Cabinet approves two multitracking Railway projects across Maharashtra and Gujarat
November 26th, 04:30 pm
The Cabinet Committee on Economic Affairs, chaired by PM Modi, has approved two Ministry of Railways projects worth about Rs. 2,781 crore. These include the Devbhumi Dwarka (Okha)-Kanalus doubling covering 141 km and the Badlapur-Karjat 3rd and 4th line spanning 32 km. The projects will increase line capacity, improve mobility and strengthen operational efficiency and service reliability by reducing congestion across the network.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ನವ ರಾಯ್ಪುರದಲ್ಲಿ ಛತ್ತೀಸ್ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 01:30 pm
ಛತ್ತೀಸ್ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಛತ್ತೀಸ್ಗಢದ ನವ ರಾಯ್ಪುರದಲ್ಲಿ ಛತ್ತೀಸ್ಗಢ ವಿಧಾನಸಭಾ ನೂತನ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 01st, 01:00 pm
ಛತ್ತೀಸ್ಗಢದ ನವ ರಾಯ್ಪುರದಲ್ಲಿ ಇಂದು ಛತ್ತೀಸ್ಗಢ ವಿಧಾನಸಭೆಯ ಹೊಸ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಛತ್ತೀಸ್ಗಢದ ಅಭಿವೃದ್ಧಿ ಪ್ರಯಾಣಕ್ಕೆ ಇಂದಿನ ದಿನ ಸುವರ್ಣ ಆರಂಭ ಎಂದು ಹೇಳಿದರು. ವೈಯಕ್ತಿಕವಾಗಿ, ಇದು ತಮಗೆ ಬಹಳ ಸಂತೋಷದಾಯಕ ಮತ್ತು ಮಹತ್ವದ ದಿನ ಎಂದು ಅವರು ಹೇಳಿದರು. ಹಲವಾರು ದಶಕಗಳಿಂದ ಪೋಷಿಸಲ್ಪಟ್ಟ ಈ ಭೂಮಿಯೊಂದಿಗಿನ ತಮ್ಮ ಆಳವಾದ ಭಾವನಾತ್ಮಕ ಬಾಂಧವ್ಯವನ್ನು ಅವರು ಉಲ್ಲೇಖಿಸಿದರು. ಪಕ್ಷದ ಕಾರ್ಯಕರ್ತನಾಗಿ ತಾವಿಲ್ಲಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾ, ಶ್ರೀ ಮೋದಿ ಅವರು ಛತ್ತೀಸ್ಗಢದಲ್ಲಿ ತಾವು ಸಾಕಷ್ಟು ಸಮಯವನ್ನು ಕಳೆದಿದ್ದನ್ನು ಮತ್ತು ಬಹಳಷ್ಟು ಕಲಿತುದನ್ನು ಹೇಳಿದರು. ಛತ್ತೀಸ್ಗಢದ ದೃಷ್ಟಿಕೋನ, ಅದರ ಸೃಷ್ಟಿಗಾಗಿನ ಸಂಕಲ್ಪ ಮತ್ತು ಆ ಸಂಕಲ್ಪದ ನೆರವೇರಿಕೆಯನ್ನು ಅವರು ನೆನಪಿಸಿಕೊಂಡರು, ಛತ್ತೀಸ್ಗಢದ ರೂಪಾಂತರದ ಪ್ರತಿ ಕ್ಷಣಕ್ಕೂ ತಾವು ಸಾಕ್ಷಿಯಾಗಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ತಲುಪುತ್ತಿರುವಾಗ, ಈ ಕ್ಷಣದ ಭಾಗವಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಬೆಳ್ಳಿ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ರಾಜ್ಯದ ಜನತೆಗಾಗಿ ಹೊಸ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಛತ್ತೀಸ್ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ಬಿಹಾರದಲ್ಲಿ ಒಟ್ಟು 2,192 ಕೋಟಿ ರೂಪಾಯಿ ವೆಚ್ಚದಲ್ಲಿ ʻಬಖ್ತಿಯಾರಪುರ್ – ರಾಜಗೀರ್ – ತಿಲೈಯʼ ಏಕ ಹಳಿ ರೈಲು ಮಾರ್ಗವನ್ನು (104 ಕಿ.ಮೀ.) ಜೋಡಿ ಮಾರ್ಗಕ್ಕೆ ವಿಸ್ತರಿಸಲು ಸಂಪುಟದ ಅನುಮೋದನೆ
