Quote"ನೀವು ಅಮೃತ್ ಪೀಳಿಗೆಯನ್ನು ಪ್ರತಿನಿಧಿಸುತ್ತೀರಿ , ಅದು ವಿಕಸಿತ ಮತ್ತು ಆತ್ಮನಿರ್ಭರ ಭಾರತವನ್ನು ರಚಿಸುತ್ತದೆ"
Quote“ಕನಸುಗಳು ನಿರ್ಣಯವಾಗಿ ಬದಲಾದಾಗ ಮತ್ತು ಜೀವನವು ಅದಕ್ಕೆ ಸಮರ್ಪಿತವಾದಾಗ, ಯಶಸ್ಸು ಖಚಿತವಾಗಿದೆ. ಇದು ಭಾರತದ ಯುವಜನತೆಗೆ ಹೊಸ ಅವಕಾಶಗಳ ಸಮಯವಾಗಿದೆ”
Quote"ಭಾರತದ ಸಮಯ ಬಂದಿದೆ"
Quote"ಯುವ ಶಕ್ತಿಯು ಭಾರತದ ಅಭಿವೃದ್ಧಿ ಪಯಣದ ಚಾಲನಾ ಶಕ್ತಿಯಾಗಿದೆ"
Quote"ದೇಶವು ಯುವಜನರ ಶಕ್ತಿ ಮತ್ತು ಉತ್ಸಾಹದಿಂದ ತುಂಬಿರುವಾಗ, ಆ ದೇಶದ ಆದ್ಯತೆಗಳು ಯಾವಾಗಲೂ ಅದರ ಯುವ ಜನತೆಯಾಗಿರುತ್ತಾರೆ"
Quote"ಇದು ವಿಶೇಷವಾಗಿ ರಕ್ಷಣಾ ಪಡೆಗಳು ಮತ್ತು ಸಂಸ್ಥೆಗಳಲ್ಲಿ ದೇಶದ ಹೆಣ್ಣುಮಕ್ಕಳಿಗೆ ಉತ್ತಮ ಅವಕಾಶಗಳ ಸಾಧ್ಯತೆಯ ಸಮಯ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರಿಯಪ್ಪ ಪರೇಡ್ ಮೈದಾನದಲ್ಲಿ ವಾರ್ಷಿಕ ಎನ್.ಸಿ.ಸಿ. ಪಿಎಂ ಪಥಸಂಚಲನವನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ವರ್ಷ, ಎನ್.ಸಿ.ಸಿ. ಪ್ರಾರಂಭವಾಗಿ 75 ನೇ ವರ್ಷವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ಎನ್.ಸಿ.ಸಿ.ಯ 75 ಯಶಸ್ವಿ ವರ್ಷಗಳ ಸ್ಮರಣಾರ್ಥವಾಗಿ ಪ್ರಧಾನಮಂತ್ರಿಯವರು ವಿಶೇಷ ಲಕೋಟೆ ಮತ್ತು 75/- ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಕನ್ಯಾಕುಮಾರಿಯಿಂದ ದೆಹಲಿಗೆ ತರಲಾದ ಏಕತಾ ಜ್ವಾಲೆಯನ್ನು ಪ್ರಧಾನಮಂತ್ರಿಯವರಿಗೆ ಹಸ್ತಾಂತರಿಸಲಾಯಿತು ಮತ್ತು ಕಾರಿಯಪ್ಪ ಮೈದಾನದಲ್ಲಿ ಜ್ಯೋತಿ ಬೆಳಗಲಾಯಿತು. ಹಗಲು-ರಾತ್ರಿ ಕಾರ್ಯಕ್ರಮ ನಡೆಯಿತು ಮತ್ತು 'ಏಕ್ ಭಾರತ್ ಶ್ರೇಷ್ಠ ಭಾರತ' ವಿಷಯದ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

|

ಹಗಲು-ರಾತ್ರಿ ಕಾರ್ಯಕ್ರಮ ನಡೆಯಿತು ಮತ್ತು 'ಏಕ್ ಭಾರತ್ ಶ್ರೇಷ್ಠ ಭಾರತ' ವಿಷಯದ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಚರಣೆಯ ಭಾಗವಾಗಿ ಭಾರತೀಯ ವಸುಧೈವ ಕುಟುಂಬಕಂ ಸಂಕಲ್ಪದಲ್ಲಿ ಭಾಗವಹಿಸಲು, 19 ದೇಶಗಳಿಂದ 196 ಅಧಿಕಾರಿಗಳು ಮತ್ತು ಕೆಡೆಟ್‌ ಗಳನ್ನು ಆಹ್ವಾನಿಸಲಾಯಿತು. 

ಪಥಸಂಚಲನವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿಯವರು, “ಈ ವರ್ಷ ಭಾರತ ಮತ್ತು ಎನ್.ಸಿ.ಸಿ. ಎರಡೂ ತಮ್ಮ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ. ಎನ್.ಸಿ.ಸಿ.ಯನ್ನು ಮುನ್ನಡೆಸುವ ಮೂಲಕ ಮತ್ತು ಅದರ ಭಾಗವಾಗಿರುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದವರ ಪ್ರಯತ್ನಗಳು ಶ್ಲಾಘನಾರ್ಹ” ಎಂದು ಹೇಳಿದರು.  “ಯುವಜನತೆ ಎನ್.ಸಿ.ಸಿ. ಕೆಡೆಟ್‌ಗಳಾಗಿ ಮತ್ತು ರಾಷ್ಟ್ರದ ಯುವಕರಾಗಿ ದೇಶದ 'ಅಮೃತ್ ಪೀಳಿಗೆ'ಯನ್ನು ಪ್ರತಿನಿಧಿಸುತ್ತಾರೆ, ಇದು ಮುಂಬರುವ 25 ವರ್ಷಗಳಲ್ಲಿ ರಾಷ್ಟ್ರವನ್ನು ಹೊಸ ಹಂತಕ್ಕೆ ಕೊಂಡೊಯ್ಯುತ್ತದೆ ಮತ್ತು 'ವಿಕಸಿತ' ಮತ್ತು 'ಆತ್ಮನಿರ್ಭರ' ಭಾರತವನ್ನು ರಚಿಸುತ್ತದೆ” ಎಂದು ಪ್ರಧಾನಮಂತ್ರಿ ಅವರು ಎನ್.ಸಿ.ಸಿ. ಕೆಡೆಟ್‌ ಗಳಿಗೆ ಹೇಳಿದರು. ಪ್ರತಿದಿನ 50 ಕಿಲೋಮೀಟರ್ ಕ್ರಮಿಸುವ ಮೂಲಕ 60 ದಿನಗಳ ಕಾಲ ಸಂಚರಿಸಿ ಕನ್ಯಾಕುಮಾರಿಯಿಂದ ದೆಹಲಿಯವರೆಗಿನ ಓಟವನ್ನು ಪೂರ್ಣಗೊಳಿಸಿದ ಏಕತಾ ಜ್ವಾಲೆಗಾಗಿ ಎನ್.ಸಿ.ಸಿ. ಕೆಡೆಟ್‌ ಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು ಹಾಗೂ “ಸಂಜೆಯ ಈ ಜ್ವಾಲೆ ಮತ್ತು ಸಾಂಸ್ಕೃತಿಕ ಸಂಭ್ರಮವು ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಉತ್ಸಾಹವನ್ನು ಬಲಪಡಿಸಿದೆ” ಎಂದು ಹೇಳಿದರು

|

ಗಣರಾಜ್ಯೋತ್ಸವ ಪರೇಡ್‌ ನಲ್ಲಿ ಭಾಗವಹಿಸಿದ ಎನ್.ಸಿ.ಸಿ. ಕೆಡೆಟ್‌ ಗಳನ್ನು ಆಸಕ್ತಿಯಿಂದ ಗಮನಿಸಿದ ಪ್ರಧಾನಮಂತ್ರಿ ಅವರು, ಪ್ರಥಮ ಬಾರಿಗೆ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಪರೇಡ್‌ ನ ವಿಶೇಷತೆಯನ್ನು ವಿವರಿಸಿದರು. ಎನ್.ಸಿ.ಸಿ. ಕೆಡೆಟ್‌ ಗಳು ಜೀವನದಲ್ಲಿ ಉತ್ತಮ ಪ್ರೇರಣೆ ಮತ್ತು ಪ್ರೋತ್ಸಾಹಗಳಿಸಲು ರಾಷ್ಟ್ರೀಯ ಯುದ್ಧ ಸ್ಮಾರಕ, ಪೊಲೀಸ್ ಸ್ಮಾರಕ, ಕೆಂಪುಕೋಟೆಯ ನೇತಾಜಿ ಸುಭಾಷ್ ಚಂದ್ರ ಬೋಸ್ ಮ್ಯೂಸಿಯಂ, ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ, ಸರ್ದಾರ್ ಪಟೇಲ್ ವಸ್ತು ಸಂಗ್ರಹಾಲಯ ಮತ್ತು ಬಿ.ಆರ್. ಅಂಬೇಡ್ಕರ್ ವಸ್ತು ಸಂಗ್ರಹಾಲಯ ಮುಂತಾದ ಸ್ಥಳಗಳಿಗೆ ಭೇಟಿ ನೀಡುವಂತೆ ಸಲಹೆ ನೀಡಿದರು. 

