Quoteವಾರಾಣಸಿ ಕಂಟೋನ್ಮೆಂಟ್ ನಿಲ್ದಾಣದಿಂದ ಗೋಡೋಲಿಯಾಗೆ ಪ್ರಯಾಣಿಕರ ರೋಪ್‌ವೇಗೆ ಅಡಿಪಾಯ ಹಾಕಿದರು
Quoteಜಲ ಜೀವನ್ ಮಿಷನ್ ಅಡಿಯಲ್ಲಿ 19 ಕುಡಿಯುವ ನೀರಿನ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
Quote"ಕಾಶಿಯು ಜನರ ಆತಂಕಗಳನ್ನು ದೂರಮಾಡಿ ನಗರವನ್ನು ಪರಿವರ್ತಿಸುವಲ್ಲಿ ಯಶಸ್ವಿಯಾಗಿದೆ"
Quote"ಕಳೆದ 9 ವರ್ಷಗಳಲ್ಲಿ ಗಂಗಾ ಘಾಟ್‌ಗಳ ಪರಿವರ್ತನೆಗೆ ಪ್ರತಿಯೊಬ್ಬರೂ ಸಾಕ್ಷಿಯಾಗಿದ್ದಾರೆ"
Quote"ಕಳೆದ 3 ವರ್ಷಗಳಲ್ಲಿ ದೇಶದ 8 ಕೋಟಿ ಕುಟುಂಬಗಳು ನಲ್ಲಿ ಮೂಲಕ ನೀರು ಪೂರೈಕೆ ಪಡೆದಿವೆ"
Quote"ಅಮೃತ ಕಾಲದಲ್ಲಿ ಭಾರತದ ಅಭಿವೃದ್ಧಿ ಪಯಣದಲ್ಲಿ ಪ್ರತಿಯೊಬ್ಬ ನಾಗರಿಕರು ಕೊಡುಗೆ ನೀಡಲು ಸರ್ಕಾರ ಶ್ರಮಿಸುತ್ತದೆ ಮತ್ತು ಯಾರನ್ನೂ ಹಿಂದುಳಿಯಲು ಬಿಡುವುದಿಲ್ಲ"
Quote"ಉತ್ತರ ಪ್ರದೇಶವು ಅಭಿವೃದ್ಧಿಯ ರಾಜ್ಯದ ಪ್ರತಿಯೊಂದು ಕ್ಷೇತ್ರಕ್ಕೂ ಹೊಸ ಆಯಾಮಗಳನ್ನು ನೀಡುತ್ತಿದೆ"
Quote"ಉತ್ತರ ಪ್ರದೇಶವು ನಿರಾಶೆಯ ನೆರಳಿನಿಂದ ಹೊರಬಂದಿದೆ ಮತ್ತು ಈಗ ತನ್ನ ಆಕಾಂಕ್ಷೆಗಳು ಮತ್ತು ನಿರೀಕ್ಷೆಗಳ ಹಾದಿಯನ್ನು ತುಳಿಯುತ್ತಿದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 1780 ಕೋಟಿ ರೂ.ಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ವಾರಾಣಸಿ ಕಂಟೋನ್ಮೆಂಟ್‌ ನಿಲ್ದಾಣದಿಂದ ಗೋಡೋಲಿಯಾವರೆಗಿನ ಪ್ರಯಾಣಿಕರ ರೋಪ್‌ವೇಗೆ ಶಂಕುಸ್ಥಾಪನೆ, ನಮಾಮಿ ಗಂಗಾ ಯೋಜನೆಯಡಿ ಭಗವಾನ್‌ಪುರದಲ್ಲಿ 55 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕ, ಸೇವಾಪುರಿಯ ಇಸರ್ವಾರ್ ಗ್ರಾಮದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಿಂದ ನಿರ್ಮಾಣಗೊಳ್ಳಲಿರುವ ಎಲ್‌ಪಿಜಿ ಬಾಟ್ಲಿಂಗ್ ಘಟಕ, ಸಿಗ್ರಾ ಸ್ಟೇಡಿಯಂನ 2 ಮತ್ತು 3 ನೇ ಹಂತಗಳ ಪುನರಾಭಿವೃದ್ಧಿ, ಭರ್ತರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬಟ್ಟೆ ಬದಲಾಯಿಸುವ ಕೊಠಡಿಗಳೊಂದಿಗೆ ತೇಲುವ ಜೆಟ್ಟಿ ಈ ಯೋಜನೆಗಳಲ್ಲಿ ಸೇರಿವೆ. ಪ್ರಧಾನಮಂತ್ರಿಯವರು ಜಲ ಜೀವನ್ ಮಿಷನ್ ಅಡಿಯಲ್ಲಿ 19 ಕುಡಿಯುವ ನೀರಿನ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು, ಇದು 63 ಗ್ರಾಮ ಪಂಚಾಯತ್‌ಗಳ 3 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಮಿಷನ್ ಅಡಿಯಲ್ಲಿ 59 ಕುಡಿಯುವ ನೀರಿನ ಯೋಜನೆಗಳ ಶಂಕುಸ್ಥಾಪನೆಯನ್ನೂ ಅವರು ನೆರವೇರಿಸಿದರು. ಹಣ್ಣುಗಳು ಮತ್ತು ತರಕಾರಿಗಳ ಶ್ರೇಣೀಕರಣ, ವಿಂಗಡಣೆ ಮತ್ತು ಸಂಸ್ಕರಣೆಗಾಗಿ ಕಾರ್ಖಿಯಾನ್‌ನಲ್ಲಿ ನಿರ್ಮಿಸಿರುವ ಸಮಗ್ರ ಪ್ಯಾಕ್ ಹೌಸ್ ಅನ್ನು ಅವರು ದೇಶಕ್ಕೆ ಸಮರ್ಪಿಸಿದರು. ವಾರಾಣಸಿ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆ ಮಾಡಿದರು.

|

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇದು ನವರಾತ್ರಿಯ ಶುಭ ಸಂದರ್ಭವಾಗಿದೆ ಮತ್ತು ಚಂದ್ರಘಂಟ ಮಾತೆಯನ್ನು ಪೂಜಿಸುವ ದಿನವಾಗಿದೆ ಎಂದು ಹೇಳಿದರು. ಈ ವಿಶೇಷ ಸಂದರ್ಭದಲ್ಲಿ ವಾರಾಣಸಿಯ ನಾಗರಿಕರೊಂದಿಗೆ ಇರುವುದಕ್ಕೆ ಸಂತಸವಾಗುತ್ತಿದೆ ಎಂದ ಅವರು ಹೇಳಿದರು. ವಾರಾಣಸಿಯ ಏಳಿಗೆಗೆ ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ. ಪ್ರಯಾಣಿಕರ ರೋಪ್‌ವೇಗೆ ಶಂಕುಸ್ಥಾಪನೆ ಮಾಡಲಾಗಿದೆ, ವಾರಾಣಸಿಯ ಸರ್ವತೋಮುಖ ಅಭಿವೃದ್ಧಿಗಾಗಿ ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಗಂಗಾ ನದಿಯ ಸ್ವಚ್ಛತೆ, ಪ್ರವಾಹ ನಿಯಂತ್ರಣ, ಪೊಲೀಸ್ ಮತ್ತು ಕ್ರೀಡಾ ಸೇವೆಯ ಕ್ಷೇತ್ರಗಳನ್ನು ಒಳಗೊಂಡಂತೆ ನೂರಾರು ಕೋಟಿ ರೂ.ವೆಚ್ಚದ ಇತರ ಯೋಜನೆಗಳನ್ನು ಸಹ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಬಿಎಚ್‌ಯುನಲ್ಲಿ ಯಂತ್ರೋಪಕರಣಗಳ ವಿನ್ಯಾಸದ ಶ್ರೇಷ್ಠತಾ ಕೇಂದ್ರದ ಅಡಿಪಾಯವನ್ನು ಹಾಕಲಾಗಿದೆ, ಇದು ನಗರಕ್ಕೆ ಜಾಗತಿಕ ಗುಣಮಟ್ಟದ ಮತ್ತೊಂದು ಸಂಸ್ಥೆಯನ್ನು ಸೇರಿಸುತ್ತದೆ ಎಂದು ಅವರು ಹೇಳಿದರು. ಇಂದಿನ ಅಭಿವೃದ್ಧಿ ಯೋಜನೆಗಳಿಗಾಗಿ ವಾರಾಣಸಿ ಮತ್ತು ಪೂರ್ವಾಂಚಲದ ಜನತೆಗೆ ಪ್ರಧಾನಿಯವರು ಅಭಿನಂದನೆ ಸಲ್ಲಿಸಿದರು.

ಕಾಶಿಯ ಅಭಿವೃದ್ಧಿಯ ಬಗ್ಗೆ ಎಲ್ಲೆಡೆ ಮಾತನಾಡಲಾಗುತ್ತಿದೆ ಮತ್ತು ಪ್ರತಿಯೊಬ್ಬ ಪ್ರವಾಸಿಗರು ಹೊಸ ಶಕ್ತಿಯನ್ನು ಪಡೆದು ಹಿಂತಿರುಗುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು. ಕಾಶಿಯು ಜನರ ಆತಂಕಗಳನ್ನು ದೂರಮಾಡಿ ನಗರವನ್ನು ಪರಿವರ್ತಿಸುವಲ್ಲಿ ಯಶಸ್ವಿಯಾಯಿತು ಎಂದು ಹೇಳಿದರು.

|

ಕಾಶಿಯಲ್ಲಿ ಹಳೆಯ ಮತ್ತು ಹೊಸದನ್ನು ಏಕಕಾಲದಲ್ಲಿ 'ದರ್ಶನ' ಪಡೆಯುವ ಕುರಿತು ಪ್ರಧಾನಿ ಮಾತನಾಡಿದರು. ಅವರು ಕಾಶಿ ವಿಶ್ವನಾಥ ಧಾಮ, ಗಂಗಾ ಘಾಟ್ ಕೆಲಸ ಮತ್ತು ಅತಿ ಉದ್ದದ ನದಿ ವಿಹಾರ ಕ್ರೂಸ್‌ ಕುರಿತ ಜಾಗತಿಕ ಸಂಚಲನವನ್ನು ಪ್ರಸ್ತಾಪಿಸಿದರು. ಕೇವಲ ಒಂದು ವರ್ಷದಲ್ಲಿ 7 ಕೋಟಿಗೂ ಹೆಚ್ಚು ಪ್ರವಾಸಿಗರು ಕಾಶಿಗೆ ಭೇಟಿ ನೀಡಿದ್ದಾರೆ. ಈ ಪ್ರವಾಸಿಗರು ನಗರದಲ್ಲಿ ಹೊಸ ಆರ್ಥಿಕ ಅವಕಾಶಗಳನ್ನು ಮತ್ತು ಉದ್ಯೋಗವನ್ನು ಸೃಷ್ಟಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹೊಸ ಅಭಿವೃದ್ಧಿ ಯೋಜನೆಗಳು ಮತ್ತು ನಗರದ ಸೌಂದರ್ಯೀಕರಣದ ಬಗ್ಗೆಯೂ ಪ್ರಧಾನಮಂತ್ರಿಯವರು ಗಮನ ಸೆಳೆದರು. ರಸ್ತೆಗಳು, ಸೇತುವೆಗಳು, ರೈಲುಗಳು ಅಥವಾ ವಿಮಾನ ನಿಲ್ದಾಣಗಳ ಮೂಲಕ ವಾರಾಣಸಿಗೆ ಸಂಪರ್ಕವು ಸಂಪೂರ್ಣ ಸರಾಗವಾಗಿದೆ, ಹೊಸ ರೋಪ್‌ವೇ ಯೋಜನೆಯು ನಗರದ ಸಂಪರ್ಕವನ್ನು ಹೊಸ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದರು. ಇದು ಪ್ರವಾಸಿಗರಿಗೆ ಹೊಸ ಆಕರ್ಷಣೆಯನ್ನು ಸೃಷ್ಟಿಸುವುದರೊಂದಿಗೆ ನಗರದ ಸೌಲಭ್ಯಗಳನ್ನು ಹೆಚ್ಚಿಸುತ್ತದೆ. ರೋಪ್‌ವೇ ಪೂರ್ಣಗೊಂಡ ನಂತರ ಬನಾರಸ್ ಕಂಟೋನ್ಮೆಂಟ್ ರೈಲು ನಿಲ್ದಾಣ ಮತ್ತು ಕಾಶಿ-ವಿಶ್ವನಾಥ ಕಾರಿಡಾರ್ ನಡುವಿನ ಅಂತರವನ್ನು ನಿಮಿಷಗಳಲ್ಲಿಯೇ ಕ್ರಮಿಸಬಹುದು ಮತ್ತು ಇದು ಕಂಟೋನ್ಮೆಂಟ್ ನಿಲ್ದಾಣ ಮತ್ತು ಗೋಡೋಲಿಯಾ ನಡುವಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಎಂದು ಅವರು ಹೇಳಿದರು.

