QuoteThere is something very special about the land of Rajasthan. This is a land of courage: PM
QuoteBe it living in harmony with nature or defending our nation, Rajasthan has shown the way: PM Modi
QuoteThe Central Government and the State Government are working together for the progress of Rajasthan: PM Modi in Jaipur
QuotePM Modi highlights historic increase of 1.5 times in MSP, says Government is working for welfare of our hardworking farmers
QuoteOur aim is inclusive and all-round development: PM: PM Modi
QuoteThere is no tolerance towards corruption. All our efforts are aimed at building a New India: Prime Minister

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೈಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ರಾಜಸ್ತಾನದಲ್ಲಿ 13 ನಗರ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ ಮಾಡಿದ ಫಲಕವನ್ನು ಅವರು ಅನಾವರಣಗೊಳಿಸಿದರು.

|

ಅವರು ಬಳಿಕ ಭಾರತ ಸರಕಾರ ಮತ್ತು ರಾಜಸ್ಥಾನ ಸರಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳ ಅನುಭವ ಹಂಚಿಕೆಯ ದೃಶ್ಯ-ಶ್ರಾವ್ಯ ಪ್ರದರ್ಶಿಕೆಯನ್ನು ವೀಕ್ಷಿಸಿದರು. ಈ ಪ್ರದರ್ಶಿಕೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಶ್ರೀಮತಿ ವಸುಂಧರಾ ರಾಜೇ ಅವರು ಸಮನ್ವೀಕರಿಸಿದ್ದರು. ಪ್ರಧಾನ ಮಂತ್ರಿ ಉಜ್ವಲ ಯೋಜನಾ, ಪ್ರಧಾನ ಮಂತ್ರಿ ಮುದ್ರಾ ಯೋಜನಾ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನಾ ಸಹಿತ ವಿವಿಧ ಯೋಜನೆಗಳು ಇದರಲ್ಲಿ ಅಡಕಗೊಂಡಿದ್ದವು.

ಉತ್ಸಾಹಿಗಳು ಭಾಗವಹಿಸಿದ್ದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು ರಾಜಸ್ಥಾನವು ತನ್ನಲ್ಲಿಗೆ ಭೇಟಿ ಕೊಡುವ ವೀಕ್ಷಕರನ್ನು ಹೇಗೆ ಸ್ವಾಗತಿಸುತ್ತದೆ ಎಂಬುದನ್ನು ತಾನು ಸ್ವತಹ ಸಾಕ್ಷೀಕರಿಸಿಕೊಂಡಿರುವುದಾಗಿ ಹೇಳಿದರು. ಇಲ್ಲಿಗೆ ಭೇಟಿ ನೀಡುವ ಸಂದರ್ಶಕರು ಕಳೆದ ಕೆಲವು ವರ್ಷಗಳಲ್ಲಿ ರಾಜ್ಯ ಯಾವ ರೀತಿ ಪ್ರಗತಿ ಸಾಧಿಸಿದೆ ಎಂಬುದರ ನೈಜ ಚಿತ್ರಣವನ್ನು ನೋಡಬಹುದಾಗಿದೆ ಎಂದವರು ಹೇಳಿದರು. ರಾಜಸ್ಥಾನವು ಧೈರ್ಯ ಸಾಹಸದ ಭೂಮಿ ಎಂದವರು ಬಣ್ಣಿಸಿದರು. ಪ್ರಕೃತಿಯ ಜೊತೆ ಸೌಹಾರ್ದತೆಯಿಂದ ಬದುಕುವ ಬಗ್ಗೆ ಅಥವಾ ದೇಶವನ್ನು ರಕ್ಷಿಸುವ ಬಗ್ಗೆ ರಾಜಸ್ಥಾನವು ದಾರಿಯನ್ನು ತೋರಿಸಿಕೊಟ್ಟಿದೆ, ಎಂದೂ ಅವರು ನುಡಿದರು.

|
|

ರಾಜಸ್ಥಾನ ಮುಖ್ಯಮಂತ್ರಿ ಶ್ರೀಮತಿ ವಸುಂಧರ ರಾಜೇ ಅವರನ್ನು ಶ್ಲಾಘಿಸಿದ ಪ್ರಧಾನ ಮಂತ್ರಿಯವರು ಅವರು ರಾಜ್ಯದ ಕೆಲಸದ ಸಂಸ್ಕೃತಿಯನ್ನು ಬದಲಿಸಿದ್ದಾರೆ ಎಂದರು. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ರಾಜಸ್ಥಾನದ ಪ್ರಗತಿಗಾಗಿ ಒಗ್ಗೂಡಿ ಕೆಲಸ ಮಾಡುತ್ತಿವೆ ಎಂದ ಪ್ರಧಾನ ಮಂತ್ರಿಗಳು ಇಂದು ಪ್ರದರ್ಶಿಕೆಯಲ್ಲಿ ನೋಡಿದ ಫಲಾನುಭವಿಗಳ ಸಂತಸ ಇಲ್ಲಿ ಹಾಜರಿದ್ದ ಪ್ರತಿಯೊಬ್ಬರಿಗೂ ಖಚಿತವಾಗಿದೆ ಎಂದರು.

|

ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ ಹೇಗೆ ಕಾರ್ಯೋನ್ಮುಖವಾಗಿದೆ ಎಂಬುದರ ಬಗ್ಗೆ ಪ್ರಧಾನ ಮಂತ್ರಿಯವರು ವಿಸ್ತಾರವಾಗಿ ಮಾತನಾಡಿದರು. ವಿವಿಧ ಬೆಳೆಗಳಿಗೆ ಖಾರೀಫ್ ಅವಧಿಯಲ್ಲಿ ಮಾಡಲಾಗಿರುವ ಕನಿಷ್ಟಬೆಂಬಲ ಬೆಲೆಗಳ ಹೆಚ್ಚಳದ ಬಗ್ಗೆಯೂ ಅವರು ವಿವರಿಸಿದರು.

ರಾಜಸ್ಥಾನ ರಾಜ್ಯದಲ್ಲಿ ಸ್ವಚ್ಚ ಭಾರತ್ ಆಂದೋಲನ , ಜನ ಧನ ಯೋಜನಾ, ಪ್ರಧಾನ ಮಂತ್ರಿ ಆವಾಸ್ ಯೋಜನಾ, ಮುದ್ರಾ ಯೋಜನಾ, ಉಜ್ವಲ ಯೋಜನಾ ಮತ್ತು ಸೌಭಾಗ್ಯ ಯೋಜನಾ ಸಹಿತ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಪ್ರಗತಿಯನ್ನು ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು.

ಮುಂದಿನ ವರ್ಷ ರಾಜಸ್ಥಾನವು 70 ವರ್ಷ ಪೂರ್ಣಗೊಳಿಸುತ್ತಿರುವುದರತ್ತ ಗಮನ ಸೆಳೆದ ಪ್ರಧಾನ ಮಂತ್ರಿಯವರು ಅಭಿವೃದ್ದಿ ಹೊಂದಿದ ರಾಜಸ್ಥಾನ ನಿರ್ಮಾಣದಲ್ಲಿ ಬದ್ದತೆಯನ್ನು ಮತ್ತೆ ದೃಢೀಕರಿಸುವಂತೆ ಕರೆ ನೀಡಿದರಲ್ಲದೆ, ಇದು ನವ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.

|

Click here to read full text speech

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
What Happened After A Project Delayed By 53 Years Came Up For Review Before PM Modi? Exclusive

Media Coverage

What Happened After A Project Delayed By 53 Years Came Up For Review Before PM Modi? Exclusive
NM on the go

Nm on the go

Always be the first to hear from the PM. Get the App Now!
...
Prime Minister condoles the loss of lives due to a road accident in Pithoragarh, Uttarakhand
July 15, 2025

Prime Minister Shri Narendra Modi today condoled the loss of lives due to a road accident in Pithoragarh, Uttarakhand. He announced an ex-gratia of Rs. 2 lakh from PMNRF for the next of kin of each deceased and Rs. 50,000 to the injured.

The PMO India handle in post on X said:

“Saddened by the loss of lives due to a road accident in Pithoragarh, Uttarakhand. Condolences to those who have lost their loved ones in the mishap. May the injured recover soon.

An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi”