Kashi Tamil Sangamam is a celebration of the timeless civilizational bonds between Kashi and Tamil Nadu: PM

February 15th, 09:44 pm

The Prime Minister, Shri Narendra Modi has urged everyone to be part of Kashi Tamil Sangamam 2025.

PM condoles the demise of Mahant Satyendra Das Ji, the chief priest of Ram Janmabhoomi temple

February 12th, 02:05 pm

The Prime Minister Shri Narendra Modi today condoled the demise of Mahant Satyendra Das Ji, the chief priest of Ram Janmabhoomi temple. Shri Modi hailed the Mahant as an expert in religious rituals and scriptures, who dedicated his entire life to the service of Lord Shri Ram.

PM to visit Maha Kumbh Mela in Prayagraj on 5th February

February 04th, 07:15 pm

PM Modi will visit the Maha Kumbh Mela in Prayagraj on 5th Feb 2025 to take a holy dip at the Sangam and offer prayers to Maa Ganga. Earlier, he inaugurated 167 development projects worth Rs 5,500 crore in Prayagraj, enhancing infrastructure and public services.

India is a living land with a vibrant culture: PM Modi at inauguration of Sri Sri Radha Madanmohanji Temple in Navi Mumbai

January 15th, 04:00 pm

PM Modi inaugurated the Sri Sri Radha Madanmohanji Temple, an ISKCON project in Navi Mumbai. “India is an extraordinary and wonderful land, not just a piece of land bound by geographical boundaries, but a living land with a vibrant culture,” the Prime Minister exclaimed. He emphasised that the essence of this culture is spirituality, and to understand India, one must first embrace spirituality.

PM Modi inaugurates the Sri Sri Radha Madanmohanji Temple of ISKCON in Navi Mumbai

January 15th, 03:30 pm

PM Modi inaugurated the Sri Sri Radha Madanmohanji Temple, an ISKCON project in Navi Mumbai. “India is an extraordinary and wonderful land, not just a piece of land bound by geographical boundaries, but a living land with a vibrant culture,” the Prime Minister exclaimed. He emphasised that the essence of this culture is spirituality, and to understand India, one must first embrace spirituality.

ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 13th, 02:10 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು

December 13th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್‌ರಾಜ್‌ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್‌ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.

ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 11th, 02:00 pm

ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,

ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 11th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.

ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 05th, 07:05 pm

ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!

ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 05th, 07:00 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.

ಸಂತ ಶ್ರೀ ಸೇವಾಲಾಲ್ ಜಿ ಮಹಾರಾಜರಿಗೆ ಪ್ರಧಾನಮಂತ್ರಿ ನಮನ

October 05th, 02:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತ ಶ್ರೀ ಸೇವಾಲಾಲ್ ಮಹಾರಾಜರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಸೇವಾ ಲಾಲ್‌ ಅವರು ಸಮಾಜ ಸುಧಾರಣೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನದ ಸೆಲೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿಯವರ ಆಧ್ಯಾತ್ಮಿಕ ಕನ್ಯಾಕುಮಾರಿ ಭೇಟಿ

May 31st, 02:32 pm

ಚುನಾವಣಾ ಪ್ರಚಾರ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಕನ್ನಿಯಾಕುಮಾರಿಗೆ ಪ್ರಯಾಣ ಬೆಳೆಸಿದರು. ಅವರು ಆಗಮಿಸಿದ ನಂತರ, ಅವರು ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದರ ನಂತರ, ಅವರು ಸಾಂಪ್ರದಾಯಿಕ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಧ್ಯಾನದಲ್ಲಿ ಸಮಯ ಕಳೆದರು.

ಜೈನ ಧರ್ಮಗುರು ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಅವರು ಸಮಾಧಿಯಾದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

February 18th, 10:58 am

ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಮಹಾರಾಜರು ಸಮಾಧಿಯಾಗುತ್ತಿದ್ದಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸಂದೇಶ

January 12th, 11:00 am

ಇಂದು ಎಲ್ಲಾ ಭಾರತೀಯರಿಗೆ ಮತ್ತು ವಿಶ್ವಾದ್ಯಂತ ಹರಡಿರುವ ಭಗವಾನ್ ರಾಮನ ಭಕ್ತರಿಗೆ ಇದು ಪವಿತ್ರ ಸಂದರ್ಭವಾಗಿದೆ! ಎಲ್ಲೆಲ್ಲೂ ರಾಮನ ಭಕ್ತಿಯ ಮೋಹಕ ವಾತಾವರಣ! ರಾಮನ ಸುಮಧುರ ಕೀರ್ತನೆಗಳು, ಎಲ್ಲಾ ದಿಕ್ಕುಗಳಲ್ಲಿಯೂ ರಾಮ ಭಜನೆಗಳ ಸೊಗಸಾದ ಸೌಂದರ್ಯ! ಜನವರಿ 22ರ ಆ ಐತಿಹಾಸಿಕ ಪವಿತ್ರ ಕ್ಷಣಕ್ಕಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆಗೆ ಇನ್ನು ಕೇವಲ 11 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಶುಭ ಸಂದರ್ಭಕ್ಕೆ ಸಾಕ್ಷಿಯಾಗಲು ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಕಲ್ಪನೆಗೂ ಮೀರಿದ ಕ್ಷಣಗಳನ್ನು ಅನುಭವಿಸುವ ಸಮಯ ಇದು.

ಶ್ರೀ ರಾಮಲಾಲಾ ಪ್ರಾಣ ಪ್ರತಿಷ್ಠೆಗಾಗಿ 11 ದಿನಗಳ ವಿಶೇಷ ಪೂಜಾ ಆಚರಣೆ ಆರಂಭಿಸಿದ ಪ್ರಧಾನ ಮಂತ್ರಿ

January 12th, 10:31 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 22ರಂದು ಅಯೋಧ್ಯ ಧಾಮ ದೇವಸ್ಥಾನದಲ್ಲಿ ಶ್ರೀ ರಾಮಲಾಲಾ ಅವರ ಪ್ರಾಣ ಪ್ರತಿಷ್ಠೆಯ ಪೂರ್ವಭಾವಿಯಾಗಿ 11 ದಿನಗಳ ವಿಶೇಷ ಪೂಜಾ ಆಚರಣೆ ಆರಂಭಿಸಿದರು. “ಇದೊಂದು ಬಹುದೊಡ್ಡ ಜವಾಬ್ದಾರಿ. ನಮ್ಮ ಧರ್ಮಗ್ರಂಥಗಳಲ್ಲಿ ಹೇಳಿರುವಂತೆ, ಯಾಗ ಮತ್ತು ದೇವರ ಆರಾಧನೆಗಾಗಿ ನಮ್ಮಲ್ಲಿ ದೈವಿಕ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು. ಇದಕ್ಕಾಗಿ ಧರ್ಮಗ್ರಂಥಗಳಲ್ಲಿ ಉಪವಾಸ ಮತ್ತು ಕಟ್ಟುನಿಟ್ಟಿನ ನಿಯಮಗಳನ್ನು ನಿಗದಿಪಡಿಸಲಾಗಿದೆ, ಅದನ್ನು ಪವಿತ್ರೀಕರಣದ ಮೊದಲು ಅನುಸರಿಸಬೇಕು. ಆದ್ದರಿಂದ, ನಾನು ಕೆಲವು ಪುಣ್ಯಾತ್ಮರು ಮತ್ತು ಆಧ್ಯಾತ್ಮಿಕ ಪ್ರಯಾಣದ ಮಹಾಪುರುಷರಿಂದ ಪಡೆದ ಮಾರ್ಗದರ್ಶನದ ಪ್ರಕಾರ, ಅವರು ಸೂಚಿಸಿದ ‘ಯಮ-ನಿಯಮ’ಗಳ ಪ್ರಕಾರ, ನಾನು ಇಂದಿನಿಂದ 11 ದಿನಗಳ ವಿಶೇಷ ಪೂಜಾ ಆಚರಣೆ ಆರಂಭಿಸುತ್ತಿದ್ದೇನೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ʻಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

