ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯಲ್ಲಿಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಅವರು ರ‍್ಯಾಲಿಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಿತ್ರ ಮತ್ತು ನೆರೆಯ ರಾಷ್ಟ್ರಗಳ ತುಕಡಿಗಳು ಸೇರಿ ಹಲವು ಎನ್ ಸಿಸಿ ತುಕಡಿಗಳ ಪಥಸಂಚಲನವನ್ನು ಪರಾಮರ್ಶಿಸಿದರು.

ಬೋಡೋ ಮತ್ತು ಬ್ರೂ – ರಿಯಾಂಗ್ ಒಪ್ಪಂದ

ಈಶಾನ್ಯ ಭಾರತದ ಅಭಿವೃದ್ಧಿ ಪ್ರಯತ್ನಗಳ ಕುರಿತಂತೆ ಮಾತನಾಡಿದ ಪ್ರಧಾನಮಂತ್ರಿ ಅವರು, ಮೊದಲು ಈ ಪ್ರಾಂತ್ಯವನ್ನು ನಿರ್ಲಕ್ಷಿಸಲಾಗಿತ್ತು ಮತ್ತು ಅಲ್ಲಿ ಸದಾ ಬಂಡುಕೋರರ ಹೋರಾಟ ನಡೆಯುತ್ತಿತ್ತು, ಹಿಂಸಾಚಾರಗಳಲ್ಲಿ ಮುಗ್ಧರು ಸಾವನ್ನಪ್ಪುತ್ತಿದ್ದರು ಎಂದರು. ಒಂದೆಡೆ ಸರ್ಕಾರ ಈಶಾನ್ಯ ಭಾಗದ ಅಭಿವೃದ್ಧಿಗೆ ನಿರೀಕ್ಷಿಸಲಾಗದಂತಹ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಮತ್ತೊಂದೆಡೆ ಸಂಬಂಧಿಸಿದ ಎಲ್ಲರೊಡನೆ ಮುಕ್ತ ಮನಸ್ಸಿನಿಂದ ಹಾಗೂ ಮುಕ್ತ ಹೃದಯದಿಂದ ಸಮಾಲೋಚನೆಗಳನ್ನು ಆರಂಭಿಸಲಾಗಿದೆ. ಅದರ ಪರಿಣಾಮವೇ ಬೋಡೋ ಒಪ್ಪಂದವಾಗಿದೆ. ಇದು ಯುವ ಭಾರತದ ಯೋಚನಾ ಲಹರಿಯಾಗಿದೆ ಎಂದರು.

ಮಿಜೋರಾಂ ಮತ್ತು ತ್ರಿಪುರಾ ನಡುವೆ ಬ್ರೂ – ರಿಯಾಂಗ್ ಒಪ್ಪಂದದ ನಂತರ ಬ್ರೂ ಆದಿವಾಸಿಗಳಿಗೆ ಸಂಬಂಧಿಸಿದ 23 ವರ್ಷಗಳಷ್ಟು ಹಳೆಯದಾದ ಸಮಸ್ಯೆ ಇತ್ಯರ್ಥಗೊಂಡಿದೆ. ಇದು ಯುವ ಭಾರತದ ಯೋಚನೆಯಾಗಿದೆ. ನಾವು ಪ್ರತಿಯೊಬ್ಬರನ್ನು ಒಳಗೊಂಡಂತೆ, ಎಲ್ಲರನ್ನು ಅಭಿವೃದ್ಧಿಗೊಳಿಸುತ್ತ, ಪ್ರತಿಯೊಬ್ಬರ ವಿಶ್ವಾಸಗಳಿಸುತ್ತ ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ.

|

ಪೌರತ್ವ ತಿದ್ದುಪಡಿ ಕಾಯ್ದೆ

ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ದೇಶದ ಯುವಜನತೆ ಸತ್ಯಾಂಶವನ್ನು ತಿಳಿಯುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ಹೇಳಿದರು. ಸ್ವಾತಂತ್ರ್ಯಾ ನಂತರ ಸ್ವತಂತ್ರ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನಗಳಿಂದ ಹಿಂದೂಗಳು – ಸಿಖ್ಖರು ಮತ್ತು ಇತರೆ ಅಲ್ಪಸಂಖ್ಯಾತರು ಅಗತ್ಯವಿದ್ದಾಗ ಭಾರತಕ್ಕೆ ಬಂದು ನೆಲಸಬಹುದು, ಭಾರತ ಅಂತಹವರ ಜೊತೆಗೆ ನಿಲ್ಲುತ್ತದೆ ಎಂದು ಪ್ರಧಾನಿ ಭರವಸೆ ನೀಡಿದರು. ಗಾಂಧೀಜಿ ಅವರ ಬಯಕೆಯೂ ಇದೇ ಆಗಿತ್ತು, 1950ರ ನೆಹರು – ಲಿಯಾಖತ್ ಒಪ್ಪಂದದ ಹಿಂದಿನ ಆಶಯವೂ ಕೂಡ ಇದೇ ಆಗಿತ್ತು ಎಂದು ಹೇಳಿದರು. “ಈ ರಾಷ್ಟ್ರಗಳಲ್ಲಿ ಜನರು ತಮ್ಮ ನಂಬಿಕೆಯಿಂದಾಗಿ ಕಿರುಕುಳಕ್ಕೆ ಒಳಗಾಗಿದ್ದಾರೆ, ಅಂತಹವರಿಗೆ ಭಾರತದ ಪೌರತ್ವ ನೀಡುವುದು ಮತ್ತು ಆಶ್ರಯ ಕಲ್ಪಿಸುವುದು ಭಾರತದ ಜವಾಬ್ದಾರಿಯಾಗಿದೆ. ಆದರೆ ಅಂತಹ ಸಹಸ್ರಾರು ಜನರು ವಾಪಸ್ ಹೋಗಿದ್ದಾರೆ” ಎಂದು ಪ್ರಧಾನಮಂತ್ರಿ ಹೇಳಿದರು. “ಆ ರೀತಿ ಐತಿಹಾಸಿಕ ಅನ್ಯಾಯಕ್ಕೆ ಜನರು ಒಳಗಾಗುವುದನ್ನು ತಪ್ಪಿಸಲು ಇಂದು ನಮ್ಮ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದೆ. ಭಾರತದ ಹಿಂದಿನ ಭಾರವಸೆಯನ್ನು ಈಡೇರಿಸಲು ಅಂತಹ ಜನರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು” ಎಂದು ಪ್ರಧಾನಮಂತ್ರಿ ಹೇಳಿದರು.

ದೇಶ ವಿಭಜನೆ ವೇಳೆ ಹಲವು ಭಾರತೀಯರು ತಮ್ಮ ಆಸ್ತಿ ಹಕ್ಕುಗಳನ್ನು ಇಲ್ಲಿಯೇ ಬಿಟ್ಟು ದೇಶ ತೊರೆದಿದ್ದರು ಎಂದು ಪ್ರಧಾನಮಂತ್ರಿ ಹೇಳಿದರು. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಇಂತಹ ಆಸ್ತಿಗಳ ಮೇಲೆ ಭಾರತದ ಹಕ್ಕು ಇದ್ದರೂ ಹಲವು ದಶಕಗಳಿಂದ ಅಂತಹ ಶತೃಗಳ ಆಸ್ತಿಯನ್ನು ತಟಸ್ಥವಾಗಿ ಇಡಲಾಗಿತ್ತೆಂದು ಹೇಳಿದರು. ಯಾವ ವ್ಯಕ್ತಿಗಳು ಶತೃಗಳ ಆಸ್ತಿ ಕಾಯ್ದೆಯನ್ನು ವಿರೋಧಿಸುತ್ತಿದ್ದರೋ ಅವರೇ ಇದೀಗ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಲು ಹೊರ ಬಂದಿದ್ದಾರೆ ಎಂದು ಹೇಳಿದರು.

|

ಭಾರತ – ಬಾಂಗ್ಲಾ ಗಡಿ ವಿವಾದ

ಭಾರತ ಮತ್ತು ಬಾಂಗ್ಲಾದೇಶದ ಗಡಿ ಪ್ರದೇಶಗಳ ವ್ಯಾಜ್ಯ ಇತ್ಯರ್ಥಕ್ಕೆ ಯಾವುದೇ ವ್ಯವಸ್ಥಿತ ಪ್ರಯತ್ನಗಳು ನಡೆದಿರಲಿಲ್ಲ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಗಡಿ ವಿವಾದ ಇತ್ಯರ್ಥವಾಗುವವರೆಗೆ ದೇಶದೊಳಗೆ ಒಳನುಸುಳುವುದು ನಿಲ್ಲುವುದಿಲ್ಲ ಎಂದು ಅವರು ಹೇಳಿದರು. ವಿವಾದವನ್ನು ಬಗೆಹರಿಯದಂತೆ ನೋಡಿಕೊಂಡು ಒಳನುಸುಳು ಕೋರರಿಗೆ ಮುಕ್ತ ಮಾರ್ಗ ನೀಡಲಾಗುತ್ತಿದೆ ಮತ್ತು ಆ ಮೂಲಕ ಅವರು ರಾಜಕೀಯವನ್ನು ಮಾಡುತ್ತಿದ್ದೀರೆ ಎಂದರು.

|

ತಮ್ಮ ಸರ್ಕಾರ ಬಾಂಗ್ಲಾದೇಶದ ಜೊತೆ ಪರಸ್ಪರ ಸಮಾಲೋಚನೆಗಳನ್ನು ನಡೆಸಿ, ಪರಸ್ಪರ ಒಬ್ಬರನ್ನೊಬ್ಬರು ಅರ್ಥಮಾಡಿಕೊಂಡು ಗಡಿ ವಿವಾದವನ್ನು ಬಗೆಹರಿಸಿಕೊಂಡಿದೆ ಮತ್ತು ಆ ಸಮಸ್ಯೆಗೆ ಪರಿಹಾರವನ್ನು ಉಭಯ ದೇಶಗಳು ಒಪ್ಪಿವೆ ಎಂದು ಹೇಳಿದರು. ಇಂದು ಕೇವಲ ಗಡಿ ವಿವಾದ ಇತ್ಯರ್ಥಗೊಂಡಿರುವುದು ಮಾತ್ರವಲ್ಲ, ಇಂದು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಐತಿಹಾಸಿಕ ಉನ್ನತ ಮಟ್ಟಕ್ಕೇರಿದೆ ಮತ್ತು ಉಭಯ ದೇಶಗಳು ಬಡತನದ ವಿರುದ್ಧ ಜಂಟಿಯಾಗಿ ಹೋರಾಡುತ್ತಿವೆ ಎಂದು ಹೇಳಿದರು.

ಕರ್ತಾರ್ ಪುರ್ ಕಾರಿಡಾರ್

ದೇಶ ವಿಭಜನೆ ವೇಳೆ ಗುರುದ್ವಾರ ಕರ್ತಾರ್ ಪುರ್ ಸಾಹಿಬ್ ಅನ್ನು ನಮ್ಮಿಂದ ತೆಗೆದುಕೊಂಡು, ಪಾಕಿಸ್ತಾನದ ಭಾಗವನ್ನಾಗಿ ಮಾಡಲಾಗಿತ್ತು ಎಂದು ಪ್ರಧಾನಮಂತ್ರಿ ಹೇಳಿದರು. ಕರ್ತಾರ್ ಪುರ್, ಗುರುನಾನಕ್ ಅವರ ಪುಣ್ಯಭೂಮಿ. ಈ ಪವಿತ್ರ ಸ್ಥಳದೊಂದಿಗೆ ದೇಶದ ಕೋಟ್ಯಾಂತರ ಜನರ ನಂಬಿಕೆ ಬೆಸೆದುಕೊಂಡಿದೆ. ಹಲವು ದಶಕಗಳಿಂದ ಸಿಖ್ ಭಕ್ತಾದಿಗಳು ಸುಲಭವಾಗಿ ಕರ್ತಾರ್ ಪುರ್ ತಲುಪಲು ಮತ್ತು ಗುರು ಭೂಮಿಯ ದರ್ಶನ ಪಡೆಯುವ ಅವಕಾಶ ಸಿಗಲಿದೆ ಎಂದು ಕಾಯುತ್ತಿದ್ದರು. ತಮ್ಮ ಸರ್ಕಾರ, ಕರ್ತಾರ್ ಪುರ್ ಕಾರಿಡಾರ್ ನಿರ್ಮಾಣ ಮಾಡುವ ಮೂಲಕ ಅದನ್ನು ಸಾಧಿಸಿದೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
26th global award: PM Modi conferred Brazil's highest honour — ‘Grand Collar of National Order of Southern Cross’

Media Coverage

26th global award: PM Modi conferred Brazil's highest honour — ‘Grand Collar of National Order of Southern Cross’
NM on the go

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
July 09, 2025

ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.

ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರಿಗೆ ನೀಡಿದ ಪ್ರಶಸ್ತಿಗಳನ್ನು ನೋಡೋಣ.

