Quoteಭಾರತದ ಬೆಳವಣಿಗೆಯ ಕಥೆಯು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಗಳ ಮೇಲೆ ಅವಲಂಬಿತವಾಗಿರುತ್ತದೆ: ಪ್ರಧಾನಿ ಮೋದಿ
Quote‘ವಿಜ್ಞಾನದ ಕಾರ್ಯಗಳ ಸುಲಭಗೊಳಿಸುವಿಕೆಯನ್ನು’ ಖಚಿತಪಡಿಸಿಕೊಳ್ಳಲು ನಾವು ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತಿದ್ದೇವೆ ಮತ್ತು ಅತಿಯಾದ ಅಧಿಕೃತ ನಿಯಮಗಳು ಮತ್ತು ಔಪಚಾರಿಕತೆಗಳನ್ನು ಅನುಸರಿಸುವುದನ್ನು ಕಡಿಮೆ ಮಾಡಲು ಮಾಡಲು ಮಾಹಿತಿ ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸುತ್ತಿದ್ದೇವೆ. : ಪ್ರಧಾನಿ ಮೋದಿ
Quote2024 ರ ವೇಳೆಗೆ ಭಾರತವನ್ನು ವಿಶ್ವ ದರ್ಜೆಯ, 100 ಶತಕೋಟಿ ಯುಎಸ್ ಡಾಲರ್ ಜೈವಿಕ ಉತ್ಪಾದನಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ: ಪ್ರಧಾನಿ ಮೋದಿ

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ಐಎಸ್‌ಸಿ) ಉದ್ಘಾಟಿಸಿದರು.

ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿಯವರು, “ಭಾರತದ ಪ್ರಗತಿಯ ಕಥೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಗಳ ಮೇಲೆ ಅವಲಂಬಿತವಾಗಿದೆ. ಭಾರತೀಯ ವಿಜ್ಞಾನ ತಂತ್ರಜ್ಞಾನ ಮತ್ತು ಆವಿಷ್ಕಾರದ ಕ್ಷೇತ್ರದಲ್ಲಿ ಕ್ರಾಂತಿಯುಂಟುಮಾಡುವ ಅವಶ್ಯಕತೆಯಿದೆ. ” ಎಂದರು.

|

“ದೇಶದಲ್ಲಿನ ಯುವ ವಿಜ್ಞಾನಿಗಳಿಗೆ ನನ್ನ ಧ್ಯೇಯವಾಕ್ಯವೆಂದರೆ – “ಆವಿಷ್ಕರಿಸು, ಪೇಟೆಂಟ್ ಮಾಡಿಸು, ಉತ್ಪಾದಿಸು ಮತ್ತು ಪ್ರಗತಿ ಕಾಣು”. ಈ ನಾಲ್ಕು ಹಂತಗಳು ನಮ್ಮ ದೇಶವನ್ನು ತ್ವರಿತವಾಗಿ ಅಭಿವೃದ್ಧಿಯತ್ತ ಕೊಂಡೊಯ್ಯುತ್ತವೆ. ಜನರಿಂದ ಮತ್ತು ಜನರಿಗಾಗಿ ಆವಿಷ್ಕಾರ ಎಂಬುದು ನಮ್ಮ ‘ನವ ಭಾರತ’ದ ಗುರಿಯಾಗಿದೆ.” ಎಂದು ಹೇಳಿದರು.

ನವ ಭಾರತಕ್ಕೆ ತಂತ್ರಜ್ಞಾನ ಮತ್ತು ತಾರ್ಕಿಕ ಮನೋಧರ್ಮದ ಅಗತ್ಯವಿದೆ. ಆದ್ದರಿಂದ ನಮ್ಮ ಸಾಮಾಜಿಕ ಮತ್ತು ಆರ್ಥಿಕ ಜೀವನದ ಅಭಿವೃದ್ಧಿಗೆ ನಾವು ಹೊಸ ದಿಕ್ಕು ತೋರಬಹುದು. ಸಮಾನ ಅವಕಾಶಗಳನ್ನು ತರುವಲ್ಲಿ ಭಾರತದ ಸಮಾಜವನ್ನು ಜೋಡಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಮಹತ್ವದ ಪಾತ್ರವಿದೆ ಎಂದು ಪ್ರಧಾನಿ ತಿಳಿಸಿದರು.