|

ಪಕ್ಕದ ನಗರಗಳು ಮತ್ತು ರಾಜ್ಯಗಳಿಂದ ಬರುವ ಜನರು ಅಲ್ಪಾವಧಿಯಲ್ಲಿ ನಗರ ಪ್ರವಾಸ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಉಲ್ಲೇಖಿಸಿದರು. ರೋಪ್‌ವೇಯಿಂದ ನಿರ್ಮಾಣವಾಗುವ ಆಧುನಿಕ ಸೌಲಭ್ಯಗಳು ಆರ್ಥಿಕ ಚಟುವಟಿಕೆಗಳಿಗೆ ಹೊಸ ಕೇಂದ್ರವನ್ನು ಸೃಷ್ಟಿಸುತ್ತವೆ ಎಂದು ಅವರು ಒತ್ತಿ ಹೇಳಿದರು.

ಕಾಶಿಯೊಂದಿಗೆ ವಿಮಾನ ಸಂಪರ್ಕವನ್ನು ಬಲಪಡಿಸುವ ಒಂದು ಹೆಜ್ಜೆಯಾಗಿರುವ ಬಬತ್‌ಪುರ ವಿಮಾನ ನಿಲ್ದಾಣದಲ್ಲಿ ಹೊಸ ಎಟಿಸಿ ಟವರ್ ಕುರಿತು ಪ್ರಧಾನಮಂತ್ರಿ ಮಾತನಾಡಿದರು. ತೇಲುವ ಜೆಟ್ಟಿಯ ಅಭಿವೃದ್ಧಿಯ ಬಗ್ಗೆಯೂ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ಯಾತ್ರಿಕರು ಮತ್ತು ಪ್ರವಾಸಿಗರ ಅಗತ್ಯಗಳ ಬಗ್ಗೆ ಪ್ರಮುಖ ಗಮನ ಕೇಂದ್ರೀಕರಿಸಲಾಗಿದೆ ಎಂದು ಒತ್ತಿ ಹೇಳಿದರು. ನಮಾಮಿ ಗಂಗಾ ಮಿಷನ್ ಅಡಿಯಲ್ಲಿ, ಗಂಗಾನದಿಯ ದಡದಲ್ಲಿರುವ ಎಲ್ಲಾ ನಗರಗಳಲ್ಲಿ ಒಳಚರಂಡಿ ಸಂಸ್ಕರಣಾ ಜಾಲವನ್ನು ಸ್ಥಾಪಿಸಲಾಗಿದೆ ಎಂದು ಪ್ರಧಾನಿ ತಿಳಿಸಿದರು. ಕಳೆದ 9 ವರ್ಷಗಳಲ್ಲಿ ಬದಲಾಗಿರುವ ಗಂಗಾ ಘಾಟ್‌ಗಳ ಚಿತ್ರಣವನ್ನು ಎಲ್ಲರೂ ನೋಡಿದ್ದಾರೆ ಎಂದು ಪ್ರಧಾನಿ ಹೇಳಿದರು ಮತ್ತು ಗಂಗಾನದಿಯ ಎರಡೂ ಬದಿಗಳಲ್ಲಿ ಹೊಸ ಪರಿಸರ ಅಭಿಯಾನವು ನಡೆಯುತ್ತಿದೆ, ಅಲ್ಲಿ ಸರ್ಕಾರವು 5 ಕಿಲೋಮೀಟರ್ ಉದ್ದಕ್ಕೂ ಸಹಜ ಕೃಷಿಯನ್ನು ಉತ್ತೇಜಿಸುತ್ತಿದೆ ಎಂದು ಹೇಳಿದರು. ಇದಕ್ಕಾಗಿ ಈ ವರ್ಷದ ಬಜೆಟ್‌ನಲ್ಲಿ ವಿಶೇಷ ಅನುದಾನ ಮೀಸಲಿಡಲಾಗಿದೆ. ಸಹಜ ಕೃಷಿಗೆ ಸಂಬಂಧಿಸಿದಂತೆ ರೈತರಿಗೆ ನೆರವು ನೀಡಲು ಹೊಸ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಪ್ರಧಾನಿ ಒತ್ತಿ ಹೇಳಿದರು.

|

ವಾರಾಣಸಿ ಜೊತೆಗೆ ಇಡೀ ಪೂರ್ವ ಉತ್ತರ ಪ್ರದೇಶ ಕೃಷಿ ಮತ್ತು ಕೃಷಿ ರಫ್ತಿನ ಕೇಂದ್ರವಾಗಿ ಬದಲಾಗುತ್ತಿದೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ವಾರಣಾಸಿಯಲ್ಲಿ ಸಂಸ್ಕರಣೆ, ಸಾರಿಗೆ ಮತ್ತು ಶೇಖರಣಾ ಸೌಲಭ್ಯಗಳು, ವಾರಾಣಸಿಯ 'ಲಂಗ್ಡಾ' ಮಾವಿಗೆ ಹೊಸ ಉತ್ತೇಜನ ನೀಡುತ್ತಿವೆ, ಗಾಜಿಪುರದ 'ಭಿಂಡಿ' ಮತ್ತು 'ಹರಿ ಮಿರ್ಚ್', ಜಾನ್‌ಪುರದ 'ಮೂಲಿ ಮತ್ತು ಖಾರ್ಬೂಜೆ' ಅಂತರರಾಷ್ಟ್ರೀಯ ಮಾರುಕಟ್ಟೆಗಳನ್ನು ತಲುಪುತ್ತಿವೆ ಎಂದು ಅವರು ಹೇಳಿದರು.

ಶುದ್ಧ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ಕಾರವು ಆಯ್ಕೆ ಮಾಡಿಕೊಂಡಿರುವ ಅಭಿವೃದ್ಧಿಯ ಮಾರ್ಗವು ಸೇವೆಯ ಜೊತೆಗೆ ಸಹಾನುಭೂತಿಯ ಅಂಶಗಳನ್ನು ಹೊಂದಿದೆ ಎಂದು ಒತ್ತಿ ಹೇಳಿದರು. ಇಂದು ಶುದ್ಧ ಕುಡಿಯುವ ನೀರಿಗೆ ಸಂಬಂಧಿಸಿದ ಹಲವಾರು ಯೋಜನೆಗಳು ಉದ್ಘಾಟನೆಗೊಂಡಿದ್ದು, ವಿವಿಧ ಯೋಜನೆಗಳ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ‘ಹರ್ ಘರ್ ನಲ್ ಸೇ ಜಲ್’ಅಭಿಯಾನದ ಬಗ್ದಗೆ ವಿವರಿಸಿದ ಅವರು, ಕಳೆದ 3 ವರ್ಷಗಳಲ್ಲಿ ದೇಶದ 8 ಕೋಟಿ ಮನೆಗಳಿಗೆ ನಲ್ಲಿ ಮೂಲಕ ನೀರು ಪೂರೈಕೆಯಾಗಿದೆ ಎಂದು ತಿಳಿಸಿದರು. ಅವರು ಉಜ್ವಲ ಯೋಜನೆಯ ಬಗ್ಗೆಯೂ ಮಾತನಾಡಿದರು ಮತ್ತು ಸೇವಾಪುರಿಯಲ್ಲಿರುವ ಎಲ್‌ಪಿಜಿ ಬಾಟ್ಲಿಂಗ್ ಘಟಕವು ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವುದಲ್ಲದೆ ಪೂರ್ವ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಿಹಾರದಲ್ಲಿ ಅನಿಲ ಸಿಲಿಂಡರ್‌ಗಳ ಬೇಡಿಕೆಗಳನ್ನು ಪೂರೈಸುತ್ತದೆ ಎಂದು ಹೇಳಿದರು.

|

ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳು ಬಡವರ ಸೇವೆಯಲ್ಲಿ ನಂಬಿಕೆ ಇಟ್ಟಿವೆ ಎಂದು ಬಣ್ಣಿಸಿದ ಪ್ರಧಾನಿ, ಜನರು ತಮ್ಮನ್ನ್ನು 'ಪ್ರಧಾನ ಮಂತ್ರಿ' ಎಂದು ಕರೆಯುತ್ತಿದ್ದರೂ, ನಾನು ಜನರ ಸೇವೆ ಮಾಡಲು ಮಾತ್ರ ಇಲ್ಲಿದ್ದೇನೆ ಎಂಬ ನಂಬಿಕೆಯನ್ನು ಹೊಂದಿದ್ದೇನೆ ಎಂದು ಹೇಳಿದರು. ಇಂದು ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆಸಿದ ತಮ್ಮ ಸಂವಾದವನ್ನು ನೆನಪಿಸಿಕೊಂಡ ಪ್ರಧಾನಿ, ವಾರಾಣಸಿಯ ಸಾವಿರಾರು ನಾಗರಿಕರು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. 2014ರ ಮೊದಲು ಬ್ಯಾಂಕ್ ಖಾತೆ ತೆರೆಯುವುದೇ ಒಂದು ತ್ರಾಸದಾಯಕ ಕೆಲಸವಾಗಿತ್ತು ಎಂದ ಪ್ರಧಾನಿ, ಇಂದು ದೇಶದ ಬಡವರೂ ಕೂಡ ಜನ್ ಧನ್ ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಪ್ರಯೋಜನಗಳು ಅವರ ಖಾತೆಗಳಿಗೆ ನೇರವಾಗಿ ಸರ್ಕಾರದಿಂದ ಜಮಾ ಆಗುತ್ತಿವೆ ಎಂದು ತಿಳಿಸಿದರು. ಸಣ್ಣ ರೈತರು, ಉದ್ಯಮಿಗಳು ಅಥವಾ ಮಹಿಳಾ ಸ್ವಸಹಾಯ ಗುಂಪುಗಳು, ಮುದ್ರಾ ಯೋಜನೆಯ ಮೂಲಕ ಸಾಲ ಪಡೆಯುವುದು ತುಂಬಾ ಸುಲಭವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಜಾನುವಾರು ಮತ್ತು ಮೀನು ಸಾಕಣೆದಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ನೀಡಲಾಗಿದೆ, ಬೀದಿಬದಿ ವ್ಯಾಪಾರಿಗಳು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವಕರ್ಮರು ಪಿಎಂ-ವಿಶ್ವಕರ್ಮ ಯೋಜನೆ ಮೂಲಕ ಸಾಲವನ್ನು ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಅಮೃತ ಕಾಲದಲ್ಲಿ ಭಾರತದ ಅಭಿವೃದ್ಧಿ ಪಯಣದಲ್ಲಿ ಪ್ರತಿಯೊಬ್ಬ ನಾಗರಿಕನೂ ಕೊಡುಗೆ ನೀಡಲು ಸರ್ಕಾರ ಶ್ರಮಿಸುತ್ತದೆ ಮತ್ತು ಯಾರೂ ಹಿಂದುಳಿಯಲು ಬಿಡುವುದಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು.