ದೇಶಗಳು ನೀಡುವ ಪ್ರಶಸ್ತಿಗಳು:

1. ಏಪ್ರಿಲ್ 2016 ರಲ್ಲಿ, ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದಾಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಗೌರವ- ಕಿಂಗ್ ಅಬ್ದುಲ್ ಅಜೀಜ್ ಸಾಶ್ ಅನ್ನು ನೀಡಲಾಯಿತು. ದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್ ಅವರು ಪ್ರಧಾನಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

|

2. ಅದೇ ವರ್ಷ, ಪ್ರಧಾನಿ  ಮೋದಿಯವರಿಗೆ ಅಫ್ಘಾನಿಸ್ತಾನದ ಅತ್ಯುನ್ನತ ನಾಗರಿಕ ಗೌರವವಾದ ಘಾಜಿ ಅಮೀರ್ ಅಮಾನುಲ್ಲಾ ಖಾನ್ ಅವರ ರಾಜ್ಯ ಆದೇಶವನ್ನು ನೀಡಲಾಯಿತು.

|

3. 2018 ರಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್‌ಗೆ ಐತಿಹಾಸಿಕ ಭೇಟಿ ನೀಡಿದಾಗ, ಅವರಿಗೆ ಗ್ರ್ಯಾಂಡ್ ಕಾಲರ್ ಆಫ್ ಸ್ಟೇಟ್ ಆಫ್ ಪ್ಯಾಲೆಸ್ಟೈನ್ ಪ್ರಶಸ್ತಿಯನ್ನು ನೀಡಲಾಯಿತು. ಇದು ವಿದೇಶಿ ಗಣ್ಯರಿಗೆ ನೀಡುವ ಪ್ಯಾಲೆಸ್ತೀನ್‌ನ ಅತ್ಯುನ್ನತ ಗೌರವವಾಗಿದೆ.

|

4. 2019 ರಲ್ಲಿ, ಪ್ರಧಾನ ಮಂತ್ರಿಗೆ ಆರ್ಡರ್ ಆಫ್ ಜಾಯೆದ್ ಪ್ರಶಸ್ತಿಯನ್ನು ನೀಡಲಾಯಿತು. ಇದು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅತ್ಯುನ್ನತ ನಾಗರಿಕ ಗೌರವವಾಗಿದೆ.

|

5. ರಷ್ಯಾವು ಪ್ರಧಾನಿ ಮೋದಿಯವರಿಗೆ ತಮ್ಮ ಅತ್ಯುನ್ನತ ನಾಗರಿಕ ಗೌರವ - 2019 ರಲ್ಲಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ಪ್ರಶಸ್ತಿಯನ್ನು ನೀಡಿತು.

6. ಆರ್ಡರ್ ಆಫ್ ದಿ ಡಿಸ್ಟಿಂಗ್ವಿಶ್ಡ್ ರೂಲ್ ಆಫ್ ನಿಶಾನ್ ಇಝುದ್ದೀನ್- ವಿದೇಶಿ ಗಣ್ಯರಿಗೆ ನೀಡಲಾಗುವ ಮಾಲ್ಡೀವ್ಸ್‌ನ ಅತ್ಯುನ್ನತ ಗೌರವವನ್ನು 2019 ರಲ್ಲಿ ಪ್ರಧಾನಿ ಮೋದಿಯವರಿಗೆ ನೀಡಲಾಯಿತು.

|

7. ಪ್ರಧಾನಿ ಮೋದಿ ಅವರು 2019 ರಲ್ಲಿ ಪ್ರತಿಷ್ಠಿತ ಕಿಂಗ್ ಹಮದ್ ಆರ್ಡರ್ ಆಫ್ ರಿನೈಸಾನ್ಸ್ ಅನ್ನು ಪಡೆದರು. ಈ ಗೌರವವನ್ನು ಬಹ್ರೇನ್ ನೀಡಿತು.

|
8. ಯುಎಸ್ ಸರ್ಕಾರದಿಂದ ಲೀಜನ್ ಆಫ್ ಮೆರಿಟ್, ಅತ್ಯುತ್ತಮ ಸೇವೆಗಳು ಮತ್ತು ಸಾಧನೆಗಳ ಕಾರ್ಯಕ್ಷಮತೆಯಲ್ಲಿ ಅಸಾಧಾರಣವಾದ ಅರ್ಹತೆಯ ನಡವಳಿಕೆಗಾಗಿ ನೀಡಲಾಗುವ ಯುನೈಟೆಡ್ ಸ್ಟೇಟ್ಸ್ ಸಶಸ್ತ್ರ ಪಡೆಗಳ ಪ್ರಶಸ್ತಿಯನ್ನು 2020 ರಲ್ಲಿ ಪಿಎಂ ಮೋದಿಯವರಿಗೆ ನೀಡಲಾಯಿತು.

