ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೂರಸಂಪರ್ಕ ವಲಯದಲ್ಲಿ ಹಲವಾರು ರಚನಾತ್ಮಕ ಮತ್ತು ಪ್ರಕ್ರಿಯೆಯ ಸುಧಾರಣೆಗಳಿಗೆ ತನ್ನ ಅನುಮೋದನೆ ನೀಡಿದೆ. ಈ ಸುಧಾರಣೆಗಳು ಉದ್ಯೋಗಾವಕಾಶಗಳನ್ನು ರಕ್ಷಿಸುವ ಮತ್ತು ಸೃಷ್ಟಿಸುವ, ಆರೋಗ್ಯಕರ ಸ್ಪರ್ಧೆಯನ್ನು ಉತ್ತೇಜಿಸುವ, ಗ್ರಾಹಕರ ಹಿತವನ್ನು ರಕ್ಷಿಸುವ, ಹಣ ಪೂರಣ ಮಾಡುವ, ಹೂಡಿಕೆಯನ್ನು ಉತ್ತೇಜಿಸುತ್ತದೆ ಮತ್ತು ಇದು ದೂರಸಂಪರ್ಕ ಸೇವೆಗಳ ಪೂರೈಕೆದಾರರ (ಟಿಎಸ್.ಪಿ.ಗಳು)ಮೇಲಿನ ನಿಯಂತ್ರಣದ ಹೊರೆಯನ್ನು ತಗ್ಗಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ದತ್ತಾಂಶ ಬಳಕೆ, ಆನ್‌ ಲೈನ್ ಶಿಕ್ಷಣ, ವರ್ಕ್ ಫ್ರಂ ಹೋಂ, ಸಾಮಾಜಿಕ ಮಾಧ್ಯಮದ ಮೂಲಕ ಪರಸ್ಪರ ಸಂಪರ್ಕ, ವರ್ಚುವಲ್ ಸಭೆಗಳು ಇತ್ಯಾದಿಗಳೊಂದಿಗೆ ಕೋವಿಡ್ -19ರ ಸವಾಲುಗಳನ್ನು ಎದುರಿಸುವಲ್ಲಿ ಟೆಲಿಕಾಂ ವಲಯದ ಅತ್ಯುತ್ತಮ ಕಾರ್ಯಕ್ಷಮತೆಯ ಹಿನ್ನೆಲೆಯಲ್ಲಿ, ಸುಧಾರಣಾ ಕ್ರಮಗಳು ಬ್ರಾಡ್‌ಬ್ಯಾಂಡ್ ಮತ್ತು ಟೆಲಿಕಾಂ ಸಂಪರ್ಕದ ಪ್ರಸರಣ ಮತ್ತು ಅದರ ಹರಿವಿಗೆ ಮತ್ತಷ್ಟು ಉತ್ತೇಜನ ನೀಡುತ್ತವೆ. ಸಂಪುಟದ ನಿರ್ಣಯಗಳು, ದೂರಸಂಪರ್ಕ ಕ್ಷೇತ್ರವನ್ನು ಚೈತನ್ಯಶೀಲಗೊಳಿಸುವ ಪ್ರಧಾನಮಂತ್ರಿಗಳ ದೃಷ್ಟಿಕೋನವನ್ನು ಪುನಶ್ಚೇತನಗೊಳಿಸುತ್ತವೆ. ಸ್ಪರ್ಧೆ ಮತ್ತು ಗ್ರಾಹಕರ ಆಯ್ಕೆಯೊಂದಿಗೆ, ಸಮಗ್ರ ಅಭಿವೃದ್ಧಿ ಮತ್ತು ದುರ್ಬಲ ಪ್ರದೇಶಗಳನ್ನು ಮುಖ್ಯವಾಹಿನಿಗೆ ತರಲು ಮತ್ತು ಸಂಪರ್ಕಿತರಲ್ಲದವರನ್ನು ಸಂಪರ್ಕ ವ್ಯಾಪ್ತಿಗೆ ತರಲು ಸಾರ್ವತ್ರಿಕ ಬ್ರಾಡ್‌ ಬ್ಯಾಂಡ್ ಪ್ರವೇಶಕ್ಕಾಗಿ ಅಂತ್ಯೋದಯವಾಗಿದೆ. ಈ ಪ್ಯಾಕೇಜ್ 4 ಜಿ ಪ್ರಸರಣವನ್ನು ಹೆಚ್ಚಿಸುತ್ತದೆ, ಹಣ ಪೂರಣ ಮಾಡುತ್ತದೆ ಮತ್ತು 5 ಜಿ ನೆಟ್‌ ವರ್ಕ್‌ ಗಳಲ್ಲಿ ಹೂಡಿಕೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಒಂಬತ್ತು ರಚನಾತ್ಮಕ ಸುಧಾರಣೆಗಳು ಮತ್ತು ಐದು ಪ್ರಕ್ರಿಯೆಯ ಸುಧಾರಣೆಗಳು ಮತ್ತು ದೂರಸಂಪರ್ಕ ಸೇವಾ ಪೂರೈಕೆದಾರರಿಗೆ ಪರಿಹಾರ ಕ್ರಮಗಳು ಈ ಕೆಳಕಂಡಂತಿವೆ:

