QuoteCompetition brings qualitative change, says PM Modi
QuoteE-governance, M-governance, Social Media - these are good means to reach out to the people and for their benefits: PM
QuoteCivil servants must ensure that every decision is taken keeping national interest in mind: PM
QuoteEvery policy must be outcome centric: PM Modi

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು, 11ನೇ ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಿ, ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

|

ಈ ದಿನವನ್ನು ‘ಪುನರ್ ಸಮರ್ಪಣಾ ದಿನ’ ಎಂದು ಬಣ್ಣಿಸಿದ ಪ್ರಧಾನಿಯವರು, ನಾಗರಿಕ ಸೇವಕರಿಗೆ ಅವರ ಶಕ್ತಿ ಮತ್ತು ಸಾಮರ್ಥ್ಯ, ಸವಾಲುಗಳು ಹಾಗೂ ಜವಾಬ್ದಾರಿಯ ಬಗ್ಗೆ ಚೆನ್ನಾಗಿಯೇ ಅರಿವಿದೆ ಎಂದರು.

|

ಎರಡು ದಶಕಗಳ ಹಿಂದಿನ ಸ್ಥಿತಿಗೆ ಹೋಲಿಸಿದರೆ, ಇಂದು ಪರಿಸ್ಥಿತಿ ವಿಭಿನ್ನವಾಗಿದೆ, ಮತ್ತು ಮುಂದಿನ ಐದು ವರ್ಷಗಳಲ್ಲಿ ಅದು ಇದನ್ನೂ ಹೊರಹೊಮ್ಮುತ್ತದೆ. ಈ ಬಗ್ಗೆ ವಿಸ್ತಾರವಾಗಿ ಹೇಳಿದ ಪ್ರಧಾನಿ, ಈ ಹಿಂದೆ ಸರ್ಕಾರವೊಂದೇ ಸರಕು ಮತ್ತು ಸೇವೆಗಳ ಏಕೈಕ ಪೂರೈಕೆದಾರನಾಗಿತ್ತು, ಇದು ಒಬ್ಬರ ನ್ಯೂನತೆಯನ್ನು ಉಪೇಕ್ಷಿಸಲು ಅವಕಾಶ ನೀಡಿತ್ತು ಎಂದರು. ಇಂದು ವಿವಿಧ ಕ್ಷೇತ್ರಗಳಲ್ಲಿ ಪರ್ಯಾಯ ಲಭ್ಯವಿದ್ದು, ಸರ್ಕಾರದ ಅಧಿಕಾರಿಗಳ ಜವಾಬ್ದಾರಿ ಹೆಚ್ಚಳವಾಗಿದೆ ಎಂದರು. ಇದು ಕಾರ್ಯ ಬಾಹುಳ್ಯದಲ್ಲಿ ಹೆಚ್ಚಳವಾಗಿಲ್ಲ, ಬದಲಾಗಿ ಸವಾಲುಗಳ ವಿಚಾರದಲ್ಲಿ ಆಗಿದೆ ಎಂದರು.

|

ಸ್ಪರ್ಧೆಯ ಮಹತ್ವವನ್ನು ಪ್ರತಿಪಾದಿಸಿದ ಪ್ರಧಾನಿ, ಇದು ಗುಣಾತ್ಮಕ ಬದಲಾವಣೆ ತಂದಿದೆ ಎಂದರು. ಶೀಘ್ರವೇ ನಿಯಂತ್ರಕತೆಯಿಂದ ಶಕ್ತಿಗೊಳಿಸುವತ್ತ ಸರ್ಕಾರದ ವರ್ತನೆ ಬದಲಾಗಲಿದೆ, ಈ ಸವಾಲನ್ನು ನಾವು ಎಷ್ಟು ತ್ವರಿತಗೊಳಿಸುತ್ತೇವೋ ಅಷ್ಟು ಅದು ಅವಕಾಶವಾಗಿ ಪರಿವರ್ತನೆ ಆಗುತ್ತದೆ ಎಂದರು. ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರದ ಅನುಪಸ್ಥಿತಿಯನ್ನು ಬೇಕಾದರೂ ಗ್ರಹಿಸಬಹುದು, ಆದರೆ ಕಾರ್ಯಕ್ಷೇತ್ರದಲ್ಲಿ ಅದರ ಅಸ್ತಿತ್ವ ಒಂದು ಹೊರೆಯಾಗಬಾರದು ಎಂದು ಪ್ರಧಾನ ಮಂತ್ರಿ ಹೇಳಿದರು.ಅಂಥ ವ್ಯವಸ್ಥೆಯ ಬಗ್ಗೆ ಯತ್ನಿಸುವಂತೆ ಅವರು ನಾಗರಿಕ ಸೇವಕರಿಗೆ ಕರೆ ನೀಡಿದರು.