“ಈಗ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದಲ್ಲಿನ ಬೆಳವಣಿಗೆಗಳು ಅಗ್ಗದ ಸ್ಮಾರ್ಟ್ ಫೋನ್‌ಗಳು ಮತ್ತು ಅಗ್ಗದ ಡೇಟಾವನ್ನು ಒದಗಿಸಲು ಸಮರ್ಥವಾಗಿವೆ ಮತ್ತು ಇದು ದೇಶದ ಪ್ರತಿಯೊಬ್ಬರಿಗೂ ಲಭ್ಯವಾಗುವಂತೆ ಮಾಡಿದೆ, ಇದು ಹಿಂದೆ ಕೆಲವರ ಸೊತ್ತು ಮಾತ್ರ ಎಂದು ಪರಿಗಣಿಸಲಾಗಿತ್ತು. ಇದು ಈಗ ತಾವು ಸರ್ಕಾರದಿಂದ ದೂರವಿಲ್ಲ ಎಂದು ಜನ ಸಾಮಾನ್ಯರು ನಂಬುವಂತೆ ಮಾಡಿದೆ. ಈಗ ಅವರು ನೇರವಾಗಿ ಸರ್ಕಾರದೊಂದಿಗೆ ಸಂಪರ್ಕ ಸಾಧಿಸಬಹುದು ಮತ್ತು ಅವರ ಮಾತನ್ನು ಕೇಳುವಂತೆ ಮಾಡಬಹುದು ” ಎಂದರು.

|

ಅಗ್ಗದ ಮತ್ತು ಉತ್ತಮ ಆವಿಷ್ಕಾರಗಳಿಗೆ ಹಲವಾರು ಅವಕಾಶಗಳಿರುವ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಯುವ ವಿಜ್ಞಾನಿಗಳಿಗೆ ಪ್ರಧಾನಿಯವರು ಕರೆ ಕೊಟ್ಟರು.

107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ನ ಧ್ಯೇಯವಾದ “ವಿಜ್ಞಾನ ಮತ್ತು ತಂತ್ರಜ್ಞಾನ: ಗ್ರಾಮೀಣಾಭಿವೃದ್ಧಿ”ಯನ್ನು ಉಲ್ಲೇಖಿಸಿದ ಪ್ರಧಾನಿಯವರು, ವಿಜ್ಞಾನ ಮತ್ತು ತಂತ್ರಜ್ಞಾನದ ಕಾರಣದಿಂದಾಗಿಯೇ, ಸರ್ಕಾರದ ಕಾರ್ಯಕ್ರಮಗಳು ಅಗತ್ಯವಿರುವವರನ್ನು ತಲುಪಿವೆ ಎಂದರು.

ಉತ್ತಮ ವಿಮರ್ಶೆಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಪ್ರಕಟಣೆಗಳ ಸಂಖ್ಯೆಯಲ್ಲಿ ಭಾರತ ಈಗ ಜಾಗತಿಕವಾಗಿ 3 ನೇ ಸ್ಥಾನದಲ್ಲಿರುವ ಬಗ್ಗೆ ಅವರು ಪ್ರಸ್ತಾಪಿಸಿದರು. “ಉತ್ತಮ ವಿಮರ್ಶೆಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಪ್ರಕಟಣೆಗಳ ಸಂಖ್ಯೆಯಲ್ಲಿ ಭಾರತ ಜಾಗತಿಕವಾಗಿ ಮೂರನೇ ಸ್ಥಾನಕ್ಕೆ ಏರಿದೆ ಎಂದು ನನಗೆ ಹೇಳಿದ್ದಾರೆ. ಜಾಗತಿಕ ಸರಾಸರಿ ಶೇ.4 ಕ್ಕೆ ಹೋಲಿಸಿದರೆ ಇದು ಸುಮಾರು ಶೇ.10ರ ದರದಲ್ಲಿ ಬೆಳೆಯುತ್ತಿದೆ.” ಎಂದರು.

ನಾವೀನ್ಯತೆಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕ 52 ಕ್ಕೆ ಹೆಚ್ಚಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ಕಳೆದ 5 ವರ್ಷಗಳಲ್ಲಿ ಸರ್ಕಾರದ ಕಾರ್ಯಕ್ರಮಗಳ ಫಲವಾಗಿ ಹಿಂದಿನ 50 ವರ್ಷಗಳ ಅವಧಿಯಲ್ಲಿ ಸೃಷ್ಟಿಸಿದ ಇನ್ಕ್ಯುಬೇಟರ್‌ಗಳಿಗಿಂತ ಹೆಚ್ಚನ್ನು ಈಗ ಸೃಷ್ಟಿಸಲಾಗಿದೆ ಎಂದು ಅವರು ಹೇಳಿದರು.

ಉತ್ತಮ ಆಡಳಿತದ ಉದ್ದೇಶವನ್ನು ಸಾಧಿಸಲು ತಂತ್ರಜ್ಞಾನವನ್ನು ಬೃಹತ್ ಪ್ರಮಾಣದಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. “ನಿನ್ನೆ ನಮ್ಮ ಸರ್ಕಾರವು 6 ಕೋಟಿ ಫಲಾನುಭವಿಗಳಿಗೆ ಪಿಎಂ-ಕಿಸಾನ್ ಕಾರ್ಯಕ್ರಮದಡಿ ಕಂತು ಬಿಡುಗಡೆ ಮಾಡಿತು. ಆಧಾರ್ ಆಧರಿತ ತಂತ್ರಜ್ಞಾನದಿಂದಾಗಿ ಮಾತ್ರ ಇದು ಸಾಧ್ಯವಾಯಿತು” ಎಂದು ಅವರು ಹೇಳಿದರು. ಅದೇ ರೀತಿ ಶೌಚಾಲಯ ನಿರ್ಮಿಸಲು ಮತ್ತು ಬಡವರಿಗೆ ವಿದ್ಯುತ್ ಒದಗಿಸಲೂ ಸಹ ಇದೇ ತಂತ್ರಜ್ಞಾನ ನೆರವಾಗಿದೆ ಎಂದರು.. ಜಿಯೋ ಟ್ಯಾಗಿಂಗ್ ಮತ್ತು ಡಾಟಾ ಸೈನ್ಸ್ ತಂತ್ರಜ್ಞಾನದಿಂದಾಗಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಅನೇಕ ಯೋಜನೆಗಳನ್ನು ಗಡುವಿನೊಳಗೆ ಪೂರ್ಣಗೊಳಿಸಬಹುದು ಎಂದು ಅವರು ಹೇಳಿದರು.

|

“ನಾವು ‘ಸುಗಮ ವಿಜ್ಞಾನ ಬಳಕೆ’ ಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮುಂದುವರಿಸುತ್ತಿದ್ದೇವೆ ಮತ್ತು ಅಧಿಕಾರಶಾಹಿಯನ್ನು ಕಡಿಮೆ ಮಾಡಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುತ್ತಿದ್ದೇವೆ”ಎಂದು ಪ್ರಧಾನ ಮಂತ್ರಿ ಹೇಳಿದರು.

