ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ

ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ

June 18th, 11:15 am

ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.

G7  ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 18th, 11:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.

ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಚಾನ್ಸೆಲರ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ ಶ್ರೀ ಮೋದಿ

ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಚಾನ್ಸೆಲರ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ ಶ್ರೀ ಮೋದಿ

June 17th, 11:58 pm

ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಜರ್ಮನಿಯ ಚಾನ್ಸೆಲರ್ ಗೌರವಾನ್ವಿತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿಯಾದರು. 2025 ಮೇ ತಿಂಗಳಲ್ಲಿ ಚಾನ್ಸೆಲರ್ ಮೆರ್ಜ್ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಮೆರ್ಜ್ ಅವರನ್ನು ಅಭಿನಂದಿಸಿದರು. ಕಳೆದ ವಾರ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತ ದುರಂತದ ಬಗ್ಗೆ ಜರ್ಮನ್ ಸರ್ಕಾರ ವ್ಯಕ್ತಪಡಿಸಿದ ಸಂತಾಪಕ್ಕೆ ಅವರು ಆಳವಾದ ಕೃತಜ್ಞತೆ ವ್ಯಕ್ತಪಡಿಸಿದರು.

ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ

June 16th, 01:45 pm

ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ.

ಸೈಪ್ರಸ್‌ನ ಪ್ರತಿಷ್ಠಿತ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣ

June 16th, 01:35 pm

ನನಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ನೀಡಿದ್ದಕ್ಕಾಗಿ ನಾನು ನಿಮಗೆ, ನಿಮ್ಮ ಸರ್ಕಾರಕ್ಕೆ ಮತ್ತು ಸೈಪ್ರಸ್ ಜನತೆಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ - III ಗೌರವ ಪ್ರದಾನ

June 16th, 01:33 pm

ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಅನ್ನು ಪ್ರದಾನ ಮಾಡಿದರು.

ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾ ಸೇರಿ ಮೂರು ರಾಷ್ಟ್ರಗಳ ಪ್ರವಾಸಕ್ಕೆ ಮುನ್ನು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

June 15th, 07:00 am

ಜೂನ್ 15-16ರಂದು ನಾನು ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರ ಆಹ್ವಾನದ ಮೇರೆಗೆ ಸೈಪ್ರಸ್ ಗಣರಾಜ್ಯಕ್ಕೆ ಭೇಟಿ ನೀಡಲಿದ್ದೇನೆ. ಸೈಪ್ರಸ್ ಮೆಡಿಟರೇನಿಯನ್ ಪ್ರದೇಶ ಮತ್ತು ಇಯುನಲ್ಲಿ ಆಪ್ತ ಸ್ನೇಹಿತ ಮತ್ತು ಪ್ರಮುಖ ಪಾಲುದಾರ. ಈ ಭೇಟಿಯು ಐತಿಹಾಸಿಕ ಬಂಧಗಳನ್ನು ನಿರ್ಮಿಸಲು ಮತ್ತು ವ್ಯಾಪಾರ, ಹೂಡಿಕೆ, ಭದ್ರತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ಸಂಬಂಧಗಳನ್ನು ವಿಸ್ತರಿಸಲು ಮತ್ತು ಜನರ ನಡುವಿನ ವಿನಿಮಯವನ್ನು ಉತ್ತೇಜಿಸಲು ಅವಕಾಶವನ್ನು ಒದಗಿಸುತ್ತದೆ.

ಜೂನ್ 15 ರಿಂದ 19 ರವರೆಗೆ ಪ್ರಧಾನಿ ಮೋದಿ ಸೈಪ್ರಸ್ ಗಣರಾಜ್ಯ, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ಭೇಟಿ ನೀಡಲಿದ್ದಾರೆ

June 14th, 11:58 am

ಪ್ರಧಾನಿ ಮೋದಿ ಜೂನ್ 15-16 ರಂದು ಸೈಪ್ರಸ್‌ಗೆ ಭೇಟಿ ನೀಡಲಿದ್ದಾರೆ, ಜೂನ್ 16-17 ರಂದು ಜಿ-7 ಶೃಂಗಸಭೆಗಾಗಿ ಕೆನಡಾಕ್ಕೆ ಮತ್ತು ಜೂನ್ 18 ರಂದು ಕ್ರೊಯೇಷಿಯಾಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಸೈಪ್ರಸ್ ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಮತ್ತು ಲಿಮಾಸೋಲ್‌ನಲ್ಲಿ ವ್ಯಾಪಾರ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕೆನಡಾದಲ್ಲಿ, ಜಿ-7 ಶೃಂಗಸಭೆಯಲ್ಲಿ, ಪ್ರಧಾನಿ ಮೋದಿ ಜಿ-7 ದೇಶಗಳ ನಾಯಕರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಕ್ರೊಯೇಷಿಯಾದಲ್ಲಿ, ಪ್ರಧಾನಿ ಮೋದಿ ಪ್ರಧಾನಿ ಪ್ಲೆಂಕೋವಿಕ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ ಮತ್ತು ಕ್ರೊಯೇಷಿಯಾದ ಅಧ್ಯಕ್ಷ ಜೊರಾನ್ ಮಿಲನೋವಿಕ್ ಅವರನ್ನು ಭೇಟಿ ಮಾಡಲಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

June 07th, 07:39 pm

ಯುನೈಟೆಡ್ ಕಿಂಗ್‌ಡಮ್‌ನ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಜೂನ್ 2 ರಂದು ನವದೆಹಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

June 01st, 08:01 pm

ವಿಶ್ವ ದರ್ಜೆಯ ವಾಯು ಸಾರಿಗೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಯಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 2 ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಿಹಾರದ ಕರಕಟ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 30th, 11:29 am

ಬಿಹಾರದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ನಿತ್ಯಾನಂದ್ ರಾಯ್ ಜಿ, ಸತೀಶ್ ಚಂದ್ರ ದುಬೇ ಜಿ, ರಾಜಭೂಷಣ್ ಜಿ, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಜಿ, ವಿಜಯ್ ಕುಮಾರ್ ಸಿನ್ಹಾ ಜೀ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಚಿವರೆ, ಜನ ಪ್ರತಿನಿಧಿಗಳೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಕರಕಟ್‌ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 30th, 10:53 am

ಬಿಹಾರದ ಕರಕಟ್‌ನಲ್ಲಿ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪವಿತ್ರ ಭೂಮಿಯಲ್ಲಿ ಬಿಹಾರದ ಅಭಿವೃದ್ಧಿಯನ್ನು ವೇಗಗೊಳಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು ಹಾಗು ₹48,000 ಕೋಟಿಗೂ ಹೆಚ್ಚಿನ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದರು. ತಮ್ಮನ್ನು ಆಶೀರ್ವದಿಸಲು ಬಂದಿದ್ದ ಬೃಹತ್ ಸಭೆಯನ್ನು ಪ್ರಧಾನಿ ಸ್ಮರಿಸಿದರು ಮತ್ತು ಬಿಹಾರದ ಮೇಲಿನ ಅವರ ವಾತ್ಸಲ್ಯ ಮತ್ತು ಪ್ರೀತಿಗೆ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು, ಅವರ ಬೆಂಬಲವನ್ನು ತಾವು ಸದಾ ಅತ್ಯುನ್ನತ ಗೌರವದಿಂದ ಕಾಣುವುದಾಗಿ ಒತ್ತಿ ಹೇಳಿದರು. ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ತಮ್ಮ ಭಾವನಾತ್ಮಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 22nd, 12:00 pm

ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 22nd, 11:30 am

ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

Prime Minister Narendra Modi congratulates Chancellor Friedrich Merz on assuming office

May 20th, 06:25 pm

Prime Minister Shri Narendra Modi held a telephone conversation with Mr. Friedrich Merz today and congratulated him on assuming office as the Chancellor of the Federal Republic of Germany.

ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ನಾವು ಸಂಪೂರ್ಣ ಬದ್ಧ: ಪ್ರಧಾನಮಂತ್ರಿ

May 14th, 10:09 pm

ನಕ್ಸಲ್ ವಾದವನ್ನು ಬೇರುಸಹಿತ ತೊಡೆದುಹಾಕುವ ನಮ್ಮ ಅಭಿಯಾನ ಸರಿಯಾದ ದಿಕ್ಕಿನಲ್ಲಿ ಸಾಗಿದೆ ಎಂಬುದನ್ನು ಭದ್ರತಾ ಪಡೆಗಳ ಯಶಸ್ಸು ತೋರಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪಿಸಲು ಮತ್ತು ಅಭಿವೃದ್ಧಿಯ ಮುಖ್ಯವಾಹಿನಿಯೊಂದಿಗೆ ಆ ಪ್ರದೇಶಗಳನ್ನು ಸಂಪರ್ಕಿಸಲು ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 12:00 pm

ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು

April 24th, 11:50 am

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (CCS) ಸಭೆ

April 23rd, 09:00 pm

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ನಿರ್ಣಯಗಳ ಪಟ್ಟಿ: ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ

April 23rd, 02:25 am

ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರಾತ್ಮಕ ಪಾಲುದಾರಿಕೆ ಮಂಡಳಿಯ (ಎಸ್ ಪಿಸಿ) ಎರಡನೇ ನಾಯಕರ ಸಭೆಯು ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಸಹ ಅಧ್ಯಕ್ಷತೆಯಲ್ಲಿ 2025 ರ ಏಪ್ರಿಲ್ 22 ರಂದು ಜೆಡ್ಡಾದಲ್ಲಿ ನಡೆಯಿತು. ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಕೃಷಿ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಒಳಗೊಂಡಿರುವ ಎಸ್ ಪಿಸಿ ಅಡಿಯಲ್ಲಿ ವಿವಿಧ ಸಮಿತಿಗಳು, ಉಪಸಮಿತಿಗಳು ಮತ್ತು ಕಾರ್ಯ ಗುಂಪುಗಳ ಕೆಲಸವನ್ನು ಮಂಡಳಿ ಪರಿಶೀಲಿಸಿತು. ಚರ್ಚೆಗಳ ನಂತರ ಉಭಯ ನಾಯಕರು ಸಂಕ್ಷಿಪ್ತ ಟಿಪ್ಪಣಿಗಳಿಗೆ ಸಹಿ ಹಾಕಿದರು.