ಪ್ರಧಾನಮಂತ್ರಿಯವರಿಂದ ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ

ಪ್ರಧಾನಮಂತ್ರಿಯವರಿಂದ ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ

February 12th, 03:24 pm

ಉಭಯ ನಾಯಕರ ನಡುವಿನ ವೈಯಕ್ತಿಕ ಬಾಂಧವ್ಯವನ್ನು ಪ್ರತಿಬಿಂಬಿಸುವ ವಿಶೇಷ ಸಂದರ್ಭವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ನಿನ್ನೆ ಫ್ರಾನ್ಸ್ ಅಧ್ಯಕ್ಷೀಯ ವಿಮಾನದಲ್ಲಿ ಪ್ಯಾರಿಸ್‌ ನಿಂದ ಮಾರ್ಸೆಲ್ಲೆಗೆ ಒಟ್ಟಿಗೆ ಪ್ರಯಾಣಿಸಿದರು. ಅವರು ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಿದರು. ಇದಾದ ಬಳಿಕ ಮಾರ್ಸೆಲ್ಲೆ ತಲುಪಿದ ಬಳಿಕ ನಿಯೋಗ ಮಟ್ಟದ ಮಾತುಕತೆ ನಡೆಯಿತು. ಕಳೆದ 25 ವರ್ಷಗಳಲ್ಲಿ ಬಹು ಆಯಾಮದ ಸಂಬಂಧವಾಗಿ ವಿಕಸನಗೊಂಡಿರುವ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಗೆ ತಮ್ಮ ಬಲವಾದ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.

ಪ್ರಧಾನಮಂತ್ರಿಯವರ ಫ್ರಾನ್ಸ್‌ ಭೇಟಿಯ ಫಲಿತಾಂಶಗಳು

ಪ್ರಧಾನಮಂತ್ರಿಯವರ ಫ್ರಾನ್ಸ್‌ ಭೇಟಿಯ ಫಲಿತಾಂಶಗಳು

February 12th, 03:20 pm

ಕೃತಕ ಬುದ್ಧಿಮತ್ತೆ (ಎಐ) ಕುರಿತು ಭಾರತ ಫ್ರಾನ್ಸ್ ಘೋಷಣೆ

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ

January 25th, 01:00 pm

ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.

ಪ್ರಧಾನಮಂತ್ರಿ ಅವರಿಂದ ಅರ್ಜೆಂಟೀನಾ ಅಧ್ಯಕ್ಷರ ಭೇಟಿ

November 20th, 08:09 pm

ಇದು ಉಭಯ ನಾಯಕರ ನಡುವಿನ ಮೊದಲ ದ್ವಿಪಕ್ಷೀಯ ಸಭೆಯಾಗಿತ್ತು. ಐತಿಹಾಸಿಕ ಮೂರನೇ ಅವಧಿಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಮಿಲೀ ಅವರು ಅಭಿನಂದಿಸಿದರು. ಪ್ರಧಾನಮಂತ್ರಿ ಸಹ ಅಧ್ಯಕ್ಷ ಮೈಲಿ ಅವರು ಅಧಿಕಾರ ವಹಿಸಿಕೊಂಡಿರುವುದಕ್ಕೆ ಶುಭ ಕೋರಿದರು.

ಇಟಲಿ-ಭಾರತ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029

November 19th, 09:25 am

18 ನವೆಂಬರ್ 2024 ರಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರು ಭಾರತ ಇಟಲಿಯ ರಚನಾತ್ಮಕ ಪಾಲುದಾರಿಕೆಯ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ನಿರ್ಧರಿಸಿದ್ದಾರೆ. ಕೆಳಗಿನ ಕೇಂದ್ರೀಕೃತ, ಸಮಯ ಬದ್ಧ ಉಪಕ್ರಮಗಳು ಮತ್ತು ಕಾರ್ಯತಂತ್ರದ ಕ್ರಿಯೆಯ ಜಂಟಿ ಯೋಜನೆಯ ಮೂಲಕ ಮತ್ತಷ್ಟು ಆದ್ಯತೆ ನೀಡುವ ನಿಟ್ಟಿನಲ್ಲಿ ಇಟಲಿ ಮತ್ತು ಭಾರತ ಒಪ್ಪಿಗೆ ಸೂಚಿಸಿವೆ.

ಪೋರ್ಚುಗಲ್‌ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 19th, 06:08 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್‌ ನಲ್ಲಿ ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.

ಫಲಿತಾಂಶಗಳ ಪಟ್ಟಿ: 7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸಲರ್ ಅವರ ಭಾರತ ಭೇಟಿ

October 25th, 07:47 pm

ಮ್ಯಾಕ್ಸ್-ಪ್ಲಾಂಕ್-ಗೆಸೆಲ್‌ ಸ್ಚಾಫ್ಟ್ ಇ.ವಿ. (ಎಂಪಿಜಿ) ಮತ್ತು ಇಂಟರ್ನ್ಯಾಷನಲ್ ಸೆಂಟರ್ ಫಾರ್ ಥಿಯರೆಟಿಕಲ್ ಸೈನ್ಸಸ್ (ಐಸಿಟಿಎಸ್), ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (ಟಿ ಐ ಎಫ್‌ ಆರ್) ನಡುವಿನ ಒಪ್ಪಂದ

3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 04th, 07:45 pm

ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.

ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.

3 ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ

September 26th, 05:15 pm

ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ದೇಶಕ್ಕೆ ಸಮರ್ಪಿಸಿದರು

September 26th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 130 ಕೋಟಿ ರೂಪಾಯಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪ್ರಮುಖ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪ್ರಧಾನ ಮಂತ್ರಿಯವರು ಹವಾಮಾನ ಮತ್ತು ತಾಪಮಾನ ಸಂಶೋಧನೆಗಾಗಿ ವಿಶೇಷವಾಗಿ ರೂಪಿಸಲಾದ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (HPC) ವ್ಯವಸ್ಥೆಯನ್ನು ಕೂಡ ಉದ್ಘಾಟಿಸಿದರು.

ದೇಶದ ವೈಜ್ಞಾನಿಕ ಸಮುದಾಯವು ಅವರ ಪ್ರಯತ್ನಗಳಿಗೆ ಸಂಪನ್ಮೂಲಗಳ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯನ್ನು ಹೊಂದಿರಬೇಕು: ಪ್ರಧಾನಮಂತ್ರಿ

September 10th, 04:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ, 7ರಲ್ಲಿರುವ ತಮ್ಮ ನಿವಾಸದಲ್ಲಿ ಅನುಸಂಧಾನ್ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಆಡಳಿತ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಭೂದೃಶ್ಯ ಮತ್ತು ಸಂಶೋಧನೆ ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಮರುವಿನ್ಯಾಸದ ಬಗ್ಗೆ ಚರ್ಚೆ ನಡೆಯಿತು.

ಭಾರತದ ಮುಂದಿನ ಸಾವಿರ ವರ್ಷಗಳಿಗೆ ನಾವು ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ: ಆಸ್ಟ್ರಿಯಾದಲ್ಲಿ ಪ್ರಧಾನಿ ಮೋದಿ

July 10th, 11:00 pm

ವಿಯೆನ್ನಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿರುವ ಪರಿವರ್ತಕ ಪ್ರಗತಿಯ ಕುರಿತು ಮಾತನಾಡಿದ ಅವರು, ಭಾರತವು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ - ವಿಕಸಿತ್ ಭಾರತ್ - ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವರು ಆಸ್ಟ್ರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದರು

July 10th, 10:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ತಮ್ಮ ಗೌರವಾರ್ಥವಾಗಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರನ್ನು ಭಾರತೀಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯಿಂದ ಸ್ವಾಗತಿಸಿದರು. ಆಸ್ಟ್ರಿಯನ್ ಫೆಡರಲ್ ನ ಕಾರ್ಮಿಕ ಮತ್ತು ಆರ್ಥಿಕ ಸಚಿವ ಶ್ರೀ ಮಾರ್ಟಿನ್ ಕೋಚರ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಸ್ಟ್ರಿಯಾದಾದ್ಯಂತ ನೆಲೆಸಿರುವ ಭಾರತೀಯರು ಭಾಗವಹಿಸುವಿಸಿದ್ದು ವಿಶೇಷವಾಗಿತ್ತು.

2030 ರವರೆಗಿನ ಅವಧಿಗೆ ರಷ್ಯಾ-ಭಾರತ ಆರ್ಥಿಕ ಸಹಕಾರದ ಕಾರ್ಯತಂತ್ರದ ಕ್ಷೇತ್ರಗಳ ಅಭಿವೃದ್ಧಿ ಕುರಿತ ನಾಯಕರ ಜಂಟಿ ಹೇಳಿಕೆ

July 09th, 09:49 pm

2024ರ ಜುಲೈ 8-9 ರಂದು ಮಾಸ್ಕೋದಲ್ಲಿ ನಡೆದ ರಷ್ಯಾ ಮತ್ತು ಭಾರತದ ನಡುವಿನ 22ನೇ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯ ನಂತರ, ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಮತ್ತು ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು

ವಿ.ಡಿ.ಎನ್.ಕೆ.ಹೆಚ್. ನಲ್ಲಿರುವ ರೊಸಾಟಮ್ ಪೆವಿಲಿಯನ್‌ ಗೆ ಭೇಟಿ ನೀಡಿದ ಪ್ರಧಾನಮಂತ್ರಿ

July 09th, 04:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಮಾಸ್ಕೋದಲ್ಲಿ ಎಲ್ಲಾ ರಷ್ಯನ್ ಪ್ರದರ್ಶನ ಕೇಂದ್ರ, ವಿ.ಡಿ.ಎನ್.ಕೆ.ಹೆಚ್. ಗೆ ಭೇಟಿ ನೀಡಿದರು.

ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿಯವರು

February 28th, 08:36 am

ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಶ್ರೀ ಮೋದಿ ಅವರು ವೈಜ್ಞಾನಿಕ ಮನೋಧರ್ಮ, ನಾವೀನ್ಯತೆ ಮತ್ತು ತಂತ್ರಜ್ಞಾನದ ಕುರಿತು ತಮ್ಮ ಆಲೋಚನೆಗಳ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ವಿಶ್ವ ಗಾಯತ್ರಿ ಪರಿವಾರ್ ಆಯೋಜಿಸಿದ ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಅನುವಾದ

February 25th, 09:10 am

ಗಾಯತ್ರಿ ಪರಿವಾರ ಆಯೋಜಿಸುವ ಯಾವುದೇ ಕಾರ್ಯಕ್ರಮವು ಪಾವಿತ್ರ್ಯತೆಯೊಂದಿಗೆ ಕೂಡಿರುತ್ತೆ, ಅದರಲ್ಲಿ ಭಾಗವಹಿಸುವುದು ದೊಡ್ಡ ಅದೃಷ್ಟದ ವಿಷಯವಾಗಿದೆ. ದೇವ ಸಂಸ್ಕೃತಿ ವಿಶ್ವವಿದ್ಯಾನಿಲಯವು ಇಂದು ಆಯೋಜಿಸಿರುವ ಅಶ್ವಮೇಧ ಯಾಗದ ಭಾಗವಾಗಲು ನನಗೆ ಸಂತೋಷವಾಗಿದೆ. ಈ ಅಶ್ವಮೇಧ ಯಾಗದಲ್ಲಿ ಭಾಗವಹಿಸಲು ಗಾಯತ್ರಿ ಪರಿವಾರದಿಂದ ಆಹ್ವಾನ ಬಂದಾಗ ಸಮಯದ ಅಭಾವದಿಂದ ನನಗೆ ಸಂಕಷ್ಟ ಎದುರಾಗಿದೆ. ವೀಡಿಯೋ ಮೂಲಕ ಈ ಕಾರ್ಯಕ್ರಮವನ್ನು ನೋಡಬೇಕಾಗಿದೆ. ಸಮಸ್ಯೆಯೆಂದರೆ ಅಶ್ವಮೇಧ ಯಾಗವನ್ನು ಸಾಮಾನ್ಯ ಮನುಷ್ಯನು ಶಕ್ತಿಯ ವಿಸ್ತರಣೆ ಎಂದು ಗ್ರಹಿಸುತ್ತಾನೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅಶ್ವಮೇಧ ಯಾಗವನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳುವುದು ಸಹಜ. ಆದರೆ ಈ ಅಶ್ವಮೇಧ ಯಾಗವು ಆಚಾರ್ಯ ಶ್ರೀರಾಮ ಶರ್ಮರ ಚೈತನ್ಯವು ಮುನ್ನಡೆಸುತ್ತಿದೆ ಮತ್ತು ಅಶ್ವಮೇಧ ಯಾಗವನ್ನು ಮರು ವ್ಯಾಖ್ಯಾನಿಸುತ್ತಿದೆ ಎಂದು ನಾನು ಕಂಡುಕೊಂಡೆ, ಆದ್ದರಿಂದ ನನ್ನ ಎಲ್ಲಾ ಸಂದಿಗ್ಧತೆಗಳು ಮಾಯವಾದವು.

ಗಾಯತ್ರಿ ಪರಿವಾರ ಆಯೋಜಿಸಿದ್ದ ಅಶ್ವಮೇಧ ಯಾಗದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿ

February 25th, 08:40 am

ಗಾಯತ್ರಿ ಪರಿವಾರ ಆಯೋಜಿಸಿದ್ದ ಅಶ್ವಮೇಧ ಯಾಗದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶ ನೀಡಿದರು. ಮುಂಬರುವ ಚುನಾವಣೆಗಳ ಬೆಳಕಿನಲ್ಲಿ “ಅಶ್ವಮೇಧ ಯಾಗ”ವನ್ನು ತಪ್ಪಾಗಿ ಅರ್ಥೈಸಿಕೊಳ್ಳಬಹುದು ಎಂಬ ಕಾರಣದಿಂದ ಪ್ರಧಾನಮಂತ್ರಿಯವರು ಸಂದಿಗ್ದತೆಯಿಂದ ತಮ್ಮ ಮಾತು ಆರಂಭಿಸಿದರು. ಅದಾಗ್ಯೂ ಅವರು “ಅಶ್ವಮೇಧ ಯಾಗವನ್ನು ನೋಡುತ್ತಿದ್ದರೆ ಆಚಾರ್ಯ ಶ್ರೀ ರಾಮ ಶರ್ಮಾ ಅವರ ಭಾವನೆಗಳನ್ನು ಎತ್ತಿ ಹಿಡಿದಂತಾಗಿದೆ ಮತ್ತು ಇದು ಹೊಸ ಅರ್ಥವನ್ನು ಒಳಗೊಂಡಿದ್ದು, ನನ್ನ ಸಂದೇಹಗಳು ಕರಗಿಹೋಗಿವೆ” ಎಂದರು.

ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

January 19th, 03:15 pm

ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಜೀ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜೀ, ಭಾರತದಲ್ಲಿ ಬೋಯಿಂಗ್ ಕಂಪನಿಯ ಸಿಒಒ ಸ್ಟೆಫನಿ ಪೋಪ್, ಇತರ ಉದ್ಯಮ ಪಾಲುದಾರರು, ಮಹಿಳೆಯರೇ ಮತ್ತು ಮಹನೀಯರೇ!