ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 10,2018 ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶ್ವ ಜೈವಿಕ ಇಂಧನ ದಿನ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ರೈತರು, ವಿಜ್ಞಾನಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು, ಸರಕಾರಿ ಅಧಿಕಾರಿಗಳು ಮತ್ತು ಶಾಸಕರನ್ನು ಒಳಗೊಂಡ ವೈವಿಧ್ಯಮಯ ಸಭಾಸದರನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಜೈವಿಕ ಇಂಧನ ಕಚ್ಚಾ ತೈಲ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲಿದೆ. ಅವುಗಳಿಂದ ಸ್ವಚ್ಚ ಪರಿಸರ ನಿರ್ಮಾಣವಾಗಲಿದೆ ಮತ್ತು ರೈತರಿಗೆ ಹೆಚ್ಚುವರಿ ಆದಾಯದ ಜೊತೆಗೆ ಗ್ರಾಮೀಣ ಭಾಗದಲ್ಲಿ ಉದ್ಯೋಗಾವಕಾಶಗಳು ನಿರ್ಮಾಣವಾಗಲಿವೆ. ಆದುದರಿಂದ ಜೈವಿಕ ಇಂಧನಗಳು ರೈತರ ಆದಾಯ ಹೆಚ್ಚಳ ಮತ್ತು ಸ್ವಚ್ಚ ಭಾರತ್ ಸಹಿತ ವಿವಿಧ ಸರಕಾರೀ ಉಪಕ್ರಮಗಳಲ್ಲಿ ಸಮ್ಮಿಳಿತಗೊಂಡಿವೆ.

ಕೇಂದ್ರ ಸರಕಾರದ ಪ್ರಯತ್ನಗಳ ಫಲಿತಾಂಶವಾಗಿ ಪೆಟ್ರೋಲಿನಲ್ಲಿ ಎಥೆನಾಲ್ ಮಿಶ್ರಣ 2013-14ರ ಎಥೆನಾಲ್ ಪೂರೈಕೆ ವರ್ಷದಲ್ಲಿ 38 ಕೋಟಿ ಲೀಟರುಗಳಷ್ಟಿದ್ದದ್ದು, 2017-18 ರ ಎಥೆನಾಲ್ ಪೂರೈಕೆ ವರ್ಷದಲ್ಲಿ ಅಂದಾಜು 141 ಕೋಟಿ ಲೀಟರುಗಳಷ್ಟಾಗುವ ನಿರೀಕ್ಷೆ ಇದೆ. ಜೈವಿಕ ಇಂಧನಕ್ಕೆ ಸಂಬಂಧಿಸಿ 2018 ರ ಜೂನ್ ತಿಂಗಳಲ್ಲಿ ರಾಷ್ಟ್ರೀಯ ನೀತಿಗೆ ಸರಕಾರ ಅನುಮೋದನೆ ನೀಡಿದೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Finepoint | How Modi Got Inside Pakistan's Head And Scripted Its Public Humiliation

Media Coverage

Finepoint | How Modi Got Inside Pakistan's Head And Scripted Its Public Humiliation
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಮೇ 2025
May 08, 2025

PM Modi’s Vision and Decisive Action Fuel India’s Strength and Citizens’ Confidence