|

ಒಂದು ಲಕ್ಷ ಅಥ್ಲೀಟ್‌ಗಳು ಭಾಗವಹಿಸಿದ್ದ ಖೇಲೋ ಬನಾರಸ್ ಸ್ಪರ್ಧೆಯ ವಿಜೇತರೊಂದಿಗಿನ ಸಂವಾದವನ್ನು ಪ್ರಧಾನಿಯವರು ಪ್ರಸ್ತಾಪಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಿದವರನ್ನು ಮತ್ತು ವಿಜೇತರನ್ನು ಪ್ರಧಾನಮಂತ್ರಿ ಅಭಿನಂದಿಸಿದರು. ಬನಾರಸ್ ಯುವಕರಿಗೆ ನೀಡಲಾಗುತ್ತಿರುವ ಕ್ರೀಡಾ ಸೌಲಭ್ಯಗಳ ಬಗ್ಗೆ ಅವರು ಪ್ರಸ್ತಾಪಿಸಿದರು. ಸಿಗ್ರಾ ಕ್ರೀಡಾಂಗಣದ 2 ಮತ್ತು 3ನೇ ಹಂತದ ವಿಸ್ತರಣೆಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ. ವಾರಾಣಸಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಕೂಡ ಬರಲಿದೆ ಎಂದು ತಿಳಿಸಿದರು.

ಇಂದು ಉತ್ತರ ಪ್ರದೇಶವು ರಾಜ್ಯದ ಅಭಿವೃದ್ಧಿಯ ಪ್ರತಿಯೊಂದು ಕ್ಷೇತ್ರಕ್ಕೂ ಹೊಸ ಆಯಾಮಗಳನ್ನು ಸೇರಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ನಾಳೆ ಮಾರ್ಚ್ 25 ರಂದು ಉತ್ತರ ಪ್ರದೇಶದ ಯೋಗಿ ಸರ್ಕಾರವು ತನ್ನ ಎರಡನೇ ಅವಧಿಯ ಮೊದಲ ವರ್ಷವನ್ನು ಪೂರ್ಣಗೊಳಿಸುತ್ತಿದೆ ಎಂದು ಅವರು ಹೇಳಿದರು ಮತ್ತು ಶ್ರೀ ಯೋಗಿ ಅವರು ಅತಿ ಹೆಚ್ಚು ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ ಎಂದು ಹೇಳಿದರು. ಉತ್ತರ ಪ್ರದೇಶವು ನಿರಾಶೆಯ ನೆರಳಿನಿಂದ ಹೊರಬಂದಿದೆ ಮತ್ತು ಈಗ ತನ್ನ ಆಕಾಂಕ್ಷೆಗಳು ಮತ್ತು ನಿರೀಕ್ಷೆಗಳ ಹಾದಿಯಲ್ಲಿ ಸಾಗುತ್ತಿದೆ ಎಂದು ಅವರು ಹೇಳಿದರು. ಹೆಚ್ಚಿದ ಭದ್ರತೆ ಮತ್ತು ಸೇವೆಗೆ ಉತ್ತರ ಪ್ರದೇಶ ಸ್ಪಷ್ಟ ಉದಾಹರಣೆಯಾಗಿದೆ ಎಂದು ಅವರು ಹೇಳಿದರು. ಇಂದಿನ ಹೊಸ ಅಭಿವೃದ್ಧಿ ಯೋಜನೆಗಳು ಸಮೃದ್ಧಿಯ ಹಾದಿಯನ್ನು ಬಲಪಡಿಸುತ್ತವೆ, ಮತ್ತೊಮ್ಮೆ ಎಲ್ಲರಿಗೂ ಅಭಿನಂದನೆಗಳು ಎಂದು ಪ್ರಧಾನಿಯವವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

|

 ಈ ಸಂದರ್ಭದಲ್ಲಿ ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಉತ್ತರ ಪ್ರದೇಶ ಸರ್ಕಾರದ ಸಚಿವರು ಉಪಸ್ಥಿತರಿದ್ದರು.

ಹಿನ್ನೆಲೆ

ಕಳೆದ ಒಂಬತ್ತು ವರ್ಷಗಳಲ್ಲಿ, ವಾರಾಣಸಿಯ ಚಿತ್ರಣವನ್ನು ಪರಿವರ್ತಿಸಲು ಮತ್ತು ನಗರ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಜೀವನ ಸೌಕರ್ಯವನ್ನು ಹೆಚ್ಚಿಸಲು ಪ್ರಧಾನ ಮಂತ್ರಿಯವರು ವಿಶೇಷ ಗಮನವನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯಾಗಿ, ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾನಿಲಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 1780 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಯೋಜನೆಗಳನ್ನು ಪ್ರಧಾನಮಂತ್ರಿಯವರು ಲೋಕಾರ್ಪಣೆ ಮಾಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ವಾರಾಣಸಿ ಕಂಟೋನ್ಮೆಂಟ್ ನಿಲ್ದಾಣದಿಂದ ಗೋಡೋಲಿಯಾವರೆಗೆ ಪ್ರಯಾಣಿಕರ ರೋಪ್‌ವೇಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಿದರು. ಯೋಜನೆಯ ವೆಚ್ಚ ಸುಮಾರು ರೂ. 645 ಕೋಟಿ. ರೋಪ್‌ವೇ ಐದು ನಿಲ್ದಾಣಗಳೊಂದಿಗೆ 3.75 ಕಿಮೀ ಉದ್ದವಿರುತ್ತದೆ. ಇದು ವಾರಾಣಸಿಯ ಪ್ರವಾಸಿಗರು, ಯಾತ್ರಿಕರು ಮತ್ತು ನಿವಾಸಿಗಳಿಗೆ ಸಂಚಾರವನ್ನು ಸುಲಭಗೊಳಿಸುತ್ತದೆ.

ನಮಾಮಿ ಗಂಗಾ ಯೋಜನೆಯಡಿ ಭಗವಾನ್‌ಪುರದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಿರುವ 55 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕದ ಶಂಕುಸ್ಥಾಪನೆಯನ್ನೂ ಪ್ರಧಾನಮಂತ್ರಿಯವರು ನೆರವೇರಿಸಿದರು. ಖೇಲೋ ಇಂಡಿಯಾ ಯೋಜನೆಯಡಿ, ಸಿಗ್ರಾ ಸ್ಟೇಡಿಯಂನ 2 ಮತ್ತು 3 ನೇ ಹಂತಗಳ ಪುನರಾಭಿವೃದ್ಧಿ ಕಾರ್ಯಕ್ಕೆ ಅಡಿಪಾಯವನ್ನು ಪ್ರಧಾನ ಮಂತ್ರಿಯವರು ಹಾಕಿದರು.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ನಿರ್ಮಿಸಲಿರುವ ಸೇವಾಪುರಿಯ ಇಸರ್ವಾರ್ ಗ್ರಾಮದಲ್ಲಿ ಎಲ್‌ಪಿಜಿ ಬಾಟ್ಲಿಂಗ್ ಘಟಕದ ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ಪ್ರಧಾನಮಂತ್ರಿಯವರು ಭರ್ತರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬಟ್ಟೆ ಬದಲಾಯಿಸುವ ಕೊಠಡಿಗಳೊಂದಿಗೆ ತೇಲುವ ಜೆಟ್ಟಿ  ಸೇರಿದಂತೆ ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು. 

ಜಲ ಜೀವನ್ ಮಿಷನ್ ಅಡಿಯಲ್ಲಿ, ಪ್ರಧಾನಮಂತ್ರಿ ಅವರು 19 ಕುಡಿಯುವ ನೀರಿನ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು, ಇವು 63 ಗ್ರಾಮ ಪಂಚಾಯತ್‌ಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತವೆ. ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು, ಮಿಷನ್ ಅಡಿಯಲ್ಲಿ 59 ಕುಡಿಯುವ ನೀರಿನ ಯೋಜನೆಗಳಿಗೆ ಅಡಿಗಲ್ಲು ಹಾಕಿದರು.

ವಾರಾಣಸಿ ಮತ್ತು ಸುತ್ತಮುತ್ತಲಿನ ರೈತರು, ರಫ್ತುದಾರರು ಮತ್ತು ವ್ಯಾಪಾರಿಗಳಿಗೆ, ಕಾರ್ಖಿಯಾನ್‌ನಲ್ಲಿ ನಿರ್ಮಿಸಲಾದ ಸಮಗ್ರ ಪ್ಯಾಕ್ ಹೌಸ್‌ನಲ್ಲಿ ಹಣ್ಣುಗಳು ಮತ್ತು ತರಕಾರಿಗಳ ಶ್ರೇಣೀಕರಣ, ವಿಂಗಡಣೆ ಮತ್ತು ಸಂಸ್ಕರಣೆ ಸಾಧ್ಯವಾಗುತ್ತದೆ. ಪ್ರಧಾನಿಯವರು ಈ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ವಾರಾಣಸಿ ಮತ್ತು ಸುತ್ತಮುತ್ತಲಿನ ಪ್ರದೇಶದ ಕೃಷಿ ರಫ್ತುಗಳನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ.

ವಾರಾಣಸಿ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ರಾಜ್‌ಘಾಟ್ ಮತ್ತು ಮಹಮೂರ್‌ಗಂಜ್ ಸರ್ಕಾರಿ ಶಾಲೆಗಳ ಪುನರಾಭಿವೃದ್ಧಿ; ನಗರದ ಆಂತರಿಕ ರಸ್ತೆಗಳ ಸುಂದರೀಕರಣ; ನಗರದ ಇತರ 6 ಉದ್ಯಾನವನಗಳು ಮತ್ತು ಕೊಳಗಳ ಪುನರಾಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಧಾನಮಂತ್ರಿ ದೇಶಕ್ಕೆ ಸಮರ್ಪಿಸಿದರು. ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಟಿಸಿ ಟವರ್ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳನ್ನು ಸಮರ್ಪಿಸಿದರು; ಭೇಲುಪುರದಲ್ಲಿ 2 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ; ಕೋನಿಯಾ ಪಂಪಿಂಗ್ ಸ್ಟೇಷನ್‌ನಲ್ಲಿ 800 ಕಿಲೊವ್ಯಾಟ್ ಸೌರ ವಿದ್ಯುತ್ ಸ್ಥಾವರ; ಸಾರನಾಥದಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ; ಚಾಂದ್‌ಪುರದ ಕೈಗಾರಿಕಾ ಎಸ್ಟೇಟ್‌ನ ಮೂಲಸೌಕರ್ಯ ಸುಧಾರಣೆ; ಕೇದಾರೇಶ್ವರ, ವಿಶ್ವೇಶ್ವರ ಮತ್ತು ಓಂಕಾರೇಶ್ವರ ಖಂಡ ಪರಿಕ್ರಮದ ದೇವಾಲಯಗಳ ಪುನರುಜ್ಜೀವನ ಯೋಜನೆಗಳನ್ನು ಸಹ ಪ್ರಧಾನಿಯವರು ಲೋಕಾರ್ಪಣೆ ಮಾಡಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • ferozabi Khalid Shaikh October 21, 2024

    go
  • Reena chaurasia August 29, 2024

    bjp
  • Anand Prasad kushwaha April 16, 2023

    पौधे लगाने के लिएप्रेरित करता आनन्द प्रसाद कुशवाहा गांधीनगर तेलीबाग लखनऊ उत्तर प्रदेश ब्रांड
  • Anand Prasad kushwaha April 16, 2023

    घर-घर पौधा,घर घर पौधा, पेड़ पौधे लगाने के लिएप्रेरित करता आनन्द प्रसाद कुशवाहा गांधीनगर तेलीबाग लखनऊ उत्तर प्रदेश ब्रांड एंबेसडर (Anand Prasad kushvaha)
  • AnAnd Sonawane April 09, 2023