ರಚನಾತ್ಮಕ ಸುಧಾರಣೆಗಳು

1. ಹೊಂದಾಣಿಕೆಯ ಒಟ್ಟು ಆದಾಯದ ತರ್ಕಬದ್ಧಗೊಳಿಸುವಿಕೆ: ದೂರಸಂಪರ್ಕೇತರ ಆದಾಯವನ್ನು ಸಂಭಾವ್ಯತೆ ಆಧಾರದ ಮೇಲೆ ಎ.ಜಿ.ಆರ್.ನ ವ್ಯಾಖ್ಯಾನದಿಂದ ಹೊರಗಿಡಲಾಗುತ್ತದೆ.

2. ಬ್ಯಾಂಕ್ ಖಾತ್ರಿ (ಬಿ.ಜಿ.ಗಳು)ಯ ತರ್ಕಬದ್ಧೀಕರಣ: ಪರವಾನಗಿ ಶುಲ್ಕ (ಎಲ್.ಎಫ್.) ಮತ್ತು ಇತರ ಅದೇ ರೀತಿಯಲ್ಲಿ ವಿಧಿಸಲಾಗುವ ಶುಲ್ಕಕ್ಕೆ ಪ್ರತಿಯಾಗಿ ಬ್ಯಾಂಕ್ ಖಾತ್ರಿ ಅಗತ್ಯದ (ಶೇ.80)ಬೃಹತ್ ಇಳಿಕೆ. ದೇಶದ ವಿಭಿನ್ನ ಪರವಾನಗಿ ಸೇವೆಗಳ ಕ್ಷೇತ್ರ ವಲಯದಲ್ಲಿ (ಎಲ್.ಎಸ್.ಎ.ಗಳು) ಬಹು ಬಿಜಿಗಳ ಅಗತ್ಯ ಇರುವುದಿಲ್ಲ. ಬದಲಾಗಿ ಒಂದು ಬಿಜಿ ಸಾಕಾಗುತ್ತದೆ. 