|

ನಾಗರಿಕ ಸೇವಾ ದಿನದ ಪ್ರಶಸ್ತಿಗಳ ಅರ್ಜಿಗಳಲ್ಲಿ ಭಾರಿ ಹೆಚ್ಚಳವಾಗಿದೆ, ಕಳೆದ ವರ್ಷ 100ಕ್ಕಿಂತ ಕಡಿಮೆ ಇದ್ದದ್ದು ಈ ವರ್ಷ 500 ಆಗಿದೆ ಎಂದು ಪ್ರಧಾನಮಂತ್ರಿಯವರು, ಈಗ ಗುಣಮಟ್ಟ ಸುಧಾರಣೆಯತ್ತ ಗಮನ ಹರಿದಿದ್ದು, ಔನ್ನತ್ಯ ಸಾಧನೆ ಹವ್ಯಾಸವಾಗಿದೆ ಎಂದರು.

ತಮ್ಮ ಅನುಭವ ಯಾವುದೇ ಕಾರಣಕ್ಕೂ ಹೊರೆಯಾಗದ ರೀತಿಯಲ್ಲಿ ಖಾತ್ರಿ ಪಡಿಸಿಕೊಳ್ಳುವಂತೆ, ಅದು ಕಿರಿಯ ಅಧಿಕಾರಿಗಳಿಗೆ ನಾವಿನ್ಯತೆಯ ಹೂರಣವಾಗುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಧಾನಮಂತ್ರಿ ಮನವಿ ಮಾಡಿದರು.

ಅನಾಮಿಕ ನಾಗರಿಕ ಸೇವೆಯಲ್ಲಿನ ಬಹುದೊಡ್ಡ ಶಕ್ತಿಯಾಗಿದೆ ಎಂದು ಪ್ರಧಾನಿ ಶ್ರೀ. ನರೇಂದ್ರ ಮೋದಿ ಹೇಳಿದರು. ಸಾಮಾಜಿಕ ತಾಣದ ಬಳಕೆ ಈ ಬಲವನ್ನು ಕಡಿಮೆ ಮಾಡುವಂತಾಗಬಾರದು, ಮೊಬೈಲ್ ಆಡಳಿತ ಮತ್ತು ಇ ಆಡಳಿತ ಜನರಿಗೆ ಸರ್ಕಾರದ ಸೌಲಭ್ಯ ಮತ್ತು ಯೋಜನೆ ದೊರಕಲು ಸಂಪರ್ಕ ಸಾಧನವಾಗಬೇಕು ಎಂದರು.

|

ಸಾಧಾರಣೆ, ಸಾಧನೆ ಮತ್ತು ಪರಿವರ್ತನೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಸುಧಾರಣೆಗೆ ರಾಜಕೀಯ ಇಚ್ಛಾಶಕ್ತಿ ಬೇಕು, ಆದರೆ, ಇದರ ಸಾಧನೆಯ ಭಾಗ ರೂಪುಗೊಳ್ಳುವುದೇ ನಾಗರಿಕಸೇವಕರಿಂದ ಹಾಗೂ ಜನರ ಪಾಲ್ಗೊಳ್ಳುವಿಕೆಯಿಂದ ಇದರ ಪರಿವರ್ತನೆ ಸಾಧ್ಯವಾಗುತ್ತದೆ ಎಂದರು.

ನಾಗರಿಕ ಸೇವಕರು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ದೇಶದ ಹಿತವನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಬೇಕು ಮತ್ತು ಅದು ಅವರ ನಿರ್ಧಾರಕ್ಕೆ ಸ್ಪರ್ಶಮಣಿಯಾಗಬೇಕು ಎಂದರು.

|

2022ನೇ ವರ್ಷದಲ್ಲಿ ನಾವು ಸ್ವಾತಂತ್ರ್ಯೋತ್ಸವದ 75ವರ್ಷಾಚರಣೆ ಮಾಡಲಿದ್ದೇವೆ ಎಂದು ಹೇಳಿದ ಪ್ರಧಾನಮಂತ್ರಿಯವರು, ನಾಗರಿಕ ಸೇವಕರು ಸ್ವಾತಂತ್ರ್ಯ ಹೋರಾಟಗಾರರ ಕನಸನ್ನು ನನಸು ಮಾಡಲು ವೇಗವರ್ಧಕ ಏಜೆಂಟರಂತೆ ಕಾರ್ಯ ನಿರ್ವಹಿಸಬೇಕು ಎಂದು ಮನವಿ ಮಾಡಿದರು.

Click here to read full text speech

  • krishangopal sharma Bjp January 12, 2025

    नमो नमो 🙏 जय भाजपा 🙏🌷🌷🌷🌷🌷🌹🌷🌷🌷🌷🌷🌷🌹🌷🌷🌷🌷🌷🌷🌷🌹🌷🌷🌷🌷🌷🌷🌹🌷🌷🌷🌷🌷🌹🌷🌷🌷🌷🌹🌷🌷🌷🌹🌷🌷🌹🌷🌷🌹🌷🌹🌷🌷🌹🌷🌹🌹🌷🌹🌷🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp January 12, 2025

    नमो नमो 🙏 जय भाजपा 🙏🌷🌷🌷🌷🌷🌹🌷🌷🌷🌷🌷🌷🌹🌷🌷🌷🌷🌷🌷🌷🌹🌷🌷🌷🌷🌷🌷🌹🌷🌷🌷🌷🌷🌹🌷🌷🌷🌷🌹🌷🌷🌷🌹🌷🌷🌹🌷🌷🌹🌷🌹🌷🌷🌹🌷🌹🌹🌷🌹🌷🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp January 12, 2025

    नमो नमो 🙏 जय भाजपा 🙏🌷🌷🌷🌷🌷🌹🌷🌷🌷🌷🌷🌷🌹🌷🌷🌷🌷🌷🌷🌷🌹🌷🌷🌷🌷🌷🌷🌹🌷🌷🌷🌷🌷🌹🌷🌷🌷🌷🌹🌷🌷🌷🌹🌷🌷🌹🌷🌷🌹🌷🌹🌷🌷🌹🌷🌹🌹🌷🌹🌷🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • Reena chaurasia August 28, 2024

    जय हो
  • Babla sengupta December 23, 2023

    Babla sengupta
  • बीरबल भाटी बीरबल भाटी August 16, 2022

    BIRBAL BHATI 🌹 M:+919784530857🙏🙏🙏🙏👏👏👏👏👈👈👈
  • Laxman singh Rana July 11, 2022

    नमो नमो 🇮🇳🌷
  • Laxman singh Rana July 11, 2022

    नमो नमो 🇮🇳
  • Manda krishna BJP Telangana Mahabubabad District mahabubabad June 23, 2022

    🇮🇳🌹🇮🇳🌹💐👌
  • Manda krishna BJP Telangana Mahabubabad District mahabubabad June 23, 2022

    💐🇮🇳💐🇮🇳🌹
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
'Zero tolerance, zero double standards': PM Modi says India and Brazil aligned on global fight against terrorism

Media Coverage

'Zero tolerance, zero double standards': PM Modi says India and Brazil aligned on global fight against terrorism
NM on the go

Nm on the go

Always be the first to hear from the PM. Get the App Now!
...
Prime Minister condoles loss of lives due to collapse of a bridge in Vadodara district, Gujarat
July 09, 2025
QuoteAnnounces ex-gratia from PMNRF

The Prime Minister, Shri Narendra Modi has expressed deep grief over the loss of lives due to the collapse of a bridge in Vadodara district, Gujarat. Shri Modi also wished speedy recovery for those injured in the accident.

The Prime Minister announced an ex-gratia from PMNRF of Rs. 2 lakh to the next of kin of each deceased and Rs. 50,000 for those injured.

The Prime Minister’s Office posted on X;

“The loss of lives due to the collapse of a bridge in Vadodara district, Gujarat, is deeply saddening. Condolences to those who have lost their loved ones. May the injured recover soon.

An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi"