QuotePrime Minister reviews rescue and relief operations in areas affected by Cyclone Ockhi
QuotePM announces package of relief measures for cyclone affected States
Quote#CycloneOckhi: PM Modi assures Centre's help, says Union Government stands shoulder to shoulder with them in this hour of crisis
Quote#CycloneOckhi: Centre to dispatch immediate financial assistance worth Rs. 325 crore to cater to the requirements of Kerala, Tamil Nadu and Lakshadweep

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಚಂಡಮಾರುತದಿಂದ ಬಾಧಿತವಾದ ಲಕ್ಷದ್ವೀಪ, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಿದ ವೇಳೆ ರೈತರು ಮತ್ತು ಮೀನುಗಾರರು ಸೇರಿದಂತೆ ಓಖಿ ಚಂಡಮಾರುತದಿಂದ ಬಾಧಿತರಾದವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದಿನದ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕವರಾತ್ತಿ ಮತ್ತು ಕನ್ಯಾಕುಮಾರಿಯ ಜನರೊಂದಿಗೆ ಸಂವಾದ ನಡೆಸಿದರು. ಅವರು ಚಂಡಮಾರುತದಿಂದ ತೀವ್ರ ಪರಿಣಾಮ ಎದುರಿಸಿರುವ ತಿರುವನಂತಪುರಂ ಬಳಿಯ ಪುಂತೂರ ಗ್ರಾಮಕ್ಕೂ ಭೇಟಿ ನೀಡಿದರು. ಚಂಡಮಾರುತದಿಂದ ತಾವು ಎದುರಿಸಿದ ಸಂಕಷ್ಟವನ್ನು ಜನರು ಪ್ರಧಾನಿಯವರಿಗೆ ತಿಳಿಸಿದರು. ಪ್ರಧಾನಮಂತ್ರಿಯವರು ಜನರಿಗೆ ಎಲ್ಲ ರೀತಿಯ ನೆರವು ಒದಗಿಸುವ ಭರವಸೆ ನೀಡಿದರು ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರ ಅವರೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲಲಿದೆ ಎಂದು ಹೇಳಿದರು. 

|

ಪ್ರಧಾನಮಂತ್ರಿಯವರು ಕವರತ್ತಿ, ಕನ್ಯಾಕುಮಾರಿ ಮತ್ತು ತಿರುವನಂತಪುರಂಗಳಲ್ಲಿ ಪ್ರಸಕ್ತ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಕುರಿತಂತೆ ಪ್ರತ್ಯೇಕವಾಗಿ ಸವಿವರವಾದ ಪರಿಶೀಲನಾ ಸಭೆಗಳನ್ನು ನಡೆಸಿದರು. ಕೇರಳ ಮತ್ತು ತಮಿಳುನಾಡಿನ ರಾಜ್ಯಪಾಲರುಗಳು ಮತ್ತು ಮುಖ್ಯಮಂತ್ರಿಗಳು, ತಮಿಳುನಾಡಿನ ಉಪ ಮುಖ್ಯಮಂತ್ರಿ, ಲೋಕಸಭೆಯ ಉಪ ಸಭಾಧ್ಯಕ್ಷರು ಮತ್ತು ಲಕ್ಷದ್ವೀಪದ ಆಡಳಿತಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳು ಆಯಾ ಸಭೆಗಳಲ್ಲಿ ಭಾಗಿಯಾಗಿದ್ದರು.

|

 

|
|
  • ಪರಿಹಾರದ ಪ್ಯಾಕೇಜ್ ಕ್ರಮದೊಂದಿಗೆ ಚಂಡಮಾರುತ ಬಾಧಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬೆಂಬಲ ನೀಡಲಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು.

    ·        ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳ ಅಗತ್ಯಗಳನ್ನು ಪೂರೈಸಲು ಕೇಂದ್ರ ಸರ್ಕಾರವು ತತ್ ಕ್ಷಣದ ಪರಿಹಾರದ ನೆರವಾಗಿ 325 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದೆ.

    ·        ಇಂದು ಪ್ರಧಾನಮಂತ್ರಿಯವರು ಪ್ರಕಟಿಸಿದ ಆರ್ಥಿಕ ನೆರವು ಓಖಿ ಚಂಡಮಾರುತ ಅಪ್ಪಳಿಸಿದ ಎರಡು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಕ್ಕೆ ಈ ತಿಂಗಳ ಆರಂಭದಲ್ಲಿ ವಿತರಿಸಲಾದ ತಮಿಳುನಾಡಿಗೆ 280 ಕೋಟಿ ರೂಪಾಯಿ ಮತ್ತು ಕೇರಳಕ್ಕೆ 76 ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚಾಗಿದೆ.

    ·        ಓಖಿ ಚಂಡಮಾರುತದಿಂದ ಸಂಪೂರ್ಣವಾಗಿ ಹಾನಿಗೊಳಗಾಗಿರುವ ಸುಮಾರು 1400 ಮನೆಗಳ ಪುನರ್ ನಿರ್ಮಾಣಕ್ಕೆ ಭಾರತ ಸರ್ಕಾರವು ಪ್ರಧಾನಮಂತ್ರಿ ವಸತಿ ಯೋಜನೆ (ಪಿ.ಎಂ.ಎ.ವೈ) ಅಡಿಯಲ್ಲಿ ಆದ್ಯತೆಯ ಮೇರೆಗೆ ಬೆಂಬಲ ನೀಡಲಿದೆ. ಈ ಕಾರ್ಯಕ್ರಮದಡಿಯಲ್ಲಿ ಪ್ರತಿಯೊಬ್ಬ ಫಲಾನುಭವಿಯೂ ಹೊಸ ಮನೆ ನಿರ್ಮಾಣಕ್ಕಾಗಿ 1.5 ಲಕ್ಷ ರೂಪಾಯಿಗಳನ್ನು ಪಡೆಯಲಿದ್ದಾರೆ.

    ·        ವಿಮಾ ಸಂಸ್ಥೆಗಳಿಗೆ ಓಖಿ ಚಂಡಮಾರುತದಿಂದ ಬಾಧಿತರಾದ ಜನರಿಗೆ ಅವರ ಕ್ಲೇಮ್ ಗಳನ್ನು ಶೀಘ್ರ ಪಾವತಿಸುವಂತೆ ಸಲಹೆ ನೀಡಲಾಗಿದೆ.

    ·        ಚಂಡಮಾರುತದಿಂದಾಗಿ ಸಾವನ್ನಪ್ಪಿದವರ ಹತ್ತಿರದ ಬಂಧುಗಳಿಗೆ 2 ಲಕ್ಷ ರೂಪಾಯಿಗಳ ಪರಿಹಾರ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್.ಎಫ್)ನಿಂದ ಮಂಜೂರು ಮಾಡಲಾಗಿದೆ.

|

 

|

ಇದಕ್ಕೂ ಮುನ್ನ ಪರಿಶೀಲನಾ ಸಭೆಯಲ್ಲಿ, ಪ್ರಧಾನಮಂತ್ರಿಯವರಿಗೆ ಈ ಪ್ರದೇಶಕ್ಕೆ ಕಳೆದ 125 ವರ್ಷಗಳಲ್ಲಿ ಅಪ್ಪಳಿಸಿದ ಮೂರನೇ ಭಾರಿ ಚಂಡಮಾರುತವಾದ ಓಖಿ ಚಂಡಮಾರುತದ ಪರಿಣಾಮಗಳ ಬಗ್ಗೆ ವಿವರಿಸಲಾಯಿತು. 2017ರ ನವೆಂಬರ್ 30ರಂದು ಈ ಚಂಡಮಾರುತ ಅಪ್ಪಳಿಸಿತ್ತು, ಮತ್ತು ಅದೇ ದಿನ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಈವರೆಗೆ 20 ಮೇಲ್ಮೈ ವೇದಿಕೆಗಳಲ್ಲಿ  ಒಟ್ಟು 197 ಹಡಗು ದಿನಗಳು ಮತ್ತು 186 ಹಾರಾಟದ ಗಂಟೆಗಳನ್ನು ಭಾರತೀಯ ಕರಾವಳಿ ಭದ್ರತೆ ಪಡೆ ಶೋಧ ಮತ್ತು ರಕ್ಷಣಾ ಕಾರ್ಯಕ್ಕಾಗಿ ಬಳಸಿಕೊಂಡಿದೆ. ಇದರ ಜೊತೆಗೆ 10 ಹಡಗುಗಳು ಮತ್ತು 7 ಬಗೆಯ ವಿಮಾನಗಳಲ್ಲಿ 156 ಹಡಗು ದಿನ ಮತ್ತು 399 ಹಾರಾಟದ ಗಂಟೆಗಳನ್ನು ಭಾರತೀಯ ನೌಕಾಪಡೆ ಬಳಸಿಕೊಂಡಿದೆ. ಒಟ್ಟು 183 ಮೀನುಗಾರರು ಮತ್ತು ನಾಗರಿಕ ಆಡಳಿತದ ಸಿಬ್ಬಂದಿ ಈ ಹಡಗುಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಿಗೆ ನಿಂತಿದ್ದರು. ಈ ದಿನದವರೆಗೆ 845 ಮೀನುಗಾರರನ್ನು ರಕ್ಷಿಸಲಾಗಿದೆ ಅಥವಾ ಅವರಿಗೆ ನೆರವು ನೀಡಲಾಗಿದೆ.

|

ಕಡಲ ತಡಿಯಿಂದ 700 ನಾಟಿಕಲ್ ಮೈಲಿಗಳ ಆಚೆ ಕಣ್ಗಾವಲು ನಡೆಸಲಾಗಿದೆ ಎಂದೂ ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Khadi products witnessed sale of Rs 12.02 cr at Maha Kumbh: KVIC chairman

Media Coverage

Khadi products witnessed sale of Rs 12.02 cr at Maha Kumbh: KVIC chairman
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಮಾರ್ಚ್ 2025
March 08, 2025

Citizens Appreciate PM Efforts to Empower Women Through Opportunities