Quoteಮೊದಲ ಕಲಾಪದಲ್ಲಿ ನಾರಿಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಪ್ರಧಾನಿ
Quote“ಅಮೃತ ಕಾಲದ ಉದಯದಲ್ಲಿ, ಭಾರತವು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮೂಲಕ ಭವಿಷ್ಯದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ’’
Quote“ಇದು ಸಂಕಲ್ಪಗಳನ್ನು ಸಾಧಿಸಲು ನವೀಕೃತ ಉತ್ಸಾಹ ಮತ್ತು ಶಕ್ತಿಯೊಂದಿಗೆ ಹೊಸ ಪಯಣವನ್ನು ಆರಂಭಿಸುವ ಕಾಲ’’
Quote“ಸೆಂಗೋಲ್ (ರಾಜದಂಡ) ನಮ್ಮ ಹಿಂದಿನ ಅತ್ಯಂತ ಪ್ರಮುಖ ಭಾಗದೊಂದಿಗೆ ನಮ್ಮನ್ನು ಸಂಪರ್ಕಿಸುತ್ತದೆ’’
Quote“ಹೊಸ ಸಂಸತ್ ಕಟ್ಟಡದ ಭವ್ಯತೆಯು ಆಧುನಿಕ ಭಾರತವನ್ನು ವೈಭವಿಕರಿಸುತ್ತದೆ. ನಮ್ಮ ಎಂಜಿನಿಯರ್ ಗಳು ಮತ್ತು ಕಾರ್ಮಿಕರ ಶ್ರಮ ಬೆವರು ಇದರಲ್ಲಿ ಸೇರಿದೆ’’
Quote“ನಾರಿಶಕ್ತಿ ವಂದನಾ ಅಧಿನಿಯಮ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲವರ್ಧನೆಗೊಳಿಸುತ್ತದೆ’’
Quote“ಭವನ (ಕಟ್ಟಡ) ಬದಲಾದಂತೆ, ಭಾವ (ಭಾವನೆ)ಗಳೂ ಕೂಡ ಬದಲಾಗಬೇಕು’’
Quote“ನಾವೆಲ್ಲರೂ ಸಂಸದೀಯ ಪರಂಪರೆಯ ಲಕ್ಷಣರೇಖೆಯನ್ನು ಪಾಲಿಸಬೇಕು’’
Quote“ಸಂಸತ್ತಿನಲ್ಲಿ ಮಹಿಳಾ ಮೀಸಲು ಮಸೂದೆ ಅಂಗೀಕರಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ. 2023ರ ಸೆಪ್ಟಂಬರ್ 19 ಈ ಐತಿಹಾಸಿಕ ದಿನವು ಭಾರತದ ಇತಿಹಾಸದಲ್ಲಿ ಚಿರಸ್ಥಾಯಿಯಾಗಲಿದೆ’’
Quote“ಮಹಿಳೆಯರ ನೇತೃತ್ವದ ಅಭಿವೃದ್ಧಿಯ ಸಂಕಲ್ಪವನ್ನು ಮುಂದುವರಿಸಿಕೊಂಡು ನಮ್ಮ ಸರ್ಕಾರ ಇಂದು ಪ್ರಮುಖ ಸಾಂವಿಧಾನಿಕ ತಿದ್ದುಪಡಿ ಮಸೂದೆ ಮಂಡಿಸುತ್ತಿದೆ. ಈ ಮಸೂದೆಯ ಉದ್ದೇಶ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ವಿಸ್ತರಣೆ ಮಾಡುವುದಾಗಿದೆ’’ “ನಾವು ಈ ಮಸೂದೆಯನ್ನು ಶಾಸನವನ್ನಾಗಿ ಮಾಡಲು ಬದ್ಧವಾಗಿದ್ದೇವೆ ಎಂದು ನಾನು ದೇಶದ ಎಲ್ಲ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರಿಗೆ ಭರವಸೆ ನೀಡುತ್ತೇನೆ’’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಹೊಸ ಕಟ್ಟಡದಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

ಸದನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಹೊಸ ಸಂಸತ್‌ ಭವನದಲ್ಲಿ ಇಂದು ಐತಿಹಾಸಿಕ ಮೊದಲ ಅಧಿವೇಶನ ನಡೆಯುತ್ತಿದೆ, ಅದರ ಅಂಗವಾಗಿ ಎಲ್ಲರಿಗೂ ಶುಭಾಶಯಗಳನ್ನು ಕೋರುವುದಾಗಿ ಹೇಳಿದರು. ಹೊಸ ಸಂಸತ್ ಭವನದಲ್ಲಿ ಮೊದಲ ದಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಅವಕಾಶ ನೀಡಿದ್ದಕ್ಕಾಗಿ ಸ್ಪೀಕರ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಪ್ರಧಾನಿ ಅವರು, ಎಲ್ಲ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು.  ಈ ಸಂದರ್ಭದ ಪ್ರಾಮುಖ್ಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ, ಅಮೃತ ಕಾಲದ ಉದಯದಲ್ಲಿ ಭಾರತವು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮೂಲಕ ಭವಿಷ್ಯದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ ಎಂದರು. ದೇಶದ ಇತ್ತೀಚಿನ ಸಾಧನೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ, ವಿಜ್ಞಾನ ವಲಯದಲ್ಲಿ ಚಂದ್ರಯಾನ-3 ರ ಯಶಸ್ಸು ಮತ್ತು ಜಿ-20 ಸಂಘಟನೆ ಮತ್ತು ಜಾಗತಿಕ ಮಟ್ಟದಲ್ಲಿ ಅದರ ಪರಿಣಾಮವನ್ನು ಪ್ರಸ್ತಾಪಿಸಿದರು. ಭಾರತಕ್ಕೆ ಒಂದು ಅಪೂರ್ವ ಅವಕಾಶ ಒದಗಿ ಬಂದಿದ್ದು, ಈ ಬೆಳಕಿನಲ್ಲಿ ರಾಷ್ಟ್ರದ ನೂತನ ಸಂಸತ್ ಭವನ ಇಂದು ಕಾರ್ಯಾರಂಭ ಮಾಡುತ್ತಿದೆ ಎಂದು ಹೇಳಿದರು . 

ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಶ್ರೀ ಗಣೇಶನು ಸಮೃದ್ಧಿ, ಮಂಗಳಕರ, ವಿವೇಚನೆ ಮತ್ತು ಜ್ಞಾನದ ದೇವರು ಎಂದು ಹೇಳಿದರು. "ಇದು ಸಂಕಲ್ಪಗಳನ್ನು ಸಾಧಿಸಲು ಮತ್ತು ನವೀಕೃತ ಉತ್ಸಾಹ ಮತ್ತು ಶಕ್ತಿಯೊಂದಿಗೆ ಹೊಸ ಪಯಣವನ್ನು ಆರಂಭಿಸುವ ಕಾಲ" ಎಂದು ಪ್ರಧಾನಿ ಹೇಳಿದರು. ಗಣೇಶ ಚತುರ್ಥಿ ಮತ್ತು ಹೊಸ ಆರಂಭದ ಸಂದರ್ಭದಲ್ಲಿ ಲೋಕಮಾನ್ಯ ತಿಲಕರನ್ನು ಸ್ಮರಿಸಿದ ಪ್ರಧಾನಿ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಲೋಕಮಾನ್ಯ ತಿಲಕರು ಗಣೇಶ ಚತುರ್ಥಿಯನ್ನು ಇಡೀ ದೇಶದಲ್ಲಿ ಸ್ವರಾಜ್ಯದ ಜ್ಯೋತಿಯನ್ನಾಗಿ ಬೆಳಗಿಸುವ ಮಾಧ್ಯಮವನ್ನಾಗಿ ಪರಿವರ್ತಿಸಿದರು ಎಂದು ಹೇಳಿದರು. ಇಂದು ನಾವು ಅದೇ ಸ್ಫೂರ್ತಿಯೊಂದಿಗೆ ಸಾಗುತ್ತಿದ್ದೇವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಇಂದು ಸಂವತ್ಸರಿ ಪರ್ವ, ಕ್ಷಮೆಯ ಹಬ್ಬ ಎಂದು ಪ್ರಧಾನಿ ಉಲ್ಲೇಖಿಸಿದರು, ಈ ಹಬ್ಬವು ಯಾರಿಗಾದರೂ ನೋವುಂಟು ಮಾಡಬಹುದಾದ ಯಾವುದೇ ಉದ್ದೇಶಪೂರ್ವಕ ಮತ್ತು ಉದ್ದೇಶಪೂರ್ವಕವಲ್ಲದ ಕೃತ್ಯಗಳಿಗೆ ಕ್ಷಮೆ ಕೇಳುವುದಾಗಿದೆ ಎಂದು ಪ್ರಧಾನಿ ವಿವರಿಸಿದರು. ಪ್ರಧಾನಮಂತ್ರಿ ಹಬ್ಬದ ಉತ್ಸಾಹದಲ್ಲಿ ಎಲ್ಲರಿಗೂ ಮಿಚ್ಛಾಮಿ ದುಕ್ಕಂಡಂ ಎಂದು ತಿಳಿಸಿದರು ಮತ್ತು ಹಿಂದಿನ ಎಲ್ಲಾ ಕಹಿಗಳನ್ನು ಮರೆತು ಮುನ್ನಡೆಯುವಂತೆ ಅವರು ಮನವಿ ಮಾಡಿದರು.

ಪವಿತ್ರ ಸೆಂಗೋಲ್ನ ಉಪಸ್ಥಿತಿಯನ್ನು ಹಳೆಯ ಮತ್ತು ಹೊಸತನದ ನಡುವಿನ ಸಂಪರ್ಕ ಕೊಂಡಿಯಾಗಿ ಮತ್ತು ಸ್ವಾತಂತ್ರ್ಯದ ಮೊದಲ ಬೆಳಕಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಈ ಪವಿತ್ರ ಸೆಂಗೋಲ್ ಅನ್ನು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಸ್ಪರ್ಶಿಸಿದರು ಎಂದು ಅವರು ಹೇಳಿದರು. ಆದ್ದರಿಂದ, ಸೆಂಗೋಲ್ ನಮ್ಮ ಹಿಂದಿನ ಅತ್ಯಂತ ಪ್ರಮುಖ ಭಾಗದೊಂದಿಗೆ ನಮ್ಮನ್ನು ಸಂಪರ್ಕಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಹೊಸ ಕಟ್ಟಡದ ವೈಭವವು ಅಮೃತ ಕಾಲವನ್ನು ಲೇಪಿಸುತ್ತದೆ ಮತ್ತು ಸಾಂಕ್ರಾಮಿಕ ಸಮಯದಲ್ಲಿಯೂ ಕಟ್ಟಡಕ್ಕಾಗಿ ನಿರಂತರವಾಗಿ ಕೆಲಸ ಮಾಡಿದ ಕಾರ್ಮಿಕರು ಮತ್ತು ಎಂಜಿನಿಯರುಗಳ ಶ್ರಮವನ್ನು ಎಂದು ಪ್ರಧಾನಿ ಸ್ಮರಿಸಿದರು. ಪ್ರಧಾನಿ ಅವರ ನೇತೃತ್ವದಲ್ಲಿ ಇಡೀ ಸದನ ಶ್ರಮಿಕರು ಮತ್ತು ಎಂಜಿನಿಯರ್‌ಗಳಿಗೆ ಚಪ್ಪಾಳೆ ತಟ್ಟಿದರು. 30 ಸಾವಿರಕ್ಕೂ ಅಧಿಕ ಶ್ರಮಿಕರು ಕಟ್ಟಡಕ್ಕೆ ಕೊಡುಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ ಅವರು, ಶ್ರಮಿಕರ ಸಂಪೂರ್ಣ ವಿವರಗಳನ್ನು ಒಳಗೊಂಡ ಡಿಜಿಟಲ್ ಪುಸ್ತಕದ ಉಪಸ್ಥಿತಿಯನ್ನು ಉಲ್ಲೇಖಿಸಿದರು.

ನಮ್ಮ ಕ್ರಿಯೆಗಳ ಮೇಲೆ ಭಾವನೆಗಳು ಮತ್ತು ಅನಿಸಿಕೆಗಳ ಕುರಿತು ಮಾತನಾಡಿದ ಪ್ರಧಾನಿ, ಇಂದಿನ ನಮ್ಮ ಭಾವನೆಗಳು ನಮ್ಮ ನಡವಳಿಕೆಯಲ್ಲಿ ನಮಗೆ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು. “ಭವನ (ಕಟ್ಟಡ) ಬದಲಾಗಿದೆ, ಭಾವ (ಭಾವನೆಗಳು) ಸಹ ಬದಲಾಗಬೇಕು’’ ಎಂದು ಅವರು ಹೇಳಿದರು. 

“ಸಂಸತ್ತು ದೇಶಕ್ಕೆ ಸೇವೆ ಸಲ್ಲಿಸಲು ಅತ್ಯುನ್ನತ ಸ್ಥಾನವಾಗಿದೆ’’ ಎಂದ ಪ್ರಧಾನಿ ಅವರು,  ಸದನವು ಯಾವುದೇ ರಾಜಕೀಯ ಪಕ್ಷದ ಲಾಭಕ್ಕಾಗಿ ಅಲ್ಲ, ಆದರೆ ರಾಷ್ಟ್ರದ ಅಭಿವೃದ್ಧಿಗಾಗಿ ಮಾತ್ರ ಎಂದು ಬಲವಾಗಿ ಪ್ರತಿಪಾದಿಸಿದರು. ಸದಸ್ಯರಾಗಿ, ನಾವು ನಮ್ಮ ಮಾತು, ಆಲೋಚನೆ ಮತ್ತು ಕ್ರಿಯೆಗಳಿಂದ ಸಂವಿಧಾನದ ಸ್ಫೂರ್ತಿಯನ್ನು ಎತ್ತಿಹಿಡಿಯಬೇಕು ಎಂದು ಪ್ರಧಾನಿ ಹೇಳಿದರು. ಪ್ರತಿಯೊಬ್ಬ ಸದಸ್ಯರು ಸ್ಪೀಕರ್ ಸದನದ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳಿಗೆ ತಕ್ಕಂತೆ ನಡೆದುಕೊಳ್ಳುತ್ತಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಸ್ಪೀಕರ್‌ಗೆ ಭರವಸೆ ನೀಡಿದರು. ಎಲ್ಲಾ ಕಲಾಪಗಳು ಸಾರ್ವಜನಿಕರ ದೃಷ್ಟಿಯಲ್ಲಿ ನಡೆಯುತ್ತಿರುವುದರಿಂದ ಸದನದಲ್ಲಿ ಸದಸ್ಯರ ನಡವಳಿಕೆಯು ಅವರು ಆಡಳಿತ ಅಥವಾ ವಿರೋಧ ಪಕ್ಷದ ಭಾಗವಾಗಬೇಕೆ ಎಂದು ನಿರ್ಧರಿಸುವ ಅಂಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು.

ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಾಮೂಹಿಕ ಸಂವಾದ ಮತ್ತು ಕ್ರಮಗಳ ಅಗತ್ಯವನ್ನು ಒಲವಾಗಿ ಪ್ರತಿಪಾದಿಸಿದ ಪ್ರಧಾನಮಂತ್ರಿ ಅವರು ಗುರಿಗಳ ಏಕತೆಗೆ ಒತ್ತು ನೀಡಿದರು. "ನಾವೆಲ್ಲರೂ ಸಂಸದೀಯ ಸಂಪ್ರದಾಯಗಳ ಲಕ್ಷ್ಮಣ ರೇಖೆಯನ್ನು ಪಾಲಿಸಬೇಕು" ಎಂದು ಪ್ರಧಾನಮಂತ್ರಿ ಹೇಳಿದರು.

ಸಮಾಜದ ಪರಿಣಾಮಕಾರಿ ಪರಿವರ್ತನೆಯಲ್ಲಿ ರಾಜಕೀಯದ ಪಾತ್ರವನ್ನು ಪ್ರಮುಖವಾಗಿ ಉಲ್ಲೇಖಿಸಿದ ಪ್ರಧಾನಿ, ಬಾಹ್ಯಾಕಾಶದಿಂದ ಕ್ರೀಡೆಗಳವರೆಗಿನ ಕ್ಷೇತ್ರಗಳಲ್ಲಿ ಭಾರತೀಯ ಮಹಿಳೆಯರ ಕೊಡುಗೆಗಳ ಮೇಲೆ ಬೆಳಕು ಚೆಲ್ಲಿದರು. ಜಿ-20 ಅವಧಿಯಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಯ ಪರಿಕಲ್ಪನೆಯನ್ನು ಜಗತ್ತು ಹೇಗೆ ಸ್ವೀಕರಿಸಿತು ಎಂಬುದನ್ನು ಅವರು ನೆನಪಿಸಿಕೊಂಡರು. ಆ ದಿಸೆಯಲ್ಲಿ ಸರ್ಕಾರದ ಕ್ರಮಗಳು ಅರ್ಥಪೂರ್ಣವಾಗಿವೆ ಎಂದು ಹೇಳಿದರು. ಜನ್ ಧನ್ ಯೋಜನೆಯ 50 ಕೋಟಿ ಫಲಾನುಭವಿಗಳ ಪೈಕಿ ಹೆಚ್ಚಿನ ಖಾತೆಗಳು ಮಹಿಳೆಯರಿಗೆ ಸೇರಿದ್ದು ಎಂದು ಹೇಳಿದರು. ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಮುಂತಾದ ಯೋಜನೆಗಳಲ್ಲಿ ಮಹಿಳೆಯರು ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆಂದು  ಅವರು ಪ್ರಸ್ತಾಪಿಸಿದರು.