3. ಬಡ್ಡಿ ದರಗಳ ತರ್ಕಬದ್ಧೀಕರಣ / ದಂಡದ ತೆರವು: 1 ನೇ ಅಕ್ಟೋಬರ್, 2021 ರಿಂದ, ಪರವಾನಗಿ ಶುಲ್ಕ (ಎಲ್.ಎಫ್.)/ ತರಂಗಾಂತರ ಬಳಕೆ ಶುಲ್ಕ (ಎಸ್.ಯು.ಸಿ.)ನ ವಿಳಂಬ ಪಾವತಿಗಳು ಎಸ್.ಬಿ.ಐ.ನ ಎಂ.ಸಿ.ಎಲ್.ಆರ್. ಮತ್ತು ಶೇ.2ರ ಬದಲಿಗೆ ಎಂ.ಸಿ.ಎಲ್.ಆರ್. ಜೊತೆಗೆ ಶೇ.4 ಬಡ್ಡಿ ದರವನ್ನು ಆಕರ್ಷಿಸುತ್ತದೆ; ಬಡ್ಡಿಯನ್ನು ತಿಂಗಳ ಬದಲು ವಾರ್ಷಿಕವಾಗಿ ಒಗ್ಗೂಡಿಸಲಾಗುತ್ತದೆ; ದಂಡ ಮತ್ತು ದಂಡದ ಮೇಲಿನ ಬಡ್ಡಿಯನ್ನು ತೆಗೆದುಹಾಕಲಾಗಿದೆ.

4. ಇನ್ನು ಮುಂದೆ ಮಾಡಲಾಗುವ ಹರಾಜುಗಳಿಗೆ ಕಂತಿನ ಪಾವತಿಯ ಖಾತ್ರಿಗೆ ಯಾವುದೇ ಬ್ಯಾಂಕ್ ಖಾತ್ರಿ ಅಗತ್ಯ ಇರುವುದಿಲ್ಲ. ಉದ್ಯಮವು ಪ್ರಬುದ್ಧವಾಗಿದೆ ಮತ್ತು ಹಿಂದಿನ ಬಿಜಿಯ ರೂಢಿ ಇನ್ನು ಮುಂದೆ ಅಗತ್ಯವಿರುವುದಿಲ್ಲ.

5. ತರಂಗಾಂತರ ಅವಧಿ: ಭವಿಷ್ಯದ ಹರಾಜುಗಳಲ್ಲಿ, ತರಂಗಾಂತರ ಅವಧಿಯನ್ನು 20 ರಿಂದ 30 ವರ್ಷಗಳಿಗೆ ಹೆಚ್ಚಿಸಲಾಗುತ್ತದೆ.

6. ಭವಿಷ್ಯದ ಹರಾಜುಗಳಲ್ಲಿ ಪಡೆಯಲಾಗುವ ತರಂಗಾಂತರಗಳನ್ನು 10 ವರ್ಷಗಳ ನಂತರ ಮರಳಿ ಹಿಂತಿರುಗಿಸಲು ಅನುಮತಿ ನೀಡಲಾಗುವುದು.

7. ಭವಿಷ್ಯದ ತರಂಗಾಂತರ ಹರಾಜಿನಲ್ಲಿ ಪಡೆದ ತರಂಗಾಂತರಗಳಿಗೆ ಯಾವುದೇ ತರಂಗಾಂತರ ಬಳಕೆ ಶುಲ್ಕ (ಎಸ್.ಯು.ಸಿ.) ಇರುವುದಿಲ್ಲ.

8. ಸ್ಪೆಕ್ಟ್ರಮ್ ಹಂಚಿಕೆಯನ್ನು ಪ್ರೋತ್ಸಾಹಿಸಲಾಗಿದೆ- ಸ್ಪೆಕ್ಟ್ರಮ್ ಹಂಚಿಕೆಗಾಗಿ ಶೇ.0.5 ಹೆಚ್ಚುವರಿ ಎಸ್.ಯು.ಸಿ. ತೆಗೆದುಹಾಕಲಾಗಿದೆ.

9. ಹೂಡಿಕೆಯನ್ನು ಉತ್ತೇಜಿಸಲು, ಶೇ.100ರಷ್ಟು ವಿದೇಶಿ ನೇರ ಹೂಡಿಕೆ (ಎಫ್.ಡಿ.ಐ.)ಗೆ ಸ್ವಯಂಚಾಲಿತ ಮಾರ್ಗದಲ್ಲಿ ದೂರಸಂಪರ್ಕ ವಲಯದಲ್ಲಿ ಅನುಮತಿಸಲಾಗಿದೆ. ಎಲ್ಲಾ ಸುರಕ್ಷತಾ ಕ್ರಮಗಳು ಅನ್ವಯವಾಗುತ್ತವೆ.

