿದೆ: ಪ್ರಧಾನಮಂತ್ರಿ
December 18th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ನಮ್ಮ ವೀರರ ಹೆಸರನ್ನು ಇಡುವುದು ಅವರು ದೇಶಕ್ಕೆ ಮಾಡಿದ ಸೇವೆಯನ್ನು ಮುಂದಿನ ಪೀಳಿಗೆಗೆ ಸ್ಮರಿಸುವುದನ್ನು ಖಚಿತಪಡಿಸಿಕೊಳ್ಳುವ ಒಂದು ಮಾರ್ಗವಾಗಿದೆ. ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮುಂದೆ ಸಾಗುವ ತಮ್ಮ ಬೇರುಗಳೊಂದಿಗೆ ಸಂಪರ್ಕವನ್ನು ಹೊಂದಿರುವ ರಾಷ್ಟ್ರಗಳು ಎಂದು ಹೇಳಿದರು.ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.ಮಹಾನ್ ತಮಿಳು ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ 2024ರ ಡಿಸೆಂಬರ್ 11 ರಂದು ಪ್ರಧಾನಮಂತ್ರಿ ಅವರಿಂದ ಬಿಡುಗಡೆ
December 10th, 05:12 pm
ಸುಬ್ರಮಣ್ಯ ಭಾರತಿಯವರ ಬರಹಗಳು ಜನರಲ್ಲಿ ದೇಶಪ್ರೇಮವನ್ನು ತುಂಬುವ ಜೊತೆಗೆ, ಜನಸಾಮಾನ್ಯರು ಅರ್ಥೈಸಿಕೊಳ್ಳಬಹುದಾದ ಸರಳ ಭಾಷೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ದೇಶದ ಆಧ್ಯಾತ್ಮಿಕ ಪರಂಪರೆಯ ಸಾರವನ್ನು ಹೇಳಿವೆ. ಸೀನಿ ವಿಶ್ವನಾಥನ್ ಅವರು ಸಂಕಲನ ಮಾಡಿ ಸಂಪಾದಿಸಿರುವ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ 23 ಸಂಪುಟಗಳನ್ನು ಅಲಯನ್ಸ್ ಪ್ರಕಾಶನ ಪ್ರಕಟಿಸಿದೆ. ಇದು ಸುಬ್ರಮಣ್ಯ ಭಾರತಿಯವರ ಬರಹಗಳ ಆವೃತ್ತಿಗಳು, ವಿವರಣೆಗಳು, ದಾಖಲೆಗಳು, ಹಿನ್ನೆಲೆ ಮಾಹಿತಿ ಮತ್ತು ತಾತ್ವಿಕ ಪ್ರಸ್ತುತಿಗಳ ವಿವರಗಳನ್ನು ಒಳಗೊಂಡಿದೆ.ಶ್ರೀ ಸಿ. ರಾಜಗೋಪಾಲಾಚಾರಿಯವರನ್ನು ಅವರ ಜನ್ಮ ಜಯಂತಿಯಂದು ಸ್ಮರಿಸಿದ ಪ್ರಧಾನಮಂತ್ರಿ
December 10th, 04:18 pm
ಶ್ರೀ ಸಿ. ರಾಜಗೋಪಾಲಾಚಾರಿಯವರ ಜನ್ಮ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜಗೋಪಾಲಾಚಾರಿಯವರು ಬಹುಮುಖಿ ವ್ಯಕ್ತಿತ್ವವಾಗಿದ್ದು, ಆಡಳಿತ, ಸಾಹಿತ್ಯ ಮತ್ತು ಸಾಮಾಜಿಕ ಸಬಲೀಕರಣದ ಮೇಲೆ ಪ್ರಬಲವಾದ ಪ್ರಭಾವ ಬೀರಿದ್ದಾರೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು
October 04th, 09:28 am
ಸ್ವಾತಂತ್ರ್ಯ ಹೋರಾಟಗಾರರಾದ ಶ್ಯಾಮ್ಜಿ ಕೃಷ್ಣ ವರ್ಮಾ 95ನೇ ಜನ್ಮಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸ್ಮರಿಸಿದ್ದಾರೆ.Prime Minister pays homage to Chandra Shekhar Azad on his birth anniversary
July 23rd, 09:59 am
The Prime Minister, Shri Narendra Modi has paid tributes to Chandra Shekhar Azad on his birth anniversary.Veer Bal Diwas symbolizes the resolve to do anything to protect Bhartiyata: PM Modi
December 26th, 12:03 pm
Prime Minister Narendra Modi addressed the program marking ‘Veer Bal Diwas’ at Bharat Mandapam in New Delhi. Addressing the gathering, the Prime Minister remarked that the nation is remembering the immortal sacrifices of Veer Sahibzade and deriving inspiration from them as a new chapter of Veer Bal Diwas unfolds for India in the Azadi Ka Amrit Kaal. PM Modi emphasized, “This day reminds us that age does not matter when it comes to heights of bravery.'ವೀರ ಬಾಲ ದಿವಸ್' ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
