ಅಧ್ಯಕ್ಷ ಇಬ್ರಾಹಿಂ ಮೊಹಮದ್ ಸೊಲಿಹ್ ಮತ್ತು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಆಹ್ವಾನದ ಮೇರೆಗೆ ನಾನು ಜೂನ್ 8 ಮತ್ತು 9 ರಂದು ಮಾಲ್ಡೀವ್ಸ್ ಮತ್ತು ಶ್ರೀಲಂಕಾ ದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಪುನರಾಯ್ಕೆಯಾದ ನಂತರ ಇದು ನನ್ನ ಮೊದಲ ವಿದೇಶಿ ಭೇಟಿಯಾಗಿದೆ.

ಕಳೆದ ವರ್ಷದ ಡಿಸೆಂಬರ್ ನಲ್ಲಿ ಅಧ್ಯಕ್ಷ ಸೊಲಿಹ್ ಅವರನ್ನು ನಾವು ಬರಮಾಡಿಕೊಂಡಿದ್ದೆವು. 2018ರ ನವೆಂಬರ್ ನಲ್ಲಿ ಅಧ್ಯಕ್ಷ ಸೊಲಿಹ್ ಅವರ ಉದ್ಘಾಟನಾ ಸಮಾರಂಭದಲ್ಲಿ ಹಾಜರಾಗುವ ಅವಕಾಶವೂ ನನಗೆ ದೊರೆತಿತ್ತು. ನನ್ನ ಮಾಲ್ಡೀವ್ಸ್ ಭೇಟಿಯು ಕಡಲತೀರದ ನೆರೆಯವರಾದ ಮತ್ತು ದೀರ್ಘಕಾಲೀನ ಸ್ನೇಹಿತರಾದ ನಮ್ಮ ಸಂಬಂಧಗಳ ಪ್ರತಿಬಿಂಬವಾಗಿದೆ.

ಐತಿಹಾಸಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಗಾಢ ಸಂಬಂಧಗಳನ್ನು ಹಂಚಿಕೊಂಡಿರುವ ಮಾಲ್ಡೀವ್ಸ್ ನ್ನು ನಾವು ಮೌಲ್ಯಯುತವಾದ ಪಾಲುದಾರ ಎಂದು ಪರಿಗಣಿಸುತ್ತೇವೆ. ಇತ್ತೀಚಿನ ದಿನಗಳಲ್ಲಿ ಮಾಲ್ಡೀವ್ಸ್ ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಹೆಚ್ಚು ಬಲವಾಗಿವೆ. ನನ್ನ ಈ ಭೇಟಿಯು ನಮ್ಮ ಬಹುಮುಖಿ ಪಾಲುದಾರಿಕೆಯನ್ನು ಮತ್ತಷ್ಟು ಗಾಢವಾಗಿಸುವ ವಿಶ್ವಾಸವಿದೆ.

ಶ್ರೀಲಂಕಾದಲ್ಲಿ ಏಪ್ರಿಲ್ 21, 2019 ರ ಈಸ್ಟರ್ ನಂದು ನಡೆದ ಭಯಾನಕ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಶ್ರೀಲಂಕಾದ ಜನರಿಗೆ ನಮ್ಮ ಬೆಂಬಲವನ್ನು ವ್ಯಕ್ತಪಡಿಸುವುದು ನನ್ನ ಶ್ರೀಲಂಕಾ ಭೇಟಿಯ ಉದ್ದೇಶವಾಗಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತವು ಶ್ರೀಲಂಕಾದೊಂದಿಗೆ ಇರುತ್ತದೆ.

ಕಳೆದ ಕೆಲವು ವರ್ಷಗಳಲ್ಲಿ ಶ್ರೀಲಂಕಾದೊಂದಿಗಿನ ನಮ್ಮ ದ್ವಿಪಕ್ಷೀಯ ಸಂಬಂಧಗಳು ಗಣನೀಯವಾದ ವೇಗವನ್ನು ಪಡೆದುಕೊಂಡಿವೆ. ನೂತನ ಸರ್ಕಾರದ ಪದಗ್ರಹಣ ಸಮಾರಂಭಕ್ಕೆ ಇತ್ತೀಚೆಗೆ ಭಾರತಕ್ಕೆ ಆಗಮಿಸಿದ್ದ ಅಧ್ಯಕ್ಷ ಸಿರಿಸೇನಾ ಅವರನ್ನು ಭೇಟಿಯಾಗುವ ಸಂತೋಷ ನನ್ನದಾಗಿತ್ತು. ನನ್ನ ಭೇಟಿಯ ವೇಳೆ ಶ್ರೀಲಂಕಾ ನಾಯಕರನ್ನು ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ.

ನಮ್ಮ ‘ನೆರೆಯವರು ಮೊದಲು’ ನೀತಿಗನುಗುಣವಾಗಿ ಮತ್ತು ಈ ಪ್ರದೇಶದ ಭದ್ರತೆ ಹಾಗೂ ಪ್ರಗತಿಗಾಗಿ ನಮ್ಮ ಕಡಲತೀರದ ನೆರೆಯವರಾದ ಮಾಲ್ಡೀವ್ಸ್ ಮತ್ತು ಶ್ರೀಲಂಕಾ ದೇಶಗಳಿಗೆ ನನ್ನ ಭೇಟಿಯು ನಮ್ಮ ನಿಕಟ ಹಾಗೂ ಸೌಹಾರ್ದ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ವಿಶ್ವಾಸವಿದೆ

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'India Delivers': UN Climate Chief Simon Stiell Hails India As A 'Solar Superpower'

Media Coverage

'India Delivers': UN Climate Chief Simon Stiell Hails India As A 'Solar Superpower'
NM on the go

Nm on the go

Always be the first to hear from the PM. Get the App Now!
...
PM Modi condoles loss of lives due to stampede at New Delhi Railway Station
February 16, 2025

The Prime Minister, Shri Narendra Modi has condoled the loss of lives due to stampede at New Delhi Railway Station. Shri Modi also wished a speedy recovery for the injured.

In a X post, the Prime Minister said;

“Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.”