ಯುವಜನತೆಯ ಕೇಂದ್ರೀಕರಣವು ರಾಷ್ಟ್ರವನ್ನು ನಡೆಸುವ ಪ್ರಮುಖ ಶಕ್ತಿಯಾಗಿರುವುದಾಗಿ ಪ್ರಧಾನಮಂತ್ರಿ ಅವರು ಹೇಳಿದರು. “ಕನಸುಗಳು ನಿರ್ಣಯವಾಗಿ ಪರಿವರ್ತನೆಗೊಂಡಾಗ ಮತ್ತು ಜೀವನವು ಅದಕ್ಕೆ ಸಮರ್ಪಿತವಾದಾಗ ಯಶಸ್ಸು ಖಚಿತ. ಇದು ಭಾರತದ ಯುವಜನತೆಗೆ ಹೊಸ ಅವಕಾಶಗಳ ಸಮಯ. ಭಾರತದ ಸಮಯ ಬಂದಿದೆ ಎಂಬುದು ಎಲ್ಲೆಡೆ ಸ್ಪಷ್ಟವಾಗಿದೆ. ಇಡೀ ಜಗತ್ತು ಭಾರತದತ್ತ ನೋಡುತ್ತಿದೆ ಮತ್ತು ಇದಕ್ಕೆಲ್ಲಾ ಭಾರತದ ಯುವಶಕ್ತಿಯೇ ಕಾರಣ” ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮುಂಬರುವ ಜಿ-20ಯ ಭಾರತದ ಅಧ್ಯಕ್ಷೀಯತೆಗಾಗಿ ಯುವಜನತೆ ಹೊಂದಿರುವ ಉತ್ಸಾಹದ ಬಗ್ಗೆ ಪ್ರಧಾನಮಂತ್ರಿ ಅವರು ಹೆಮ್ಮೆ ವ್ಯಕ್ತಪಡಿಸಿದರು 

ಯುವಕರಿಗೆ ಸಹಾಯ ಮಾಡುವ ವೇದಿಕೆಯನ್ನು ಒದಗಿಸುವ ಸರ್ಕಾರದ ಪ್ರಯತ್ನಗಳನ್ನು ಪ್ರಸ್ತಾಪಿಸುತ್ತಾ "ದೇಶವು ಯುವಜನರ ಶಕ್ತಿ ಮತ್ತು ಉತ್ಸಾಹದಿಂದ ತುಂಬಿರುವಾಗ, ಆ ದೇಶದ ಆದ್ಯತೆಗಳು ಯಾವಾಗಲೂ ಅದರ ಯುವ ಜನತೆಯಾಗಿರುತ್ತಾರೆ" ಎಂದು ಪ್ರಧಾನಮಂತ್ರಿ ಅವರು ಹೇಳಿದರು. “ಡಿಜಿಟಲ್ ಕ್ರಾಂತಿಯಾಗಲಿ, ಸ್ಟಾರ್ಟ್ ಅಪ್ ಕ್ರಾಂತಿಯಾಗಲಿ ಅಥವಾ ನಾವೀನ್ಯತೆ ಕ್ರಾಂತಿಯಾಗಲಿ ರಾಷ್ಟ್ರದ ಯುವಜನರಿಗೆ ತಮ್ಮ ಕನಸುಗಳನ್ನು ಸಾಧಿಸುವಲ್ಲಿ ವಿವಿಧ ಕ್ಷೇತ್ರಗಳನ್ನು ತೆರೆಯಲಾಗುತ್ತಿದೆ, ಭಾರತದ ಯುವಜನರೇ ಅದರ ದೊಡ್ಡ ಫಲಾನುಭವಿಗಳಾಗಿದ್ದಾರೆ.“ ಎಂದು ಪ್ರಧಾನಮಂತ್ರಿಯವರು ಹೇಳಿದರು. “ಭಾರತದಲ್ಲಿ ಈಗ ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ರೈಫಲ್‌ ಗಳು ಮತ್ತು ಬುಲೆಟ್ ಪ್ರೂಫ್ ಜಾಕೆಟ್‌ ಗಳನ್ನು ಆಮದು ಮಾಡಿಕೊಳ್ಳಲಾಗಿದೆ, ರಕ್ಷಣಾ ಕ್ಷೇತ್ರದಲ್ಲಿನ ಸುಧಾರಣೆಗಳಾಗಿವೆ, ಮತ್ತು ಇಂದು ಭಾರತವು ನೂರಾರು ರಕ್ಷಣಾ ಸಾಧನಗಳನ್ನು ದೇಶೀಯವಾಗಿ ತಯಾರಿಸುತ್ತಿದೆ. ಗಡಿ ಮೂಲಸೌಕರ್ಯ ಕಾರ್ಯಚಟುವಟಿಕೆಗಳು ಅತಿ ವೇಗವಾಗಿ ನಡೆಯುತ್ತಿದೆ. ಈ ಮೂಲಕ,  ಇವುಗಳು ಭಾರತದ ಯುವಕರಿಗೆ ನೂತನ ಅವಕಾಶಗಳು ಮತ್ತು ಸಾಧ್ಯತೆಗಳ ಹೊಸ ಜಗತ್ತನ್ನು ತೆರೆಯುತ್ತಿವೆ” ಎಂದು ಪ್ರಧಾನಮಂತ್ರಿ ಅವರು ಹೇಳಿದರು .

|

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿನ ಪ್ರಗತಿಯ ದಾಪುಗಾಲುಗಳನ್ನು ಪ್ರಧಾನಮಂತ್ರಿಯವರು ಯುವಜನರ ಸಾಮರ್ಥ್ಯಗಳಲ್ಲಿ ವಿಶ್ವಾಸವಿಡುವುದರ ಸಕಾರಾತ್ಮಕ ಫಲಿತಾಂಶಗಳ ಉದಾಹರಣೆಯಾಗಿ ಪ್ರಸ್ತುತಪಡಿಸಿದರು. “ಮೊದಲ ಖಾಸಗಿ ಉಪಗ್ರಹದ ಉಡಾವಣೆಯಂತಹ ಉತ್ತಮ ಫಲಿತಾಂಶಗಳ ಮೂಲಕ ಯುವ ಪ್ರತಿಭೆಗಳಿಗೆ ಬಾಹ್ಯಾಕಾಶ ಕ್ಷೇತ್ರದ ಬಾಗಿಲು ಈಗ ತೆರೆದಿವೆ. ಅದೇ ರೀತಿ, ಗೇಮಿಂಗ್ ಮತ್ತು ಅನಿಮೇಷನ್ ಕ್ಷೇತ್ರವು ಭಾರತದ ಪ್ರತಿಭಾವಂತ ಯುವಕರಿಗೆ ಅವಕಾಶಗಳನ್ನು ವಿಸ್ತರಿಸಿ ನೀಡುತ್ತಿವೆ. ಡ್ರೋನ್ ತಂತ್ರಜ್ಞಾನವು ಮನರಂಜನೆ, ಲಾಜಿಸ್ಟಿಕ್ಸ್ನಿಂದ ಕೃಷಿಯವರೆಗೆ ಹೊಸ ಹೊಸ ವೈವಿದ್ಯಮಯ ಕ್ಷೇತ್ರಗಳ ಬಾಗಿಲನ್ನು ತೆರೆಯುತ್ತಿದೆ.”ಎಂದು ಪ್ರಧಾನಮಂತ್ರಿಯವರು ಹೇಳಿದರು.

ರಕ್ಷಣಾ ಪಡೆಗಳು ಮತ್ತು ಸಂಸ್ಥೆಗಳೊಂದಿಗೆ ಯುವಜನತೆ ಹೆಚ್ಚುಹೆಚ್ಚು ಸಂಬಂಧ ಹೊಂದುವ ಆಕಾಂಕ್ಷೆಯ ಬಗ್ಗೆ ಪ್ರಧಾನಮಂತ್ರಿಯವರು ಮಾತನಾಡುತ್ತಾ, “ಇದು ವಿಶೇಷವಾಗಿ ದೇಶದ ಹೆಣ್ಣುಮಕ್ಕಳಿಗೆ ಉತ್ತಮ ಸಾಧ್ಯತೆಗಳ ಸಮಯ” ಎಂದು ಹೇಳಿದರು. “ಕಳೆದ 8 ವರ್ಷಗಳಲ್ಲಿ ಪೊಲೀಸ್ ಮತ್ತು ಅರೆಸೇನಾ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ದ್ವಿಗುಣಗೊಂಡಿರುವದು ಇಂದು ಸಾಕ್ಷಿಯಾಗಿದೆ. ಎಲ್ಲಾ ಮೂರು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸೇರ್ಪಡೆ ಹಾದಿ ಸುಗಮವಾಗಿದೆ. ನೌಕಾಪಡೆಯಲ್ಲಿ ಕೂಡಾ ಮಹಿಳೆಯರ ಮೊದಲ ನೇಮಕಾತಿ ನಡೆಯಿತು. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರು ಯುದ್ಧದಲ್ಲಿ ಕೂಡಾ ಭಾಗವಹಿಸಿತ್ತಿದ್ದಾರೆ. ಪುಣೆಯ ಎನ್.ಡಿ.ಎ.ಯಲ್ಲಿ ಮಹಿಳಾ ಕೆಡೆಟ್‌ ಗಳ ಮೊದಲ ಬ್ಯಾಚ್ ತರಬೇತಿಯನ್ನು ಪ್ರಾರಂಭಿಸಿದೆ. ಸೈನಿಕ ಶಾಲೆಗಳಲ್ಲಿ 1500 ಬಾಲಕಿಯರು ಪ್ರವೇಶ ಪಡೆದಿದ್ದಾರೆ. ಎನ್.ಸಿ.ಸಿ. ಕೂಡಾ ಕಳೆದ ದಶಕದಲ್ಲಿ ಮಹಿಳೆಯರ ಭಾಗವಹಿಸುವಿಕೆಯಲ್ಲಿ ಸ್ಥಿರವಾದ ಏರಿಕೆಯನ್ನು ಕಂಡಿದೆ.” ಎಂದು ಪ್ರಧಾನಮಂತ್ರಿಯವರು ಹೇಳಿದರು.

|

“ಇದು ಕೇವಲ ಭಾರತದ ಅಮೃತ ಕಾಲ ಮಾತ್ರವಲ್ಲ ಬದಲಾಗಿ ಭಾರತದ ಯುವಕರ ಅಮೃತ ಕಾಲ ಮತ್ತು ರಾಷ್ಟ್ರವು ತನ್ನ ಸ್ವಾತಂತ್ರ್ಯದ 100 ನೇ ವರ್ಷವನ್ನು ಇನ್ನೇನು ಕೆಲವೇ ವರ್ಷಗಳಲ್ಲಿ ಆಚರಿಸುವಾಗ, ಅದರ ಯಶಸ್ಸು ಯುವಜನತೆಯ ಕೈಯಲ್ಲಿರುತ್ತದೆ. ನಾವು ಯಾವುದೇ ಅವಕಾಶವನ್ನು ಕಳೆದುಕೊಳ್ಳಬಾರದು ಮತ್ತು ಭಾರತವನ್ನು ಹೊಸ ಎತ್ತರದ ಹಂತಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಮುಂದುವರಿಯಬೇಕು" ಎಂದು ಹೇಳುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತನ್ನ ಭಾಷಣವನ್ನು ಮುಕ್ತಾಯಗೊಳಿದರು.

ಕೇಂದ್ರ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಎನ್.ಸಿ.ಸಿ.ಯ ಮಹಾ ನಿರ್ದೇಶಕ  ಲೆಫ್ಟಿನೆಂಟ್ ಜನರಲ್ ಗುರ್ಬೀರ್ಪಾಲ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ವಾಯುಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಮತ್ತು ರಕ್ಷಣಾ ಕಾರ್ಯದರ್ಶಿ ಶ್ರೀ ಗಿರಿಧರ್ ಅಮಮನೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

|

 ಈ ಏಕತೆಯ ಮಂತ್ರವು ಪ್ರತಿಜ್ಞೆಯಾಗಿದೆ, ಭಾರತವು ಭವ್ಯತೆಯನ್ನು ಸಾಧಿಸುವ ಏಕೈಕ ಮಾರ್ಗವಾಗಿದೆ” ಎಂದು ಪ್ರಧಾನಮಂತ್ರಿಯವರು ಹೇಳಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • Saurav Tripathi January 30, 2023