December 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಭಾರತ್ ಮಂಟಪ’ದಲ್ಲಿ ನಡೆದ 'ವೀರ ಬಾಲ ದಿವಸ್' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರು ಮಕ್ಕಳಿಂದ ಗಾಯನ ಹಾಗೂ ಮೂರು ಸಮರ ಕಲೆಗಳ ಪ್ರದರ್ಶನಗಳಿಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೆಹಲಿಯಲ್ಲಿ ಯುವಜನರ ಜಾಥಾಕ್ಕೆ ಹಸಿರು ನಿಶಾನೆ ತೋರಿದರು.ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 25th, 04:31 pm
ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್! ಇಂದು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಹೊಂದಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುವ ದಿನ. ಇಂದು ಮಹಾಮನ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನ. ಇಂದು ಅಟಲ್ ಜಿ ಅವರ ಜನ್ಮದಿನವೂ ಆಗಿದೆ. ಈ ಪವಿತ್ರ ಸಂದರ್ಭದಲ್ಲಿ ನಾನು ಮಹಾಮನ ಮಾಳವೀಯ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಅಟಲ್ ಜೀ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ. ಅಟಲ್ ಜೀ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ದೇಶವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದೆ. ಉತ್ತಮ ಆಡಳಿತ ದಿನದಂದು ನಾನು ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ʻಪಂಡಿತ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼ ಪುಸ್ತಕವನ್ನು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿಗಳು
December 25th, 04:30 pm
ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ʻಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼದ 11 ಸಂಪುಟಗಳ ಸರಣಿಯ ಪೈಕಿ ಮೊದಲ ಸಂಪುಟವನ್ನು ಲೋಕಾರ್ಪಣೆ ಮಾಡಿದರು. ಶ್ರೀ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪುಷ್ಪ ನಮನವನ್ನೂ ಸಲ್ಲಿಸಿದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಅವಿರತವಾಗಿ ಶ್ರಮಿಸಿದ ಶ್ರೇಷ್ಠ ವಿದ್ವಾಂಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿ ಮಾಳವೀಯ ಅವರನ್ನು ಸ್ಮರಿಸಲಾಗುತ್ತದೆ.ಡಿಸೆಂಬರ್ 25ರಂದು “ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿ” ಗಳನ್ನು ಬಿಡುಗಡೆ ಮಾಡಲಿದ್ದಾರೆ ಪ್ರಧಾನಮಂತ್ರಿ
December 24th, 07:47 pm
ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ' 11 ಸಂಪುಟಗಳ ಮೊದಲ ಸರಣಿಯನ್ನು 2023 ರ ಡಿಸೆಂಬರ್ 25 ರಂದು ಸಂಜೆ 4:30 ಕ್ಕೆ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.The soil of India creates an affinity for the soul towards spirituality: PM Modi
October 31st, 09:23 pm
PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.