Quoteಕ್ರಿಕೆಟ್, ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸಾಮಾನ್ಯ ಉತ್ಸಾಹವಾಗಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರು ಇಂದು ಗುಜರಾತ್ ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರಗಿದ ಬಾರ್ಡರ್-ಗವಾಸ್ಕರ್ ಟ್ರೋಫಿಯ 4 ನೇ ಸ್ಮರಣಾರ್ಥ ಕ್ರಿಕೆಟ್ ಟೆಸ್ಟ್ ಪಂದ್ಯವನ್ನು ವೀಕ್ಷಿಸಿದರು.

ಆಸ್ಟ್ರೇಲಿಯಾ ದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿದ ಪ್ರಧಾನಮಂತ್ರಿಯವರು ಈ ರೀತಿ ಟ್ವೀಟ್ ಮಾಡಿದ್ದಾರೆ:

“ಕ್ರಿಕೆಟ್, ಭಾರತ ಮತ್ತು ಆಸ್ಟ್ರೇಲಿಯಾದ ಜನತೆಯ ಸಾಮಾನ್ಯ ಉತ್ಸಾಹವಾಗಿದೆ! ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯದ ಕೆಲವು ಕ್ಷಣಗಳನ್ನು ವೀಕ್ಷಿಸಲು ನನ್ನ ಉತ್ತಮ ಸ್ನೇಹಿತ, ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರೊಂದಿಗೆ ಅಹಮದಾಬಾದ್ ನಲ್ಲಿರುವುದಕ್ಕೆ ಸಂತೋಷವಾಗಿದೆ. ಇದು ಒಂದು ರೋಮಾಂಚಕಾರಿ ಆಟ ಎಂದು ನನಗೆ ಖಾತ್ರಿಯಿದೆ! ” 

|

ಅಹಮದಾಬಾದ್ ನಿಂದ ಟೆಸ್ಟ್ ಪಂದ್ಯದ ಝಲಕ್ ಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು , ಈ ರೀತಿ ಟ್ವೀಟ್ ಮಾಡಿದ್ದಾರೆ:

“ಅಹಮದಾಬಾದ್ ನಿಂದ ಕ್ರಿಕೆಟ್  ಆಟದ ಇನ್ನೂ ಕೆಲವು ನೋಟಗಳು ಇಲ್ಲಿವೆ! ”

|

 

|

 

|

 

|

 

|

 

|

 

|

 

|

 

|

ಪ್ರಧಾನಮಂತ್ರಿ  ಕಾರ್ಯಾಲಯ ಈ ರೀತಿ ಟ್ವೀಟ್ ಮಾಡಿದೆ:

“ಕ್ರಿಕೆಟ್ ಮೂಲಕ ಸ್ನೇಹವನ್ನು ಆಚರಿಸಲಾಗುತ್ತಿದೆ! 

ಅಹಮದಾಬಾದ್ ನಲ್ಲಿ ನಡೆದ #INDvsAUS ಪಂದ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಆಂಥೋನಿ ಅಲ್ಬನೀಸ್ ವೀಕ್ಷಿಸಿದ್ದಾರೆ. 

ಪ್ರಧಾನಮಂತ್ರಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರು ಆಗಮಿಸಿದ ನಂತರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಶ್ರೀ ಜಯ್ ಶಾ ಮತ್ತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶ್ರೀ ರೋಜರ್ ಬಿನ್ನಿ, ಕ್ರಮವಾಗಿ ಅವರನ್ನು ಸನ್ಮಾನಿಸಿದರು. ಪ್ರಧಾನಮಂತ್ರಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರು ಗಾಯಕಿ ಶ್ರೀಮತಿ ಫಾಲ್ಗುಯಿ ಶಾ ಅವರ ಯೂನಿಟಿ ಆಫ್ ಸಿಂಫನಿ ಸಾಂಸ್ಕೃತಿಕ ಪ್ರದರ್ಶನ ವೀಕ್ಷಿಸಿದರು.

ಪ್ರಧಾನಮಂತ್ರಿಯವರು ಟೀಂ ಇಂಡಿಯಾದ ನಾಯಕ ಶ್ರೀ ರೋಹಿತ್ ಶರ್ಮಾ ಅವರಿಗೆ ಟೆಸ್ಟ್ ಕ್ಯಾಪ್ ಅನ್ನು ಹಸ್ತಾಂತರಿಸಿದರೆ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ನಾಯಕ ಶ್ರೀ ಸ್ಟೀವ್ ಸ್ಮಿತ್ ಅವರಿಗೆ ಟೆಸ್ಟ್ ಕ್ಯಾಪ್ ಅನ್ನು ಹಸ್ತಾಂತರಿಸಿದರು. ತದನಂತರ,  ಪ್ರಧಾನಮಂತ್ರಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರು ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರ ಮುಂದೆ ಗಾಲ್ಫ್ ಕೋರ್ಟ್ ನಲ್ಲಿ ಗೌರವ ರಕ್ಷೆ ಸ್ವೀಕರಿಸಿದರು.