    AnAnd Stoneware
  • Sangeeta Sharma April 02, 2023

    बिजली और पानी का संकट ख़ासकर गर्मी मे ही होती हैं हमारे यहाँ भी टिस्को जुस्को सिर्फ अपने छेत्र मे ही 24 घंटे बिजली पानी की सुविधा देती है बाकी जगह परसुडीह बागबेडा़ करनडीड आदियपुर मानगो कदमा बारीडीह बिरसानगर और भी बहुत सारे एरिया मे डी बी सी एरिया मे बिजली पानी का संकट आज भी है गैलन से पानी खरीदना पड़ता है या टैंकर आती है मच्छर का प्रकोप भयंकर नाम का सिर्फ मिनी मुम्बई कहलाता है जमशेदपुर पश्चिम विधान सभा में इतने नेता जीत कर आये और गये पर आज तक ना तो एम जी एम अस्पताल को सुधार पाये और ना गर्मी मे बिजली पानी के संकट को वादा तो बडे़ बडे़ सबने किऐ झारखण्ड मे खनिज संपदा पैसो की कमी नही पर आज के वक्त मे सबसे पिछड़ा गरीब सब बिहार झारखण्ड मे ही मिलेंगे नेता सिर्फ अमीर बनते जाते है सरकार बनते ही जनता वही के वही है आज भी
  • Sohan Singh March 31, 2023