    osm
  • Abhishek Singh January 30, 2023

    जय मोदी जी की।
  • Krishna Thakur January 30, 2023

    प्रणाम महोदय🙏🙏🙏 आपके द्वारा लोगों को जागरूक करने का प्रयास निरंतर चलते आ रहा है और लोगों को भी खुल कर अपनी समय को समझना बहुत जरूरी होगया है आज हम अचम्भीत् है मनुष्य के करनी से, समाज मे फेले भेद भाव उच नीच छल कपट जैसे दुर्नगंधो से या तो हम चमत्कार की आस मे बैठे हैं या फिर अंधविश्वास के चक्कर मे आज हमें चमत्कार अंधविश्वास से उठ कर जागरुकता पर विशेष रूप से ध्यान देना चाहिए ये तो सत्य है कि हमारे पूर्वजो ने इस धरती को बचाने के लिए हमारे समक्ष बहुत प्रकार के चमत्कार के रूप मे ग्रन्थों को हमें समर्पित कर उनके ज्ञान से उनके संस्कारों से इस धरती को कुछ हद तक बचाए हुए है अन्यथा अभी तक इंसानो का वजूद इस धरती पर न के बराबर ही बचता और वैसे भी अभी भी एक दूसरे को मिटाने के लिए इंसान किसी भी हद तक जा रहा है इसलिए हमें जागरूक होना और जागरूक करना बहुत जरूरी होगया है हमें आरक्षण से जागरूक होना है हमें उच नीच जात पात से जागरूक होना है हमें छुआ छूत जैसे अंधविश्वास से जागरूक होना है हमे लालच समाज में फेलि मिथ्या से जागरूक होना है हमें अपने अतीत से यही सीख मिलती हैं कि हमारे पूर्वजो ने समय को सही बनाने का प्रयास निरंतर करते आए है और कुछ उसी समय को सिर्फ आत्म हित के लिए दुर्पयोग भी करते आए है जिसके फल स्वरूप आज हमारी वर्तमान समय छल से कपट से आत्म हीत से घिर चुका है ऐसा नहीं कि सब इसी मे लिन हो चुके है कुछ ऐसे भी व्यक्ति है जिनके द्वारा आज वर्तमान को और अच्छा बनाने का प्रयास भी किया जा रहा है आज हम अपने ही प्राकृतिक रूप के दुश्मन बन गए है अपने ही प्रकृति के विरुध खरे होगए है हमारी सनातन संस्कृति जो प्राकृतिक रूप से बना है आज हम उसे ही नस्ट किये जा रहे हैं मै बस इतना कहना चाहता हूँ कि इस धरा पर मानव और मानवता को बचाना है तो पूरे विश्व को एक जुटता दिखानी होगी और हमारी पूर्वजो के द्वारा दी हुई संस्कृति संस्कारों और ग्रंथों के तरफ बढ़ना होगा अन्यथा हम काल के नजदिक खरे है और ये अब हम वर्तमान पीढी पर टिकी हुई है कि हम अपने आने वाले पीढी को एक अच्छा कल देंगे या उनसे उनके अच्छे पल तक छीन लेंग , विचार कीजिएगा प्रकृति बहुत कस्ट से गुजर रही हैं जिसका फल हम सब अभी भोग रहे है जय श्रीराम ओम नमः शिवाय जय हिन्द🙏🙏🙏🙏🙏
  • M Sita Maha Lakshmi January 30, 2023

    sir, simultaneously RSS also should implement in school level to grow the patriotism from childhood.
  • Lalit January 30, 2023

    New Bharat ki pahechan PM ji Namo Namo ji
  • gaurav SHARMA January 30, 2023

    Jay ho
  • Lajpat Ray Kaushal January 30, 2023

    Respected Modi ji, Your l ife itself is an inspiration. NCC is one of the means to achieve our national goals. Must be further popularized. Regards. 🙏
  • MUKESH .M January 30, 2023

    super
  • ADARSH PANDEY January 30, 2023

    proud dad always
  • Sandeep Jain January 30, 2023

    मोदी जी आपने हमारे परिवार के साथ अच्छा मजाक किया है हम आपसे पाँच साल से एक हत्या के हजार फीसदी झूठे मुकदमे पर न्याय माँग रहे हैं। उपरोक्त मामले में अब तक एक लाख से ज्यादा पत्र मेल ट्वीट फ़ेसबुक इंस्टाग्राम और न जाने कितने प्रकार से आपके समक्ष गुहार लगा चुका हूँ लेकिन मुझे लगता है आपकी और आपकी सरकार की नजर में आम आदमी की अहमियत सिर्फ और सिर्फ कीड़े मकोड़े के समान है आपकी ऐश मौज में कोई कमी नहीँ आनी चाहिए आपको जनता की परेशानियों से नहीँ उनके वोटों से प्यार है। हमने सपनों में भी नहीं सोचा था कि यह वही भारतीय जनता पार्टी है जिसके पीछे हम कुत्तों की तरह भागते थे लोगों की गालियां खाते थे उसके लिए अपना सबकुछ न्योछावर करने को तैयार रहते थे  और हारने पर बेज्जती का कड़वा घूँट पीते थे और फूट फूट कर रोया करते थे। आज हम अपने आप को ठगा सा महसूस कर रहे हैं। हमने सपनों में भी नहीं सोचा था की इस पार्टी की कमान एक दिन ऐसे तानाशाह के हाथों आएगी जो कुछ चुनिंदा दोस्तों की खातिर एक सौ तीस करोड़ लोगों की जिंदगी का जुलूस निकाल देगा। बटाला पंजाब पुलिस के Ssp श्री सत्येन्द्र सिंह से लाख गुहार लगाने के बाद भी उन्होंने हमारे पूरे परिवार और रिश्तेदारों सहित पाँच सदस्यों पर धारा 302 के मुकदमे का चालान कोर्ट में पेश कर दिया उनसे लाख मिन्नतें की कि जब मुकदमा झूठा है तो फिर हत्या का चालान क्यों पेश किया जा रहा है तो उनका जबाब था की ऐसे मामलों का यही बेहतर विकल्प होता है मैंने उनको बोला कि इस केस में हम बर्बाद हो चुके हैं पुलिस ने वकीलों ने पाँच साल तक हमको नोंच नोंच कर खाया है और अब पाँच लोगों की जमानत के लिए कम से कम पाँच लाख रुपये की जरूरत होगी वह कहाँ से आयेंगे यदि जमानत नहीँ करायी तो हम पांचो को जेल में जाना होगा। इतना घोर अन्याय देवी देवताओं की धरती भारत मैं हो रहा है उनकी आत्मा कितना मिलाप करती होंगी की उनकी विरासत पर आज भूत जिन्द चील कौवो का वर्चस्व कायम हो गया है। मुझे बार बार अपने शरीर के ऊपर पेट्रोल छिड़ककर आग लगाकर भस्म हो जाने की इच्छा होती है लेकिन बच्चों और अस्सी वर्षीय बूढ़ी मां जो इस हत्या के मुकदमे में मुख्य आरोपी है को देखकर हिम्मत जबाब दे जाती है। मोदी जी आप न्याय नहीं दिला सकते हो तो कम से कम मौत तो दे ही सकते हो तो किस बात की देरी कर रहे हो हमें सरेआम कुत्तों की मौत देने का आदेश तुरन्त जारी करें। इस समय पत्र लिखते समय मेरी आत्मा फूट फूट कर रो रही हैं भगवान के घर देर है अंधेर नहीँ जुल्म करने वालों का सत्यानाश निश्चय है।  🙏🙏🙏 Fir no. 177   06/09/2017 सिविल लाइंस बटाला पंजाब From Sandeep Jain Delhi 110032 9350602531
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Global aerospace firms turn to India amid Western supply chain crisis

Media Coverage

Global aerospace firms turn to India amid Western supply chain crisis
NM on the go

Nm on the go

Always be the first to hear from the PM. Get the App Now!
...
Former UK PM, Mr. Rishi Sunak and his family meets Prime Minister, Shri Narendra Modi
February 18, 2025

Former UK PM, Mr. Rishi Sunak and his family meets Prime Minister, Shri Narendra Modi today in New Delhi.

Both dignitaries had a wonderful conversation on many subjects.

Shri Modi said that Mr. Sunak is a great friend of India and is passionate about even stronger India-UK ties.

The Prime Minister posted on X;

“It was a delight to meet former UK PM, Mr. Rishi Sunak and his family! We had a wonderful conversation on many subjects.

Mr. Sunak is a great friend of India and is passionate about even stronger India-UK ties.

@RishiSunak @SmtSudhaMurty”