ಎರಡು ತಂಡದ ನಾಯಕರು ಟಾಸ್  ಗಾಗಿ ಪಿಚ್ಗೆ ತೆರಳಿದರು, ಹಾಗೂ ಪ್ರಧಾನಮಂತ್ರಿ ಮತ್ತು ಆಸ್ಟ್ರೇಲಿಯಾದ  ಪ್ರಧಾನಮಂತ್ರಿಯವರು “ಫ್ರೆಂಡ್ಶಿಪ್ ಹಾಲ್ ಆಫ್ ಫೇಮ್” ವೀಕ್ಷಿಸಲು ತೆರಳಿದರು. ಭಾರತ ತಂಡದ ಮಾಜಿ ಕೋಚ್ ಮತ್ತು ಆಟಗಾರ  ಶ್ರೀ ರವಿಶಾಸ್ತ್ರಿ ಅವರು ಎರಡೂ ರಾಷ್ಟ್ರಗಳ ಪ್ರಧಾನಮಂತ್ರಿಗಳಿಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಇತಿಹಾಸವನ್ನು ಸಂಕ್ಷಿಪ್ತವಾಗಿ ವಿವರಿಸಿದರು.

ತದನಂತರ  ತಂಡದ ನಾಯಕರು ಎರಡೂ ರಾಷ್ಟ್ರಗಳ ಪ್ರಧಾನಮಂತ್ರಿಗಳೊಂದಿಗೆ ಆಟದ ಮೈದಾನಕ್ಕೆ ಬಂದರು. ಇಬ್ಬರು ನಾಯಕರು ಆಯಾ ಪ್ರಧಾನಮಂತ್ರಿಗಳಿಗೆ ತಂಡವನ್ನು ಪರಿಚಯಿಸಿದರು ಮತ್ತು ನಂತರ ಭಾರತ ಹಾಗೂ ಆಸ್ಟ್ರೇಲಿಯಾದ ರಾಷ್ಟ್ರಗೀತೆಯನ್ನು ಹಾಡಲಾಯಿತು. ಪ್ರಧಾನಮಂತ್ರಿ ಮತ್ತು ಆಸ್ಟ್ರೇಲಿಯನ್ ಪ್ರಧಾನಮಂತ್ರಿ ಇಬ್ಬರು ಕ್ರಿಕೆಟ್ ದಿಗ್ಗಜರ ನಡುವಿನ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ತೆರಳಿದರು.

 

  • kumaresan San March 23, 2023

    best pm
  • pawan Rana March 23, 2023

    sir nameste mujha apni ladai ki school fees jama karni hi school name dewan public school meerut cantt uttarpradesh india kya koi thrust karege pawan Rana meerut uttarpradesh 9410608344 may be June retun kar do ga thanks for help me
  • rajiv March 21, 2023

    Har har modi ji
  • Priti Victor March 20, 2023

    Best PM Modiji
  • Arun Potdar March 13, 2023

    विश्व नायक प्रधानमंत्री जी
  • Chandra prakash March 13, 2023

    whole world is a family
  • Lalit March 13, 2023

    Har Har Maha Dev ki
  • DHARAMVEER JAKHAR March 13, 2023

    Great
  • anita gurav March 13, 2023

    Jay ho bjp sarakar ki Jay ho
  • anita gurav March 13, 2023

    Jay shree ram
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Over 28 lakh companies registered in India: Govt data

Media Coverage

Over 28 lakh companies registered in India: Govt data
NM on the go

Nm on the go

Always be the first to hear from the PM. Get the App Now!
...
Prime Minister pays homage to Chhatrapati Shivaji Maharaj on his Jayanti
February 19, 2025

The Prime Minister, Shri Narendra Modi has paid homage to Chhatrapati Shivaji Maharaj on his Jayanti.

Shri Modi wrote on X;

“I pay homage to Chhatrapati Shivaji Maharaj on his Jayanti.

His valour and visionary leadership laid the foundation for Swarajya, inspiring generations to uphold the values of courage and justice. He inspires us in building a strong, self-reliant and prosperous India.”

“छत्रपती शिवाजी महाराज यांच्या जयंतीनिमित्त मी त्यांना अभिवादन करतो.

त्यांच्या पराक्रमाने आणि दूरदर्शी नेतृत्वाने स्वराज्याची पायाभरणी केली, ज्यामुळे अनेक पिढ्यांना धैर्य आणि न्यायाची मूल्ये जपण्याची प्रेरणा मिळाली. ते आपल्याला एक बलशाली, आत्मनिर्भर आणि समृद्ध भारत घडवण्यासाठी प्रेरणा देत आहेत.”