September 24th, 03:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆಯು, ಬಿಹಾರದಲ್ಲಿ ಒಟ್ಟು 2,192 ಕೋಟಿ ರೂಪಾಯಿ (ಅಂದಾಜು) ವೆಚ್ಚದಲ್ಲಿ ಬಖ್ತಿಯಾರಪುರ್ – ರಾಜಗೀರ್ – ತಿಲೈಯ ನಡುವಿನ ಏಕ ಹಳಿ ರೈಲು ಮಾರ್ಗವನ್ನು (104 ಕಿ.ಮೀ.) ಜೋಡಿ ಮಾರ್ಗಕ್ಕೆ ವಿಸ್ತರಿಸಲು ಅನುಮೋದನೆ ನೀಡಿದೆ.ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 17th, 11:20 am
ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಧ್ಯಪ್ರದೇಶದ ಧಾರ್ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
September 17th, 11:19 am
ಮಧ್ಯಪ್ರದೇಶದ ಧಾರ್ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.ನವದೆಹಲಿಯಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
August 11th, 11:00 am
ಶ್ರೀ ಓಂ ಬಿರ್ಲಾ ಜೀ, ಮನೋಹರ್ ಲಾಲ್ ಜೀ, ಕಿರಣ್ ರಿಜಿಜು ಜೀ, ಮಹೇಶ್ ಶರ್ಮಾ ಜೀ, ಎಲ್ಲಗೌರವಾನ್ವಿತ ಸಂಸತ್ ಸದಸ್ಯರು, ಲೋಕಸಭೆಯ ಪ್ರಧಾನ ಕಾರ್ಯದರ್ಶಿ, ಮಹಿಳೆಯರೇ ಮತ್ತು ಮಹನೀಯರೇ!ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
August 11th, 10:30 am
ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ 184 ಟೈಪ್-VII ಬಹುಮಹಡಿ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ತವ್ಯ ಪಥದಲ್ಲಿರುವ ಕರ್ತವ್ಯ ಭವನ ಎಂದು ಕರೆಯಲಾಗುವ ಸಾಮಾನ್ಯ ಕೇಂದ್ರ ಸಚಿವಾಲಯವನ್ನು ಇತ್ತೀಚೆಗೆ ಉದ್ಘಾಟಿಸಿದೆ ಮತ್ತು ಇಂದು ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಉದ್ಘಾಟಿಸುವ ಅವಕಾಶ ದೊರೆತಿದೆ ಎಂದು ಹೇಳಿದರು. ಭಾರತದ ನಾಲ್ಕು ಮಹಾ ನದಿಗಳಾದ ಕೃಷ್ಣಾ, ಗೋದಾವರಿ, ಕೋಸಿ ಮತ್ತು ಹೂಗ್ಲಿ ಹೆಸರುಗಳನ್ನು ಸಮುಚ್ಚಯದ ನಾಲ್ಕು ಗೋಪುರಗಳಿಗೆ ಇಡಲಾಗಿದೆ. ಲಕ್ಷಾಂತರ ಜನರಿಗೆ ಬದುಕು ನೀಡುವ ಈ ನದಿಗಳು ಈಗ ಸಾರ್ವಜನಿಕ ಪ್ರತಿನಿಧಿಗಳ ಜೀವನದಲ್ಲಿ ಹೊಸ ಸಂತೋಷದ ಅಲೆಯನ್ನು ತರುತ್ತವೆ ಎಂದು ಅವರು ಹೇಳಿದರು. ನದಿಗಳಿಗೆ ಹೆಸರಿಡುವ ಸಂಪ್ರದಾಯವು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುತ್ತದೆ ಎಂದು ಅವರು ಹೇಳಿದರು. ಈ ಹೊಸ ಸಮುಚ್ಚಯವು ದೆಹಲಿಯಲ್ಲಿ ಸಂಸದರ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ದೆಹಲಿಯಲ್ಲಿ ಸಂಸದರಿಗೆ ಸರ್ಕಾರಿ ವಸತಿ ಸೌಕರ್ಯಗಳು ಈಗ ಹೆಚ್ಚಾಗಲಿವೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಸಂಸದರನ್ನು ಅಭಿನಂದಿಸಿದರು ಮತ್ತು ವಸತಿ ಸಮುಚ್ಚಯ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರನ್ನು ಶ್ಲಾಘಿಸಿದರು. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಅವರು ಶ್ಲಾಘಿಸಿದರು.ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 11:50 am
ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.