ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 26th, 11:23 am

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

April 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Today, India is not just a Nation of Dreams but also a Nation That Delivers: PM Modi in TV9 Summit

Today, India is not just a Nation of Dreams but also a Nation That Delivers: PM Modi in TV9 Summit

March 28th, 08:00 pm

PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು

March 28th, 06:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.

The vision of Investment in People stands on three pillars – Education, Skill and Healthcare: PM Modi

March 05th, 01:35 pm

PM Modi participated in the Post-Budget Webinar on Employment and addressed the gathering on the theme Investing in People, Economy, and Innovation. PM remarked that India's education system is undergoing a significant transformation after several decades. He announced that over one crore manuscripts will be digitized under Gyan Bharatam Mission. He noted that India, now a $3.8 trillion economy will soon become a $5 trillion economy. PM highlighted the ‘Jan-Bhagidari’ model for better implementation of the schemes.

ಉದ್ಯೋಗ ಸೃಷ್ಟಿಗೆ ಉತ್ತೇಜನ - ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

March 05th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಕುರಿತ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಕಸಿತ ಭಾರತದ ಮಾರ್ಗಸೂಚಿಯನ್ನು ವ್ಯಾಖ್ಯಾನಿಸುವ ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಎಂಬ ವೆಬಿನಾರ್‌ ನ ವಿಷಯದ ಮಹತ್ವವನ್ನು ಎತ್ತಿ ತೋರಿಸಿದರು. ಈ ವರ್ಷದ ಬಜೆಟ್ ಈ ವಿಷಯವನ್ನು ದೊಡ್ಡ ಪ್ರಮಾಣದಲ್ಲಿ ಪ್ರತಿಬಿಂಬಿಸುತ್ತದೆ ಮತ್ತು ಭಾರತದ ಭವಿಷ್ಯದ ನೀಲನಕ್ಷೆಯಾಗಿದೆ ಎಂದು ಅವರು ಹೇಳಿದರು. ಮೂಲಸೌಕರ್ಯ, ಕೈಗಾರಿಕೆಗಳು, ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆಗಳಿಗೆ ಸಮಾನ ಆದ್ಯತೆ ನೀಡಲಾಗಿದೆ ಎಂದು ಅವರು ಒತ್ತಿ ಹೇಳಿದರು. ಸಾಮರ್ಥ್ಯ ವೃದ್ಧಿ ಮತ್ತು ಪ್ರತಿಭೆಗಳ ಪೋಷಣೆ ರಾಷ್ಟ್ರದ ಪ್ರಗತಿಗೆ ಅಡಿಪಾಯವಾಗಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಮುಂದಿನ ಹಂತದ ಅಭಿವೃದ್ಧಿಗೆ ಅಗತ್ಯವಿರುವುದರಿಂದ ಎಲ್ಲಾ ಪಾಲುದಾರರು ಮುಂದೆ ಬಂದು ಈ ಕ್ಷೇತ್ರಗಳಲ್ಲಿ ಹೆಚ್ಚು ಹೂಡಿಕೆ ಮಾಡಬೇಕೆಂದು ಒತ್ತಾಯಿಸಿದರು. ದೇಶದ ಆರ್ಥಿಕ ಯಶಸ್ಸಿಗೆ ಇದು ಅತ್ಯಗತ್ಯ ಮತ್ತು ಪ್ರತಿಯೊಂದು ಸಂಸ್ಥೆಯ ಯಶಸ್ಸಿಗೆ ಆಧಾರವಾಗಿದೆ ಎಂದು ಅವರು ಒತ್ತಿ ಹೇಳಿದರು.

3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 04th, 07:45 pm

ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.

ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.

