Prime Minister Shri Narendra Modi inaugurates Rashtra Prerna Sthal in Lucknow, UP

December 25th, 05:23 pm

PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.

Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup

December 21st, 04:25 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

PM Modi lays foundation stone of Ammonia-Urea Fertilizer Project of Assam Valley Fertilizer and Chemical Company Limited at Namrup, Assam

December 21st, 12:00 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

Prime Minister welcomes passage of SHANTI Bill by Parliament

December 18th, 09:47 pm

The Prime Minister, Shri Narendra Modi has welcomed the passage of the SHANTI Bill by both Houses of Parliament, describing it as a transformational moment for India’s technology landscape.

Over the last 11 years, India has changed its economic DNA: PM Modi during India-Oman Business Forum

December 18th, 04:08 pm

PM Modi addressed the India–Oman Business Forum in Muscat, highlighting centuries-old maritime ties, the India–Oman CEPA as a roadmap for shared growth, and India’s strong economic momentum. He invited Omani businesses to partner in future-ready sectors such as green energy, innovation, fintech, AI and agri-tech to deepen bilateral trade and investment.

ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

December 18th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್‌ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್‌ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.

ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ

December 17th, 12:02 am

ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.

ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 05th, 03:45 pm

ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.

ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 05th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

December 05th, 02:00 pm

ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.

PM Modi’s remarks during the joint press meet with Russian President Vladimir Putin

December 05th, 01:50 pm

PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.

ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 27th, 11:01 am

ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್‌ನ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ

November 27th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.

Cabinet approves Rs.7,280 Crore for Sintered Rare Earth Permanent Magnets Scheme

November 26th, 04:25 pm

The Union Cabinet, chaired by PM Modi, has approved the 'Scheme to Promote Manufacturing of Sintered Rare Earth Permanent Magnets' with an outlay of Rs. 7,280 crore. The initiative aims to establish 6,000 MTPA of integrated Rare Earth Permanent Magnet manufacturing in India, boosting self-reliance and strengthening India's position in the global market.

ಹೈದರಾಬಾದ್‌ನಲ್ಲಿ ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

November 26th, 10:10 am

ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ‘ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು

November 26th, 10:00 am

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್‌ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್‌ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.