ಗಯಾನಾ ಅಧ್ಯಕ್ಷರಿಗೆ ಪ್ರಧಾನಮಂತ್ರಿ ಅಭಿನಂದನೆ

September 06th, 09:09 pm

ಗಯಾನಾದ ಸಾರ್ವತ್ರಿಕ ಮತ್ತು ಪ್ರಾದೇಶಿಕ ಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಅಧ್ಯಕ್ಷ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಸದೃಢ ಮತ್ತು ಐತಿಹಾಸಿಕ ಜನರ ನಡುವಿನ ಬಾಂಧವ್ಯ ಹೊಂದಿರುವ ಭಾರತ-ಗಯಾನಾ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಎದುರು ನೋಡುತ್ತಿರುವುದಾಗಿ ಶ್ರೀ ಮೋದಿ ಅವರು ಹೇಳಿದ್ದಾರೆ.

ಬಿಹಾರದ ಸಿವಾನ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 20th, 01:00 pm

ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು

June 20th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.

ಪರಾಗ್ವೆ ಅಧ್ಯಕ್ಷ ರೊಂದಿಗಿನ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಯ ಕನ್ನಡ ಅನುವಾದ

June 02nd, 03:00 pm

ನಾವು ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ. ಪರಾಗ್ವೆ ದಕ್ಷಿಣ ಅಮೆರಿಕಾದಲ್ಲಿ ಪ್ರಮುಖ ಪಾಲುದಾರ. ನಮ್ಮ ಭೌಗೋಳಿಕತೆಗಳು ವಿಭಿನ್ನವಾಗಿರಬಹುದು, ಆದರೆ ನಾವು ಒಂದೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಜನರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುತ್ತೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ

March 30th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 23rd, 09:24 pm

ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್‌ ಬಿಷಫ್ಸ್‌ ಕಾನ್ಫರೆನ್ಸ್ ಆಫ್‌ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್‌ ಆಚರಣೆಯಲ್ಲಿ ಭಾಗವಹಿಸಿದರು

December 23rd, 09:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್‌ ಬಿಷಫ್ಸ್‌ ಕಾನ್ಫರೆನ್ಸ್ ಆಫ್‌ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್‌ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್‌ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್‌ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡಿ ಉಪಕ್ರಮವನ್ನು ಬೆಂಬಲಿಸಿದ ಗಯಾನದಾ ಅಧ್ಯಕ್ಷರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಮಂತ್ರಿ

November 25th, 10:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ತಮ್ಮ ಉಪಕ್ರಮವನ್ನು ಬೆಂಬಲಿಸಿದ ಗಯಾನ ಅಧ್ಯಕ್ಷರಾದ ಡಾ.ಇರ್ಫಾನ್ ಆಲಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ನಿನ್ನೆಯ ಮನ್ ಕಿ ಬಾತ್ ಆವೃತ್ತಿಯಲ್ಲಿ ಗಯಾನದಲ್ಲಿನ ಭಾರತೀಯ ಸಮುದಾಯದ ಶ್ಲಾಘನೆಯನ್ನು ಪುನರುಚ್ಚರಿಸಿದ್ದಾರೆ.

We are working fast in every sector for the development of Odisha: PM Modi at Odisha Parba 2024

November 24th, 08:48 pm

PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.

“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 24th, 08:30 pm

ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.

ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.

ಗಯಾನಾದ ಪ್ರಮುಖ ಕ್ರಿಕೆಟ್ ಆಟಗಾರರೊಂದಿಗೆ ಪ್ರಧಾನಮಂತ್ರಿ ಸಂವಾದ

November 22nd, 05:31 am

ಕ್ರಿಕೆಟ್ ಕ್ರೀಡೆಯು ಭಾರತ ಮತ್ತು ಗಯಾನಾವನ್ನು ಹತ್ತಿರವಾಗಿಸಿದೆ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಗಾಢವಾಗಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಯಾನಾದ ಪ್ರಮುಖ ಕ್ರಿಕೆಟ್ ಆಟಗಾರರ ಜೊತೆಗಿನ ಸಂವಾದದಲ್ಲಿ ಬಣ್ಣಿಸಿದ್ದಾರೆ.

ಆರ್ಯ ಸಮಾಜದ ಸ್ಮಾರಕಕ್ಕೆ ಪ್ರಧಾನಮಂತ್ರಿಯವರಿಂದ ಗೌರವ ನಮನ

November 22nd, 03:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಗಯಾನಾದಲ್ಲಿ ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಗಯಾನಾ ಜನರ ಪ್ರಯತ್ನಗಳು ಮತ್ತು ಪಾತ್ರವನ್ನು ಶ್ರೀ ಮೋದಿಯವರು ಶ್ಲಾಘಿಸಿದರು. ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ನಾವು ಆಚರಿಸುತ್ತಿರುವುದರಿಂದ ಈ ವರ್ಷವು ಬಹಳ ವಿಶೇಷವಾಗಿದೆ ಎಂದು ಅವರು ಹೇಳಿದರು.

ಗಯಾನಾದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯ ಪ್ರವರ್ಧಮಾನಕ್ಕೆ ಬರುತ್ತಿವೆ: ಪ್ರಧಾನಮಂತ್ರಿ

November 22nd, 03:06 am

ಭಾರತ-ಗಯಾನ ಸಾಂಸ್ಕೃತಿಕ ಸಂಬಂಧಗಳ ಮತ್ತಷ್ಟು ಬಲವರ್ಧನೆಗೆ ಸ್ವಾಮಿ ಆಕಾಶರಾನಂದಜಿ ಕೈಗೊಂಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸರಸ್ವತಿ ವಿದ್ಯಾನಿಕೇತನ ಶಾಲೆಗೆ ಭೇಟಿ ನೀಡಿದ್ದರು ಮತ್ತು ಭಾರತದ ಸಂಸ್ಕೃತಿ ಮತ್ತು ಸಂಪ್ರದಾಯ ಗಯಾನಾದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿವೆ ಎಂದು ಹೇಳಿದರು.

India's journey over the past decade has been one of scale, speed and sustainability: PM Modi in Guyana

November 22nd, 03:02 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

Prime Minister Shri Narendra Modi addresses the Indian Community of Guyana

November 22nd, 03:00 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

PM Modi meets with President of Suriname

November 21st, 10:57 pm

PM Modi met with President Chandrikapersad Santokhi of Suriname on the sidelines of the 2nd India-CARICOM Summit in Georgetown, Guyana. The two leaders reviewed the progress of ongoing bilateral initiatives and discussed enhancing cooperation in defense and security, trade, agriculture, digital initiatives, UPI, ICT, healthcare, pharmaceuticals, capacity building, culture, and people-to-people ties.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗ್ರೆನಡಾದ ಪ್ರಧಾನಮಂತ್ರಿಯವರ ಭೇಟಿ

November 21st, 10:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು.