Eastern India is a growth engine in the development of the country, Odisha plays a key role in this: PM

Eastern India is a growth engine in the development of the country, Odisha plays a key role in this: PM

January 28th, 11:30 am

PM Modi inaugurated the Utkarsh Odisha – Make in Odisha Conclave 2025 in Bhubaneswar, highlighting Eastern India's role in national growth. He emphasized Odisha's historical trade significance, growing opportunities, and its potential to lead in various industries. The PM encouraged investors to seize the moment for Odisha’s development and praised the state’s contributions to New India’s progress.

PM Modi inaugurates the 'Utkarsh Odisha' - Make in Odisha Conclave 2025 in Bhubaneswar

PM Modi inaugurates the 'Utkarsh Odisha' - Make in Odisha Conclave 2025 in Bhubaneswar

January 28th, 11:00 am

PM Modi inaugurated the Utkarsh Odisha – Make in Odisha Conclave 2025 in Bhubaneswar, highlighting Eastern India's role in national growth. He emphasized Odisha's historical trade significance, growing opportunities, and its potential to lead in various industries. The PM encouraged investors to seize the moment for Odisha’s development and praised the state’s contributions to New India’s progress.

Cabinet approves continuation of the Atal Innovation Mission

Cabinet approves continuation of the Atal Innovation Mission

November 25th, 08:45 pm

The Union Cabinet chaired by PM Modi approved the continuation of its flagship initiative, the Atal Innovation Mission (AIM), under the aegis of NITI Aayog, with an enhanced scope of work and an allocated budget of Rs.2,750 crore for the period till March 31, 2028. AIM 2.0 is a step towards Viksit Bharat that aims to expand, strengthen and deepen India’s already vibrant innovation and entrepreneurship ecosystem.

ಯುಕೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 19th, 05:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಂನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಿದ್ದರು. ಉಭಯ ಪ್ರಧಾನಿಗಳ ನಡುವಿನ ಮೊದಲ ಭೇಟಿ ಇದಾಗಿದೆ. ಪ್ರಧಾನಮಂತ್ರಿಯಾಗಿ ಸ್ಟಾರ್ಮರ್ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಿ ಅಭಿನಂದಿಸಿದರು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಮೂರನೇ ಅವಧಿಯ ಅಧಿಕಾರ ವಹಿಸಿಕೊಂಡಿರುವುದಕ್ಕೆ ಪ್ರಧಾನಮಂತ್ರಿ ಸ್ಟಾರ್ಮರ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸೆಲರ್ ಅವರ ಭಾರತ ಭೇಟಿಯ ಫಲಿತಾಂಶಗಳು

October 25th, 04:50 pm

ಕ್ರಿಮಿನಲ್ ವಿಷಯಗಳಲ್ಲಿ ಪರಸ್ಪರ ಕಾನೂನು ಸಹಾಯ ಒಪ್ಪಂದ (ಎಂ ಎಲ್‌ ಎ ಟಿ).

ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:25 am

ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

October 21st, 10:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.

ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ

September 22nd, 12:00 pm

21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನದಲ್ಲಿ ಭಾರತ ಮತ್ತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಉನ್ನತ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು

September 11th, 04:28 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿಂದು ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿದ್ದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಸೆಮಿಕಾನ್ ಇಂಡಿಯಾ-2024 ಸೆಪ್ಟೆಂಬರ್ 11ರಿಂದ 13ರ ವರೆಗೆ 'ಸೆಮಿಕಂಡಕ್ಟರ್ ಭವಿಷ್ಯವನ್ನು ರೂಪಿಸುವುದು' ಎಂಬ ವಸ್ತು ವಿಷಯದೊಂದಿಗೆ ಆಯೋಜಿಸಲಾಗಿದೆ. 3 ದಿನಗಳ ಈ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸುತ್ತದೆ, ಇದು ಭಾರತವನ್ನು ಸೆಮಿಕಂಡಕ್ಟರ್‌ ವಲಯದ ಜಾಗತಿಕ ತಾಣವಾಗಿ ರೂಪಿಸುತ್ತದೆ. ಜಾಗತಿಕ ಸೆಮಿಕಂಡಕ್ಟರ್ ವಲಯದ ಉನ್ನತ ನಾಯಕತ್ವವು ಸಮ್ಮೇಳನದಲ್ಲಿ ಭಾಗವಹಿಸುತ್ತಿದೆ. ಇದು ಜಾಗತಿಕ ನಾಯಕರು, ಕಂಪನಿಗಳು ಮತ್ತು ಸೆಮಿಕಂಡಕ್ಟರ್ ಉದ್ಯಮದ ತಜ್ಞರನ್ನು ಒಟ್ಟುಗೂಡಿಸುತ್ತದೆ. ಸಮ್ಮೇಳನದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 150 ಭಾಷಣಕಾರರು ಭಾಗವಹಿಸುತ್ತಿದ್ದಾರೆ.

ದೇಶದ ವೈಜ್ಞಾನಿಕ ಸಮುದಾಯವು ಅವರ ಪ್ರಯತ್ನಗಳಿಗೆ ಸಂಪನ್ಮೂಲಗಳ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯನ್ನು ಹೊಂದಿರಬೇಕು: ಪ್ರಧಾನಮಂತ್ರಿ

September 10th, 04:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ, 7ರಲ್ಲಿರುವ ತಮ್ಮ ನಿವಾಸದಲ್ಲಿ ಅನುಸಂಧಾನ್ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಆಡಳಿತ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಭೂದೃಶ್ಯ ಮತ್ತು ಸಂಶೋಧನೆ ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಮರುವಿನ್ಯಾಸದ ಬಗ್ಗೆ ಚರ್ಚೆ ನಡೆಯಿತು.

ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ

August 03rd, 09:35 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.

ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ

August 03rd, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.

ಇಂದು ಕಾಂಗ್ರೆಸ್ ಪಕ್ಷ 'ತುಕ್ಡೆ-ತುಕ್ಡೆ' ಗ್ಯಾಂಗ್‌ನ ಸುಲ್ತಾನ್‌ನಂತೆ ತಿರುಗಾಡುತ್ತಿದೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

April 14th, 10:07 pm

ಪ್ರಧಾನಿ ನರೇಂದ್ರ ಮೋದಿ ಅವರು ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಕೋರಿ ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ಮತ್ತು ಕರ್ನಾಟಕದ ನೆಲದಲ್ಲಿ ಅಂತರ್ಗತವಾಗಿರುವ ಶಕ್ತಿಯ ಸಾರವನ್ನು ಸಂಕೇತಿಸುವ ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಯ ಪಾದಗಳಿಗೆ ಗೌರವವನ್ನು ವ್ಯಕ್ತಪಡಿಸಿ ನಮನ ಸಲ್ಲಿಸಿದರು. ಜನರ, ವಿಶೇಷವಾಗಿ ಕರ್ನಾಟಕದ ತಾಯಂದಿರು ಮತ್ತು ಸಹೋದರಿಯರ ಮಹತ್ವದ ಉಪಸ್ಥಿತಿಯನ್ನು ಗುರುತಿಸಿದ ಪ್ರಧಾನಿ ಮೋದಿ, ಮೋದಿ ಸರ್ಕಾರದ ಪುನರಾಗಮನಕ್ಕಾಗಿ ರಾಜ್ಯದ ಪ್ರತಿಧ್ವನಿಸುವ ಕರೆಯನ್ನು ಒತ್ತಿ ಹೇಳಿದರು.

ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 14th, 05:00 pm

ಪ್ರಧಾನಿ ನರೇಂದ್ರ ಮೋದಿ ಅವರು ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಕೋರಿ ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ಮತ್ತು ಕರ್ನಾಟಕದ ನೆಲದಲ್ಲಿ ಅಂತರ್ಗತವಾಗಿರುವ ಶಕ್ತಿಯ ಸಾರವನ್ನು ಸಂಕೇತಿಸುವ ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಯ ಪಾದಗಳಿಗೆ ಗೌರವವನ್ನು ವ್ಯಕ್ತಪಡಿಸಿದರು. ಜನರ, ವಿಶೇಷವಾಗಿ ಕರ್ನಾಟಕದ ತಾಯಂದಿರು ಮತ್ತು ಸಹೋದರಿಯರ ಮಹತ್ವದ ಉಪಸ್ಥಿತಿಯನ್ನು ಗುರುತಿಸಿದ ಪ್ರಧಾನಿ ಮೋದಿ, ಮೋದಿ ಸರ್ಕಾರದ ಪುನರಾಗಮನಕ್ಕಾಗಿ ರಾಜ್ಯದ ಪ್ರತಿಧ್ವನಿಸುವ ಕರೆಯನ್ನು ಒತ್ತಿ ಹೇಳಿದರು.

​​​​​​​ರೋಜ್‌ಗಾರ್ ಮೇಳದ ಅಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆ ವೇಳೆ ಪ್ರಧಾನಮಂತ್ರಿಯವರ ಭಾಷಣ

February 12th, 11:00 am

ಇಂದು, 1 ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ವಲಯದಲ್ಲಿ ಉದ್ಯೋಗಾವಕಾಶಗಳನ್ನು ನೀಡಲಾಗಿದೆ. ನಿಮ್ಮ ಶ್ರದ್ಧೆ ಮತ್ತು ಕಠಿಣ ಪರಿಶ್ರಮ ಈ ಸಾಧನೆಗೆ ಕಾರಣವಾಗಿದೆ. ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೇಂದ್ರ ಸರ್ಕಾರದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವ ಉಪಕ್ರಮವು ವೇಗವಾಗಿ ಪ್ರಗತಿಯಲ್ಲಿದೆ. ಈ ಹಿಂದಿನ ಸರ್ಕಾರಗಳ ಆಡಳಿತದಲ್ಲಿ ಉದ್ಯೋಗ ಜಾಹೀರಾತು, ನೇಮಕಾತಿ ಪತ್ರಗಳನ್ನು ನೀಡುವ ವೇಳೆ ಲಂಚ ನೀಡಲೇಬೇಕಾಗಿತ್ತು. ನಾವು ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇವೆ, ದಕ್ಷತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳುತ್ತೇವೆ. ನೇಮಕಾತಿ ಪ್ರಕ್ರಿಯೆಯು ನಿಗದಿತ ಸಮಯಾವಧಿಗೆ ಬದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರವು ಬದ್ದವಾಗಿದೆ. ಪ್ರತಿಯೊಬ್ಬ ಯುವಕರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ನೀಡುತ್ತದೆ. ಈಗ ಯುವಕರು ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯಿಂದ ತಮಗಾಗಿ ಒಂದು ಪುಟ್ಟ ಗೂಡು ಕಟ್ಟಬಹುದು ಎಂಬ ವಿಶ್ವಾಸ ಹೊಂದಿದ್ದಾರೆ. 2014 ರಿಂದ, ಯುವಕರನ್ನು ಕೇಂದ್ರ ಸರ್ಕಾರದೊಂದಿಗೆ ಮತ್ತು ರಾಷ್ಟ್ರ ನಿರ್ಮಾಣದ ಪ್ರಯತ್ನಗಳಲ್ಲಿ ಅವರನ್ನು ತೊಡಗಿಸಿಕೊಳ್ಳುವುದು ನಮ್ಮ ಗುರಿಯಾಗಿದೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರ ತನ್ನ ಹತ್ತು ವರ್ಷಗಳಲ್ಲಿ ಸುಮಾರು ಒಂದೂವರೆ ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ. ಇಂದು, ನಾವು ದೆಹಲಿಯಲ್ಲಿ ಸಮಗ್ರ ತರಬೇತಿ ಸಂಕೀರ್ಣಕ್ಕೆ ಅಡಿಪಾಯ ಹಾಕಿದ್ದೇವೆ, ಇದು ನಮ್ಮ ಸಾಮರ್ಥ್ಯ-ವರ್ಧನೆಯ ಪ್ರಯತ್ನಗಳನ್ನು ಹೆಚ್ಚಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ರೋಜ್‌ಗಾರ್ ಮೇಳದ ಅಡಿ, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಉದ್ಯೋಗಾಕಾಂಕ್ಷಿಗಳಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ

February 12th, 10:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಅವರು ನವದೆಹಲಿಯಲ್ಲಿ ಇಂಟಿಗ್ರೇಟೆಡ್ ಕಾಂಪ್ಲೆಕ್ಸ್ ಕರ್ಮಯೋಗಿ ಭವನದ ಒಂದನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂಕೀರ್ಣವು ಮಿಷನ್ ಕರ್ಮಯೋಗಿಯ ವಿವಿಧ ಆಧಾರಸ್ತಂಭಗಳ ನಡುವೆ ಸಹಭಾಗಿತ್ವ ಮತ್ತು ಸಂಯೋಜಿತ ಕ್ರಿಯೆ ಅಥವಾ ಕಾರ್ಯಾಚರಣೆಯನ್ನು ಉತ್ತೇಜಿಸುತ್ತದೆ.

