ಫಲಿತಾಂಶಗಳ ಪಟ್ಟಿ: ಇಂಡೋನೇಷ್ಯಾ ಅಧ್ಯಕ್ಷರ ಭಾರತ ಭೇಟಿ (ಜನವರಿ 23-26, 2025)

January 25th, 08:54 pm

ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಇಂಡೋನೇಷ್ಯಾದ ಆರೋಗ್ಯ ಸಚಿವಾಲಯದ ನಡುವೆ ಆರೋಗ್ಯ ಸಹಕಾರಕ್ಕಾಗಿ ತಿಳಿವಳಿಕಾ ಒಡಂಬಡಿಕೆ.

ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 05th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು.

ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 04th, 11:15 am

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,

PM Modi inaugurates the Grameen Bharat Mahotsav 2025

January 04th, 10:59 am

PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.

ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 21st, 06:34 pm

ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.

ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು

December 21st, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗಯಾನದ ಅಧ್ಯಕ್ಷರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ

November 21st, 04:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 20ರಂದು ಜಾರ್ಜ್ ಟೌನ್ ನ ಸ್ಟೇಟ್‌ ಹೌಸ್ ನಲ್ಲಿ ಅಧ್ಯಕ್ಷ ಗೌರವಾನ್ವಿತ ಡಾ.ಮೊಹಮ್ಮದ್ ಇರ್ಫಾನ್ ಆಲಿ ಅವರನ್ನು ಭೇಟಿ ಮಾಡಿದ್ದರು. ಪ್ರಧಾನಿ ಅವರು ಸ್ಟೇಟ್‌ ಹೌಸ್‌ ಗೆ ಆಗಮಿಸುತ್ತಿದ್ದಂತೆಯೇ ಅಧ್ಯಕ್ಷ ಆಲಿ ಅವರು ಸ್ವಾಗತಿಸಿದರು ಮತ್ತು ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಿದರು.

Be it COVID, disasters, or development, India has stood by you as a reliable partner: PM in Guyana

November 21st, 02:15 am

PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.

ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ

November 21st, 02:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್‌ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 29th, 01:28 pm

ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

October 29th, 01:00 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ

July 04th, 01:29 pm

ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.

ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ

July 04th, 01:25 pm

ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.

ಚಂದ್ರಯಾನ -3 ಮಿಷನ್ ಯಶಸ್ಸಿನ ಕುರಿತು ಇಸ್ರೊ ತಂಡವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

August 26th, 08:15 am

ಇಂದು, ನಿಮ್ಮೆಲ್ಲರ ನಡುವೆ ನಾನು ಹೊಸ ರೀತಿಯ ಸಂತೋಷವನ್ನು ಅನುಭವಿಸುತ್ತಿದ್ದೇನೆ. ಬಹುಶಃ ಬಹಳ ಅಪರೂಪದ ಸಂದರ್ಭಗಳಲ್ಲಿ ಒಬ್ಬರು ಅಂತಹ ಸಂತೋಷವನ್ನು ಅನುಭವಿಸುತ್ತಾರೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಒಬ್ಬರ ಮನಸ್ಸು ಸಂಪೂರ್ಣವಾಗಿ ಸಂತೋಷದಿಂದ ತುಂಬಿದಾಗ ಮತ್ತು ಅದರ ಪರಿಣಾಮವಾಗಿ ಅವನು ಪ್ರಕ್ಷುಬ್ಧನಾಗುವಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಈ ಬಾರಿ ನನಗೂ ಅದೇ ರೀತಿಯದ್ದೊಂದು ಸಂಭವಿಸಿತು, ಮತ್ತು ನಾನು ತುಂಬಾ ಪ್ರಕ್ಷುಬ್ಧನಾಗಿದ್ದೆ. ನಾನು ದಕ್ಷಿಣ ಆಫ್ರಿಕಾದಲ್ಲಿದ್ದೆ, ಮತ್ತು ನಂತರ ಗ್ರೀಸ್ ನಲ್ಲಿ ಒಂದು ಕಾರ್ಯಕ್ರಮವಿತ್ತು. ಆದ್ದರಿಂದ ನಾನು ಅಲ್ಲಿರಬೇಕಾಗಿತ್ತು ಆದರೆ ನನ್ನ ಮನಸ್ಸು ಸಂಪೂರ್ಣವಾಗಿ ನಿಮ್ಮ ಮೇಲೆ ಕೇಂದ್ರೀಕೃತವಾಗಿತ್ತು. ಆದರೆ ಕೆಲವೊಮ್ಮೆ ನಾನು ನಿಮ್ಮೆಲ್ಲರಿಗೂ ಅನ್ಯಾಯ ಮಾಡುತ್ತಿದ್ದೇನೆ ಎಂದು ನನಗೆ ಅನಿಸುತ್ತದೆ. ನನ್ನ ಚಡಪಡಿಕೆ ನಿಮಗೆ ಸಮಸ್ಯೆಯನ್ನು ಸೃಷ್ಟಿಸುತ್ತದೆ. ನೀವು ಮುಂಜಾನೆ ಇಲ್ಲಿಗೆ ಬರಬೇಕಾಯಿತು ಆದರೆ ನಾನು ಬಂದು ನಿಮಗೆ ನಮಸ್ಕರಿಸಲು ಬಯಸುತ್ತೇನೆ. ಇದು ನಿಮಗೆ ಅನಾನುಕೂಲವಾಗಿರಬೇಕು, ಆದರೆ ನಾನು ಭಾರತಕ್ಕೆ ಬಂದಿಳಿದ ಕೂಡಲೇ ನಿಮ್ಮನ್ನು ನೋಡಲು ಬಯಸುತ್ತೇನೆ. ನಾನು ನಿಮ್ಮೆಲ್ಲರಿಗೂ ನಮಸ್ಕರಿಸಲು, ನಿಮ್ಮ ಕಠಿಣ ಪರಿಶ್ರಮಕ್ಕೆ ನಮಸ್ಕರಿಸಲು, ನಿಮ್ಮ ತಾಳ್ಮೆಗೆ ನಮಸ್ಕರಿಸಲು, ನಿಮ್ಮ ಉತ್ಸಾಹಕ್ಕೆ ವಂದಿಸಲು, ನಿಮ್ಮ ಚೈತನ್ಯಕ್ಕೆ ವಂದಿಸಲು ಮತ್ತು ನಿಮ್ಮ ಸ್ಫೂರ್ತಿಗೆ ವಂದಿಸಲು ಬಯಸುತ್ತೇನೆ. ನೀವು ದೇಶವನ್ನು ಯಾವ ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂಬುದು ಸಾಮಾನ್ಯ ಯಶಸ್ಸಲ್ಲ. ಇದು ಅನಂತ ಬಾಹ್ಯಾಕಾಶದಲ್ಲಿ ಭಾರತದ ವೈಜ್ಞಾನಿಕ ಸಾಮರ್ಥ್ಯದ ಘೋಷಣೆಯಾಗಿದೆ.

ಚಂದ್ರಯಾನ-3ರ ಯಶಸ್ಸಿನ ಕುರಿತು ಇಸ್ರೋ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

August 26th, 07:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೀಸ್ ನಿಂದ ಆಗಮಿಸಿದ ನಂತರ ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ISTRAC) ಗೆ ಭೇಟಿ ನೀಡಿದರು ಮತ್ತು ಚಂದ್ರಯಾನ-3 ರ ಯಶಸ್ಸಿನ ಕುರಿತು ಇಸ್ರೋ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರು ಚಂದ್ರಯಾನ-3 ಮಿಷನ್ ನಲ್ಲಿ ಭಾಗಿಯಾಗಿರುವ ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು, ಅಲ್ಲಿ ಅವರಿಗೆ ಚಂದ್ರಯಾನ-3 ಮಿಷನ್ ನಲ್ಲಿನ ಸಂಶೋಧನೆಗಳು ಮತ್ತು ಪ್ರಗತಿಯ ಬಗ್ಗೆ ವಿವರಿಸಲಾಯಿತು.

ಬ್ರಿಕ್ಸ್-ಆಫ್ರಿಕಾ ಔಟ್‌ ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಪ್ರಧಾನಮಂತ್ರಿ

August 25th, 12:12 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 24 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್-ಆಫ್ರಿಕಾ ಔಟ್ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಭಾಗವಹಿಸಿದರು.

ʻಬ್ರಿಕ್ಸ್-ಆಫ್ರಿಕಾ ಔಟ್ರೀಚ್ʼ ಮತ್ತು ʻಬ್ರಿಕ್ಸ್ ಪ್ಲಸ್ʼ ಸಂವಾದದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳ ಕನ್ನಡ ಅನುವಾದ

August 24th, 02:38 pm

ಆಫ್ರಿಕಾದ ನೆಲದಲ್ಲಿ, ನನ್ನೆಲ್ಲಾ ಸ್ನೇಹಿತರ ನಡುವೆ ಇಲ್ಲಿರುವುದು ನನಗೆ ಸಂತೋಷ ತಂದಿದೆ.

ಜಿ 20 ಆರೋಗ್ಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಪಠ್ಯ

August 18th, 02:15 pm

ಭಾರತದ 1.4 ಶತಕೋಟಿ ಜನರ ಪರವಾಗಿ, ನಾನು ನಿಮಗೆ ಭಾರತಕ್ಕೆ ಮತ್ತು ನನ್ನ ತವರು ರಾಜ್ಯ ಗುಜರಾತ್ ಗೆ ಬಹಳ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ನಿಮ್ಮನ್ನು ಸ್ವಾಗತಿಸಲು ನನ್ನೊಂದಿಗೆ 2.4 ಮಿಲಿಯನ್ ವೈದ್ಯರು, 3.5 ಮಿಲಿಯನ್ ದಾದಿಯರು, 1.3 ಮಿಲಿಯನ್ ಅರೆವೈದ್ಯಕೀಯ ಕ್ಷೇತ್ರದ ತಜ್ಞರು, 1.6 ಮಿಲಿಯನ್ ಫಾರ್ಮಾಸಿಸ್ಟ್ ಗಳು ಮತ್ತು ಭಾರತದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿರುವ ಲಕ್ಷಾಂತರ ಇತರರು ಸೇರಿದ್ದಾರೆ.

PM addresses G20 Health Ministers’ Meeting

August 18th, 01:52 pm

PM Modi addressed the G20 Health Ministers’ Meet held in Gandhinagar, Gujarat via video message. He underlined that the Covid-19 pandemic has reminded us that health should be at the center of our decisions. He said that time also showed us the value of international cooperation, whether in medicine and vaccine deliveries or in bringing our people back home

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 12:30 pm

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆಗೆ ನಿಮ್ಮೆಲ್ಲರನ್ನು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ 2 ದಶಕಗಳಲ್ಲಿ ಎಸ್‌ಸಿಒ ಸಂಘಟನೆಯು ಇಡೀ ಏಷ್ಯಾ ವಲಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿ ಹೊರಹೊಮ್ಮಿದೆ. ಭಾರತ ಮತ್ತು ಏಷ್ಯಾ ಭಾಗದ ನಡುವೆ ಇರುವ ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ಜನರಿಂದ ಜನರ ಸಂಬಂಧಗಳು ನಮ್ಮ ಹಂಚಿಕೆಯ ಪರಂಪರೆಗೆ ಜೀವಂತ ಸಾಕ್ಷಿಯಾಗಿವೆ. ನಾವು ಈ ಪ್ರದೇಶವನ್ನು ವಿಸ್ತೃತ ನೆರೆಹೊರೆ ಎಂದು ನೋಡುವುದಿಲ್ಲ, ಆದರೆ ವಿಶಾಲ ಕುಟುಂಬ ಎಂದು ನೋಡುತ್ತೇವೆ.