ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಘನತೆವೆತ್ತ ಶ್ರೀ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. 

|

ಈ ವರ್ಷದ ಮಾರ್ಚ್‌ನಲ್ಲಿ ಪ್ರಧಾನ ಮಂತ್ರಿ ಕಿಶಿಡಾ ಭಾರತಕ್ಕೆ ಭೇಟಿ ನೀಡಿದ ನಂತರ 2023 ರಲ್ಲಿ ಇದು ಉಭಯ ನಾಯಕರ ಎರಡನೇ ಸಭೆಯಾಗಿದೆ.

2023ರ ಮಾರ್ಚ್‌ನಲ್ಲಿ ಪ್ರಧಾನಿ ಮೋದಿಯವರು ಉಡುಗೊರೆಯಾಗಿ ನೀಡಿದ ಬೋಧಿ ಸಸ್ಯವನ್ನು ಹಿರೋಷಿಮಾದಲ್ಲಿ ನೆಟ್ಟಿದ್ದಕ್ಕಾಗಿ ಪ್ರಧಾನಮಂತ್ರಿಯವರು ಕಿಶಿಡಾ ಅವರಿಗೆ ಧನ್ಯವಾದ ತಿಳಿಸಿದರು.

ಭಾರತೀಯ ಸಂಸತ್ತು ಪ್ರತಿ ವರ್ಷ ಹಿರೋಷಿಮಾ ದಿನವನ್ನು ಸ್ಮರಿಸುವುದನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಈ ಸಂದರ್ಭದಲ್ಲಿ ಜಪಾನಿನ ರಾಜತಾಂತ್ರಿಕರು ಯಾವಾಗಲೂ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

ಉಭಯ ನಾಯಕರು ತಮ್ಮ ಜಿ-20 ಮತ್ತು ಜಿ-7 ಅಧ್ಯಕ್ಷತೆಗಳ ಪ್ರಯತ್ನಗಳನ್ನು ಸಂಯೋಜಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳ (ಗ್ಲೋಬಲ್‌ ಸೌತ್)‌ ಬಗೆಗಿನ ಕಾಳಜಿ ಮತ್ತು ಆದ್ಯತೆಗಳನ್ನು ಎತ್ತಿ ಹಿಡಿಯಬೇಕಾದ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.

 

|

ಸಮಕಾಲೀನ ಪ್ರಾದೇಶಿಕ ಬೆಳವಣಿಗೆಗಳ ಕುರಿತು ಉಭಯ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಅವರು ಇಂಡೋ-ಪೆಸಿಫಿಕ್‌ನಲ್ಲಿ ಗಾಢವಾದ ಸಹಕಾರದ ಬಗ್ಗೆ ಚರ್ಚಿಸಿದರು.

ದ್ವಿಪಕ್ಷೀಯ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ನಾಯಕರು ಒಪ್ಪಿಕೊಂಡರು. ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಪರಿಸರಕ್ಕಾಗಿ ಜೀವನಶೈಲಿ (ಲೈಫ್), ಹಸಿರು ಹೈಡ್ರೋಜನ್, ಉನ್ನತ ತಂತ್ರಜ್ಞಾನ, ಸೆಮಿಕಂಡಕ್ಟರ್‌ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಕ್ಷೇತ್ರಗಳ ಮೇಲೆ ಚರ್ಚೆಗಳು ಕೇಂದ್ರೀಕೃತವಾದವು. ಭಯೋತ್ಪಾದನೆ ವಿರುದ್ಧದ ಹೋರಾಟ ಮತ್ತು ವಿಶ್ವಸಂಸ್ಥೆಯ ಸುಧಾರಣೆ ಬಗ್ಗೆಯೂ ಚರ್ಚಿಸಲಾಯಿತು.

 

  • Raj kumar Das VPcbv May 24, 2023

    भारत माता की जय🙏🚩
  • Kumar Pawas May 23, 2023

    🙏
  • Kumar Pawas May 21, 2023

    🙏🙏
  • Ramesh Hirpara May 21, 2023

    વંદેમાતરમ્
  • Bp Tripathi May 21, 2023

    यह एक सराहनीय कदम है देश के प्रधानमंत्री ने संपूर्ण भारत के जनता को गौरवान्वित किया बहुत-बहुत शुभकामनाएं
  • # राष्ट्रवादी शंखनाद Anurag Dixit May 21, 2023

    जय हो
  • Mohini Sharma May 21, 2023

    modi ji ki kirpa h
  • Mohini Sharma May 21, 2023

    BJP jindabad
  • Mr. PRINCE CHARMING May 20, 2023

    WELL with my all universal good wishes. Thanks.
  • T.ravichandra Naidu May 20, 2023

    భారత చరిత్రలో ఎన్నడూ లేని విధంగా ప్రపంచదేశాలు భారతదేశ పట్ల గౌరవ మర్యాదలు ఇస్తున్నాయంటే కారణం మన అభినవ శివాజీ శ్రీశ్రీశ్రీ దామోదర్ దాస్ నరేంద్ర మోడీ జీ
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Over 28 lakh companies registered in India: Govt data

Media Coverage

Over 28 lakh companies registered in India: Govt data
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಫೆಬ್ರವರಿ 2025
February 19, 2025

Appreciation for PM Modi's Efforts in Strengthening Economic Ties with Qatar and Beyond