9. ಡಿಸೆಂಬರ್ 2021 ರಲ್ಲಿ ಭೂತಾನ್ ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಅಲಂಕಾರ, ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ನೀಡಿ ಗೌರವಿಸಿದೆ
 
ಅತ್ಯುನ್ನತ ನಾಗರಿಕ ಗೌರವಗಳ ಹೊರತಾಗಿ,  ಪ್ರಧಾನಿ   ಮೋದಿಯವರಿಗೆ ಪ್ರಪಂಚದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳನ್ನು ನೀಡಲಾಗಿದೆ.

1. ಸಿಯೋಲ್ ಶಾಂತಿ ಪ್ರಶಸ್ತಿ: ಮನುಕುಲದ ಸಾಮರಸ್ಯ, ರಾಷ್ಟ್ರಗಳ ನಡುವಿನ ಸಮನ್ವಯ ಮತ್ತು ವಿಶ್ವ ಶಾಂತಿಗೆ ಕೊಡುಗೆಗಳ ಮೂಲಕ ತಮ್ಮ ಛಾಪು ಮೂಡಿಸಿದ ವ್ಯಕ್ತಿಗಳಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ದ್ವೈವಾರ್ಷಿಕವಾಗಿ ನೀಡಲಾಗುತ್ತದೆ. ಪ್ರಧಾನಿ ಮೋದಿ ಅವರಿಗೆ 2018 ರಲ್ಲಿ ಪ್ರತಿಷ್ಠಿತ ಪ್ರಶಸ್ತಿ ನೀಡಲಾಯಿತು.
|

2. ಯುಎನ್ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿ: ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2018 ರಲ್ಲಿ, ಜಾಗತಿಕ ವೇದಿಕೆಯಲ್ಲಿ ಅವರ ದಿಟ್ಟ ಪರಿಸರ ನಾಯಕತ್ವಕ್ಕಾಗಿ ಯುಎನ್ ಪ್ರಧಾನಿ ಮೋದಿಯನ್ನು ಗುರುತಿಸಿತು.

|

3. ಮೊದಲ ಬಾರಿಗೆ ಫಿಲಿಪ್ ಕೋಟ್ಲರ್ ಅಧ್ಯಕ್ಷೀಯ ಪ್ರಶಸ್ತಿಯನ್ನು 2019 ರಲ್ಲಿ ಪ್ರಧಾನಿ ಮೋದಿ ಅವರಿಗೆ ನೀಡಲಾಯಿತು. ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ರಾಷ್ಟ್ರದ ನಾಯಕನಿಗೆ ನೀಡಲಾಗುತ್ತದೆ. ಪ್ರಧಾನಿ ಮೋದಿಯವರು "ರಾಷ್ಟ್ರಕ್ಕೆ ಅತ್ಯುತ್ತಮ ನಾಯಕತ್ವ" ಕ್ಕಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಶಸ್ತಿಯ ಉಲ್ಲೇಖವು ಹೇಳಿದೆ.

|

4. 2019 ರಲ್ಲಿ, ಪ್ರಧಾನಿ ಮೋದಿಯವರಿಗೆ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಿಂದ 'ಗ್ಲೋಬಲ್ ಗೋಲ್‌ಕೀಪರ್' ಪ್ರಶಸ್ತಿಯನ್ನು ನೀಡಲಾಯಿತು. ಸ್ವಚ್ಛ ಭಾರತ ಅಭಿಯಾನವನ್ನು "ಜನರ ಆಂದೋಲನ" ಆಗಿ ಪರಿವರ್ತಿಸಿದ ಮತ್ತು ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ ಭಾರತೀಯರಿಗೆ ಪ್ರಧಾನಿ ಮೋದಿ ಈ ಪ್ರಶಸ್ತಿಯನ್ನು ಅರ್ಪಿಸಿದರು.

|

5. 2021 ರಲ್ಲಿ, ಪ್ರಧಾನಿ ಮೋದಿಯವರಿಗೆ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಿಂದ 'ಗ್ಲೋಬಲ್ ಗೋಲ್‌ಕೀಪರ್' ಪ್ರಶಸ್ತಿಯನ್ನು ನೀಡಲಾಯಿತು. ಸ್ವಚ್ಛ ಭಾರತ ಅಭಿಯಾನವನ್ನು "ಜನರ ಆಂದೋಲನ" ಆಗಿ ಪರಿವರ್ತಿಸಿದ ಮತ್ತು ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ ಭಾರತೀಯರಿಗೆ ಪ್ರಧಾನಿ ಮೋದಿ ಈ ಪ್ರಶಸ್ತಿಯನ್ನು ಅರ್ಪಿಸಿದರು.