PM Modi meets and interacts with over 360 Officer Trainees of the 92nd Foundation Course at the LBSNAA in Mussoorie
PM Modi discusses a variety of subjects such as administration, governance, technology and policy-making with Officer Trainees

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಉತ್ತರಾಖಂಡದ ಮಸ್ಸೂರಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡಮಿ (ಎಲ್.ಬಿ.ಎಸ್.ಎನ್.ಎ.ಎ.)ಯಲ್ಲಿ 92ನೇ ಫೌಂಡೇಷನ್ ಕೋರ್ಸ್ ನಲ್ಲಿರುವ 360 ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಅವರು ಎಲ್.ಬಿ.ಎಸ್.ಎನ್.ಎ.ಎ.ದಲ್ಲಿ ಎರಡು ದಿನಗಳ ಭೇಟಿಯಲ್ಲಿದ್ದಾರೆ.

ಅವರು ನಾಲ್ಕು ತಂಡಗಳಲ್ಲಿ ತರಬೇತಿ ನಿರತ ಅಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ ಸಂವಾದ ನಡೆಸಿದರು. ನಾಲ್ಕು ಗಂಟೆಗಳ ಕಾಲ ನಡೆದ ವಿಸ್ತೃತ ಶ್ರೇಣಿಯ ಸಂವಾದದ ವೇಳೆ ಪ್ರಧಾನಮಂತ್ರಿಯವರು, ಯಾವುದೇ ಭೀತಿ ಇಲ್ಲದೆ ತಮ್ಮ ಕಲ್ಪನೆಗಳು ಮತ್ತು ಚಿಂತನೆಗಳನ್ನು ತಮ್ಮೊಂದಿಗೆ ನಿಸ್ಸಂಕೋಚವಾಗಿ ಹಂಚಿಕೊಳ್ಳುವಂತೆ ತರಬೇತಿ ನಿರತ ಅಧಿಕಾರಿಗಳಿಗೆ ತಿಳಿಸಿದರು. ಆಡಳಿತಾತ್ಮಕ, ಆಡಳಿತ, ತಂತ್ರಜ್ಞಾನ ಮತ್ತು ನೀತಿ ನಿರೂಪಣೆಯಂಥ ವಿಷಯಗಳು ಈ ಚರ್ಚೆಯಲ್ಲಿ ಬಂದವು. ಆಡಳಿತದ ವಿಚಾರಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಸಂಶೋಧನೆ ನಡೆಸುವಂತೆ ತರಬೇತಿ ನಿರತ ಅಧಿಕಾರಿಗಳಿಗೆ ಪ್ರಧಾನಿ ಉತ್ತೇಜಿಸಿದರು,ಇದರಿಂದ ಅವರು ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದರು. ರಾಷ್ಟ್ರೀಯ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವ ಅಗತ್ಯವನ್ನೂ ಅವರು ಪ್ರತಿಪಾದಿಸಿದರು. ಈ ಚರ್ಚೆಯು ದೊಡ್ಡ ಪ್ರಮಾಣದ ಅನುಭವವನ್ನು ಹಂಚಿಕೊಂಡಿದ್ದಕ್ಕೆ ಸಾಕ್ಷಿಯಾಯಿತು.

ಪ್ರಧಾನಿಯವರು ಅಕಾಡಮಿಯ ಬೋಧಕ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು, ಅವರು ಅಲ್ಲಿ ಭಾರತೀಯ ನಾಗರಿಕ ಸೇವಾ ಅಧಿಕಾರಿಗಳಿಗೆ ನೀಡಲಾಗುತ್ತಿರುವ ತರಬೇತಿಯ ಸ್ಥೂಲ ಪರಿಚಯ ನೀಡಿದರು.

ಪ್ರಧಾನಮಂತ್ರಿಯವರು ಎಲ್.ಬಿ.ಎಸ್.ಎನ್.ಎ.ಎ.ಯಲ್ಲಿ ಅತ್ಯಾಧುನಿಕ ಗಾಂಧಿ ಸ್ಮೃತಿ ಗ್ರಂಥಾಲಯಕ್ಕೂ ಭೇಟಿ ನೀಡಿದರು. ತರಬೇತಿ ನಿರತ ಅಧಿಕಾರಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಕೆಲ ಕಾಲ ಪಾಲ್ಗೊಂಡರು.

ಇದಕ್ಕೂ ಮುನ್ನ ಅಕಾಡಮಿಗೆ ಆಗಮಿಸಿದ ಪ್ರಧಾನಮಂತ್ರಿಯವರು ಸರ್ದಾರ್ ವಲ್ಲಭಬಾಯಿ ಪಟೇಲ್ ಮತ್ತು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಪುತ್ಥಳಿಗಳಿಗೆ ಪುಷ್ಪ ನಮನ ಸಲ್ಲಿಸಿದರು.

 

ಸಂಪುಟ ಕಾರ್ಯದರ್ಶಿ ಶ್ರೀ ಪಿ.ಕೆ. ಸಿನ್ಹಾ ಮತ್ತು ಎಲ್.ಬಿ.ಎಸ್.ಎನ್.ಎ.ಎ. ನಿರ್ದೇಶಕಿ ಶ್ರೀಮತಿ ಉಪಮಾ ಚೌಧರಿ ಅವರು ಸಂವಾದದ ವೇಳೆ ಹಾಜರಿದ್ದರು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'India Delivers': UN Climate Chief Simon Stiell Hails India As A 'Solar Superpower'

Media Coverage

'India Delivers': UN Climate Chief Simon Stiell Hails India As A 'Solar Superpower'
NM on the go

Nm on the go

Always be the first to hear from the PM. Get the App Now!
...
PM Modi condoles loss of lives due to stampede at New Delhi Railway Station
February 16, 2025

The Prime Minister, Shri Narendra Modi has condoled the loss of lives due to stampede at New Delhi Railway Station. Shri Modi also wished a speedy recovery for the injured.

In a X post, the Prime Minister said;

“Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.”