ಪ್ರಕ್ರಿಯೆಯ ಸುಧಾರಣೆಗಳು

1. ಹರಾಜು ವೇಳಪಟ್ಟಿ ಸ್ಥಿರವಾಗಿರುತ್ತದೆ - ತಂರಂಗಾಂತರ ಹರಾಜು ಸಾಮಾನ್ಯವಾಗಿ ಪ್ರತಿ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ನಡೆಯಲಿದೆ.

2. ಸುಗಮ ವಾಣಿಜ್ಯದ ಉತ್ತೇಜನ – ನಿಸ್ತಂತು ಸಾಧನಗಳ ಕುರಿತ 1953ರ ಸೀಮಾಸುಂಕ ಅಧಿಸೂಚನೆಯ ಅಡಿಯಲ್ಲಿ ತೊಡಕಿನಿಂದ ಕೂಡಿದ್ದ ಪರವಾನಗಿಗಳ ಅಗತ್ಯವನ್ನು ತೆಗೆದುಹಾಕಲಾಗಿದೆ. ಸ್ವಯಂ ಘೋಷಣೆಯೊಂದಿಗೆ ಇದನ್ನು ಬದಲಾಯಿಸಲಾಗಿದೆ.

3. ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (ಕೆ.ವೈ.ಸಿ.) ಸುಧಾರಣೆಗಳು: ಸ್ವಯಂ-ಕೆ.ವೈ.ಸಿ. (ಆಫ್ ಆಧಾರಿತ) ಅನುಮತಿಸಲಾಗಿದೆ. ಇ-ಕೆವೈಸಿ ದರವನ್ನು ಕೇವಲ ಒಂದು ರೂಪಾಯಿಗೆ ಪರಿಷ್ಕರಿಸಲಾಗಿದೆ. ಪ್ರಿಪೇಯ್ಡ್ ನಿಂದ ಪೋಸ್ಟ್ ಪೇಯ್ಡ್ ಮತ್ತು ಪೋಸ್ಟ್ ಪೈಯ್ಡ್ ನಿಂದ ಪ್ರೀಪೈಯ್ಡ್ ಗೆ ಬದಲಾಯಿಸಲು ತಾಜಾ ಕೆವೈಸಿ ಅಗತ್ಯವಿರುವುದಿಲ್ಲ.

4. ಕಾಗದದ ಮೂಲಕ ಗ್ರಾಹಕರಿಂದ ಪಡೆಯುತ್ತಿದ್ದ ಅರ್ಜಿಗಳ (ಸಿ.ಎ.ಎಫ್.)ನ್ನು ಡಿಜಿಟಲ್ ದತ್ತಾಂಶ ಸಂಗ್ರಹಣೆಯೊಂದಿಗೆ ಬದಲಾಯಿಸಲಾಗಿದೆ. ಸುಮಾರು 300-400 ಕೋಟಿ ಕಾಗದದ ಅರ್ಜಿಗಳು ವಿವಿಧ ಟಿಎಸ್.ಪಿ.ಗಳ ಗೋದಾಮುಗಳಲ್ಲಿ ಬಿದ್ದಿದ್ದು, ಮುಂದೆ ಇದರ ಅಗತ್ಯ ಇರುವುದಿಲ್ಲ. ಸಿ.ಎ.ಎಫ್.ನ ಗೋದಾಮಿನ ಪರಿಶೋಧನೆ ಇನ್ನು ಮುಂದೆ ಅಗತ್ಯವಿರುವುದಿಲ್ಲ.

5. ದೂರಸಂಪರ್ಕ ಗೋಪುರಗಳ ಎಸ್.ಎ.ಸಿ.ಎಫ್.ಎ. ಅನುಮೋದನೆ ಸುಗಮಗೊಳಿಸಲಾಗಿದೆ. ಸ್ವಯಂ ಘೋಷಣೆಯ ಆಧಾರದ ಮೇಲೆ ಡಿಓ.ಟಿ. ಪೋರ್ಟಲ್‌ ನಲ್ಲಿ ದತ್ತಾಂಶವನ್ನು ಸ್ವೀಕರಿಸಲಾಗುತ್ತದೆ. ಇತರ ಏಜೆನ್ಸಿಗಳ ಪೋರ್ಟಲ್‌ ಗಳನ್ನು (ನಾಗರಿಕ ವಿಮಾನಯಾನದಂತಹವು) ಡಿಓಟಿ ಪೋರ್ಟಲ್‌ ನೊಂದಿಗೆ ಸಂಪರ್ಕಿಸಲಾಗುತ್ತದೆ.

ದೂರಸಂಪರ್ಕ ಸೇವೆ ಪೂರೈಕೆದಾರರ ನಗದು ಅಗತ್ಯಗಳ ಪರಿಹಾರ 

ಎಲ್ಲ ದೂರಸಂಪರ್ಕ ಸೇವಾ ಪೂರೈಕೆದಾರರಿಗಾಗಿ (ಟಿ.ಎಸ್.ಪಿ.ಗಳು) ಸಂಪುಟ ಈ ಕೆಳಕಂಡವುಗಳನ್ನು ಅನುಮೋದಿಸಿದೆ.:

1. ಎಜಿಆರ್ ತೀರ್ಪಿನಿಂದ ಉಂಟಾಗುವ ಬಾಕಿಯ ವಾರ್ಷಿಕ ಪಾವತಿಗಳಲ್ಲಿ ನಾಲ್ಕು ವರ್ಷಗಳ ಕಂತು ಪಾವತಿ ಮುಂದೂಡಿಕೆ (Moratorium )/ಮುಂದೂಡಿಕೆ, ಆದಾಗ್ಯೂ, ನಿವ್ವಳ ಪ್ರಸ್ತುತ ಮೌಲ್ಯವನ್ನು (ಎನ್.ಪಿ.ವಿ.) ರಕ್ಷಿಸುವ ಮೂಲಕ ಬಾಕಿ ಇರುವ ಮೊತ್ತವನ್ನು ಕಾಪಾಡಲಾಗುವುದು. 

2. ಹಿಂದಿನ ಹರಾಜಿನಲ್ಲಿ (2021ರ ಹರಾಜನ್ನು ಹೊರತುಪಡಿಸಿ) ನಾಲ್ಕು ವರ್ಷಗಳವರೆಗೆ ಖರೀದಿಸಿದ ತರಂಗಾಂತರಗಳ ಪಾವತಿಗಳ ಮೇಲೆ ಕಂತು ಪಾವತಿ ಮುಂದೂಡಿಕೆ(Moratorium )/ಮುಂದೂಡಿಕೆ ಆಯಾ ಹರಾಜಿನಲ್ಲಿ ನಿಗದಿಪಡಿಸಿದ ಬಡ್ಡಿ ದರದಲ್ಲಿ ಎನ್.ಪಿ.ವಿ. ಕಾಪಾಡಲಾಗುವುದು.

3. ಈಕ್ವಿಟಿಯ ಮೂಲಕ ಪಾವತಿಯ ಮುಂದೂಡಿಕೆಯಿಂದ ಉಂಟಾದ ಬಡ್ಡಿ ಮೊತ್ತವನ್ನು ಪಾವತಿಸಲು ಟಿಎಸ್ಪಿಗಳಿಗೆ ಆಯ್ಕೆ ನೀಡಲಾಗುವುದು.

4. ಸರ್ಕಾರದ ಆಯ್ಕೆಯಲ್ಲಿ, ಮೊರಟೋರಿಯಂ/ಮುಂದೂಡುವಿಕೆಯ ಅವಧಿಯ ಕೊನೆಯಲ್ಲಿ ಈಕ್ವಿಟಿ ಮೂಲಕ ಹೇಳಲಾದ ವಿಳಂಬಿತ ಪಾವತಿಗೆ ಸಂಬಂಧಿಸಿದ ಬಾಕಿ ಮೊತ್ತವನ್ನು ಪರಿವರ್ತಿಸಲು, ಮಾರ್ಗಸೂಚಿಗಳನ್ನು ಹಣಕಾಸು ಸಚಿವಾಲಯವು ಆಖೈರುಗೊಳಿಸುತ್ತದೆ.

