ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 05th, 07:05 pm

ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!

ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 05th, 07:00 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲುಗು ಭಾಷಾ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲುಗು ಭಾಷಾ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ

August 29th, 03:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲುಗು ಭಾಷಾ ದಿನದ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ತೆಲುಗನ್ನು ಹೆಚ್ಚು ಜನಪ್ರಿಯಗೊಳಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಶ್ಲಾಘಿಸಿದರು.

ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.