​​​​​​​17ನೇ ಲೋಕಸಭೆಯ ಕೊನೆಯ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ

February 10th, 04:59 pm

ಪ್ರಜಾಪ್ರಭುತ್ವದ ಶ್ರೇಷ್ಠ ಸಂಪ್ರದಾಯದಲ್ಲಿ ಇಂದು ಒಂದು ಮಹತ್ವದ ದಿನ. ಕಳೆದ ಐದು ವರ್ಷಗಳಲ್ಲಿ, 17ನೇ ಲೋಕಸಭೆಯು ರಾಷ್ಟ್ರದ ಸೇವೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅನೇಕ ಸವಾಲುಗಳ ಎದುರಾದಾಗ, ದೇಶವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲು ಪ್ರತಿಯೊಬ್ಬರೂ ತಮ್ಮ ಸಂಪೂರ್ಣ ಸಾಮರ್ಥ್ಯಗಳೊಂದಿಗೆ ಪ್ರಯತ್ನಿಸಿದ್ದಾರೆ. ಒಂದು ರೀತಿಯಲ್ಲಿ, ರಾಷ್ಟ್ರಕ್ಕೆ ಸಮರ್ಪಿತವಾದ ನಮ್ಮ ಐದು ವರ್ಷಗಳ ಸೈದ್ಧಾಂತಿಕ ಪ್ರಯಾಣವನ್ನು ಪ್ರತಿಬಿಂಬಿಸಲು ಮತ್ತು ಮತ್ತೊಮ್ಮೆ ನಮ್ಮ ಸಂಕಲ್ಪಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲು ಇಂದು ನಮಗೆಲ್ಲರಿಗೂ ಒಂದು ಅವಕಾಶವಾಗಿದೆ. ʻಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆʼಯ ಈ ಐದು ವರ್ಷಗಳು ಬಹಳ ಅಪರೂಪ. ಸುಧಾರಣೆಗಳು ನಡೆಯುವುದು, ಕಾರ್ಯಕ್ಷಮತೆಯನ್ನು ಸಾಧಿಸುವುದು ಮತ್ತು ನಮ್ಮ ಕಣ್ಣುಗಳ ಮುಂದೆ ಪರಿವರ್ತನೆಯನ್ನು ನಾವು ನೋಡುವುದು ಅಪರೂಪ, ಇದು ಹೊಸ ವಿಶ್ವಾಸವನ್ನು ತುಂಬುತ್ತದೆ. ಇಂದು, ರಾಷ್ಟ್ರವು 17ನೇ ಲೋಕಸಭೆಯಿಂದ ಈ ಖಚಿತತೆಯ ಅನುಭವವನ್ನು ಪಡೆಯುತ್ತಿದೆ. ಮತ್ತು ರಾಷ್ಟ್ರವು 17ನೇ ಲೋಕಸಭೆಗೆ ತನ್ನ ಆಶೀರ್ವಾದವನ್ನು ಮುಂದುವರಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ಸದನದ ಎಲ್ಲಾ ಸನ್ಮಾನ್ಯ ಸದಸ್ಯರು ಈ ಎಲ್ಲಾ ಪ್ರಕ್ರಿಯೆಗಳಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದಾರೆ. ಒಬ್ಬ ನಾಯಕನಾಗಿ ಮತ್ತು ನಿಮ್ಮೆಲ್ಲರ ಒಡನಾಡಿಯಾಗಿ ನಾನು ನಿಮ್ಮೆಲ್ಲರನ್ನೂ ಅಭಿನಂದಿಸುವ ಸಮಯ ಇದಾಗಿದೆ.

​​​​​​​17 ನೇ ಲೋಕಸಭೆಯ ಕೊನೆಯ ದಿನದ ಕಲಾಪ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

February 10th, 04:54 pm

ಸದನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇದು ಭಾರತದ ಪ್ರಜಾತಂತ್ರ ವ್ಯವಸ್ಥೆಗೆ ಅತ್ಯಂತ ಮಹತ್ವದ್ದಾಗಿದೆ ಎಂದ ಅವರು, 17 ನೇ ಲೋಕಸಭೆಯ ಸದಸ್ಯರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶವನ್ನು ಮುನ್ನಡೆಸುವ ದಿಸೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸೈದ್ಧಾಂತಿಕ ಪಯಣ ಮತ್ತು ಅದರ ಸುಧಾರಣೆಗಾಗಿ ಸಮಯವನ್ನು ದೇಶಕ್ಕೆ ಅರ್ಪಿಸಲು ಇದು ವಿಶೇಷ ಸಂದರ್ಭವಾಗಿದೆ. ಈ ಐದು ವರ್ಷಗಳು 'ಸುಧಾರಣೆ, ನಿರ್ವಹಣೆ ಮತ್ತು ಪರಿವರ್ತನೆಗೆ ಕಾರಣ'ವಾಗಿದೆ. ಇದರ ಅನುಭವವನ್ನು ಇಡೀ ದೇಶ ಇಂದು ನೋಡುತ್ತಿದೆ. ವಿಶ್ವಾಸದ ಪ್ರಯತ್ನಗಳಿಗೆ 17ನೇ ಲೋಕಸಭೆಗೆ ದೇಶದ ಜನರು ಆಶೀರ್ವಾದ ಮಾಡಲಿದ್ದಾರೆ. ಸದಸ್ಯರ ಸಾಧನೆಗಳನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಎಲ್ಲರಿಗೂ, ವಿಶೇಷವಾಗಿ ಸಭಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದರು. ಸದಾ ನಗುತ್ತಿರುವ, ಸಮಲೋನನದಿಂದ ಮತ್ತು ನಿಷ್ಪಕ್ಷಪಾತವಾಗಿ ಸದನವನ್ನು ಮುನ್ನಡೆಸಿದಕ್ಕಾಗಿ ಸಭಾಧ್ಯಕ್ಷರನ್ನು ಅಭಿನಂದಿಸಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 02nd, 04:31 pm

