ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

May 29th, 06:45 pm

ಇಂದು, ಜಗನ್ನಾಥನ ಆಶೀರ್ವಾದದೊಂದಿಗೆ, ದೇಶದ ರೈತರಿಗಾಗಿ ಒಂದು ದೊಡ್ಡ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ. ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ’ವು (ಅಭಿವೃದ್ಧಿ ಹೊಂದಿದ ಕೃಷಿ ಸಂಕಲ್ಪ ಅಭಿಯಾನ) ತನ್ನದೇ ಆದ ವಿಶಿಷ್ಟ ಉಪಕ್ರಮವಾಗಿದೆ. ಮುಂಗಾರು ಸಮೀಪಿಸುತ್ತಿದೆ, ಖಾರಿಫ್ ಋತುವಿನ ಸಿದ್ಧತೆಗಳು ನಡೆಯುತ್ತಿವೆ, ಮತ್ತು ಮುಂದಿನ 12 ರಿಂದ 15 ದಿನಗಳಲ್ಲಿ, ವಿಜ್ಞಾನಿಗಳು, ತಜ್ಞರು, ಅಧಿಕಾರಿಗಳು ಮತ್ತು ಪ್ರಗತಿಪರ ರೈತರನ್ನು ಒಳಗೊಂಡ 2,000 ಕ್ಕೂ ಹೆಚ್ಚು ತಂಡಗಳು ದೇಶಾದ್ಯಂತ ಗ್ರಾಮಗಳಿಗೆ ಭೇಟಿ ನೀಡಲಿವೆ. ಈ ತಂಡಗಳು 700 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಲಕ್ಷಾಂತರ ರೈತರನ್ನು ತಲುಪಲಿವೆ. ಈ ಭವ್ಯವಾದ ಅಭಿಯಾನ, ಮಹತ್ವಾಕಾಂಕ್ಷಿ ಕಾರ್ಯಕ್ರಮ ಮತ್ತು ಭಾರತೀಯ ಕೃಷಿಯ ಉಜ್ವಲ ಭವಿಷ್ಯಕ್ಕಾಗಿ ದೇಶದ ಎಲ್ಲಾ ರೈತರಿಗೂ ಮತ್ತು ಈ ತಂಡಗಳ ಎಲ್ಲಾ ಸದಸ್ಯರಿಗೂ ನನ್ನ ಶುಭ ಹಾರೈಕೆಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಉದ್ದೇಶಿಸಿ ಭಾಷಣ ಮಾಡಿದರು

May 29th, 06:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ತಮ್ಮ ಹೇಳಿಕೆಗಳನ್ನು ನೀಡಿದ ಅವರು, ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಪ್ರಾರಂಭಿಸಿರುವುದು ರೈತರಿಗೆ ಮಹತ್ವದ ಉಪಕ್ರಮವಾಗಿದೆ ಮತ್ತು ಕೃಷಿ ಅಭಿವೃದ್ಧಿಗೆ ಬೆಂಬಲ ನೀಡುವ ವಿಶಿಷ್ಟ ಪ್ರಯತ್ನವಾಗಿದೆ ಎಂದು ಹೇಳಿದರು. ಮಾನ್ಸೂನ್‌ ಸಮೀಪಿಸುತ್ತಿದ್ದಂತೆ ಮತ್ತು ಮುಂಗಾರು ಋುತುವಿನ ಸಿದ್ಧತೆಗಳು ಪ್ರಾರಂಭವಾಗುತ್ತಿದ್ದಂತೆ, ಮುಂದಿನ 12 ರಿಂದ 15 ದಿನಗಳಲ್ಲಿ, ವಿಜ್ಞಾನಿಗಳು, ತಜ್ಞರು, ಅಧಿಕಾರಿಗಳು ಮತ್ತು ಪ್ರಗತಿಪರ ರೈತರನ್ನು ಒಳಗೊಂಡ 2000 ತಂಡಗಳು 700ಕ್ಕೂ ಜಿಲ್ಲೆಗಳಲ್ಲಿ ಪ್ರಯಾಣಿಸಲಿವೆ ಮತ್ತು ಹಳ್ಳಿಗಳಾದ್ಯಂತ ಲಕ್ಷಾಂತರ ರೈತರನ್ನು ತಲುಪಲಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಭಾರತದ ಕೃಷಿ ಕ್ಷೇತ್ರವನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿದ ಅವರು, ಈ ತಂಡಗಳಲ್ಲಿ ಭಾಗವಹಿಸುವ ಎಲ್ಲಾರೈತರಿಗೆ ಮತ್ತು ಭಾಗವಹಿಸುವವರಿಗೆ ಶುಭ ಕೋರಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ನಮ್ಮ ಯುವಕರು ಪ್ರತಿಯೊಂದು ಕ್ಷೇತ್ರದಲ್ಲೂ ದೇಶವನ್ನು ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

July 31st, 11:30 am

ಮಿತ್ರರೇ, ಜುಲೈ 31 ರಂದು, ಅಂದರೆ ಈ ಇಂದು ನಾವೆಲ್ಲ ದೇಶವಾಸಿಗಳು, ಹುತಾತ್ಮ ಯೋಧ ಶಹೀದ್ ಉಧಂ ಸಿಂಗ್ ಅವರಿಗೆ ನಮಿಸುತ್ತೇವೆ. ದೇಶಕ್ಕಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಇತರ ಎಲ್ಲ ಮಹಾನ್ ಕ್ರಾಂತಿಕಾರಿಗಳಿಗೆ ನಾನು ವಿನಮ್ರ ಗೌರವ ನಮನವನ್ನು ಸಲ್ಲಿಸುತ್ತೇನೆ.