ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

February 10th, 11:30 am

ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025ರ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 10th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ತಮ್ಮ ಅನೌಪಚಾರಿಕ ಸಂವಾದದಲ್ಲಿ ವ್ಯಾಪಕ ವಿಷಯಗಳ ಬಗ್ಗೆ ಚರ್ಚಿಸಿದರು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಾಂಪ್ರದಾಯಿಕವಾಗಿ ನೀಡಲಾಗುವ ಎಳ್ಳಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಅವರು ವಿತರಿಸಿದರು.

ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

December 29th, 11:30 am

ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.

ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದ

September 06th, 04:15 pm

ಸರ್, ಸಂಸ್ಕೃತ ಶಿಕ್ಷಕಿನಾಗಿ, ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ನನ್ನ ಕನಸಾಗಿತ್ತು. ಈ ಸಂಸ್ಕೃತಿಯು ನಮ್ಮ ಪುರಾತನ ಬೋಧನೆಗಳು ಅಥವಾ ಸಂಸ್ಕಾರಗಳ ಮೂಲಕ ಜೀವನದ ಮೌಲ್ಯಗಳು ಮತ್ತು ಆದರ್ಶಗಳನ್ನು ನೀಡುತ್ತದೆ. ಈ ಗುರಿಯನ್ನು ಮನಸ್ಸಿನಲ್ಲಿಟ್ಟುಕೊಂಡು, ನಾನು ನನ್ನ ವಿದ್ಯಾರ್ಥಿಗಳಲ್ಲಿ ಸಂಸ್ಕೃತದ ಬಗ್ಗೆ ಆಸಕ್ತಿಯನ್ನು ಬೆಳೆಸಿದ್ದೇನೆ ಮತ್ತು ಅದನ್ನು ನೈತಿಕ ಶಿಕ್ಷಣದ ಅಡಿಪಾಯವನ್ನಾಗಿ ಮಾಡಿದ್ದೇನೆ. ವಿವಿಧ ಶ್ಲೋಕಗಳ ಮೂಲಕ, ಅವರಿಗೆ ಜೀವನದ ಮೌಲ್ಯಗಳನ್ನು ಕಲಿಸಲು ನಾನು ಪ್ರಯತ್ನಿಸಿದ್ದೇನೆ.

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪಡೆದ ಶಿಕ್ಷಕರೊಂದಿಗೆ ಪ್ರಧಾನ ಮಂತ್ರಿ ಸಂವಾದ

September 06th, 04:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.

PM Modi’s mantra to stand firm against challenges and adverse situations

January 29th, 06:05 pm

Prime Minister Narendra Modi addressed and interacted with various students, during the Pariskha pe Charcha, 2024. While interacting with students, he also revealed his secret about remaining positive despite stressful situations. He added that one must have a mindset to stand firm during challenges and adverse conditions. He said one should always be solution-oriented and a problem-solver, as these attributes can help one overcome stressful situations. He said that these attributes have enabled him to provide last-mile saturation of various schemes to the targeted beneficiaries.

PM Modi guides students on Career Clarity and Progression.

January 29th, 05:56 pm

Prime Minister Narendra Modi engaged in interactive sessions with students, teachers, and parents during the 7th edition of Pariksha Pe Charcha and held insightful discussions on the crucial aspects of career progression and life confusion.

“Keep the habit of writing intact,” PM Modi’s advice for exam preparation

January 29th, 05:47 pm

Prime Minister Narendra Modi engaged in interactive sessions with students, teachers, and parents during the 7th edition of Pariksha Pe Charcha and held insightful discussions on exam preparation and stress management.

What PM Modi has to say about the role of teachers in shaping students’ lives

January 29th, 05:38 pm

Prime Minister Narendra Modi addressed and interacted with students during the Pariskha pe Charcha, 2024. He spoke about the power of music, especially in students' lives, and how a school's music teacher has the unique ability to ease the stress of every student.

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ಒತ್ತಡವನ್ನು ಯಶಸ್ಸಿಗೆ ಪರಿವರ್ತಿಸುವ ಗುರಿ ಹೊಂದಿದೆ, ಪರೀಕ್ಷಾ ಯೋಧರು ನಗು ಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ: ಪ್ರಧಾನಿ

December 14th, 11:22 pm

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ವಿದ್ಯಾರ್ಥಿಗಳ ಒತ್ತಡವನ್ನು ಯಶಸ್ಸಿಗೆ ಪರಿವರ್ತಿಸುವ ಉದಾತ್ತ ಗುರಿ ಹೊಂದಿದೆ. ಪರೀಕ್ಷಾ ಯೋಧರು ನಗು ಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು,

ವಲ್ಲಲಾರ್ ಎಂದೂ ಕರೆಯಲ್ಪಡುವ ಶ್ರೀ ರಾಮಲಿಂಗ ಸ್ವಾಮಿಯವರ 200 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಪಠ್ಯ

