ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ದೇಶಕ್ಕೆ ಸಮರ್ಪಣೆ ಅಂಗವಾಗಿ ಜ್ಯೋತಿಯನ್ನು ಬೆಳಗಿಸಿದರು. ಅವರು ಸ್ಮಾರಕದ ಹಲವು ವಿಭಾಗಗಳಿಗೆ ಭೇಟಿ ನೀಡಿದ್ದರು.

ಇದಕ್ಕೂ ಮುನ್ನ ನಿವೃತ್ತ ಯೋಧರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಲಕ್ಷಾಂತರ ಯೋಧರ ಬದ್ಧತೆ ಮತ್ತು ಶೌರ್ಯದ ಪರಿಣಾಮದಿಂದಾಗಿ ಭಾರತೀಯ ಸೇನೆ ಇಂದು ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠವಾದುದೆಂದು ಪರಿಗಣಿಸಲ್ಪಟ್ಟಿದೆ ಎಂದರು.

 

ವಿರೋಧಿಗಳ ವಿರುದ್ಧ ಹೋರಾಡುವುದಾಗಿರಬಹುದು, ಇಲ್ಲವೇ ನೈಸರ್ಗಿಕ ಪ್ರಕೋಪಗಳ ವಿರುದ್ಧದ ಆಗಿರಬಹುದು ನಮ್ಮರಕ್ಷಣೆಗಾಗಿ ಯೋಧರು ಸದಾ ಮೊದಲ ಸಾಲಿನಲ್ಲಿಯೇ ನಿಂತಿರುತ್ತಾರೆ ಎಂದು ಪ್ರಧಾನಮಂತ್ರಿ ಹೇಳಿದರು.

ಇತ್ತೀಚಿನ ಪುಲ್ವಾಮಾ ಉಗ್ರದ ದಾಳಿಯಲ್ಲಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರನ್ನು ಸ್ಮರಿಸಿದ ಪ್ರಧಾನಮಂತ್ರಿ, ಭಾರತವನ್ನು ರಕ್ಷಿಸಲು ತಮ್ಮ ಜೀವತೆತ್ತ ಎಲ್ಲ ಹುತಾತ್ಮರಿಗೂ ಶ್ರದ್ದಾಂಜಲಿ ಸಲ್ಲಿಸಿದರು. ಇಂದು ನವಭಾರತ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆ ಮತ್ತು ಇದಕ್ಕೆ ಭಾರತದ ಸಶಸ್ತ್ರ ಪಡೆಗಳು ಕೈಗೊಂಡ ದೊಡ್ಡ ಕ್ರಮಗಳೇ ಕಾರಣ ಎಂದರು. ರಾಷ್ಟ್ರೀಯ ಯುದ್ದ ಸ್ಮಾರಕ ಅಥವಾ ರಾಷ್ಟ್ರೀಯ ಸಮರ್ ಸ್ಮಾರಕವನ್ನು ರಾಷ್ಟ್ರಕ್ಕೆ ಸಮರ್ಪಿಸುತ್ತಿರುವುದಕ್ಕೆ ಪ್ರಧಾನಮಂತ್ರಿ ಹರ್ಷ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಯೋಧರಿಗೆ ಮತ್ತು ನಿವೃತ್ತ ಯೋಧರಿಗೆ ಒಂದು ಶ್ರೇಣಿ-ಒಂದು ಪಿಂಚಣಿಯನ್ನು ಜಾರಿಗೊಳಿಸುವ ಮೂಲಕ ತಾನು ತೊಟ್ಟಿದ್ದ ಪಣವನ್ನು ಈಡೇರಿಸಿದೆ ಎಂದು ಪ್ರಧಾನಮಂತ್ರಿ ನೆನಪು ಮಾಡಿಕೊಂಡರು. ಓಆರ್ ಓಪಿ ಜಾರಿಯಿಂದಾಗಿ 2014ಕ್ಕೆ ಹೋಲಿಸಿದರೆ ಯೋಧರ ವೇತನ ಶೇ.55ರವರೆಗೆ ಮತ್ತು ನಿವೃತ್ತ ಯೋಧರ ಪಿಂಚಣಿ ಶೇ.40ರವರೆಗೆ ಹೆಚ್ಚಾಗಿದೆ ಎಂದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಬಹುದಿನಗಳಿಂದ ಇತ್ತು ಎಂದು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ಅವರು, ಅಂತಹ ಮೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪನೆಯಾಗಲಿವೆ ಎಂದರು.

ಸಶಸ್ತ್ರ ಪಡೆಗಳ ಕುರಿತು ಸರ್ಕಾರ ಹೊಂದಿರುವ ಧೋರಣೆಗಳ ಬಗ್ಗೆ ಸ್ಥೂಲವಾಗಿ ವಿವರಿಸಿದ ಪ್ರಧಾನಮಂತ್ರಿ ಅವರು, ಸೇನಾ ದಿನ, ನೌಕಾ ದಿನ ಮತ್ತು ವಾಯುಪಡೆ ದಿನಗಳಂದು ಯೋಧರ ಆವಿಷ್ಕಾರಗಳನ್ನು ಉತ್ತೇಜಿಸಲಾಗುತ್ತಿದೆ ಎಂದರು. ಶೌರ್ಯ ಪ್ರಶಸ್ತಿಗಳ ಪೋರ್ಟಲ್ ಅನ್ನು 2017ರ ಆ.15ರಂದು ಉದ್ಘಾಟಿಸಲಾಯಿತು ಎಂದು ಹೇಳಿದರು. ಮಹಿಳೆಯರಿಗೆ ಯುದ್ಧ ಪೈಲಟ್ ಗಳಾಗಲು ಈಗ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಲ್ಪ ಸೇವಾ ಆಯೋಗಗಳಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಕಾಯಂ ಆಯೋಗಗಳಲ್ಲಿ ಪುರುಷ ಅಧಿಕಾರಿಗಳಿಗೆ ಸರಿ ಸಮನಾಗಿ ಸೇವೆ ಸಲ್ಲಿಸುವ ಅವಕಾಶ ಒದಗಿಸಲಾಗುತ್ತಿದೆ ಎಂದರು.

ಇಡೀ ರಕ್ಷಣಾ ಖರೀದಿ ವ್ಯವಸ್ಥೆ ಮತ್ತು ಪ್ರಕ್ರಿಯೆಯಲ್ಲಿ ಬದಲಾವಣೆಯನ್ನು ತರಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಪಾರದರ್ಶಕತೆ ಮತ್ತು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು ತಮ್ಮ ಸರ್ಕಾರದ ಹೆಗ್ಗುರುತುಗಳಾಗಿವೆ ಎಂದರು. ಮೇಕ್ ಇನ್ ಇಂಡಿಯಾ ಅಡಿಯಲ್ಲಿ ರಕ್ಷಣಾ ಉತ್ಪನ್ನಗಳ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ಮತ್ತು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ವಿಶ್ವಸಂಸ್ಥೆಯ 70 ಪ್ರಮುಖ ಶಾಂತಿಪಾಲನಾ ಕಾರ್ಯಾಚರಣೆಗಳ ಪೈಕಿ 50ರಲ್ಲಿ ಭಾರತೀಯ ಸೇನೆ ಭಾಗವಹಿಸಿದೆ ಎಂದ ಪ್ರಧಾನಿ ಅವರು, ಸುಮಾರು 2 ಲಕ್ಷ ಯೋಧರು ಈ ಕಾರ್ಯಾಚರಣೆಗಳ ಭಾಗವಾಗಿದ್ದರು ಎಂದರು. ಭಾರತೀಯ ನೌಕಾಪಡೆ 2016ರಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ನೌಕಾಪಡೆ ಬಲ ಅವಲೋಕನದಲ್ಲಿ 50 ರಾಷ್ಟ್ರಗಳ ನೌಕಾಪಡೆಗಳು ಭಾಗವಹಿಸಿದ್ದರು. ನಮ್ಮ ಸಶಸ್ತ್ರ ಪಡೆಯಗಳು ಪ್ರತಿವರ್ಷ ಸ್ನೇಹ ಸಂಬಂಧ ಹೊಂದಿರುವ ರಾಷ್ಟ್ರಗಳ ಜೊತೆಗೂಡಿ ಸರಾಸರಿ 10 ದೊಡ್ಡ ಜಂಟಿ ಸಮರಾಭ್ಯಾಸಗಳನ್ನು ನಡೆಸುತ್ತಿವೆ ಎಂದರು.

ಹಿಂದೂ ಮಹಾಸಾಗರದಲ್ಲಿ ಪೈರಸಿ ದೊಡ್ಡ ಪ್ರಮಾಣದಲ್ಲಿ ತಗ್ಗಿದೆ, ಇದಕ್ಕೆ ಬಹುತೇಕ ಭಾರತದ ಮಿಲಿಟರಿ ಶಕ್ತಿ ಮತ್ತು ನಮ್ಮ ಅಂತಾರಾಷ್ಟ್ರೀಯ ಸಂಬಂಧಗಳು ಕಾರಣವಾಗಿವೆ ಎಂದರು. ಭಾರತೀಯ ಸೇನೆಗೆ 1.86 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್ ಗಳು ಬೇಕೆನ್ನುವ ಬೇಡಿಕೆ ದೀರ್ಘ ಕಾಲದಿಂದ ಇತ್ತು ಎಂದ ಪ್ರಧಾನಿ ಅವರು, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕೇಂದ್ರ ಸರ್ಕಾರ 2.30 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಖರೀದಿಸಿದೆ ಎಂದರು. ಆಧುನಿಕ ವಿಮಾನಗಳು, ಹೆಲಿಕಾಪ್ಟರ್ ಗಳು, ಕ್ಷಿಪಣಿಗಳು, ಜಲಾಂತರ್ಗಾಮಿಗಳು, ಆಧುನಿಕ ನೌಕೆ ಮತ್ತು ಆಧುನಿಕ ಶಸ್ತ್ರಾಸ್ತ್ರಗಳ ಮೂಲಕ ಭಾರತೀಯ ಸೇನೆಯನ್ನು ಸಜ್ಜುಗೊಳಿಸಲಾಗುತ್ತಿದೆ ಎಂದರು. ದೀರ್ಘಕಾಲದಿಂದ ಬಾಕಿ ಇದ್ದ ನಿರ್ಣಯ ಕೈಗೊಳ್ಳಬೇಕಾದ ವಿಚಾರಗಳಲ್ಲಿ ದೇಶದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

 

 

 

 

ರಾಷ್ಟ್ರೀಯ ಯುದ್ಧ ಸ್ಮಾರಕವಲ್ಲದೆ, ರಾಷ್ಟ್ರೀಯ ಪೊಲೀಸ್ ಸ್ಮಾರಕವನ್ನೂ ಸಹ ಸ್ಥಾಪಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಕೇಂದ್ರ ಸರ್ಕಾರ ಸರ್ದಾರ್ ಪಟೇಲ್, ಬಾಬಾಸಾಹೇಬ ಅಂಬೇಡ್ಕರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತಿತರ ಶ್ರೇಷ್ಠ ರಾಷ್ಟ್ರ ನಾಯಕರನ್ನು ಕೊಡುಗೆ ಗುರುತಿಸಿ ಮನ್ನಣೆ ನೀಡಿದೆ ಎಂದರು . ಕೇಂದ್ರ ಸರ್ಕಾರ ರಾಷ್ಟ್ರೀಯ ಹಿತಾಸಕ್ತಿಯನ್ನೇ ಪರಮ ಗುರಿಯನ್ನಾಗಿಟ್ಟುಕೊಂಡು ಅಗತ್ಯ ನಿರ್ಧಾರಗಳನ್ನು ಕೈಗೊಳ್ಳುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಹೇಳಿದರು.

 

 

 

 

 

 

 

 

 

 

 

 

 

 

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How MSMEs in Tier 2 & Tier 3 Cities Are Fuelling India’s Growth

Media Coverage

How MSMEs in Tier 2 & Tier 3 Cities Are Fuelling India’s Growth
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಮಾರ್ಚ್ 2025
March 10, 2025

Appreciation for PM Modi’s Efforts in Strengthening Global Ties