ಯಾವುದೇ ರಾಷ್ಟ್ರದ ಅಭಿವೃದ್ಧಿಯ ಪಯಣದಲ್ಲಿ ಇತಿಹಾಸ ಸೃಷ್ಟಿಯಾಗುವ ಒಂದು ಸಮಯ ಬರುತ್ತದೆ ಎಂದು ತಿಳಿಸಿದ ಪ್ರಧಾನಿ, ಇಂದಿನ ಸಂದರ್ಭವು ಭಾರತವು ತನ್ನ ಅಭಿವೃದ್ಧಿಗಾಥೆಯ ಪಯಣವನ್ನು ಬರೆಯುವ ಐತಿಹಾಸ ಕ್ಷಣವಾಗಿದೆ ಎಂದು ಹೇಳಿದರು. ಮಹಿಳಾ ಮೀಸಲಾತಿ ಕುರಿತು ಸಂಸತ್ತಿನಲ್ಲಿ ನಡೆದ ಚರ್ಚೆಗಳು ಮತ್ತು ಚರ್ಚೆಗಳ ಮೇಲೆ ಬೆಳಕು ಚೆಲ್ಲುವ ಪ್ರಧಾನಿ, ಈ ವಿಷಯದ ಬಗ್ಗೆ ಮೊದಲ ಮಸೂದೆಯನ್ನು 1996 ರಲ್ಲಿ ಮೊದಲ ಬಾರಿಗೆ ಮಂಡಿಸಲಾಗಿತ್ತು ಎಂದು ತಿಳಿಸಿದರು. ಅಟಲ್ ಜಿ ಅವರ ಅಧಿಕಾರಾವಧಿಯಲ್ಲಿ ಮಸೂದೆಯನ್ನು ಹಲವಾರು ಬಾರಿ ಸದನದಲ್ಲಿ ಮಂಡಿಸಲಾಗಿತ್ತು, ಆದರೆ ಮಹಿಳೆಯರ ಕನಸುಗಳನ್ನು ನನಸಾಗಿಸಲು ಅಗತ್ಯವಿರುವ ಸಂಖ್ಯೆಯಲ್ಲಿ ಬೆಂಬಲವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. "ಈ ಕಾರ್ಯವನ್ನು ಮಾಡಲು ದೇವರು ನನ್ನನ್ನು ಆಯ್ಕೆ ಮಾಡಿದ್ದಾನೆಂದು ನಾನು ನಂಬಿದ್ದೇನೆ" ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಅನುಮತಿ ನೀಡಲು ನಿರ್ಧರಿಸಿದೆ ಎಂದು ಅವರು ತಿಳಿಸಿದರು. “2023ರ ಸೆಪ್ಟೆಂಬರ್ 19ರ ಈ ಐತಿಹಾಸಿಕ ದಿನವು ಭಾರತದ ಇತಿಹಾಸದಲ್ಲಿ ಚಿರಸ್ಥಾಯಿ ಆಗಲಿದೆ’’ ಎಂದು ಪ್ರಧಾನಿ ಒತ್ತಿ ಹೇಳಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಕೊಡುಗೆಗಳು ಹೆಚ್ಚುತ್ತಿರುವುದನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ, ನೀತಿ ನಿರೂಪಣೆಯಲ್ಲಿ ಹೆಚ್ಚಿನ ಮಹಿಳೆಯರನ್ನು ಸೇರ್ಪಡೆಗೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು, ಇದರಿಂದ ರಾಷ್ಟ್ರಕ್ಕೆ ಅವರ ಕೊಡುಗೆಗಳು ಮತ್ತಷ್ಟು ಹೆಚ್ಚಾಗುತ್ತವೆ. ಈ ಐತಿಹಾಸಿಕ ದಿನದಂದು ಮಹಿಳೆಯರಿಗೆ ಅವಕಾಶಗಳ ಬಾಗಿಲು ತೆರೆಯುವಂತೆ ಅವರು ಸದಸ್ಯರಿಗೆ ಕರೆ ನೀಡಿದರು. 

“ಮಹಿಳಾ ನೇತೃತ್ವದ ಅಭಿವೃದ್ಧಿಯ ನಿರ್ಣಯವನ್ನು ಮುಂದೆ ಕೊಂಡೊಯ್ಯಲು ನಮ್ಮ ಸರ್ಕಾರವು ಇಂದು ಪ್ರಮುಖ ಸಾಂವಿಧಾನಿಕ ತಿದ್ದುಪಡಿ ಮಸೂದೆ ಮಂಡಿಸುತ್ತಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ವಿಸ್ತರಿಸುವುದು ಈ ಮಸೂದೆಯ ಉದ್ದೇಶ. ನಾರಿಶಕ್ತಿ ವಂದನ ಅಧಿನಿಯಮ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುತ್ತದೆ. ನಾರಿಶಕ್ತಿ ವಂದನ ಅಧಿನಿಯಮಕ್ಕಾಗಿ ನಾನು ರಾಷ್ಟ್ರದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅಭಿನಂದಿಸುತ್ತೇನೆ. ಈ ಮಸೂದೆಯನ್ನು ಶಾಸನವನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ನಾನು ರಾಷ್ಟ್ರದ ಎಲ್ಲಾ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಭರವಸೆ ನೀಡುತ್ತೇನೆ. ಈ ವಿಧೇಯಕವು ಒಮ್ಮತದಿಂದ ಶಾಸನವಾದರೆ ಅದರ ಶಕ್ತಿಯು ಹಲವು ಪಟ್ಟು ಹೆಚ್ಚುತ್ತದೆ ಎಂದು ನಾನು ಈ ಸದನದ ಎಲ್ಲಾ ಸಹೋದ್ಯೋಗಿಗಳಿಗೆ ವಿನಂತಿಸುತ್ತೇನೆ ಮತ್ತು ಆಗ್ರಹಿಸುತ್ತೇನೆ. ಆದ್ದರಿಂದ, ಸಂಪೂರ್ಣ ಸಹಮತದಿಂದ ಮಸೂದೆಯನ್ನು ಅಂಗೀಕರಿಸುವಂತೆ ನಾನು ಉಭಯ ಸದನಗಳಲ್ಲಿ ವಿನಂತಿಸುತ್ತೇನೆ’’ ಎಂದು ಪ್ರಧಾನಿ ಭಾಷಣವನ್ನು ಮುಕ್ತಾಯಗೊಳಿಸಿದರು. 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • Ravi Shankar September 23, 2023