ಇದೀಗಷ್ಟೇ, ನಾನು ಪಿಯೂಷ್ ಜೀ ಅವರ ಮಾತುಗಳನ್ನು ಕೇಳುತ್ತಿದ್ದೆ ಮತ್ತು ಅವರು 'ನಿಮ್ಮ ಉಪಸ್ಥಿತಿಯು ನಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ' ಎಂದು ಉಲ್ಲೇಖಿಸಿದರು. ಆದಾಗ್ಯೂ, ಇಲ್ಲಿ ಹಾಜರಿರುವ ಘಟಾನುಘಟಿ ನಾಯಕರನ್ನು ಗಮನಿಸಿದರೆ, ನಿಜವಾಗಿಯೂ ನಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತಿರುವವರು ಯಾರು ಎಂದು ನಮಗೆ ಈಗ ತಿಳಿದಿದೆ. ಮೊದಲನೆಯದಾಗಿ, ಈ ಅದ್ಭುತ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಆಟೋಮೋಟಿವ್ ಉದ್ಯಮಕ್ಕೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನು ಇಂದು ಪ್ರತಿ ಅಂಗಡಿಗೆ ಭೇಟಿ ನೀಡಲು ಸಾಧ್ಯವಾಗದಿದ್ದರೂ ನಾನು ನೋಡಿದವು ಶಾಶ್ವತ ಪ್ರಭಾವ ಬೀರಿದವು. ನಮ್ಮ ದೇಶದಲ್ಲಿ ಇಂತಹ ಘಟನೆಗಳು ಅಪಾರ ಸಂತೋಷವನ್ನು ತರುತ್ತವೆ. ನಾನು ಎಂದಿಗೂ ಕಾರು ಅಥವಾ ಬೈಸಿಕಲ್ ಖರೀದಿಸಿಲ್ಲ, ಆದ್ದರಿಂದ ಆ ವಿಷಯದಲ್ಲಿ ನನಗೆ ಅನುಭವದ ಕೊರತೆಯಿದೆ. ಈ ಎಕ್ಸ್ ಪೋಗೆ ಬಂದು ಸಾಕ್ಷಿಯಾಗುವಂತೆ ನಾನು ದೆಹಲಿಯ ಜನರನ್ನು ಪ್ರೋತ್ಸಾಹಿಸುತ್ತೇನೆ. ಈ ಕಾರ್ಯಕ್ರಮವು ಮೊಬಿಲಿಟಿ ಸಮುದಾಯ ಮತ್ತು ಇಡೀ ಪೂರೈಕೆ ಸರಪಳಿಯನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿದೆ. ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋದಲ್ಲಿ ನಾನು ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ ಮತ್ತು ನಿಮಗೆ ಶುಭ ಹಾರೈಸುತ್ತೇನೆ. ನನ್ನ ಮೊದಲ ಅಧಿಕಾರಾವಧಿಯಲ್ಲಿ, ನಾನು ಜಾಗತಿಕ ಮಟ್ಟದ ಚಲನಶೀಲತೆ ಸಮ್ಮೇಳನವನ್ನು ಯೋಜಿಸಿದ್ದೇನೆ ಎಂದು ನಿಮ್ಮಲ್ಲಿ ಕೆಲವರಿಗೆ ನೆನಪಿರಬಹುದು. ನೀವು ಆ ಅವಧಿಯನ್ನು ಪ್ರತಿಬಿಂಬಿಸಿದರೆ, ಶೃಂಗಸಭೆಯು ಬ್ಯಾಟರಿಗಳ ಮೇಲೆ ಕೇಂದ್ರೀಕರಿಸುವ ಕಾರಣ ಮತ್ತು ಜಾಗತಿಕ ತಜ್ಞರ ಭಾಗವಹಿಸುವಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತ ಪರಿವರ್ತನೆಯಂತಹ ವಿಷಯಗಳನ್ನು ಬಹಳ ವಿವರವಾಗಿ ಒಳಗೊಂಡಿದೆ. ಇಂದು, ನನ್ನ ಎರಡನೇ ಅವಧಿಯಲ್ಲಿ, ಗಮನಾರ್ಹ ಪ್ರಗತಿಯನ್ನು ನಾನು ನೋಡುತ್ತಿದ್ದೇನೆ. ಮೂರನೇ ಅವಧಿಗೆ ಈ ಬಗ್ಗೆ ನನಗೆ ವಿಶ್ವಾಸವಿದೆ. ಸರಿ, ಬುದ್ಧಿವಂತರಿಗೆ ಒಂದು ಮಾತು ಸಾಕು. ನೀವು ಚಲನಶೀಲತೆ ಕ್ಷೇತ್ರದ ಭಾಗವಾಗಿರುವುದರಿಂದ, ಈ ಸಂದೇಶವು ದೇಶಾದ್ಯಂತ ವೇಗವಾಗಿ ಹರಡುತ್ತದೆ.

ʻಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ-2024ʼ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

February 02nd, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ʻಭಾರತ್ ಮಂಟಪʼದಲ್ಲಿ ನಡೆದ ಭಾರತದ ಅತಿದೊಡ್ಡ ಮತ್ತು ಮೊಟ್ಟಮೊದಲ ಸಂಚಾರ ಕ್ಷೇತ್ರದ ಪ್ರದರ್ಶನ - ʻಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ-2024ʼ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರದರ್ಶನ ಮೇಳದಲ್ಲಿ ಹೆಜ್ಜೆ ಹಾಕಿ ಅವರು ವೀಕ್ಷಣೆಯನ್ನೂ ಕೈಗೊಂಡರು. ಸಂಚಾರ ಮತ್ತು ವಾಹನ ಮೌಲ್ಯ ಸರಪಳಿಗಳಲ್ಲಿ ಭಾರತದ ಸಾಮರ್ಥ್ಯಗಳನ್ನು ʻಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ-2024ʼ ಪ್ರದರ್ಶಿಸುತ್ತದೆ. ಜೊತೆಗೆ ಪ್ರದರ್ಶನಗಳು, ಸಮ್ಮೇಳನಗಳು, ಖರೀದಿದಾರ-ಮಾರಾಟಗಾರರ ಸಭೆಗಳು, ರಾಜ್ಯ ಅಧಿವೇಶನಗಳು, ರಸ್ತೆ ಸುರಕ್ಷತಾ ಪೆವಿಲಿಯನ್ ಹಾಗೂ ʻಗೋ-ಕಾರ್ಟಿಂಗ್ʼನಂತಹ ಸಾರ್ವಜನಿಕ ಕೇಂದ್ರಿತ ಆಕರ್ಷಣೆಗಳನ್ನು ಇದು ಒಳಗೊಂಡಿದೆ.