ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಇತ್ತೀಚೆಗೆ ಭಾರತ ಸರಕಾರದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 170 ಮಂದಿ ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.
![](https://cdn.narendramodi.in/cmsuploads/0.19069400_1530712794_ias1.jpg)
ಅವರ ತರಬೇತಿ ಕ್ಷೇತ್ರದ ಬಗ್ಗೆ ಮಾಹಿತಿ , ಅನುಭವ ಹಂಚಿಕೊಳ್ಳುವಂತೆ ಪ್ರಧಾನ ಮಂತ್ರಿಯವರು ಅವರಿಗೆ ಪ್ರೋತ್ಸಾಹ ನೀಡಿದರು. ಉತ್ತಮ ಆಡಳಿತ, ಜನ ಭಾಗೀದಾರಿ, ಮಾಹಿತಿ ಪ್ರಸಾರ, ಸಂಪನ್ಮೂಲಗಳ ಅತ್ಯುತ್ತಮ ಬಳಕೆ ಮತ್ತು ಸರಕಾರದಲ್ಲಿ ಜನರ ವಿಶ್ವಾಸ ಕುರಿತಂತೆ ಕೆಲವು ಸಂಗತಿಗಳ ಬಗ್ಗೆ ಪ್ರಧಾನಿಯವರು ಚರ್ಚಿಸಿದರು.
![](https://cdn.narendramodi.in/cmsuploads/0.34830500_1530712809_ias2.jpg)
ಗ್ರಾಮ ಸ್ವರಾಜ್ ಅಭಿಯಾನ ಮತ್ತು ಆಯುಷ್ಮಾನ ಭಾರತವೂ ಸೇರಿದಂತೆ ಸರಕಾರದ ಇತ್ತೀಚಿನ ಉಪಕ್ರಮಗಳ ಬಗ್ಗೆಯೂ ಚರ್ಚೆಯಲ್ಲಿ ಪ್ರಸ್ತಾಪಿಸಲಾಯಿತು.
![](https://cdn.narendramodi.in/cmsuploads/0.22269400_1530712826_ias3.jpg)
![](https://cdn.narendramodi.in/cmsuploads/0.01452400_1530712864_ias4.jpg)
ಪ್ರಧಾನ ಮಂತ್ರಿಗಳ ಕಚೇರಿಯ ಸಹಾಯಕ ಸಚಿವರಾದ ಡಾ. ಜಿತೇಂದ್ರ ಸಿಂಗ್ ಮತ್ತು ಸಿಬ್ಬಂದಿ ಹಾಗು ತರಬೇತಿ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಈ ಸಂಧರ್ಭದಲ್ಲಿ ಹಾಜರಿದ್ದರು.