ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರಹಗಾರ, ಇತಿಹಾಸ ತಜ್ಞ ಮತ್ತು ರಂಗಕರ್ಮಿ ಶಿವಶಾಹೀರ್ ಬಾಬಾಸಾಹೀಬ್ ಪುರಂದರೆ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಂಬರುವ ಪೀಳಿಗೆಯನ್ನು ಛತ್ರಪತಿ ಶಿವಾಜಿ ಮಹಾರಾಜ್ ಅವರೊಂದಿಗೆ ಸಂಪರ್ಕಿಸುವಲ್ಲಿ ಶಿವಶಾಹೀರ್ ಬಾಬಾ ಸಾಹೀಬ್ ಪುರಂದರೆ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ಅಲ್ಲದೆ ಶ್ರೀ ಮೋದಿ ಅವರು ಕೆಲವು ತಿಂಗಳ ಹಿಂದೆ ಪುರಂದರೆ ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ತಾವು ಮಾಡಿದ ಭಾಷಣವನ್ನು ಪೋಸ್ಟ್ ಮಾಡಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸರಣಿ ಟ್ವೀಟ್ ಗಳಲ್ಲಿ “ನನಗೆ ನೋವು ಎಷ್ಟಾಗಿದೆ ಎಂದರೆ ಪದಗಳೇ ಹೊರಡುತ್ತಿಲ್ಲ, ಶಿವಶಾಹೀರ್ ಬಾಬಾಸಾಹೀಬ್ ಪುರಂದರೆ ಅವರ ನಿಧನದಿಂದ ಇತಿಹಾಸ ಮತ್ತು ಸಾಂಸ್ಕೃತಿಕ ಜಗತ್ತಿನಲ್ಲಿ ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಮುಂಬರುವ ಪೀಳಿಗೆ ಛತ್ರಪತಿ ಶಿವಾಜಿ ಮಹಾರಾಜ್ ಅವರೊಂದಿಗೆ ಮತ್ತಷ್ಟು ಸಂಪರ್ಕ ಹೊಂದುವಂತೆ ಮಾಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಅವರ ಇತರ ಕೃತಿಗಳು ಸಹ ಸದಾ ಸ್ಮರಣೀಯ.

ಶಿವಶಾಹೀರ್ ಬಾಬಾಸಾಹೀಬ್ ಪುರಂದರೆ ಅವರು, ವಿಚಾರವಂತರು, ಬುದ್ಧಿವಂತರು ಮತ್ತು ಭಾರತದ ಇತಿಹಾಸದ ಬಗ್ಗೆ ಉತ್ಕೃಷ್ಟ ಜ್ಞಾನ ಹೊಂದಿದ್ದರು. ಕಳೆದ ಕೆಲವು ವರ್ಷಗಳಿಂದ ಅವರೊಂದಿಗೆ ನಿಕಟವಾಗಿ ಸಂವಾದ ನಡೆಸುವ ಗೌರವ ನನಗೆ ದೊರೆತಿತ್ತು. ಕೆಲವು ತಿಂಗಳ ಹಿಂದೆ ಅವರ ಶತಮಾನೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದೆನು.

ಶಿವಶಾಹೀರ್ ಬಾಬಾಸಾಹೀಬ್ ಪುರಂದರೆ ಅವರು ತಮ್ಮ ವ್ಯಾಪಕ ಕಾರ್ಯಗಳಿಂದಾಗಿ ಜೀವಂತವಾಗಿ ಉಳಿಯುತ್ತಾರೆ. ಈ ಶೋಕದ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಅವರ ಅಸಂಖ್ಯಾತ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ’’.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Govt saved 48 billion kiloWatt of energy per hour by distributing 37 cr LED bulbs

Media Coverage

Govt saved 48 billion kiloWatt of energy per hour by distributing 37 cr LED bulbs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಮಾರ್ಚ್ 2025
March 12, 2025

Appreciation for PM Modi’s Reforms Powering India’s Global Rise