    नरेंद्र मोदी जी जिंदाबाद
  • Aakash Kumar September 23, 2023

    #मोदी_है_तो_मुमकिन_है 🚩जयतु हिन्दुराष्ट्रम्🚩 🚩जय श्री राम🚩🙏
  • Mahendra singh Solanky Loksabha Sansad Dewas Shajapur mp September 22, 2023

    नवभारत में नारी शक्ति तेरा वंदन!
  • Rajshekhar Hitti September 22, 2023

    Jai Bharat mata
  • CHANDRA KUMAR September 22, 2023

    बीजेपी सोच रहा होगा, सिक्ख "खालिस्तान" मांगता है, कश्मीरी "आजाद काश्मीर" मांगता है, नगा जनजाति "नागालैंड" मांगता है, दक्षिणी भारतीय राज्य "द्रविड़ लैंड" मांगता है। यह सब क्या हो रहा है। भारत के राज्य स्वतंत्रता क्यों मांग रहा है? किससे स्वतंत्रता मांग रहा है? शिवसेना के संजय राऊत ने कहा कि जिस तरह से यूरोपीय संघ में बहुत सारे देश हैं, उसी तरह से भारत भी एक संघ है जिसमें बहुत सारे राज्य है, यहां सिर्फ वीजा नहीं लग रहा है, लेकिन बात बराबर है। ममता बनर्जी चिल्लाते रहती है, बीजेपी संघीय ढांचे को तोड़ रहा है, हम इसे बर्दास्त नहीं करेंगे, सीबीआई को पश्चिम बंगाल नहीं आने देंगे। बीजेपी सोचती है की धारा 370 हटाकर हमने कश्मीर को भारत से जोड़ दिया। यह एक गलतफहमी है। मेरा प्रश्न है, क्या भारत जुड़ा हुआ है? पहले जानते हैं, राज्य किसे कहते हैं, संघ किसे कहते हैं, प्रांत किसे कहते हैं, देश किसे कहते हैं? 1. संघ : दो या दो से अधिक पृथक एवं स्वतंत्र इकाइयों से एकल राजनीतिक इकाई का गठन। 2. राज्य : राज्य शब्द का अर्थ एक निश्चित क्षेत्र के भीतर एक स्वतंत्र सरकार के तहत राजनीतिक रूप से संगठित समुदाय या समाज है। इसे ही कानून बनाने का विशेषाधिकार है। कानून बनाने की शक्ति संप्रभुता से प्राप्त होती है, जो राज्य की सबसे विशिष्ट विशेषता है। भारतीय संविधान के अनुच्छेद 1(1) में कहा गया है, "इंडिया, जो कि भारत है, राज्यों का एक संघ होगा।" 13 दिसंबर, 1946 को जवाहरलाल नेहरू ने एक संकल्प के माध्यम से संविधान सभा के लक्ष्यों और उद्देश्यों को पेश किया था कि भारत, "स्वतंत्र संप्रभु गणराज्य" में शामिल होने के इच्छुक क्षेत्रों का एक संघ होगा। जबकि सरदार वल्लभ भाई पटेल ने,एक मज़बूत संयुक्त देश बनाने के लिये विभिन्न प्रांतों और क्षेत्रों के एकीकरण और संधि पर जोर दिया गया था। संविधान सभा के सदस्य संविधान में 'केंद्र' या 'केंद्र सरकार' शब्द का प्रयोग न करने के लिये बहुत सतर्क थे क्योंकि उनका उद्देश्य एक इकाई में शक्तियों के केंद्रीकरण की प्रवृत्ति को दूर रखना था। अर्थात् एक इकाई अपने स्वतंत्र क्षेत्र में दूसरी इकाई के अधीन नहीं है और एक का अधिकार दूसरे के साथ समन्वित है। हाल ही में तमिलनाडु सरकार ने अपने आधिकारिक पत्राचार या संचार में 'केंद्र सरकार' (Central Government) शब्द के उपयोग को बंद करने एवं इसके स्थान पर 'संघ सरकार' (Union Government) शब्द का उपयोग करने का फैसला किया है। 3. प्रांत : प्रान्त एक प्रादेशिक इकाई है, जो कि लगभग हमेशा ही एक देश या राज्य के अन्तर्गत एक प्रशासकीय खण्ड होता है। 4. देश : एक देश किसी भी जगह या स्थान है जिधर लोग साथ-साथ रहते है, और जहाँ सरकार होती है। संप्रभु राज्य एक प्रकार का देश है। अर्थात् देश एक भौगोलिक क्षेत्र है, जबकि राज्य एक राजनीतिक क्षेत्र है। निष्कर्ष : 1. वर्तमान समय में भारत एक संघ (ग्रुप) है। इस संघ में कोई भी राज्य शामिल हो सकता है और कोई भी राज्य अलग हो सकता है। क्योंकि संप्रभुता राज्य में होती है, संघ में नहीं। संघ राज्यों को सम्मिलित करके रखने का एक प्रयास मात्र है। जिस तरह यूरोपीय संघ से ब्रिटेन बाहर निकल गया, उसी तरह से भारतीय संघ से पाकिस्तान बाहर निकल गया। 2. यदि भारत को "संघ" के जगह पर "राज्य" बना दिया जाए, और भारत के सभी राज्य को प्रांत घोषित कर दिया जाए। तब भारत एक केंद्रीयकृत सत्ता में परिवर्तित हो जायेगा। जिससे सभी प्रांत स्वाभाविक रूप से, भारतीय सत्ता का एक शासकीय अंग बन जायेगा, और प्रांतों की संप्रभुता भारत राज्य में केंद्रित हो जायेगा। फिर कोई भी प्रांत भारत राज्य से अलग नहीं हो सकेगा। प्रांतों की सभी प्रकार की राजनीतिक स्वायत्तता स्वतः समाप्त हो जायेगा। फिर भारत का विभाजन बंद हो जायेगा। 3. जब भारत स्वतंत्र हो रहा था, तब इसमें कई राजाओं को मनाकर शामिल करने की जरूरत थी, सभी राजाओं ने कई तरह की स्वायत्तता और प्रेवीपर्स मनी लेने के बाद भारतीय संघ का सदस्य बनना स्वीकार किया। अब भारत का लोकतंत्र काफी विकसित हो गया है, राजाओं का प्रेवीपर्स मनी खत्म कर दिया गया है। ऐसे में क्षेत्रीय राजनीतिक पार्टियों और क्षेत्रीय विभाजनकारी संगठनों के भारत विभाजन के लालसा को खत्म करने के लिए, अब भारत को एक संघ की जगह, एक राज्य घोषित कर दिया जाए। और भारत के राज्यों को प्रांत घोषित कर दिया जाए। राज्यसभा को प्रांतसभा घोषित कर दिया जाए। राज्य के मुख्यमंत्री को प्रांतमंत्री घोषित कर दिया जाए। इससे क्षेत्रीय विभाजनकारी तत्वों को हतोत्साहित किया जा सकेगा। क्षेत्रीय राजनीतिक दलों के दबंग आचरण को नियंत्रित किया जा सकेगा। जब संप्रभुता केंद्र सरकार में केंद्रित होगा , तभी खालिस्तान, नागालैंड , आजाद काश्मीर जैसी मांगें बंद होंगी। और तभी तमिलनाडु जैसे राज्य , खुद को द्रविड़ देश समझना बंद करेगा और केंद्र सरकार को संघ सरकार कहने का साहस नहीं कर पायेगा। और तभी ममता बनर्जी जैसी अधिनायकवादी राजनीतिज्ञ, केंद्रीय जांच एजेंसी को अपने प्रांत में प्रवेश करने से रोक नहीं पायेगा। 4. कानून बनाने का अधिकार तब केवल भारत राज्य को होगा। कोई भी प्रांत, जैसे बंगाल प्रांत, बिहार प्रांत, कानून नहीं बना सकेगा। क्योंकि प्रांत कोई संप्रभु ईकाई नहीं है। प्रांत भारत राज्य से कानून बनाने का आग्रह कर सकता है, सलाह दे सकता है। भारत राज्य का कानून ही अंतिम और सर्वमान्य होगा। केवल लोकसभा में ही बहुमत से कानून बनाया जायेगा। 5. राज्यसभा का अर्थ होता है, संप्रभुता प्राप्त राज्यों का सभा। इसीलिए राज्य सभा का नाम बदल कर प्रांत सभा कर दिया जाए। लोकसभा को उच्च सदन और प्रांत सभा को निम्न सदन घोषित किया जाए। प्रांत सभा केवल कानून बनाने का प्रस्ताव बनाकर लोकसभा को भेज सकता है। प्रांत सभा किसी कानून के बनते समय केवल सुझाव दे सकता है। प्रांत सभा को किसी भी स्थिति में मतदान द्वारा कानून बनाने में भागीदारी करने का अधिकार नहीं दिया जाए। तभी जाकर केंद्र सरकार वास्तव में प्रभुत्व संपन्न बनेगा। तभी जाकर केंद्र सरकार संप्रभुता को प्राप्त करेगा। तभी जाकर राष्ट्र के विभाजन कारी तत्व की मंशा खत्म होगी। तभी जाकर भारत एक शक्तिशाली राज्य बनकर उभरेगा। 6. अभी भारत का कोई भी राज्य, कोई भी कानून बना सकता है। अभी राज्यसभा किसी भी कानून को पारित होने से रोक सकता है। अभी राज्य सभा उच्च सदन बनकर बैठा है। सोचिए राज्यों ने कितना संप्रभुता हासिल करके रखा है। वह केंद्र सरकार से आजाद होने का सपना देखे, तब इसमें आश्चर्य की क्या बात है। केंद्र सरकार का लोकसभा निम्न सदन बनकर, यह चाहत रखता है की सभी राज्य उसकी बात माने। यह कैसे संभव है। लोकसभा के कानून को राज्यसभा निरस्त करके खुशी मनाता है। कांग्रेस पार्टी कहती है, लोकसभा में बीजेपी बहुमत में है, सभी विपक्षी पार्टी राज्यसभा में बीजेपी के खिलाफ काम करेंगे। और बीजेपी के बनाए कानून को रोक राज्यसभा में रोक देंगे। ऐसे में केंद्र सरकार के पास संप्रभुता कहां है। दरअसल जिस तरह यूरोपीय संघ से ज्यादा यूरोप के राज्यों के पास संप्रभुता है। उसी तरह भारत संघ से ज्यादा भारत के राज्यो के पास संप्रभुता ज्यादा है। 7. अतः भारत को संघ की जगह राज्य बना और राज्यों को प्रांत बना दीजिए। 8. भारतीय संविधान के अनुच्छेद एक में संशोधन करना चाहिए। वर्तमान में, भारतीय संविधान के अनुच्छेद 1(1) में कहा गया है, "इंडिया, जो कि भारत है, राज्यों का एक संघ होगा।" इसे संशोधित करते हुए, भारतीय संविधान के अनुच्छेद 1(1) में कहा जाए, " जम्बूद्वीप, जो की भारत है, प्रांतों का एक राज्य होगा।" 9. दूसरा संशोधन यह करना चाहिए की, "भारतीय संविधान में जहां - जहां पर राज्य शब्द का प्रयोग हुआ है, उन्हें संशोधन के उपरांत प्रांत समझा जाए। क्योंकि भारत संघ की जगह राज्य का स्थान ले चुका है। 10. भारत राजनीतिक रूप से राज्य है और भौगोलिक रूप से देश है। भारत राज्य में से किसी भी प्रांत को स्वतंत्र होकर राज्य बनाने की स्वीकार्यता नहीं दी जायेगी। अर्थात अब कोई खालिस्तान , कोई नागालैंड, कोई आजाद काश्मीर या कोई द्रविड़ प्रदेश बनाने की मांग नहीं कर सकेगा। भारत सरकार वास्तव में तभी एक संप्रभु राज्य, संप्रभु शासक होगा। अभी भारत सरकार, एक तरह से, बहुत सारे संप्रभु राज्यों के समूह का संघ बनाकर शासन चला रहा है। जिस संघ (Group) से सभी राज्य अलग होने की धमकी देते रहता है। यदि भारतवर्ष को विश्वगुरु बनाना है तो भारत में एक शक्तिशाली केंद्र सरकार होना चाहिए। न की एक कमजोर संघीय सरकार। अब संविधान के संघीय ढांचे का विदाई कर देना चाहिए और उपरोक्त दोनों संविधान संशोधन शीघ्र ही कर देना चाहिए।
  • HARGOVIND JOSHI September 20, 2023

