ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
ಯಾವಾಗ ಮೂಲ ಸೌಕರ್ಯಗಳು ಲಭ್ಯವಿರುತ್ತದೆಯೋ, ಆಗ ದೊಡ್ಡ ಕನಸು ಕಾಣುವ ಧೈರ್ಯ ಮತ್ತು ಆ ಕನಸುಗಳನ್ನು ಈಡೇರಿಸುವ ಉತ್ಸಾಹ ಹುಟ್ಟುತ್ತದೆ
ಉತ್ತರ ಪ್ರದೇಶವನ್ನು 6-7 ದಶಕಗಳಿಗೆ ಸೀಮಿತಗೊಳಿಸಲಾಗದು. ಇದರ ಇತಿಹಾಸ ಕಾಲಾತೀತ, ಈ ರಾಜ್ಯದ ಕೊಡುಗೆಯೂ ಅನನ್ಯ
ಡಬಲ್ ಎಂಜಿನ್ ಸರ್ಕಾರ ಡಬಲ್ ಶಕ್ತಿಯೊಂದಿಗೆ ಇಲ್ಲಿನ ಪರಿಸ್ಥಿತಿಯನ್ನು ಸುಧಾರಿಸುತ್ತಿದೆ
“ಉತ್ತರ ಪ್ರದೇಶದ ಗ್ರಾಮೀಣ ಭಾಗದಲ್ಲಿ ಸ್ವಾಮಿತ್ವ ಯೋಜನೆ ಸಮೃದ್ಧಿಯ ಹೊಸ ಬಾಗಿಲು ತೆರೆಯಲಿದೆ“
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಉತ್ತರ ಪ್ರದೇಶದ ರೈತರ ಖಾತೆಗಳಿಗೆ 37 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ವರ್ಗಾವಣೆ

ಉತ್ತರ ಪ್ರದೇಶದ ರಾಜ್ ಕಿಯಾ ವೈದ್ಯಕೀಯ ಕಾಲೇಜಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.

ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕುಶಿನಗರ ವೈದ್ಯಕೀಯ ಕಾಲೇಜಿನಿಂದ ವೈದ್ಯರಾಗುವ ಅಥವಾ ಗುಣಮಟ್ಟದ ವೈದ್ಯಕೀಯ ಮೂಲ ಸೌಕರ್ಯ ಪಡೆಯುವ ಸ್ಥಳೀಯರ ಆಕಾಂಕ್ಷೆ ಈಡೇರಲಿದೆ.  ತಮ್ಮದೇ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಪಡೆಯುವ ಸಾಧ್ಯತೆಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿ ಸಾಕಾರಗೊಳಿಸಲಿದೆ. ಯಾವಾಗ ಮೂಲ ಸೌಕರ್ಯಗಳು ಲಭ್ಯವಿರುತ್ತದೆಯೋ, ಆಗ ದೊಡ್ಡ ಕನಸು ಕಾಣುವ ಧೈರ್ಯ ಮತ್ತು ಆ ಕನಸುಗಳನ್ನು ಈಡೇರಿಸಿಕೊಳ್ಳುವ ಉತ್ಸಾಹ ಹುಟ್ಟುತ್ತದೆ. ಇದರಿಂದ ಸ್ಥಳೀಯ ಯುವ ಸಮೂಹ ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಸಾಧ್ಯವಾಗಲಿದೆ ಎಂದರು.

ಕೊಳಚೆ ಪ್ರದೇಶದಲ್ಲಿ ವಾಸಿಸುವ, ಸೂರಿಲ್ಲದವರಿಗೆ ಪಕ್ಕಾ ಮನೆಗಳು ದೊರೆತು, ಅದರಲ್ಲಿ ಶೌಚಾಲಯ, ವಿದ್ಯುತ್ ಸಂಪರ್ಕ, ಅಡುಗೆ ಅನಿಲ ಸಂಪರ್ಕ, ಕೊಳಾಯಿಯಿಂದ ನೀರು ಬಂದರೆ ಅಂತಹ ಬಡವರ ವಿಶ್ವಾಸ ವೃದ್ಧಿಯಾಗುತ್ತದೆ. ಡಬಲ್ ಎಂಜಿನ್ ಸರ್ಕಾರ ಡಬಲ್ ಶಕ್ತಿಯೊಂದಿಗೆ ಇಲ್ಲಿನ ಪರಿಸ್ಥಿತಿಯನ್ನು ಸುಧಾರಿಸುತ್ತಿದೆ. ಹಿಂದಿನ ಸರ್ಕಾರಗಳು ಇಲ್ಲಿನ ಬಡವರ ಘನತೆ ಮತ್ತು ಪ್ರಗತಿಯ ಬಗ್ಗೆ ಗಮನಕೊಟ್ಟಿರಲಿಲ್ಲ ಮತ್ತು ರಾಜವಂಶದ ರಾಜಕಾರಣದ ದುಷ್ಪರಿಣಾಮಗಳಿಂದ ಅನೇಕ ಉತ್ತಮ ಕಾರ್ಯಕ್ರಮಗಳು ಬಡವರಲ್ಲಿ ಬಡವರಿಗೆ ತಲುಪದಂತೆ ಮಾಡಿತ್ತು ಎಂದರು.

“ಕರ್ಮವನ್ನು ಸಹಾನುಭೂತಿಯಿಂದ ಸಂಪರ್ಕಿಸಬೇಕು ಮತ್ತು ಅದನ್ನು ಸಂಪೂರ್ಣ ಕರುಣೆಯಿಂದಲೇ ಮಾಡಬೇಕು” ಎಂಬ ರಾಮ್ ಮನೋಹರ್ ಲೋಹಿಯಾ ಹೇಳುತ್ತಿದ್ದ ಮಾತನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು. ಆದರೆ ಈ ಹಿಂದೆ ಅಧಿಕಾರದಲ್ಲಿದ್ದವರು ಬಡವರ ನೋವಿನ ಬಗ್ಗೆ ಕಾಳಜಿವಹಿಸಿರಲಿಲ್ಲ. ಹಿಂದಿನ ಸರ್ಕಾರ ಅವರ ಕರ್ಮವನ್ನು ಹಗರಣಗಳೊಂದಿಗೆ ಮತ್ತು ಅಪರಾಧಗಳೊಂದಿಗೆ ಜೋಡಿಸಿಕೊಂಡಿದ್ದರು ಎಂದು ಹೇಳಿದರು.

“ಉತ್ತರ ಪ್ರದೇಶದ ಗ್ರಾಮೀಣ ಭಾಗದಲ್ಲಿ ಸ್ವಾಮಿತ್ವ ಯೋಜನೆ ಭವಿಷ್ಯದಲ್ಲಿ ಸಮೃದ್ಧಿಯ ಹೊಸ ಬಾಗಿಲನ್ನು ತೆರೆಯಲಿದೆ “ ಎಂದು ಕೇಂದ್ರದ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದರು. ಪ್ರಧಾನಮಂತ್ರಿ ಸ್ವಾಮಿತ್ವ ಯೋಜನೆಯಡಿ ಹಳ್ಳಿಗಳ ಜನರ ಮನೆಗಳಿಗೆ ಮಾಲೀಕತ್ವದ ದಾಖಲೆಗಳನ್ನು ಒದಗಿಸುತ್ತದೆ. ಉಜ್ವಲ ಮತ್ತು ಶೌಚಾಲಯದಂತಹ ಸೌಲಭ್ಯಗಳಿಂದ  ಹೆಣ್ಣುಮಕ್ಕಳು ಸುರಕ್ಷತೆ ಮತ್ತು ಘನತೆಯನ್ನು ಅನುಭವಿಸುತ್ತಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹೆಚ್ಚಿನ ಮನೆಗಳು ಮನೆಯ ಮಹಿಳೆಯರ ಹೆಸರಿನಲ್ಲಿವೆ ಎಂದು ಹೇಳಿದರು.

ಈ  ಹಿಂದಿನ ಉತ್ತರ ಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಪ್ರಧಾನಮಂತ್ರಿ ಅವರು, 2017 ಕ್ಕೂ ಮುನ್ನ ಮಾಫೀಯಾಗಳಿಗೆ ಮುಕ್ತ ಲೂಟಿಗೆ ಮುಕ್ತ ಹಸ್ತವನ್ನು ಸರ್ಕಾರ ಒದಗಿಸಿತ್ತು. ಇಂದು ಯೋಗಿಜಿ ಅವರ ಆಡಳಿತದಲ್ಲಿ ಮಾಫೀಯಾ ಕ್ಷಮೆಯಾಚಿಸುತ್ತಾ ಓಡುತ್ತಿದೆ ಮತ್ತು ಯೋಗಿಜಿ ಸರ್ಕಾರದಲ್ಲಿ ಮಾಫೀಯಾಗಳು ಹೆಚ್ಚು ತೊಂದರೆ ಎದುರಿಸುತ್ತಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

“ಉತ್ತರ ಪ್ರದೇಶ ಗರಿಷ್ಠ ಸಂಖ್ಯೆಯ ಪ್ರಧಾನಮಂತ್ರಿಗಳನ್ನು ರಾಜ್ಯಕ್ಕೆ ನೀಡಿದೆ. ಇದು ಉತ್ತರ ಪ್ರದೇಶದ ವಿಶೇಷತೆ, ಆದಾಗ್ಯೂ ಉತ್ತರ ಪ್ರದೇಶದ ಗುರುತನ್ನು ಇದಕ್ಕಾಗಿಯೇ ಸೀಮಿತಗೊಳಿಸಲಾಗದು, ಉತ್ತರ ಪ್ರದೇಶವನ್ನು 6-7 ದಶಕಗಳಿಗೆ ಸೀಮಿತಗೊಳಿಸಲಾಗದು. ಇದರ ಇತಿಹಾಸ ಕಾಲಾತೀತ, ಈ ರಾಜ್ಯದ ಕೊಡುಗೆಯೂ  ಕಾಲಾತೀತ”’. ಇಲ್ಲಿ ಶ್ರೀರಾಮ ಅವತರಿಸಿದ, ಭಗವಾನ್ ಶ್ರೀಕೃಷ್ಣನ ಅವತಾರವೂ ಸಹ ಇಲ್ಲಿಯೇ ಆಗಿದೆ. 24 ಜೈನ ತೀರ್ಥಂಕರರಲ್ಲಿ 18 ತೀರ್ಥಂಕರರು ಉತ್ತರ ಪ್ರದೇಶದವರು. ಮಧ್ಯಕಾಲೀನ ಯುಗದಲ್ಲಿ ತುಳಸೀದಾಸರು ಮತ್ತು ಕಬೀರದಾಸರಂತಹ ಯುಗ ಪುರುಷರು ಸಹ ಈ ಮಣ್ಣಿನಲ್ಲಿ ಜನಿಸಿದವರು. ಸಂತ ರವಿದಾಸ್ ಅವರಂತಹ ಸಮಾಜ ಸುಧಾರಕರಿಗೆ ಜನ್ಮ ನೀಡಿದ ಶ‍್ರೇಷ್ಠತೆಯೂ ಈ ಭೂಮಿಗೆ ಸಲ್ಲುತ್ತದೆ ಎಂದು ಹೇಳಿದರು.

ಉತ್ತರ ಪ್ರದೇಶ ಪ್ರತಿ ಹೆಜ್ಜೆಯಲ್ಲೂ ಯಾತ್ರಾಸ್ಥಳಗಳನ್ನು ಹೊಂದಿರುವ ಪ್ರದೇಶವಾಗಿದೆ ಮತ್ತು ಇಲ್ಲಿನ ಪ್ರತಿ ಕಣದಲ್ಲೂ ಶಕ್ತಿಯಿದೆ. ಇಲ್ಲಿನ ನಿಮಿಷ್ಯಾರಣ್ಯದಲ್ಲಿ ವೇದಗಳು ಮತ್ತು ಪುರಾಣಗಳನ್ನು ಬರೆಯುವ ಕೆಲಸವಾಗಿದೆ ಮತ್ತು ಅವಧ್ ಪ್ರದೇಶವಾದ ಇಲ್ಲಿ ಅಯೋಧ್ಯೆಯಂತಹ ಯಾತ್ರಾ ಸ್ಥಳವೂ ಸಹ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಉತ್ತರ ಪ್ರದೇಶದಲ್ಲಿ ನಮ್ಮ ಭವ್ಯ ಸಿಖ್ ಗುರು ಸಂಪ್ರದಾಯ ಆಳವಾದ ಸಂಪರ್ಕವನ್ನು ಹೊಂದಿದೆ. ಆಗ್ರಾದಲ್ಲಿರುವ ಗುರು ಕಾ ತಾಲ್ ಗುರುದ್ವಾರ ಗುರು ತೇಜ್ ಬಹಾದ್ದೂರ್ ಜಿ ಅವರ ವೈಭವಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಅವರು ಔರಂಗಜೇಬ್ ಗೆ ಸವಾಲು ಹಾಕಿದ್ದರು.

ಡಬಲ್ ಎಂಜಿನ್ ಸರ್ಕಾರ ರೈತರ ಉತ್ಪನ್ನಗಳನ್ನು ಖರೀದಿಸುವಲ್ಲಿಯೂ ಹೊಸ ದಾಖಲೆ ಬರೆದಿದೆ. ರೈತರು ಉತ್ಪಾದಿಸಿದ ಉತ್ಪನ್ನಗಳನ್ನು ಖರೀದಿಸಿರುವ ಪ್ರಮಾಣ ಸುಮಾರು 80 ಸಾವಿರ ಕೋಟಿ ರೂಪಾಯಿಗೆ ತಲುಪಿದೆ.  ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಕಾರ್ಯಕ್ರಮದಡಿ ಉತ್ತರ ಪ್ರದೇಶ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 37,000 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

Click here to read full text speech

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
‘Make in India’ is working, says DP World Chairman

Media Coverage

‘Make in India’ is working, says DP World Chairman
NM on the go

Nm on the go

Always be the first to hear from the PM. Get the App Now!
...
PM Modi condoles loss of lives due to stampede at New Delhi Railway Station
February 16, 2025

The Prime Minister, Shri Narendra Modi has condoled the loss of lives due to stampede at New Delhi Railway Station. Shri Modi also wished a speedy recovery for the injured.

In a X post, the Prime Minister said;

“Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.”