
PM Modi highlights the far-reaching impact of the government’s pro-farmer initiatives
June 07th, 11:40 am
The Prime Minister, Shri Narendra Modi has underlined the far-reaching impact of the government’s pro-farmer initiatives over the past 11 years, marking a significant phase of dignity and prosperity for the agricultural community.
ಬಿಹಾರದ ಕರಕಟ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 30th, 11:29 am
ಬಿಹಾರದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ನಿತ್ಯಾನಂದ್ ರಾಯ್ ಜಿ, ಸತೀಶ್ ಚಂದ್ರ ದುಬೇ ಜಿ, ರಾಜಭೂಷಣ್ ಜಿ, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಜಿ, ವಿಜಯ್ ಕುಮಾರ್ ಸಿನ್ಹಾ ಜೀ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಚಿವರೆ, ಜನ ಪ್ರತಿನಿಧಿಗಳೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!
ಬಿಹಾರದ ಕರಕಟ್ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 30th, 10:53 am
ಬಿಹಾರದ ಕರಕಟ್ನಲ್ಲಿ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪವಿತ್ರ ಭೂಮಿಯಲ್ಲಿ ಬಿಹಾರದ ಅಭಿವೃದ್ಧಿಯನ್ನು ವೇಗಗೊಳಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು ಹಾಗು ₹48,000 ಕೋಟಿಗೂ ಹೆಚ್ಚಿನ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದರು. ತಮ್ಮನ್ನು ಆಶೀರ್ವದಿಸಲು ಬಂದಿದ್ದ ಬೃಹತ್ ಸಭೆಯನ್ನು ಪ್ರಧಾನಿ ಸ್ಮರಿಸಿದರು ಮತ್ತು ಬಿಹಾರದ ಮೇಲಿನ ಅವರ ವಾತ್ಸಲ್ಯ ಮತ್ತು ಪ್ರೀತಿಗೆ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು, ಅವರ ಬೆಂಬಲವನ್ನು ತಾವು ಸದಾ ಅತ್ಯುನ್ನತ ಗೌರವದಿಂದ ಕಾಣುವುದಾಗಿ ಒತ್ತಿ ಹೇಳಿದರು. ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ತಮ್ಮ ಭಾವನಾತ್ಮಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
May 28th, 03:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್ ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ.Government is running a special campaign for the development of tribal society: PM Modi in Bilaspur, Chhattisgarh
March 30th, 06:12 pm
PM Modi laid the foundation stone and inaugurated development projects worth over Rs 33,700 crore in Bilaspur, Chhattisgarh. He highlighted that three lakh poor families in Chhattisgarh are entering their new homes. He acknowledged the milestone achieved by women who, for the first time, have property registered in their names. The PM said that the Chhattisgarh Government is observing 2025 as Atal Nirman Varsh and reaffirmed the commitment, We built it, and we will nurture it.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
March 30th, 03:30 pm
ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ಜೀವನೋಪಾಯವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಆರಂಭ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಮಾತಾ ಮಹಾಮಾಯೆಯ ನಾಡು ಮತ್ತು ಮಾತಾ ಕೌಶಲ್ಯೆಯ ತವರು ಮನೆಯಾದ ಛತ್ತೀಸಗಢಕ್ಕೆ ಹೊಸ ವರ್ಷದ ಶುಭ ಆರಂಭ ಮತ್ತು ನವರಾತ್ರಿಯ ಮೊದಲ ದಿನವಾದ ಇಂದಿನ ಮಹತ್ವವನ್ನು ಅವರು ಒತ್ತಿ ಹೇಳಿದರು. ರಾಜ್ಯಕ್ಕೆ ಸ್ತ್ರೀ ದೈವತ್ವಕ್ಕೆ ಮೀಸಲಾದ ಈ ಒಂಬತ್ತು ದಿನಗಳ ವಿಶೇಷ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು. ನವರಾತ್ರಿಯ ಮೊದಲ ದಿನದಂದು ಛತ್ತೀಸಗಢದಲ್ಲಿರುವುದು ತಮಗೆ ದೊರೆತ ಗೌರವ ಎಂದು ಅವರು ಹೇಳಿದರು ಮತ್ತು ಇತ್ತೀಚೆಗೆ ಭಕ್ತ ಶಿರೋಮಣಿ ಮಾತಾ ಕರ್ಮ ಅವರ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆ ತಿಳಿಸಿದರು. ನವರಾತ್ರಿ ಉತ್ಸವವು ರಾಮನವಮಿಯ ಆಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಅವರು ಹೇಳಿದರು, ಇದು ಛತ್ತೀಸಗಢದಲ್ಲಿ ರಾಮನ ಮೇಲಿನ ಅನನ್ಯ ಭಕ್ತಿಯನ್ನು, ವಿಶೇಷವಾಗಿ ರಾಮನಾಮಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿರುವ ರಾಮನಾಮಿ ಸಮಾಜದ ಅಸಾಧಾರಣ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು. ಛತ್ತೀಸಗಢದ ಜನರನ್ನು ಭಗವಾನ್ ರಾಮನ ತಾಯಿಯ ಕುಟುಂಬ ಎಂದು ಕರೆಯುವ ಮೂಲಕ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 04th, 06:55 pm
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.2025-26 ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
January 22nd, 03:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ (ಸಿಸಿಇಎ) ಸಭೆ 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ)ಯನ್ನು ಅನುಮೋದಿಸಿದೆ.ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 04th, 11:15 am
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,ಗ್ರಾಮೀಣ ಭಾರತ ಮಹೋತ್ಸವ 2025ಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 04th, 10:59 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ಶೀರ್ಷಿಕಾ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು ಅದರ ಗುರುತನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ನಬಾರ್ಡ್ ಮತ್ತು ಅದರ ಇತರ ಅಂಗ ಸಂಸ್ಥೆ/ ಸಹವರ್ತಿಗಳನ್ನು ಅಭಿನಂದಿಸಿದರು.ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.The BJP-NDA government will fight the mafia-driven corruption in recruitment: PM Modi in Godda, Jharkhand
November 13th, 01:47 pm
Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.We ensured that government benefits directly reach beneficiaries without intermediaries: PM Modi in Sarath, Jharkhand
November 13th, 01:46 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.PM Modi engages lively audiences in Jharkhand’s Sarath & Godda
November 13th, 01:45 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.