​​​​​​​ಎರಡನೇ ಇನ್ಫಿನಿಟಿ ಫೋರಂ ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ

December 09th, 11:09 am

ಇನ್ಪಿನಿಟಿ ಫೋರಂನ ಎರಡನೇ ಆವೃತ್ತಿಗೆ ನಿಮಗೆಲ್ಲರಿಗೂ ಸ್ವಾಗತ. 2021 ರ ಡಿಸೆಂಬರ್ ನಲ್ಲಿ ಇನ್ಪಿನಿಟಿ ಫೋರಂ ಅನ್ನು ಉದ್ಘಾಟಿಸಿದ ಸಂದರ್ಭವನ್ನು ನಾನು ಸ್ಮರಿಸಿಕೊಳ್ಳುತ್ತೇನೆ; ಆಗ ಜಗತ್ತು ಸಾಂಕ್ರಾಮಿಕದಿಂದಾಗಿ ಅನಿಶ್ಚಿತತೆಯಿಂದ ಕೂಡಿತ್ತು. ಪ್ರತಿಯೊಬ್ಬರೂ ಜಾಗತಿಕ ಆರ್ಥಿಕ ಬೆಳವಣಿಗೆ ಕುರಿತು ಕಳವಳಗೊಂಡಿದ್ದರು ಮತ್ತು ಆ ಚಿಂತೆಗಳು ಈಗಲೂ ಉಳಿದುಕೊಂಡಿವೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಸಾಲದ ಮಟ್ಟ ಮತ್ತು ಹೆಚ್ಚಿನ ಹಣದುಬ್ಬರ ಒಡ್ಡುವ ಸವಾಲಯಗಳ ಕುರಿತು ನಿಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ.

ʻಇನ್ಫಿನಿಟಿ ಫೋರಂ 2.0ʼ ಉದ್ದೇಶಿಸಿ ಪ್ರಧಾನಿ ಭಾಷಣ

December 09th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಫಿನ್‌ಟೆಕ್ʼ ಕುರಿತಾದ ಜಾಗತಿಕ ಚಿಂತನಾವೇದಿಕೆ - ʻಇನ್ಫಿನಿಟಿ ಫೋರಂʼನ ಎರಡನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼರ ಪೂರ್ವಭಾವಿಯಾಗಿ ಭಾರತ ಸರ್ಕಾರದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರಗಳ ಪ್ರಾಧಿಕಾರ (ಐಎಫ್ಎಸ್‌ಸಿಎ) ಮತ್ತು ʻಗಿಫ್ಟ್ ಸಿಟಿʼ ಜಂಟಿಯಾಗಿ ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು ಆಯೋಜಿಸಿವೆ. ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು 'ಗಿಫ್ಟ್-ಐಎಫ್ಎಸ್‌ಸಿ: ಹೊಸ ಯುಗದ ಜಾಗತಿಕ ಹಣಕಾಸು ಸೇವಾ ಕೇಂದ್ರʼ ವಿಷಯಾಧಾರಿತವಾಗಿ ಏರ್ಪಡಿಸಲಾಗಿದೆ.

ಕೌಶಲ್ ದೀಕ್ಷಾಂತ್ ಸಮಾರೋಹ್ ಕಾರ್ಯಕ್ರಮದಲ್ಲಿ ವಿಡಿಯೊ ಸಂದೇಶ ಮೂಲಕ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

October 12th, 01:00 pm

ಕೌಶಲ್ಯ ಅಭಿವೃದ್ಧಿಯ ಈ ಸಂಭ್ರಮಾಚರಣೆಯು ನಿಜವಾಗಿಯೂ ವಿಶಿಷ್ಟವಾಗಿದೆ. ದೇಶಾದ್ಯಂತದ ಸಂಸ್ಥೆಗಳ ಸಾಮೂಹಿಕ ಕೌಶಲ್ಯ ಪ್ರದರ್ಶನ, ಕೌಶಲ್ ದೀಕ್ಷಾಂತ್ ಸಮಾರೋಹ್, ಶ್ಲಾಘನೀಯ ಉಪಕ್ರಮವಾಗಿದೆ. ಇದು ಸಮಕಾಲೀನ ಭಾರತದ ಆದ್ಯತೆಗಳನ್ನು ಎತ್ತಿ ತೋರಿಸುತ್ತದೆ. ಇಂದು ಸಾವಿರಾರು ಯುವಕರು ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದಾರೆ. ಎಲ್ಲಾ ಯುವಕರಿಗೆ ಉತ್ತಮ ಭವಿಷ್ಯಕ್ಕಾಗಿ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ʻಕೌಶಲ ಘಟಿಕೋತ್ಸವ-2023ʼ (ಕೌಶಲ ದೀಕ್ಷಂತ್‌ ಸಮರೋಹ್- 2023) ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿಯವರ ಭಾಷಣ

October 12th, 12:49 pm

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕೌಶಲ್ಯ ಅಭಿವೃದ್ಧಿಯ ಈ ಉತ್ಸವವು ಸ್ವತಃ ವಿಶಿಷ್ಟವಾದದ್ದು ಮತ್ತು ಇಂದು ದೇಶಾದ್ಯಂತ ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳ ಜಂಟಿ ಘಟಿಕೋತ್ಸವದ ಕಾರ್ಯಕ್ರಮವು ಅತ್ಯಂತ ಶ್ಲಾಘನೀಯ ಉಪಕ್ರಮವಾಗಿದೆ ಎಂದರು. ಕೌಶಲ ಘಟಿಕೋತ್ಸವವು ಇಂದಿನ ಭಾರತದ ಆದ್ಯತೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. ತಂತ್ರಜ್ಞಾನದ ಮೂಲಕ ಸಾವಿರಾರು ಯುವಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿರುವುದನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಎಲ್ಲ ಯುವಕರಿಗೆ ಶುಭ ಕೋರಿದರು.

ಭಾರತವು ಜಾಗತಿಕ ಉಜ್ವಲ ತಾಣ, ಬೆಳವಣಿಗೆ ಮತ್ತು ನಾವೀನ್ಯತೆ(ಅನುಶೋಧನೆ)ಯ ಶಕ್ತಿಕೇಂದ್ರ: ಪ್ರಧಾನ ಮಂತ್ರಿ

October 11th, 08:09 am

ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್0) ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆ ಕುರಿತು ನೀಡಿರುವ ಮುನ್ನೋಟ(ಮುನ್ಸೂಚನೆ) ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾಗತಿಕ ಮಟ್ಟದಲ್ಲಿ ಭಾರತವು ಉಜ್ವಲ ತಾಣವಾಗಿದೆ, ಬೆಳವಣಿಗೆ ಮತ್ತು ನಾವೀನ್ಯತೆ(ಆವಿಷ್ಕಾರ)ಯ ಶಕ್ತಿ ಕೇಂದ್ರವಾಗಿದೆ. ಇದಕ್ಕೆ ನಮ್ಮ ಜನರ ಅಪಾರ ಶಕ್ತಿ(ಬಲ) ಮತ್ತು ಕೌಶಲ್ಯವೇ ಕಾರಣ ಎಂದು ಹೇಳಿದರು.

ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.

2023 ಆಗಸ್ಟ್ 10ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ(ಗೊತ್ತುವಳಿ)ಕ್ಕೆ ಪ್ರಧಾನ ಮಂತ್ರಿ ಉತ್ತರ

August 10th, 04:30 pm

ಕಳೆದ 3 ದಿನಗಳಿಂದ ಗೌರವಾನ್ವಿತ ಹಲವು ಹಿರಿಯ ಸದಸ್ಯರು ತಮ್ಮ ಆಲೋಚನೆ, ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದಾರೆ. ಅವರ ಬಹುತೇಕ ಎಲ್ಲಾ ಅಭಿಪ್ರಾಯಗಳು ನನಗೆ ವಿವರವಾಗಿ ಮುಟ್ಟಿವೆ. ಕೆಲವು ಭಾಷಣಗಳನ್ನು ನಾನೇ ಕೇಳಿದ್ದೇನೆ. ಗೌರವಾನ್ವಿತ ಸಭಾಧ್ಯಕ್ಷರೇ, ಇಂದು, ನಮ್ಮ ಸರ್ಕಾರದ ಮೇಲೆ ಪದೇಪದೆ ಅಪಾರ ನಂಬಿಕೆ ತೋರಿಸುತ್ತಿರುವ ಈ ದೇಶದ ಕೋಟ್ಯಂತರ ನಾಗರಿಕರಿಗೆ ನನ್ನ ಕೃತಜ್ಞತೆ ವ್ಯಕ್ತಪಡಿಸಲು ನಾನು ಇಲ್ಲಿದ್ದೇನೆ. ಗೌರವಾನ್ವಿತ ಸ್ಪೀಕರ್, ದೇವರು ತುಂಬಾ ಕರುಣಾಮಯಿ ಎಂದು ಹೇಳಲಾಗುತ್ತದೆ. ಅವನು ತನ್ನ ಆಸೆಗಳನ್ನು ಯಾರಾದರೂ ಅಥವಾ ಇನ್ನೊಬ್ಬರ ಮೂಲಕ ಪೂರೈಸುತ್ತಾನೆ, ಯಾರನ್ನಾದರೂ ಮಾಧ್ಯಮವನ್ನಾಗಿ ಮಾಡುವುದು ದೇವರ ಇಚ್ಛೆಯಾಗಿದೆ. ದೇವರ ಇಚ್ಛೆಯಂತೆ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿರುವುದು ದೇವರ ಆಶೀರ್ವಾದ ಎಂದು ಭಾವಿಸುತ್ತೇನೆ. 2018ರಲ್ಲಿ ವಿರೋಧ ಪಕ್ಷದ ನನ್ನ ಸಹೋದ್ಯೋಗಿಗಳು ನನ್ನ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದಾಗ ದೇವರ ಆಜ್ಞೆಯೂ ಇದೇ ಆಗಿತ್ತು. ಅವಿಶ್ವಾಸ ಗೊತ್ತುವಳಿಯು ನಮ್ಮ ಸರ್ಕಾರಕ್ಕೆ ಸದನದ ಪರೀಕ್ಷೆ ಅಲ್ಲ, ಬದಲಿಗೆ ಅದು ಅವರ ಸ್ವಂತ ಅಂತಸ್ತಿನ ಪರೀಕ್ಷೆ ಎಂದು ನಾನು ಆ ಸಮಯದಲ್ಲಿ ಹೇಳಿದ್ದೆ. ಆ ದಿನವೂ ಹೇಳಿದ್ದೆ. ಮತ್ತು ಅದು ಬದಲಾದಂತೆ, ಪ್ರತಿಪಕ್ಷಗಳು ಮತದಾನ ನಡೆದಾಗ ಅವರು ಹೊಂದಿದ್ದಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ನಾವು ಜನರ ಬಳಿಗೆ (ಮತ ಕೇಳಲು) ಹೋದಾಗ, ಜನರು ಪೂರ್ಣ ಬಲದಿಂದ ಅವರ ಮೇಲೆ ಅವಿಶ್ವಾಸ ಘೋಷಿಸಿದರು. ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿತು. ಚುನಾವಣೆಯಲ್ಲಿ ಬಿಜೆಪಿಯೂ ಸಹ ಹೆಚ್ಚು ಸ್ಥಾನಗಳನ್ನು ಗಳಿಸಿತು. ಒಂದು ರೀತಿಯಲ್ಲಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ನಮಗೆ ಮಂಗಳಕರವಾಗಿದ್ದು, 2024ರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಬಿಜೆಪಿ ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಅಭೂತಪೂರ್ವ ಗೆಲುವು ಸಾಧಿಸಲು ನೀವೆಲ್ಲಾ ನಿರ್ಧರಿಸಿದ್ದೀರಿ ಎಂದು ನಾನು ಇಂದೇ ನೋಡುತ್ತಿದ್ದೇನೆ.

ಲೋಕಸಭೆಯಲ್ಲಿ ಅವಿಶ್ವಾಸ ನಿಲುವಳಿಗೆ ಪ್ರಧಾನಿಗಳಿಂದ ಉತ್ತರ

August 10th, 04:00 pm

ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ಪದೇ ಪದೇ ತೋರಿಸಿದ್ದಕ್ಕಾಗಿ ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಅಪಾರ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದರು. 2018ರಲ್ಲಿ ಪ್ರತಿಪಕ್ಷಗಳು ಅವಿಶ್ವಾಸ ನಿಲುವಳಿ ತಂದಿದ್ದನ್ನು ಸ್ಮರಿಸಿದ ಪ್ರಧಾನಿಯವರು, ಇದು ಸರ್ಕಾರದ ಪಾಲಿಗೆ ವಿಶ್ವಾಸಮತ ನಿರ್ಣಯವಲ್ಲ, ಬದಲಿಗೆ ಸದನದಲ್ಲಿ ಅದನ್ನು ಮಂಡಿಸಿದವರ ಪಾಲಿಗೇ ಅವಿಶ್ವಾಸ ನಿರ್ಣಯ ಎಂದರು. ನಾವು 2019ರಲ್ಲಿ ಚುನಾವಣೆಗೆ ಹೋದಾಗ, ಪ್ರತಿಪಕ್ಷಗಳ ಮೇಲೆ ಜನರು ಅತ್ಯಂತ ಬಲವಾದ ಅವಿಶ್ವಾಸವನ್ನು ಪ್ರದರ್ಶಿಸಿದರು ಎಂದು ಪ್ರಧಾನಿ ಹೇಳಿದರು. ಎನ್‌ಡಿಎ ಮತ್ತು ಬಿಜೆಪಿ ಎರಡೂ ಹೆಚ್ಚಿನ ಸ್ಥಾನಗಳನ್ನು ಗೆದ್ದಿವೆ ಎಂದು ಒತ್ತಿ ಹೇಳಿದರು. ಒಂದು ರೀತಿಯಲ್ಲಿ, ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಸರ್ಕಾರದ ಪಾಲಿಗೆ ಅದೃಷ್ಟ ಎಂದು ಪ್ರಧಾನಿ ಬಣ್ಣಿಸಿದರು. ಜನರ ಆಶೀರ್ವಾದದಿಂದ ಎನ್‌ಡಿಎ ಮತ್ತು ಬಿಜೆಪಿ ಎಲ್ಲಾ ದಾಖಲೆಗಳನ್ನು ಮುರಿಯುತ್ತವೆ ಮತ್ತು 2024ರಲ್ಲಿ ವಿಜಯಶಾಲಿಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

NDA today stands for N-New India, D-Developed Nation and A-Aspiration of people and regions: PM Modi

July 18th, 08:31 pm

PM Modi during his address at the ‘NDA Leaders Meet’ recalled the role of Atal ji, Advani ji and the various other prominent leaders in shaping the NDA Alliance and providing it the necessary direction and guidance. PM Modi also acknowledged and congratulated all on the completion of 25 years since the establishment of NDA in 1998.

ಎನ್‌ಡಿಎ ನಾಯಕರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

July 18th, 08:30 pm

‘ಎನ್‌ಡಿಎ ನಾಯಕರ ಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಎನ್‌ಡಿಎ ಮೈತ್ರಿಕೂಟವನ್ನು ರೂಪಿಸುವಲ್ಲಿ ಮತ್ತು ಅದಕ್ಕೆ ಅಗತ್ಯವಾದ ನಿರ್ದೇಶನ ಮತ್ತು ಮಾರ್ಗದರ್ಶನ ನೀಡುವಲ್ಲಿ ಅಟಲ್ ಜಿ, ಅಡ್ವಾಣಿ ಜಿ ಮತ್ತು ಇತರ ಪ್ರಮುಖ ನಾಯಕರ ಪಾತ್ರವನ್ನು ಸ್ಮರಿಸಿದರು. 1998ರಲ್ಲಿ ಎನ್‌ಡಿಎ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 23rd, 08:54 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!