    आपश्री का भाषण पूरा सुना हमने दिल और आत्मा प्रसन्न हो गये।
  • HARGOVIND JOSHI September 20, 2023

    भारत की नयी संसद भवन का लोकार्पण करने हेतु माननीय प्रधानमंत्री जी एवं हमारी भारत सरकार को बहुत बहुत बधाई एवं शुभकामनाएं
  • Arun Potdar September 20, 2023

    अमृत वाणी
  • Neeraj Khatri September 20, 2023

    जय हो 🙏
  • Raj kumar September 20, 2023

    Namaskar 🙏 Prime Minister Shri Narendra Modi Ji. Welcome in the new building of the Parliament.
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India’s Critical Minerals Mission: PM Modi’s Plan To Secure India’s Future Explained

Media Coverage

India’s Critical Minerals Mission: PM Modi’s Plan To Secure India’s Future Explained
NM on the go

Nm on the go

Always be the first to hear from the PM. Get the App Now!
...
Prime Minister reaffirms commitment to Water Conservation on World Water Day
March 22, 2025

The Prime Minister, Shri Narendra Modi has reaffirmed India’s commitment to conserve water and promote sustainable development. Highlighting the critical role of water in human civilization, he urged collective action to safeguard this invaluable resource for future generations.

Shri Modi wrote on X;

“On World Water Day, we reaffirm our commitment to conserve water and promote sustainable development. Water has been the lifeline of civilisations and thus it is more important to protect it for the future generations!”