ಮೇಲಿನ ಎಲ್ಲವೂ ಎಲ್ಲ ಟಿ.ಎಸ್.ಪಿ.ಗಳಿಗೆ ಅನ್ವಯವಾಗುತ್ತದೆ ಮತ್ತು ನಗದು ಸುಗಮಗೊಳಿಸುವ ಮತ್ತು ನಗದು ಹರಿವಿನ ಮೂಲಕ ಪರಿಹಾರ ಒದಗಿಸುತ್ತದೆ. ಇದು ದೂರಸಂಪರ್ಕ ವಲಯಕ್ಕೆ ಗಣನೀಯ ತೆರೆದುಕೊಂಡಿರುವ ವಿವಿಧ ಬ್ಯಾಂಕುಗಳಿಗೂ ಸಹಾಯ ಮಾಡುತ್ತದೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Explained: How PM Narendra Modi's Khelo India Games programme serve as launchpad of Indian sporting future

Media Coverage

Explained: How PM Narendra Modi's Khelo India Games programme serve as launchpad of Indian sporting future
NM on the go

Nm on the go

Always be the first to hear from the PM. Get the App Now!
...
The government is focusing on modernizing the sports infrastructure in the country: PM Modi at Khelo India Youth Games
May 04, 2025
QuoteBest wishes to the athletes participating in the Khelo India Youth Games being held in Bihar, May this platform bring out your best: PM
QuoteToday India is making efforts to bring Olympics in our country in the year 2036: PM
QuoteThe government is focusing on modernizing the sports infrastructure in the country: PM
QuoteThe sports budget has been increased more than three times in the last decade, this year the sports budget is about Rs 4,000 crores: PM
QuoteWe have made sports a part of mainstream education in the new National Education Policy with the aim of producing good sportspersons & sports professionals in the country: PM

बिहार के मुख्यमंत्री श्रीमान नीतीश कुमार जी, केंद्रीय मंत्रिमंडल के मेरे सहयोगी मनसुख भाई, बहन रक्षा खड़से, श्रीमान राम नाथ ठाकुर जी, बिहार के डिप्टी सीएम सम्राट चौधरी जी, विजय कुमार सिन्हा जी, उपस्थित अन्य महानुभाव, सभी खिलाड़ी, कोच, अन्य स्टाफ और मेरे प्यारे युवा साथियों!

देश के कोना-कोना से आइल,, एक से बढ़ के एक, एक से नीमन एक, रउआ खिलाड़ी लोगन के हम अभिनंदन करत बानी।

साथियों,

खेलो इंडिया यूथ गेम्स के दौरान बिहार के कई शहरों में प्रतियोगिताएं होंगी। पटना से राजगीर, गया से भागलपुर और बेगूसराय तक, आने वाले कुछ दिनों में छह हज़ार से अधिक युवा एथलीट, छह हजार से ज्यादा सपनों औऱ संकल्पों के साथ बिहार की इस पवित्र धरती पर परचम लहराएंगे। मैं सभी खिलाड़ियों को अपनी शुभकामनाएं देता हूं। भारत में स्पोर्ट्स अब एक कल्चर के रूप में अपनी पहचान बना रहा है। और जितना ज्यादा भारत में स्पोर्टिंग कल्चर बढ़ेगा, उतना ही भारत की सॉफ्ट पावर भी बढ़ेगी। खेलो इंडिया यूथ गेम्स इस दिशा में, देश के युवाओं के लिए एक बहुत बड़ा प्लेटफॉर्म बना है।

साथियों,

किसी भी खिलाड़ी को अपना प्रदर्शन बेहतर करने के लिए, खुद को लगातार कसौटी पर कसने के लिए, ज्यादा से ज्यादा मैच खेलना, ज्यादा से ज्यादा प्रतियोगिताओं में हिस्सा, ये बहुत जरूरी होता है। NDA सरकार ने अपनी नीतियों में हमेशा इसे सर्वोच्च प्राथमिकता दी है। आज खेलो इंडिया, यूनिवर्सिटी गेम्स होते हैं, खेलो इंडिया यूथ गेम्स होते हैं, खेलो इंडिया विंटर गेम्स होते हैं, खेलो इंडिया पैरा गेम्स होते हैं, यानी साल भर, अलग-अलग लेवल पर, पूरे देश के स्तर पर, राष्ट्रीय स्तर पर लगातार स्पर्धाएं होती रहती हैं। इससे हमारे खिलाड़ियों का आत्मविश्वास बढ़ता है, उनका टैलेंट निखरकर सामने आता है। मैं आपको क्रिकेट की दुनिया से एक उदाहरण देता हूं। अभी हमने IPL में बिहार के ही बेटे वैभव सूर्यवंशी का शानदार प्रदर्शन देखा। इतनी कम आयु में वैभव ने इतना जबरदस्त रिकॉर्ड बना दिया। वैभव के इस अच्छे खेल के पीछे उनकी मेहनत तो है ही, उनके टैलेंट को सामने लाने में, अलग-अलग लेवल पर ज्यादा से ज्यादा मैचों ने भी बड़ी भूमिका निभाई। यानी, जो जितना खेलेगा, वो उतना खिलेगा। खेलो इंडिया यूथ गेम्स के दौरान आप सभी एथलीट्स को नेशनल लेवल के खेल की बारीकियों को समझने का मौका मिलेगा, आप बहुत कुछ सीख सकेंगे।

साथियों,

ओलंपिक्स कभी भारत में आयोजित हों, ये हर भारतीय का सपना रहा है। आज भारत प्रयास कर रहा है, कि साल 2036 में ओलंपिक्स हमारे देश में हों। अंतरराष्ट्रीय स्तर पर खेलों में भारत का दबदबा बढ़ाने के लिए, स्पोर्टिंग टैलेंट की स्कूल लेवल पर ही पहचान करने के लिए, सरकार स्कूल के स्तर पर एथलीट्स को खोजकर उन्हें ट्रेन कर रही है। खेलो इंडिया से लेकर TOPS स्कीम तक, एक पूरा इकोसिस्टम, इसके लिए विकसित किया गया है। आज बिहार सहित, पूरे देश के हजारों एथलीट्स इसका लाभ उठा रहे हैं। सरकार का फोकस इस बात पर भी है कि हमारे खिलाड़ियों को ज्यादा से ज्यादा नए स्पोर्ट्स खेलने का मौका मिले। इसलिए ही खेलो इंडिया यूथ गेम्स में गतका, कलारीपयट्टू, खो-खो, मल्लखंभ और यहां तक की योगासन को शामिल किया गया है। हाल के दिनों में हमारे खिलाड़ियों ने कई नए खेलों में बहुत ही अच्छा प्रदर्शन करके दिखाया है। वुशु, सेपाक-टकरा, पन्चक-सीलाट, लॉन बॉल्स, रोलर स्केटिंग जैसे खेलों में भी अब भारतीय खिलाड़ी आगे आ रहे हैं। साल 2022 के कॉमनवेल्थ गेम्स में महिला टीम ने लॉन बॉल्स में मेडल जीतकर तो सबका ध्यान आकर्षित किया था।

