ಜಾರ್ಖಂಡ್ ರಾಜ್ಯ ಅಸ್ತಿತ್ವಕ್ಕೆ ಬರಲು ಪ್ರಬಲ ಇಚ್ಛಾಶಕ್ತಿ ತೋರಿದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
"ಸ್ವಾತಂತ್ರ್ಯದ ಈ ಅಮೃತ ಕಾಲದಲ್ಲಿ, ದೇಶವು ಭಾರತದ ಬುಡಕಟ್ಟು ಸಂಪ್ರದಾಯಗಳು ಮತ್ತು ಅವರ ಸಾಹಸಗಾಥೆಗಳಿಗೆ ಹೆಚ್ಚು ಅರ್ಥಪೂರ್ಣ ಮತ್ತು ಭವ್ಯವಾದ ಗುರುತನ್ನು ನೀಡಲು ದೇಶವು ನಿರ್ಧರಿಸಿದೆ"
"ಈ ವಸ್ತುಸಂಗ್ರಹಾಲಯವು ವೈವಿಧ್ಯತೆಯ ನಮ್ಮ ಬುಡಕಟ್ಟು ಸಂಸ್ಕೃತಿಯ ಜೀವಂತ ಸ್ಥಳವಾಗಲಿದೆ, ಸ್ವಾತಂತ್ರ್ಯ ಹೋರಾಟದಲ್ಲಿ ಬುಡಕಟ್ಟು ನಾಯಕರು ಮತ್ತು ನಾಯಕಿಯರ ಕೊಡುಗೆಯನ್ನು ವರ್ಣಿಸುತ್ತದೆ
“ಭಗವಾನ್ ಬಿರ್ಸಾ ಮುಂಡಾ ಸಮಾಜಕ್ಕಾಗಿ ಬದುಕಿದರು, ತಮ್ಮ ಸಂಸ್ಕೃತಿ ಮತ್ತು ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದರು. ಆದ್ದರಿಂದಲೇ ಅವರು ನಮ್ಮ ನಂಬಿಕೆಯಲ್ಲಿ, ನಮ್ಮ ಆತ್ಮದಲ್ಲಿ ಇನ್ನೂ ದೇವರಾಗಿ ಇದ್ದಾರೆ”

ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಜನಜಾತೀಯ ಗೌರವ ದಿವಸ ಎಂದು ಆಚರಿಸಲು ಭಾರತ ಸರ್ಕಾರ ಘೋಷಿಸಿದೆ. ಈ ಸಂದರ್ಭದ ಅಂಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಉದ್ಯಾನ ಮತ್ತು ಸ್ವತಂತ್ರ ಸೇನಾನಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು. ಜಾರ್ಖಂಡ್ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸ್ವಾತಂತ್ರ್ಯದ ಈ ಅಮೃತ ಕಾಲದಲ್ಲಿ, ದೇಶವು ಭಾರತದ ಬುಡಕಟ್ಟು ಸಂಪ್ರದಾಯಗಳು ಮತ್ತು ಅವುಗಳ ಸಾಹಸಗಾಥೆಗಳಿಗೆ ಹೆಚ್ಚು ಅರ್ಥಪೂರ್ಣ ಮತ್ತು ಭವ್ಯವಾದ ಗುರುತನ್ನು ನೀಡಲು ನಿರ್ಧರಿಸಿದೆ ಎಂದು ಹೇಳಿದರು. "ಇದಕ್ಕಾಗಿ, ಇಂದಿನಿಂದ ದೇಶವು ಪ್ರತಿ ವರ್ಷ ನವೆಂಬರ್ 15 ರಂದು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು 'ಜನಜಾತೀಯ ಗೌರವ್ ದಿವಸ್' ಎಂದು ಆಚರಿಸಲು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ" ಎಂದ ಪ್ರಧಾನಿಯವರು ಈ ಐತಿಹಾಸಿಕ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದರು.

ಜಾರ್ಖಂಡ್ ರಾಜ್ಯ ಅಸ್ತಿತ್ವಕ್ಕೆ ಬರಲು ಪ್ರಬಲ ಇಚ್ಚಾಶಕ್ತಿ ತೊರಿದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಪ್ರಧಾನಿ ನಮನ ಸಲ್ಲಿಸಿದರು, "ಕೇಂದ್ರ ಸರ್ಕಾರದಲ್ಲಿ ಪ್ರತ್ಯೇಕ ಬುಡಕಟ್ಟು ಸಚಿವಾಲಯವನ್ನು ರಚಿಸಿದ ಮೊದಲಿಗರು ಮತ್ತು ಬುಡಕಟ್ಟು ಜನರ ಹಿತಾಸಕ್ತಿಗಳನ್ನು ದೇಶದ ನೀತಿಗಳೊಂದಿಗೆ ಜೋಡಿಸಿದವರು ಅಟಲ್ ಜಿ" ಎಂದು ಶ್ರೀ ಮೋದಿ ಹೇಳಿದರು.

ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಉದ್ಯಾನ ಮತ್ತು ಸ್ವತಂತ್ರ ಸೇನಾನಿ ವಸ್ತುಸಂಗ್ರಹಾಲಯಕ್ಕಾಗಿ ದೇಶದ ಬುಡಕಟ್ಟು ಸಮಾಜವನ್ನು, ಭಾರತದ ಪ್ರತಿಯೊಬ್ಬ ಪ್ರಜೆಯನ್ನು ಪ್ರಧಾನಿ ಅಭಿನಂದಿಸಿದರು. ಈ ವಸ್ತುಸಂಗ್ರಹಾಲಯವು ವೈವಿಧ್ಯತೆಯಿಂದ ಕೂಡಿದ ನಮ್ಮ ಬುಡಕಟ್ಟು ಸಂಸ್ಕೃತಿಯ ಜೀವಂತ ಸ್ಥಳವಾಗಲಿದೆ, ಇದು ಸ್ವಾತಂತ್ರ್ಯ ಹೋರಾಟದಲ್ಲಿ ಬುಡಕಟ್ಟು ನಾಯಕರು ಮತ್ತು ನಾಯಕಿಯರ ಕೊಡುಗೆಯನ್ನು ಚಿತ್ರಿಸುತ್ತದೆ ಎಂದರು.

ಭಗವಾನ್ ಬಿರ್ಸಾ ಅವರ ದೂರದೃಷ್ಟಿಯ ಕುರಿತು ಮಾತನಾಡಿದ ಪ್ರಧಾನಿಯವರು, ಆಧುನಿಕತೆಯ ಹೆಸರಿನಲ್ಲಿ ವೈವಿಧ್ಯತೆ, ಪ್ರಾಚೀನ ಅಸ್ಮಿತೆ ಮತ್ತು ಪ್ರಕೃತಿಯನ್ನು ಹದಗೆಡಿಸುವುದು ಸಮಾಜ ಕಲ್ಯಾಣದ ಮಾರ್ಗವಲ್ಲ ಎಂದು ಭಗವಾನ್ ಬಿರ್ಸಾ ಅವರಿಗೆ ತಿಳಿದಿತ್ತು. ಅದೇ ಸಮಯದಲ್ಲಿ ಅವರು ಆಧುನಿಕ ಶಿಕ್ಷಣದ ಬೆಂಬಲಿಗರಾಗಿದ್ದರು ಮತ್ತು ತಮ್ಮದೇ ಸಮುದಾಯದ ಅನಿಷ್ಟಗಳು ಮತ್ತು ಕೆಡಕುಗಳ ವಿರುದ್ಧ ಮಾತನಾಡುವ ಧೈರ್ಯವನ್ನು ಹೊಂದಿದ್ದರು ಎಂದರು. ಸ್ವಾತಂತ್ರ್ಯ ಹೋರಾಟವು ಭಾರತದ ಶಕ್ತಿಯನ್ನು ವರ್ಗಾಯಿಸುವ ಗುರಿಯನ್ನು ಹೊಂದಿತ್ತು. ಭಾರತಕ್ಕಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಭಾರತೀಯರಿಗೇ ನೀಡುವುದು ಅದರ ಉದ್ದೇಶವಾಗಿತ್ತು ಎಂದು ಪ್ರಧಾನಿ ಹೇಳಿದರು. ಅದೇ ಸಮಯದಲ್ಲಿ, ಭಾರತದ ಬುಡಕಟ್ಟು ಸಮಾಜದ ಅಸ್ಮಿತೆಯನ್ನು ಅಳಿಸಲು ಬಯಸಿದ ಚಿಂತನೆಯ ವಿರುದ್ಧವೂ ‘ಧರತಿ ಆಬಾ’ಹೋರಾಟ ನಡೆಯಿತು. “ಭಗವಾನ್ ಬಿರ್ಸಾ ಅವರು ಸಮಾಜಕ್ಕಾಗಿ ಬದುಕಿದರು, ತಮ್ಮ ಸಂಸ್ಕೃತಿ ಮತ್ತು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಆದುದರಿಂದ, ಅವರು ನಮ್ಮ ನಂಬಿಕೆಯಲ್ಲಿ, ನಮ್ಮ ಆತ್ಮದಲ್ಲಿ ನಮ್ಮ ದೇವರಾಗಿ ಇನ್ನೂ ಇದ್ದಾರೆ. ‘ಧರ್ತಿ ಆಬಾ ಈ ಭೂಮಿಯ ಮೇಲೆ ಬಹಳ ದಿನ ಉಳಿಯಲಿಲ್ಲ. ಆದರೆ ಅವರು ತಮ್ಮ ಅಲ್ಪಾಯುಷ್ಯದಲ್ಲಿಯೇ ದೇಶಕ್ಕಾಗಿ ಸಂಪೂರ್ಣ ಇತಿಹಾಸವನ್ನು ಬರೆದರು ಮತ್ತು ಭಾರತದ ಪೀಳಿಗೆಗಳಿಗೆ ಮಾರ್ಗದಶನ ಮಾಡಿದರು” ಎಂದು ಪ್ರಧಾನಿಯವರು ಹೇಳಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'India Delivers': UN Climate Chief Simon Stiell Hails India As A 'Solar Superpower'

Media Coverage

'India Delivers': UN Climate Chief Simon Stiell Hails India As A 'Solar Superpower'
NM on the go

Nm on the go

Always be the first to hear from the PM. Get the App Now!
...
PM Modi condoles loss of lives due to stampede at New Delhi Railway Station
February 16, 2025

The Prime Minister, Shri Narendra Modi has condoled the loss of lives due to stampede at New Delhi Railway Station. Shri Modi also wished a speedy recovery for the injured.

In a X post, the Prime Minister said;

“Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.”