October 05th, 02:00 pm

ವಲ್ಲಲಾರ್ ಎಂದೂ ಕರೆಯಲ್ಪಡುವ ಮಹಾನ್ ಶ್ರೀ ರಾಮಲಿಂಗ ಸ್ವಾಮಿ ಜೀ (श्री रामलिंग स्वामी जी ) ಅವರ ಇನ್ನೂರನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವ ಅವಕಾಶ ದೊರಕಿರುವುದು ಬಹಳ ಗೌರವದ ವಿಷಯವಾಗಿದೆ. ವಲ್ಲಲಾರಿಗೆ ನಿಕಟ ಸಂಪರ್ಕವಿರುವ ವಡಲೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಇನ್ನಷ್ಟು ವಿಶೇಷ. ವಲ್ಲಲಾರ್ ನಮ್ಮ ಅತ್ಯಂತ ಗೌರವಾನ್ವಿತ ಸಂತರಲ್ಲಿ ಒಬ್ಬರು. ಅವರು ಈ ಭೂಮಿಯಲ್ಲಿ 19 ನೇ ಶತಮಾನದಲ್ಲಿ ಜೀವಿತದಲ್ಲಿದ್ದರೂ ಕೂಡಾ, ಅವರ ಆಧ್ಯಾತ್ಮಿಕ ಚಿಂತನೆ-ಒಳನೋಟಗಳು ಇಂದಿಗೂ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿವೆ. ಅವರ ಪ್ರಭಾವವು ಜಾಗತಿಕವಾಗಿದೆ. ಅವರ ಚಿಂತನೆಗಳು ಮತ್ತು ಆದರ್ಶಗಳ ಮೇಲೆ ಹಲವಾರು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.

ವಲ್ಲಲಾರ್ ಎಂದೂ ಕರೆಯಲ್ಪಡುವ ಶ್ರೀ ರಾಮಲಿಂಗ ಸ್ವಾಮಿ ಅವರ 200ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

October 05th, 01:30 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಲ್ಲಲಾರ್ ಗೆ ನಿಕಟ ಸಂಬಂಧ ಹೊಂದಿರುವ ವಡಲೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಲ್ಲಲಾರ್ ಅವರು 19 ನೇ ಶತಮಾನದಲ್ಲಿ ಭೂಮಿಯ ಮೇಲೆ ನಡೆದ ಭಾರತದ ಅತ್ಯಂತ ಗೌರವಾನ್ವಿತ ಸಂತರಲ್ಲಿ ಒಬ್ಬರು ಮತ್ತು ಅವರ ಆಧ್ಯಾತ್ಮಿಕ ಒಳನೋಟಗಳು ಇಂದಿಗೂ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿವೆ ಎಂದು ಅವರು ಹೇಳಿದರು. ವಲ್ಲಲಾರ್ ಅವರ ಪ್ರಭಾವ ಜಾಗತಿಕವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು, ಅವರ ಚಿಂತನೆಗಳು ಮತ್ತು ಆದರ್ಶಗಳ ಮೇಲೆ ಹಲವಾರು ಸಂಸ್ಥೆಗಳು ಕೆಲಸ ಮಾಡುತ್ತಿವೆ ಎಂದು ಒತ್ತಿ ಹೇಳಿದರು.

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನ ಮಂತ್ರಿಗಳು

September 05th, 09:51 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನಸುಗಳಿಗೆ ಸ್ಫೂರ್ತಿ ನೀಡುವ, ಭವಿಷ್ಯಕ್ಕೆ ರೂಪ ನೀಡುವ ಹಾಗೂ ಕುತೂಹಲವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಅಭಿನಂದನೆ ಸಲ್ಲಿಸಿದರು.

ಶಿಕ್ಷಕರ ದಿನದಂದು ಶಿಕ್ಷಕರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

September 05th, 09:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶಿಕ್ಷಕರ ದಿನದಂದು ನಮ್ಮ ಭವಿಷ್ಯ ಮತ್ತು ಸ್ಫೂರ್ತಿದಾಯಕ ಕನಸುಗಳನ್ನು ನಿರ್ಮಿಸುವಲ್ಲಿ ಶಿಕ್ಷಕರ ಅಚಲ ಸಮರ್ಪಣೆ ಮತ್ತು ಮಹತ್ತರ ಪ್ರಭಾವಕ್ಕಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.

ಶಿಕ್ಷಕರ ದಿನಾಚರಣೆಯ ಮುನ್ನಾದಿನದಂದು, ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ

September 04th, 10:33 pm

ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಲೋಕ ಕಲ್ಯಾಣ ಮಾರ್ಗದ 7 ರಲ್ಲಿ ಸಂವಾದ ನಡೆಸಿದರು. ಸಂವಾದದಲ್ಲಿ 75 ಪ್ರಶಸ್ತಿ ವಿಜೇತರು ಭಾಗವಹಿಸಿದ್ದರು.