साथियों,

सरकार का जोर, भारत में स्पोर्ट्स इंफ्रास्ट्रक्चर को आधुनिक बनाने पर भी है। बीते दशक में खेल के बजट में तीन गुणा से अधिक की वृद्धि की गई है। इस वर्ष स्पोर्ट्स का बजट करीब 4 हज़ार करोड़ रुपए है। इस बजट का बहुत बड़ा हिस्सा स्पोर्ट्स इंफ्रास्ट्रक्चर पर खर्च हो रहा है। आज देश में एक हज़ार से अधिक खेलो इंडिया सेंटर्स चल रहे हैं। इनमें तीन दर्जन से अधिक हमारे बिहार में ही हैं। बिहार को तो, NDA के डबल इंजन का भी फायदा हो रहा है। यहां बिहार सरकार, अनेक योजनाओं को अपने स्तर पर विस्तार दे रही है। राजगीर में खेलो इंडिया State centre of excellence की स्थापना की गई है। बिहार खेल विश्वविद्यालय, राज्य खेल अकादमी जैसे संस्थान भी बिहार को मिले हैं। पटना-गया हाईवे पर स्पोर्टस सिटी का निर्माण हो रहा है। बिहार के गांवों में खेल सुविधाओं का निर्माण किया गया है। अब खेलो इंडिया यूथ गेम्स- नेशनल स्पोर्ट्स मैप पर बिहार की उपस्थिति को और मज़बूत करने में मदद करेंगे। 

|

साथियों,

स्पोर्ट्स की दुनिया और स्पोर्ट्स से जुड़ी इकॉनॉमी सिर्फ फील्ड तक सीमित नहीं है। आज ये नौजवानों को रोजगार और स्वरोजगार को भी नए अवसर दे रहा है। इसमें फिजियोथेरेपी है, डेटा एनालिटिक्स है, स्पोर्ट्स टेक्नॉलॉजी, ब्रॉडकास्टिंग, ई-स्पोर्ट्स, मैनेजमेंट, ऐसे कई सब-सेक्टर्स हैं। और खासकर तो हमारे युवा, कोच, फिटनेस ट्रेनर, रिक्रूटमेंट एजेंट, इवेंट मैनेजर, स्पोर्ट्स लॉयर, स्पोर्ट्स मीडिया एक्सपर्ट की राह भी जरूर चुन सकते हैं। यानी एक स्टेडियम अब सिर्फ मैच का मैदान नहीं, हज़ारों रोज़गार का स्रोत बन गया है। नौजवानों के लिए स्पोर्ट्स एंटरप्रेन्योरशिप के क्षेत्र में भी अनेक संभावनाएं बन रही हैं। आज देश में जो नेशनल स्पोर्ट्स यूनिवर्सिटी बन रही हैं, या फिर नई नेशनल एजुकेशन पॉलिसी बनी है, जिसमें हमने स्पोर्ट्स को मेनस्ट्रीम पढ़ाई का हिस्सा बनाया है, इसका मकसद भी देश में अच्छे खिलाड़ियों के साथ-साथ बेहतरीन स्पोर्ट्स प्रोफेशनल्स बनाने का है। 

मेरे युवा साथियों, 

हम जानते हैं, जीवन के हर क्षेत्र में स्पोर्ट्समैन शिप का बहुत बड़ा महत्व होता है। स्पोर्ट्स के मैदान में हम टीम भावना सीखते हैं, एक दूसरे के साथ मिलकर आगे बढ़ना सीखते हैं। आपको खेल के मैदान पर अपना बेस्ट देना है और एक भारत श्रेष्ठ भारत के ब्रांड ऐंबेसेडर के रूप में भी अपनी भूमिका मजबूत करनी है। मुझे विश्वास है, आप बिहार से बहुत सी अच्छी यादें लेकर लौटेंगे। जो एथलीट्स बिहार के बाहर से आए हैं, वो लिट्टी चोखा का स्वाद भी जरूर लेकर जाएं। बिहार का मखाना भी आपको बहुत पसंद आएगा।

साथियों, 

खेलो इंडिया यूथ गेम्स से- खेल भावना और देशभक्ति की भावना, दोनों बुलंद हो, इसी भावना के साथ मैं सातवें खेलो इंडिया यूथ गेम्स के शुभारंभ की घोषणा करता हूं।