Quoteಶಿಕ್ಷಣ, ಆರೋಗ್ಯ, ನೈರ್ಮಲ್ಯ, ಪ್ರಾಣಿ ಕಲ್ಯಾಣದಂತಹ ಕಾಳಜಿಗಾಗಿ ಶ್ರಮಿಸುವಲ್ಲಿ ಶ್ರೀ ಟಾಟಾ ಮುಂಚೂಣಿಯಲ್ಲಿದ್ದರು: ಪ್ರಧಾನಮಂತ್ರಿ
Quoteದೊಡ್ಡ ಕನಸುಗಳನ್ನು ಕಾಣುವ ಮತ್ತು ಸಮಾಜಕ್ಕೆ ಹಿಂದಿರುಗಿಸುವ ಶ್ರೀ ಟಾಟಾ ಅವರ ಉತ್ಸಾಹ ವಿಶಿಷ್ಟವಾಗಿತ್ತು: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಟಾಟಾ ಅವರು ದೂರದೃಷ್ಟಿಯ ಉದ್ಯಮ ನಾಯಕ, ಸಹಾನುಭೂತಿಯುಳ್ಳ ಮನಸ್ಸು ಮತ್ತು ಅಸಾಧಾರಣ ವ್ಯಕ್ತಿಯಾಗಿದ್ದರು, ತಮ್ಮ ನಮ್ರತೆ, ದಯೆ ಮತ್ತು ನಮ್ಮ ಸಮಾಜವನ್ನು ಉತ್ತಮಗೊಳಿಸುವ ಅಚಲ ಬದ್ಧತೆಯಿಂದ ಹಲವಾರು ಜನರಿಗೆ ಪ್ರೀತಿಪಾತ್ರರಾಗಿದ್ದರು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

"ಶ್ರೀ ರತನ್ ಟಾಟಾ ಜೀ ಅವರು ದೂರದೃಷ್ಟಿಯ ಉದ್ಯಮ ನಾಯಕ, ಸಹಾನುಭೂತಿಯುಳ್ಳ ಮನಸ್ಸು ಮತ್ತು ಅಸಾಧಾರಣ ವ್ಯಕ್ತಿಯಾಗಿದ್ದರು. ಅವರು ಭಾರತದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ವ್ಯಾಪಾರ ಸಂಸ್ಥೆಗಳಲ್ಲಿ ಒಂದಕ್ಕೆ ಸ್ಥಿರ ನಾಯಕತ್ವವನ್ನು ನೀಡಿದವರು. ಅದೇ ಸಮಯದಲ್ಲಿ, ಅವರ ಕೊಡುಗೆ ಉದ್ಯಮ ಬೆಳವಣಿಗೆಯಿಂದ ಆಚೆಗೂ ಮೀರಿದೆ. ಅವರ ನಮ್ರತೆ, ದಯೆ ಮತ್ತು ನಮ್ಮ ಸಮಾಜವನ್ನು ಉತ್ತಮಗೊಳಿಸುವ ಅಚಲ ಬದ್ಧತೆಗೆ ಧನ್ಯವಾದಗಳು.

"ಶ್ರೀ ರತನ್ ಟಾಟಾ ಜೀ ಅವರ ಅತ್ಯಂತ ವಿಶಿಷ್ಟ ಅಂಶವೆಂದರೆ ದೊಡ್ಡ ಕನಸು ಕಾಣುವ ಮತ್ತು ಸಮಾಜಕ್ಕೆ ಹಿಂತಿರುಗಿಸುವ ಅವರ ಉತ್ಸಾಹ. ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಪ್ರಾಣಿ ಕಲ್ಯಾಣ ಮುಂತಾದ ಕ್ಷೇತ್ರಗಳಲ್ಲಿ ಯಶಸ್ವಿಗಾಗಿ ಶ್ರಮಿಸುವಲ್ಲಿ ಅವರು ಮುಂಚೂಣಿಯಲ್ಲಿದ್ದರು.

"ಶ್ರೀ ರತನ್ ಟಾಟಾ ಜೀ ಅವರೊಂದಿಗಿನ ಅಸಂಖ್ಯಾತ ಸಂವಾದಗಳಿಂದ ನನ್ನ ಮನಸ್ಸು ತುಂಬಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್ ನಲ್ಲಿ ಅವರನ್ನು ಆಗಾಗ್ಗೆ ಭೇಟಿಯಾಗುತ್ತಿದ್ದೆ. ನಾವು ವೈವಿಧ್ಯಮಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದೇವು. ಅವರ ದೃಷ್ಟಿಕೋನಗಳು ತುಂಬಾ ಸಮೃದ್ಧವಾಗಿವೆ ಎಂದು ನಾನು ಕಂಡುಕೊಂಡೆ. ನಾನು ದೆಹಲಿಗೆ ಬಂದಾಗ ಈ ಸಂವಾದಗಳು ಮುಂದುವರೆದವು. ಅವರ ನಿಧನದಿಂದ ತೀವ್ರ ನೋವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಭಾವನೆಗಳು ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳೊಂದಿಗೆ ಇರಲಿವೆ. ಓಂ ಶಾಂತಿ," ಎಂದು ಹೇಳಿದ್ದಾರೆ.

 

 

 

  • Vivek Kumar Gupta December 17, 2024

    नमो ..🙏🙏🙏🙏🙏
  • Vivek Kumar Gupta December 17, 2024

    नमो .........................🙏🙏🙏🙏🙏
  • JYOTI KUMAR SINGH December 09, 2024

    🙏
  • Vishnu Mohan Bhardwaj December 03, 2024

    भारत रत्नों की मीटिंग
  • Atul Sharma November 11, 2024

    Jai shree Ram
  • Yogendra Nath Pandey Lucknow Uttar vidhansabha November 08, 2024

    जय श्री राम
  • Avdhesh Saraswat November 04, 2024

    HAR BAAR MODI SARKAR
  • Chandrabhushan Mishra Sonbhadra November 01, 2024

    k
  • Chandrabhushan Mishra Sonbhadra November 01, 2024

    j
  • ram Sagar pandey October 30, 2024

    🌹🌹🙏🙏🌹🌹जय श्रीराम 🙏💐🌹जय श्रीकृष्णा राधे राधे 🌹🙏🏻🌹🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India Doubles GDP In 10 Years, Outpacing Major Economies: IMF Data

Media Coverage

India Doubles GDP In 10 Years, Outpacing Major Economies: IMF Data
NM on the go

Nm on the go

Always be the first to hear from the PM. Get the App Now!
...
Prime Minister condoles demise of Pasala Krishna Bharathi
March 23, 2025

The Prime Minister, Shri Narendra Modi has expressed deep sorrow over the passing of Pasala Krishna Bharathi, a devoted Gandhian who dedicated her life to nation-building through Mahatma Gandhi’s ideals.

In a heartfelt message on X, the Prime Minister stated;

“Pained by the passing away of Pasala Krishna Bharathi Ji. She was devoted to Gandhian values and dedicated her life towards nation-building through Bapu’s ideals. She wonderfully carried forward the legacy of her parents, who were active during our freedom struggle. I recall meeting her during the programme held in Bhimavaram. Condolences to her family and admirers. Om Shanti: PM @narendramodi”