July 04th, 11:00 am

ಪುಟ್ಟಪರ್ತಿಗೆ ಹಲವು ಬಾರಿ ಭೇಟಿ ನೀಡುವ ಸೌಭಾಗ್ಯ ನನಗೆ ದೊರೆತಿದೆ. ನಾನು ಮತ್ತೊಮ್ಮೆ ನಿಮ್ಮೆಲ್ಲರ ನಡುವೆ ಇರಲು ಬಯಸಿದ್ದೆ, ನಿಮ್ಮನ್ನು ಭೇಟಿಯಾಗಲು ಮತ್ತು ಇಂದು ಅಲ್ಲಿ ಉಪಸ್ಥಿತರಿರುವ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಬಯಸಿದ್ದೆ. ಆದರೆ, ನನ್ನ ಬಿಡುವುರಹಿತ ವೇಳಾಪಟ್ಟಿಯಿಂದಾಗಿ, ನನಗೆ ಇದು ಸಾಧ್ಯವಾಗಲಿಲ್ಲ. ನನ್ನನ್ನು ಆಹ್ವಾನಿಸುವಾಗ, ಭಾಯಿ ರತ್ನಾಕರ್ ಅವರು 'ನೀವು ಒಮ್ಮೆ ಬಂದು ಆಶೀರ್ವಾದ ನೀಡಬೇಕು' ಎಂದು ಹೇಳಿದರು. ರತ್ನಾಕರ್ ಅವರ ಹೇಳಿಕೆಯನ್ನು ಸರಿಪಡಿಸುವ ಅಗತ್ಯವಿದೆ ನಾನು ಭಾವಿಸುತ್ತೇನೆ. ನಾನು ಖಂಡಿತವಾಗಿಯೂ ಅಲ್ಲಿಗೆ ಬರುತ್ತೇನೆ, ಆದರೆ ಆಶೀರ್ವಾದ ನೀಡಲು ಅಲ್ಲ, ಬದಲಾಗಿ ಆಶೀರ್ವಾದ ಪಡೆಯಲು. ತಂತ್ರಜ್ಞಾನದ ಸಹಾಯದಿಂದ ನಾನು ಇಂದು ನಿಮ್ಮೆಲ್ಲರ ನಡುವೆ ಇದ್ದೇನೆ. ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಜೊತೆ ಸಂಬಂಧ ಹೊಂದಿರುವ ಎಲ್ಲಾ ಸದಸ್ಯರು ಮತ್ತು ಸತ್ಯ ಸಾಯಿ ಬಾಬಾ ಅವರ ಎಲ್ಲಾ ಭಕ್ತರನ್ನು ಇಂದು ಈ ಕಾರ್ಯಕ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ಇಡೀ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಅವರ ಸ್ಫೂರ್ತಿ ಮತ್ತು ಆಶೀರ್ವಾದ ನಮ್ಮೊಂದಿಗಿದೆ. ಈ ಪವಿತ್ರ ಸಂದರ್ಭದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಧ್ಯೇಯದ ವಿಸ್ತರಣೆಯನ್ನು ನೋಡಿ ನನಗೆ ಸಂತಸವಾಗಿದೆ. ದೇಶವು ʻಶ್ರೀ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ರೂಪದಲ್ಲಿ ಪ್ರಮುಖ ಚಿಂತಕರ ಚಾವಡಿಯನ್ನು ಪಡೆಯುತ್ತಿದೆ. ನಾನು ಈ ಸಮಾವೇಶ ಕೇಂದ್ರದ ಚಿತ್ರಗಳನ್ನು ಮತ್ತು ಅದರ ಇಣುಕುನೋಟಗಳನ್ನು ಈಗ ಪ್ರದರ್ಶಿಸಲಾದ ಕಿರುಚಿತ್ರದಲ್ಲಿ ನೋಡಿದ್ದೇನೆ. ಇದು ಆಧುನಿಕತೆಯ ಸ್ಪರ್ಶದೊಂದಿಗೆ ಆಧ್ಯಾತ್ಮಿಕ ಅನುಭವವನ್ನು ಒದಗಿಸುತ್ತದೆ. ಇದು ಸಾಂಸ್ಕೃತಿಕ ದೈವತ್ವದ ಜೊತೆಗೆ, ಬೌದ್ಧಿಕ ಭವ್ಯತೆಯನ್ನು ಒಳಗೊಂಡಿದೆ. ಈ ಕೇಂದ್ರವು ಆಧ್ಯಾತ್ಮಿಕ ಸಮ್ಮೇಳನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಪ್ರಪಂಚದಾದ್ಯಂತದ ವಿವಿಧ ಕ್ಷೇತ್ರಗಳ ವಿದ್ವಾಂಸರು ಮತ್ತು ತಜ್ಞರು ಇಲ್ಲಿ ಒಟ್ಟುಗೂಡುತ್ತಾರೆ. ಈ ಕೇಂದ್ರವು ಯುವಕರಿಗೆ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ.

ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಉದ್ಘಾಟಿಸಿದ ಪ್ರಧಾನಿ

July 04th, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಶ್ರೀ ಸಾಯಿ ಹಿರಾ ಜಾಗತಿಕ ಸಮ್ಮೇಳನ ಸಭಾಂಗಣ (ಗ್ಲೋಬಲ್ ಕನ್ವೆನ್ಷನ್ ಸೆಂಟರ್) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವು ವಿಶ್ವದಾದ್ಯಂತದಿಂದ ಆಗಮಿಸಿರುವ ಪ್ರಮುಖ ಗಣ್ಯರು ಮತ್ತು ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.

ಕೊಟ್ಟಾಯಂನಲ್ಲಿ (ಶಬರಿಮಲೆ) ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಗೆ ಸ್ಥಳ ಮಂಜೂರಾತಿಗೆ ಪ್ರಧಾನಿ ಮೋದಿ ಶ್ಲಾಘನೆ

April 18th, 10:33 am

ಕೊಟ್ಟಾಯಂನಲ್ಲಿ (ಶಬರಿಮಲೆ) ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಗೆ ನಾಗರಿಕ ವಿಮಾನಯಾನ ಸಚಿವಾಲಯವು 2,250 ಎಕರೆ ಭೂಮಿಗೆ ಅನುಮತಿ ನೀಡಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಷಣದ ಪಠ್ಯ

December 14th, 05:45 pm

ಪರಮಪೂಜ್ಯ ಮಹಾಂತ ಸ್ವಾಮೀಜಿ, ಪೂಜ್ಯರಾದ ಸಾಧುಸಂತರೇ, ರಾಜ್ಯಪಾಲರೇ, ಮುಖ್ಯಮಂತ್ರಿಗಳೇ ಹಾಗೂ ಉಪಸ್ಥಿತರಿರುವ ಸತ್ಸಂಗಿ ಕುಟುಂಬದ ಎಲ್ಲ ಸದಸ್ಯರೇ, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿರುವುದು ಮತ್ತು ಈ ಸತ್ಸಂಗಿಯ ಭಾಗ್ಯ ಸಿಕ್ಕಿರುವುದು ನನ್ನ ಸೌಭಾಗ್ಯ. ಈ ಕಾರ್ಯಕ್ರಮವು ದೊಡ್ಡ ಪ್ರಮಾಣದಲ್ಲಿ ಮತ್ತು ಒಂದು ತಿಂಗಳವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಂಖ್ಯೆಗಳ ವಿಷಯದಲ್ಲಿ ಮಾತ್ರ ದೊಡ್ಡದಾಗಿದೆ ಎಂದು ನಾನು ನಂಬುವುದಿಲ್ಲ, ಇದು ಸಮಯದ ದೃಷ್ಟಿಯಿಂದ ಸಹ ವಿಸ್ತಾರವಾಗಿದೆ. ನಾನು ಇಲ್ಲಿ ಕಳೆದ ಸಮಯವನ್ನು ಇಲ್ಲಿ ದೈವಿಕತೆಯ ಭಾವನೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ಚಿಂತನೆಗಳ ಭವ್ಯತೆ ಇದೆ. ಇಲ್ಲಿ ನಮ್ಮ ಪರಂಪರೆ ಏನು? ನಮ್ಮ ಪರಂಪರೆ ಎಂತಹದು? ನಮ್ಮ ನಂಬಿಕೆ ಏನು ? ನಮ್ಮ ಆಧ್ಯಾತ್ಮಿಕತೆ ಏನು? ನಮ್ಮ ಸಂಪ್ರದಾಯ ಏನು ?ನಮ್ಮ ಸಂಸ್ಕೃತಿ ಏನು? ನಮ್ಮ ಸ್ವಭಾವ ಏನು? ಎಂಬ ಇವೆಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕಾಟ ಈ ಕಾರ್ಯಕ್ರಮದಲ್ಲಿ ಸೇರಿಸಲಾಗಿದೆ.