
ಪಾಡ್ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಶ್ರೀ ಮನ್ನತು ಪದ್ಮನಾಭನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
January 02nd, 04:40 pm
ಶ್ರೀ ಮನ್ನತು ಪದ್ಮನಾಭನ್ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಸ್ಮರಿಸಿಕೊಂಡರು. ಅವರು ನಿಜವಾದ ದಾರ್ಶನಿಕರಾಗಿದ್ದರು ಎಂದು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು. “ಅವರು ಸಮಾಜವನ್ನು ಮೇಲಕ್ಕೆತ್ತಲು, ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಮಾನವರ ನೋವನ್ನು ಹೋಗಲಾಡಿಸಲು ಅವಿರತ ಪ್ರಯತ್ನಗಳನ್ನು ಮಾಡಿದರು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.Our response to disaster has to be integrated not isolated: PM Modi
April 04th, 09:46 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.PM addresses 5th International Conference on Disaster Resilient Infrastructure
April 04th, 09:45 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ
October 18th, 01:40 pm
90ನೇ ಇಂಟರ್ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
October 18th, 01:35 pm
ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25-08-2019 ರಂದು ಮಾಡಿದ ‘ಮನ್ ಕಿ ಬಾತ್’ – 3ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ನಮ್ಮ ದೇಶ ಈ ಮಧ್ಯೆ ಒಂದೆಡೆ ಮಳೆಯ ಆನಂದವನ್ನು ಅನುಭವಿಸುತ್ತಿದ್ದರೆ ಇನ್ನೊಂದೆಡೆ ಭಾರತದ ಪ್ರತಿಯೊಂದು ಮೂಲೆಯಲ್ಲೂ ಒಂದಲ್ಲಾ ಒಂದು ಬಗೆಯ ಉತ್ಸವ ಮತ್ತು ಜಾತ್ರೆ, ದೀಪಾವಳಿವರೆಗೆ ಎಲ್ಲವೂ ಹೀಗೆ ನಡೆಯುತ್ತಿರುತ್ತದೆ. ಬಹುಶಃ ನಮ್ಮ ಪೂರ್ವಜರು ಋತು ಚಕ್ರ, ಆರ್ಥಿಕ ಚಕ್ರ ಮತ್ತು ಸಾಮಾಜಿಕ ಜೀವನದ ವ್ಯವಸ್ಥೆಯನ್ನು ಎಷ್ಟು ಜಾಣ್ಮೆಯಿಂದ ಹೆಣೆದಿದ್ದಾರೆ ಎಂದರೆ ಎಂಥದೇ ಪರಿಸ್ಥಿತಿಯಲ್ಲಿ ಸಮಾಜದಲ್ಲಿ ಮಂದತೆ ಮೂಡದಂತೆ ಎಚ್ಚರವಹಿಸಿದ್ದಾರೆ.Congress party has become the “University of Lies”: PM Modi
December 03rd, 02:41 pm
Addressing a huge public meeting at Rajasthan’s Jodhpur, PM Narendra Modi lambasted at Congress for spreading lies and termed the party to be as the “University of Lies.” The PM also took pot shots at the Congress president on his Hindu remarks."ರಾಜಸ್ಥಾನದ ಜೋಧ್ಪುರದಲ್ಲಿ ನಡೆದ ಸಾರವಜನಿಕ ಸಭೆಯಲ್ಲಿ ಪ್ರಧಾನಮಂತ್ರಿ ಭಾಷಣ "
December 03rd, 02:40 pm
ರಾಜಸ್ಥಾನದ ಜೋಧ್ಪುರದಲ್ಲಿ ನಡೆದ ಭಾರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿಸಿ , ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಕಾಂಗ್ರೆಸ್ ಪಕ್ಷವನ್ನು ಅವರು ಸುಳ್ಳುಗಳ ವಿಶ್ವವಿದ್ಯಾಲಯ ; ಎಂದು ಕರೆದಿದ್ದಾರೆ . ಪ್ರಧಾನಮಂತ್ರಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಅವನ ಹಿಂದೂತಾವಾದ ಬಗ್ಗೆ ಟೀಕಿಸಿದರು.ದಿನಾಂಕ 27.05.2018 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 44 ನೇ ಭಾಷಣದ ಕನ್ನಡ ಅವತರಣಿಕೆ
May 27th, 11:30 am
ಮನದ ಮಾತಿನ ಮುಖಾಂತರ ಮತ್ತೊಮ್ಮೆ ನಿಮ್ಮೆಲ್ಲರೊಂದಿಗೆ ಮುಖಾಮುಖಿ ಆಗುವ ಅವಕಾಶ ಸಿಕ್ಕಿದೆ. ನೌಕಾ ಸೇನೆಯ ಆರು ಮಹಿಳಾ ಕಮಾಂಡರ್ ಗಳ ಒಂದು ಪಡೆಯು ಕಳೆದ ಕೆಲವು ತಿಂಗಳುಗಳಿಂದ ಸಮುದ್ರದಲ್ಲಿ ಸಂಚರಿಸುತ್ತಿರುವುದು ನಿಮ್ಮೆಲ್ಲರಿಗೂ ಚೆನ್ನಾಗಿ ನೆನಪಿರಬಹುದು.A free press makes a stronger democracy: PM Modi
May 03rd, 12:01 pm
On World Press Freedom Day, PM Narendra Modi said, “A free press makes a stronger democracy! Today on WorldPressFreedomDay, let us reaffirm our commitment towards steadfastly supporting a free press. It is the multiplicity of ideas and human expression that makes us more vibrant as a society.ಮಹಾಲಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
September 19th, 12:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಲಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.Need to restore glorious Indian family system, reduced to micro families over the ages: CM
March 26th, 04:20 pm
Need to restore glorious Indian family system, reduced to micro families over the ages: CMરાજકીય વિવાદમાં દોરવાયા વગર સમાજના હિતમાં અને શિક્ષણ ઉપર વિકાસ માટેનું ધ્યાન કેન્દ્રીત કરવા મુખ્યમંત્રીશ્રીનું માર્ગદર્શન
September 24th, 10:07 am
રાજકીય વિવાદમાં દોરવાયા વગર સમાજના હિતમાં અને શિક્ષણ ઉપર વિકાસ માટેનું ધ્યાન કેન્દ્રીત કરવા મુખ્યમંત્રીશ્રીનું માર્ગદર્શનChief Minister announces schemes for society’s welfare
August 15th, 07:51 am
Chief Minister announces schemes for society’s welfare