IFS Officer Trainees of 2024 Batch call on PM

IFS Officer Trainees of 2024 Batch call on PM

August 19th, 08:34 pm

The Officer Trainees of the 2024 Batch of Indian Foreign Service (IFS) called on PM Modi at his residence. The PM underlined the vital contribution of diplomats in strengthening India’s role as a Vishwabandhu on the global stage. He stressed that Officer Trainees, as future diplomats, will play a decisive role in realizing the nation’s aspiration of becoming a developed country by 2047.

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು

August 15th, 03:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಾಡಿದ ಪ್ರಮುಖ ಘೋಷಣೆಗಳು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಾಡಿದ ಪ್ರಮುಖ ಘೋಷಣೆಗಳು

August 15th, 10:32 am

ತಮ್ಮ 12ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯನ್ನು ಭಾರತದ ಪ್ರಗತಿಯ ಮುಂದಿನ ಅಧ್ಯಾಯದ ಉಡಾವಣಾ ವೇದಿಕೆಯನ್ನಾಗಿ ಪರಿವರ್ತಿಸಿದರು. 79ನೇ ಸ್ವಾತಂತ್ರ್ಯ ದಿನದಂದು, ಅವರು ಹಲವಾರು ದಿಟ್ಟ ಘೋಷಣೆಗಳನ್ನು ಮಾಡಿದರು, ಅವುಗಳು ರಾಷ್ಟ್ರವು ಭವಿಷ್ಯದತ್ತ ಹೆಜ್ಜೆ ಹಾಕುವುದು ಮಾತ್ರವಲ್ಲ, ಜಿಗಿಯಲು ಸಿದ್ಧವಾಗಿದೆ ಎಂಬುದನ್ನು ಸೂಚಿಸುತ್ತವೆ.

79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 07:00 am

ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.

India celebrates 79th Independence Day

August 15th, 06:45 am

PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.

Cabinet approves semiconductor manufacturing units in ODISHA, PUNJAB and ANDHRA PRADESH worth Rs.4600 crore

August 12th, 03:18 pm

The Union Cabinet, chaired by PM Modi, has approved four semiconductor projects worth ₹4,600 crore under the India Semiconductor Mission (ISM). These projects will give a major boost to India’s semiconductor ecosystem, including the country’s first commercial compound fab and an advanced glass-based substrate packaging unit, and are expected to create jobs for 2,034 skilled professionals.

ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 10th, 01:30 pm

ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 10th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ಬ್ರಿಟನ್ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 24th, 04:20 pm

ಮೊದಲನೆಯದಾಗಿ, ಪ್ರಧಾನಿ ಸ್ಟಾರ್ಮರ್ ಅವರ ಆತ್ಮೀಯ ಸ್ವಾಗತ ಮತ್ತು ಸೌಹಾರ್ದಯುತ ಆತಿಥ್ಯಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು. ಹಲವು ವರ್ಷಗಳ ಸಮರ್ಪಿತ ಪ್ರಯತ್ನಗಳ ನಂತರ, ಇಂದು ನಮ್ಮ ಎರಡೂ ದೇಶಗಳ ನಡುವೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ನನಗೆ ಸಂತೋಷವಾಗಿದೆ.

ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ

July 04th, 05:56 am

ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು

July 04th, 04:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.

ಕ್ರೊಯೇಷಿಯಾದ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ

June 18th, 09:56 pm

ಐತಿಹಾಸಿಕ ಮತ್ತು ಸುಂದರ ನಗರವಾದ ಜಾಗ್ರೆಬ್‌ನಲ್ಲಿ ನನ್ನನ್ನು ಆತ್ಮೀಯತೆಯ, ಉತ್ಸಾಹ ಭರಿತ ಮತ್ತು ವಾತ್ಸಲ್ಯಭರಿತ ರೀತಿಯಲ್ಲಿ ಸ್ವಾಗತಿಸಿದುದಕ್ಕೆ ನಾನು ಪ್ರಧಾನ ಮಂತ್ರಿ ಮತ್ತು ಕ್ರೊಯೇಷಿಯಾ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ʻಪ್ರಗತಿʼ ಸಭೆ

May 28th, 09:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆಯಾದ ʻಪ್ರಗತಿʼ (ಪಿ.ಆರ್.ಎ.ಜಿ.ಎ.ಟಿ.ಐ.) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಉತ್ತರ ಪ್ರದೇಶದಲ್ಲಿ ಸೆಮಿಕಂಡಕ್ಟರ್ ಘಟಕಕ್ಕೆ ಸಂಪುಟ ಅನುಮೋದನೆ

May 14th, 03:06 pm

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭಾರತ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಆರನೇ ಸೆಮಿಕಂಡಕ್ಟರ್ ಘಟಕವನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಎಚ್‌ಸಿಎಲ್ ಮತ್ತು ಫಾಕ್ಸ್‌ಕಾನ್ ನಡುವಿನ ಜಂಟಿ ಉದ್ಯಮವಾದ ಜೆವರ್ ವಿಮಾನ ನಿಲ್ದಾಣದ ಬಳಿಯಿರುವ ಈ ಸ್ಥಾವರವು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನವುಗಳಿಗೆ ಡಿಸ್ಪ್ಲೇ ಡ್ರೈವರ್ ಚಿಪ್‌ಗಳನ್ನು ತಯಾರಿಸುತ್ತದೆ.

ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 01st, 11:00 am

ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.

ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 01st, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಜಂಟಿ ಹೇಳಿಕೆ: ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ ಎರಡನೇ ಸಭೆ, ನವದೆಹಲಿ (ಫೆಬ್ರವರಿ 28, 2025)‌

February 28th, 06:25 pm

ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ (ಟಿಟಿಸಿ) ಎರಡನೇ ಸಭೆಯು ಫೆಬ್ರವರಿ 28, 2025 ರಂದು ನವದೆಹಲಿಯಲ್ಲಿ ನಡೆಯಿತು. ಭಾರತದ ಪರವಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್; ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು. ಯುರೋಪಿಯನ್ ಒಕ್ಕೂಟದ ಪರವಾಗಿ ತಂತ್ರಜ್ಞಾನ ಸಾರ್ವಭೌಮತ್ವ, ಭದ್ರತೆ ಮತ್ತು ಪ್ರಜಾಪ್ರಭುತ್ವದ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಶ್ರೀಮತಿ ಹೆನ್ನಾ ವಿರ್ಕ್ಕುನೆನ್, ವ್ಯಾಪಾರ ಮತ್ತು ಆರ್ಥಿಕ ಭದ್ರತೆ, ಅಂತರ-ಸಾಂಸ್ಥಿಕ ಸಂಬಂಧಗಳು ಮತ್ತು ಪಾರದರ್ಶಕತೆಯ ಆಯುಕ್ತೆ ಶ್ರೀ ಮರೋಸ್ ಸೆಫ್ಕೋವಿಕ್ ಮತ್ತು ಸ್ಟಾರ್ಟ್‌ಅಪ್‌, ಸಂಶೋಧನೆ ಮತ್ತು ನಾವೀನ್ಯತೆ ಆಯುಕ್ತೆ ಶ್ರೀಮತಿ ಎಕಟೆರಿನಾ ಜಹರೈವಾ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು.

ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಸಮಗ್ರ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆರಂಭಿಕ ಭಾಷಣದ ಇಂಗ್ಲಿಷ್ ಅನುವಾದ (ಫೆಬ್ರವರಿ 28, 2025)

February 28th, 01:50 pm

ನಾನು ನಿಮ್ಮೆಲ್ಲರನ್ನೂ ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಯು ಕಾಲೇಜ್ ಆಫ್ ಕಮಿಷನರ್ಸ್ ಒಂದೇ ದೇಶದೊಂದಿಗೆ ಇಷ್ಟು ವಿಶಾಲ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಭೂತಪೂರ್ವವಾಗಿದೆ.