ಮಧ್ಯಪ್ರದೇಶದ ರೋಜ್ ಗಾರ್ ಮೇಳದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶದ ಕನ್ನಡ ಅನುವಾದ

August 21st, 12:15 pm

ಇಂದು ನೀವೆಲ್ಲರೂ ಈ ಐತಿಹಾಸಿಕ ಅವಧಿಯಲ್ಲಿ ಬೋಧನೆಯ ಈ ನಿರ್ಣಾಯಕ ಜವಾಬ್ದಾರಿಯೊಂದಿಗೆ ನಿಮ್ಮನ್ನು ತೊಡಗಿಸಿಕೊಂಡಿದ್ದೀರಿ. ಈ ವರ್ಷ, ದೇಶದ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಪಾತ್ರವು ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದರ ಬಗ್ಗೆ ನಾನು ಕೆಂಪು ಕೋಟೆಯಿಂದ ವಿವರವಾಗಿ ಮಾತನಾಡಿದ್ದೇನೆ. ಭಾರತದ ಭವಿಷ್ಯದ ಪೀಳಿಗೆಯನ್ನು ರೂಪಿಸುವುದು, ಅವರನ್ನು ಆಧುನಿಕತೆಗೆ ರೂಪಿಸುವುದು ಮತ್ತು ಅವರಿಗೆ ಹೊಸ ದಿಕ್ಕನ್ನು ನೀಡುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಧ್ಯಪ್ರದೇಶದ ಪ್ರಾಥಮಿಕ ಶಾಲೆಗಳಲ್ಲಿ ನೇಮಕಗೊಂಡ 5500 ಕ್ಕೂ ಹೆಚ್ಚು ಶಿಕ್ಷಕರಿಗೆ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ಕಳೆದ 3 ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ ಸುಮಾರು 50 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಇದಕ್ಕಾಗಿ ನಾನು ರಾಜ್ಯ ಸರ್ಕಾರವನ್ನೂ ಅಭಿನಂದಿಸುತ್ತೇನೆ.

ಮಧ್ಯಪ್ರದೇಶದ ʻಉದ್ಯೋಗ ಮೇಳʼ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 21st, 11:50 am

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ನೇಮಕಾತಿ ಪತ್ರಗಳನ್ನು ಪಡೆಯುತ್ತಿರುವ ಉದ್ಯೋಗಿಗಳು ಈ ಐತಿಹಾಸಿಕ ಅವಧಿಯಲ್ಲಿ ಬೋಧನೆಯ ಮಹತ್ವದ ಜವಾಬ್ದಾರಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ದೇಶದ ಅಭಿವೃದ್ಧಿಯಲ್ಲಿ ʻರಾಷ್ಟ್ರೀಯ ವ್ಯಕ್ತಿತ್ವʼವು ವಹಿಸುವ ನಿರ್ಣಾಯಕ ಪಾತ್ರವನ್ನು ವಿವರಿಸಿದ ತಮ್ಮ ಕೆಂಪು ಕೋಟೆಯ ಭಾಷಣದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ಇಂದು ಉದ್ಯೋಗ ಪಡೆಯುತ್ತಿರುವ ಎಲ್ಲರೂ ಭಾರತದ ಭವಿಷ್ಯದ ಪೀಳಿಗೆಯನ್ನು ರೂಪಿಸುವ, ದೇಶವನ್ನು ಆಧುನೀಕರಿಸುವ ಮತ್ತು ದೇಶಕ್ಕೆ ಹೊಸ ದಿಕ್ಕನ್ನು ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಒತ್ತಿ ಹೇಳಿದರು. ಈ ಉದ್ಯೋಗ ಮೇಳದ ಮೂಲಕ ಮಧ್ಯಪ್ರದೇಶದ ಪ್ರಾಥಮಿಕ ಶಾಲೆಗಳಿಗೆ ನೇಮಕಗೊಂಡಿರುವ ಐದೂವರೆ ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ಅವರು ಶುಭ ಕೋರಿದರು. ಕಳೆದ 3 ವರ್ಷಗಳಲ್ಲಿ ಮಧ್ಯಪ್ರದೇಶ ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು ಮತ್ತು ಈ ಸಾಧನೆಗಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸಿದರು.

Practical Knowledge is the true essence of the NEP: PM Modi

May 13th, 06:22 pm

PM Modi addressed the gathering at the Akhil Bhartiya Shiksha Sangh Adhiveshan, which is the 29th Biennial Conference of the All India Primary Teacher’ Federation. In his address, he acknowledged the importance of education and how the National Education Policy (NEP) will transform and foster learning for the 21st century in India.