ಬವಾಲಿಯಾಲಿ ಧಾಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

ಬವಾಲಿಯಾಲಿ ಧಾಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 20th, 04:35 pm

ಮಹಂತ್ ಶ್ರೀ ರಾಮ್ ಬಾಪು ಜಿ, ಸಮಾಜದ ಗೌರವಾನ್ವಿತ ಸದಸ್ಯರೆ ಮತ್ತು ಇಲ್ಲಿ ನೆರೆದಿರುವ ಲಕ್ಷಾಂತರ ಶ್ರದ್ಧಾಭಕ್ತಿಯುಳ್ಳ ಸಹೋದರ ಸಹೋದರಿಯರೆ - ನಮಸ್ಕಾರ ಮತ್ತು ಜೈ ಠಾಕುರ್!

ಬವಾಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

ಬವಾಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

March 20th, 04:30 pm

ಗುಜರಾತ್‌ನ ಭರ್ವಾಡ್ ಸಮುದಾಯದ ಬವಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ಮಹಾಂತ ಶ್ರೀ ರಾಮ್ ಬಾಪು ಜಿ, ಸಮುದಾಯದ ಮುಖಂಡರು ಮತ್ತು ಸಾವಿರಾರು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಭರ್ವಾಡ್ ಸಮುದಾಯದ ಸಂಪ್ರದಾಯಗಳಿಗೆ ಮತ್ತು ಈ ಸಂಪ್ರದಾಯಗಳನ್ನು ಎತ್ತಿಹಿಡಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಸಂತರು ಮತ್ತು ಮಹಾಂತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ, ಐತಿಹಾಸಿಕ ಮಹಾಕುಂಭದ ಅಪಾರ ಸಂತೋಷ ಮತ್ತು ಹೆಮ್ಮೆಯನ್ನು ಪ್ರಸ್ತಾಪಿಸಿದರು. ಈ ಪವಿತ್ರ ಕಾರ್ಯಕ್ರಮದ ಸಮಯದಲ್ಲಿ ಮಹಾಂತ ಶ್ರೀ ರಾಮ್ ಬಾಪು ಜಿ ಅವರಿಗೆ ಮಹಾಮಂಡಲೇಶ್ವರ ಎಂಬ ಬಿರುದು ನೀಡಿ ಗೌರವಿಸಿದ ಮಹತ್ವದ ಸಂದರ್ಭವನ್ನು ಪ್ರಸ್ತಾಪಿಸಿದರು. ಇದು ಒಂದು ಸ್ಮರಣೀಯ ಸಾಧನೆ ಮತ್ತು ಎಲ್ಲರಿಗೂ ಅಪಾರ ಸಂತೋಷದ ಕ್ಷಣವಾಗಿದೆ. ಸಮುದಾಯದ ಕುಟುಂಬಗಳಿಗೆ ಮಹಾಂತ ಶ್ರೀ ರಾಮ್ ಬಾಪು ಜಿ ಅವರ ಕೊಡುಗೆಗಳು ಮತ್ತು ಸಾಧನೆಗಳನ್ನು ಆಚರಿಸುವ ಸಂದರ್ಭದಲ್ಲಿ ಅವರು ಶುಭಾಶಯಗಳನ್ನು ತಿಳಿಸಿದರು.