ಡಿಜಿಟಲೀಕರಣ, ಇ ವಾಣಿಜ್ಯ, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಗ್ರಾಮೀಣ ಜನರಿಗೆ ಗಮನಾರ್ಹವಾಗಿ ಸಹಾಯ ಮಾಡುತ್ತಿವೆ ಎಂದು ಅವರು ಒತ್ತಿ ಹೇಳಿದರು. ಹಲವಾರು ಗ್ರಾಮೀಣಾಭಿವೃದ್ಧಿ ಉಪಕ್ರಮಗಳಿಗೆ ಅದರಲ್ಲೂ ವಿಶೇಷವಾಗಿ ವೆಚ್ಚದಾಯಕ ಕೃಷಿ ಮತ್ತು ಹೊಲದಿಂದ ಗ್ರಾಹಕನವರೆಗಿನ ಪೂರೈಕೆ ಸರಪಳಿ ಜಾಲದಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದು ಎಂದರು.

|

ಕಾಂಡವನ್ನು ಸುಡುವುದು, ಅಂತರ್ಜಲ ಮಟ್ಟ ನಿರ್ವಹಣೆ, ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ, ಪರಿಸರ ಸ್ನೇಹಿ ಸಾರಿಗೆ ಇತ್ಯಾದಿಗಳಿಗೆ ತಾಂತ್ರಿಕ ಪರಿಹಾರಗಳನ್ನು ಕಂಡುಕೊಳ್ಳಬೇಕೆಂದು ಅವರು ಒತ್ತಾಯಿಸಿದರು. ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು I-STEM ಪೋರ್ಟಲ್ ಗೆ ಚಾಲನೆ ನೀಡಿದರು.

 

 

 

 

 

 

 

 

 

 

 

Click here to read full text speech

  • Babla sengupta December 23, 2023

    Babla sengupta
  • Mahendra singh Solanki Loksabha Sansad Dewas Shajapur mp December 07, 2023

    नमो नमो नमो नमो नमो नमो नमो नमो
  • Laxman singh Rana June 22, 2022

    नमो नमो 🇮🇳🌷
  • Laxman singh Rana June 22, 2022

    नमो नमो 🇮🇳🌷🌹
  • Laxman singh Rana June 22, 2022

    नमो नमो 🇮🇳
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
India gets an 'F35' stealth war machine, but it's not a plane and here’s what makes it special

Media Coverage

India gets an 'F35' stealth war machine, but it's not a plane and here’s what makes it special
NM on the go

Nm on the go

Always be the first to hear from the PM. Get the App Now!
...
List of Outcomes: Prime Minister's State Visit to Trinidad & Tobago
July 04, 2025

A) MoUs / Agreement signed:

i. MoU on Indian Pharmacopoeia
ii. Agreement on Indian Grant Assistance for Implementation of Quick Impact Projects (QIPs)
iii. Programme of Cultural Exchanges for the period 2025-2028
iv. MoU on Cooperation in Sports
v. MoU on Co-operation in Diplomatic Training
vi. MoU on the re-establishment of two ICCR Chairs of Hindi and Indian Studies at the University of West Indies (UWI), Trinidad and Tobago.

B) Announcements made by Hon’ble PM:

i. Extension of OCI card facility upto 6th generation of Indian Diaspora members in Trinidad and Tobago (T&T): Earlier, this facility was available upto 4th generation of Indian Diaspora members in T&T
ii. Gifting of 2000 laptops to school students in T&T
iii. Formal handing over of agro-processing machinery (USD 1 million) to NAMDEVCO
iv. Holding of Artificial Limb Fitment Camp (poster-launch) in T&T for 50 days for 800 people
v. Under ‘Heal in India’ program specialized medical treatment will be offered in India
vi. Gift of twenty (20) Hemodialysis Units and two (02) Sea ambulances to T&T to assist in the provision of healthcare
vii. Solarisation of the headquarters of T&T’s Ministry of Foreign and Caricom Affairs by providing rooftop photovoltaic solar panels
viii. Celebration of Geeta Mahotsav at Mahatma Gandhi Institute for Cultural Cooperation in Port of Spain, coinciding with the Geeta Mahotsav celebrations in India
ix. Training of Pandits of T&T and Caribbean region in India

C) Other Outcomes:

T&T announced that it is joining India’s global initiatives: the Coalition of Disaster Resilient Infrastructure (CDRI) and Global Biofuel Alliance (GBA).