    om namo narayan jai Hind
  • Aniket Malwankar March 31, 2023

    #Baba
  • CHANDRA KUMAR March 31, 2023

    कर्नाटक चुनाव जीतने के लिए बीजेपी को कुछ विशेष कार्य करना चाहिए 1. सबसे पहले केंद्र सरकार को 5000 कन्नड़ भाषा शिक्षक का नियुक्ति के लिए नोटिफिकेशन निकाल देना चाहिए। 2. कन्नड़ भाषा विश्वविद्यालय का स्थापना के लिए शिलान्यास कर दीजिए। 3. कर्नाटक में स्ट्रीट फूड का आनंद लीजिए और आम नागरिकों से सीधा जुड़ने का प्रयास कीजिए। 4. कर्नाटक इतिहास से जुड़ी ऐतिहासिक सामान, पुस्तक, मूर्ति आदि का प्रदर्शनी का आयोजन करवाइए। 5. कर्नाटक के विद्यालयों में भ्रमण कीजिए, छात्रों से संवाद कीजिए। 6. कर्नाटक की लडकियों को संगीत, नृत्य, कला, सॉफ्ट स्किल की शिक्षा के लिए 5000 रुपए छात्रवृत्ति की घोषणा कीजिए। 7. कर्नाटक में, प्रत्येक जिला में गरीब वृद्ध स्त्री पुरुष को, कपड़ा वितरण करवाइए। यह अनुदान का कार्य आरएसएस के द्वारा किया जाए, ताकि आचार संहिता उल्लंघन का आरोप नहीं लग सके। बीजेपी को कांग्रेस पार्टी की रणनीति समझ में ही नहीं आ रहा है। कांग्रेस पार्टी का एकमात्र उद्देश्य है अपना अस्तित्व बचाना। दक्षिण भारत से वापसी करना। लेकिन बीजेपी को कोई मौका नहीं देना चाहिए। कांग्रेस पार्टी के तीन रणनीति को तत्काल असफल कीजिए 1. बीजेपी अडानी को सरकारी पैसा देती है और अडानी चुनाव में बीजेपी का मदद करता है। बीजेपी को एक योजनाबद्ध तरीके से इसका जवाब देना चाहिए। a) ग्लोबलाइजेशन और निवेश के नाम पर देश में विदेशी कंपनियों को बुलाया, और इसीलिए आज देश में भारतीय कंपनी खत्म होता जा रहा है। बीजेपी भारतीय कंपनियों को बचाने का प्रयास कर रही है। परिवार में यदि बड़ा बेटा ज्यादा कमाने लगता है तो उसे घर से भगाते नहीं है, बल्कि उससे कहते हैं की परिवार को मजबूत बनाओ, सबके हित में काम करो। यदि देश की कुछ कंपनी अच्छा प्रदर्शन कर रही है, उन्नति कर रही है, तो क्या इन कंपनियों को नष्ट कर दें। विदेशी कंपनियों को ही सहायता करते रहना कांग्रेस पार्टी का लक्ष्य था। लेकिन बीजेपी स्वदेशी कंपनियों की मदद करके उसे मल्टीनेशनल करके मल्टीब्यूजनेस में आगे बढ़ा रही है। बीजेपी ने स्टार्ट अप को भी आगे बढ़ाया है। बीजेपी किसी भी कंपनी के साथ पक्षपात नहीं कर रही है। इतना ही नहीं, बीजेपी को सभी प्राइवेट कंपनी का मीटिंग बुलाना चाहिए। सभी प्राइवेट कंपनी को एक सिस्टम बनाकर स्थाई रोजगार की घोषणा करने के लिए प्रेरित करना चाहिए। TA DA देना चाहिए , बीजेपी को यह दिखाना चाहिए की कांग्रेस पार्टी भारतीय कंपनियों का दुश्मन है और विदेशी कंपनियों का सहायक है। अडानी और अंबानी से कांग्रेस पार्टी को इसीलिए परेशानी है क्योंकि यह कंपनी भारतीय है, तेजी से विकसित हो रही है, मल्टीनेशनल बन गई है, और मल्टी बिजनेस को अपना रही है। सत्ता में रहते हुए कांग्रेस पार्टी ने पतंजलि कंपनी के साथ सौतेला व्यवहार किया था ! बीजेपी देश की सभी कंपनी को समान अवसर दे रही है। बीजेपी ने देश में कई स्टार्ट अप को आगे बढ़ाया है,जिसे देखकर कांग्रेस पार्टी पागल ही गई है। भारत में आकर विदेशी कंपनी, बिजनेस करके बड़ा हो जाता हैं तब कांग्रेस पार्टी को कोई दिक्कत नहीं होता है। लेकिन भारत की कंपनी विदेश जाकर अपना विस्तार करता है तब कांग्रेस पार्टी के पेट का पानी नहीं पचता है। कांग्रेस पार्टी को अडानी अंबानी से लड़ाई नहीं है, बल्कि हर तरह के विकसित भारतीय तत्वों से कांग्रेस पार्टी नफरत करती है। अब बीजेपी को देश की सभी राष्ट्रीय कंपनियों की सूची बनाकर देश की जनता के सामने रखना चाहिए, किस कंपनी ने कितना रोजगार दिया है और कितना रोजगार देने वाला है, इसका सूची जारी करना चाहिए! 2. राहुल गांधी को जेल भेजना, बीजेपी को दोष दिया जा रहा है की अंबानी अडानी का विरोध करने की वजह से ही राहुल गांधी को जेल भेजा गया। राहुल गांधी ने मोदी जाति को चोर कहा। इससे पहले राहुल गांधी ने ब्राह्मणों को दलितों पर अत्याचार करने वाला कहा था। कांग्रेस पार्टी अलग अलग समय में, अलग अलग स्थान पर, अलग अलग जाति को निशाने (Target) पर लेती है और समाज में विद्वेष पैदा करती है। राहुल गांधी भी जातिवाद को बढ़ाकर देश को बरबाद करना चाहता है, दंगा करवाना चाहता है। राहुल गांधी हिंदुओं को जातियों में तोड़कर वोट का फसल काटना चाहता है। कांग्रेस पार्टी जातिगत जनगणना भी इसी उद्देश्य से करवाना चाहता है ताकि देश जातिवाद का जहर फैलाया जाए। देश को बरबाद करके देश को लूटना कांग्रेस पार्टी का पुराना व्यवसाय है। 3. बीजेपी दक्षिण भारत को इग्नोर करता है, डबल इंजिन के नाम पर राज्य को केंद्र सरकार कंट्रोल करता है। सभी बीजेपी शासित राज्य में केंद्र सरकार की योजना को लागू करे और उस योजना के खर्च को बढ़ा दे। इससे योजना का प्रभाव ज्यादा दिखेगा। बीजेपी बहुत ही मामूली काम करके देश की जनता को खुश कर सकता है। न कोई अतिरिक्त खर्च होगा और न ही कोई अतिरिक्त संसाधन लगेगा, बस थोड़ा सा इच्छाशक्ति चाहिए। a) सबसे पहले बीजेपी को नशामुक्त भारत की घोषणा कर देना चाहिए। भारत का नशीला पदार्थ विदेशों में बेचा जा सकता है, लेकिन कोई भी नशीला पदार्थ का आयात नहीं किया जायेगा। भारतीयों को नशीला पदार्थ का सेवन करने से रोका जाए। तस्करी बढ़ने का संदेह सही हो सकता है लेकिन तस्करी के डर से अच्छा निर्णय नहीं ले, यह भी तो उचित नहीं है। b) खाद्य पदार्थों पर से टैक्स हटा लिया जाए, ताकि सभी खाद्य पदार्थ सस्ता हो जाए। c) पेट्रोलियम उत्पाद को सस्ता कर दिया जाए। d) विदेशी कंपनी को देश से बाहर करने का घोषणा कर दिया जाए। अब भारत में केवल भारतीय कंपनी का ही वर्चस्व होगा। e) देश में केवल अच्छा उत्पाद ही बिकेगा, नागरिकों के शारीरिक मानसिक स्वास्थ्य को नुकसान पहुंचाने वाले सामान को बिकने से रोका जाए। f) देश के नागरिकों के लिए एक वेबसाइट बनाया जाए। सभी भारतीय नागरिकों से आग्रह किया जाए, अपना वोटर आईडी नंबर डालकर, किस सरकारी योजना का लाभ आपको मिला, और किस सरकारी योजना का लाभ आपको नहीं मिला, उसपर मार्किंग कीजिए। इस सर्वे में जिन भारतीय नागरिकों को एक भी योजना का लाभ नहीं मिला हो, उनके बैंक अकाउंट में एक हजार रुपए भेजा जाए। इससे भारतीय नागरिकों के हाथ में पैसा जायेगा, मार्केट में पैसा का फ्लो बढ़ेगा, देश का आर्थिक स्थिति बेहतर होगा। इस सर्वे में यह मालूम हो जायेगा की किन सरकारी योजना पर व्यर्थ में पैसा बरबाद हो रहा है, उसे बंद करके दूसरी योजना प्रारंभ किया जाए। सरकारी योजना को लागू नहीं करने के आधार पर, कार्रवाई शुरू किया जाए, दंड और प्रोत्साहन ही सरकारी योजना को जनता तक पहुंचा सकता है और सरकार को जनता से जोड़ सकता है। मोदीजी को सभी उद्योगपति से मीटिंग करना चाहिए, जनता को लगना चाहिए की मोदीजी सभी उद्योगपति को आगे बढ़ाना चाहता है, केवल अडानी अंबानी को ही नहीं। साप्ताहिक मीटिंग देश के व्यवसायियों के साथ किया जाना चाहिए। सभी जिला उपायुक्त को निर्देश दिया जाए की वह अपने अपने जिले में व्यवसायियों के साथ प्रत्येक सप्ताह मीटिंग करे, उनकी समस्या को दूर करे, और व्यवसाय बढ़ाने में भागीदार बने। 4. भारतीय मुद्रा का मूल्य बढ़ा दिया जाए, इससे कम मुद्रा देकर ज्यादा पेट्रोलियम का आयात किया जा सकेगा। देश के मंदिरों के स्वर्ण तथा वक्फ बोर्ड के संपत्ति पर भी मुद्रा जारी किया जाए। 5. देश में 10000 न्यायाधीश की नियुक्ति के लिए यूपीएससी को विज्ञापन जारी करने का निर्देश दिया जाए। यदि न्यायपालिका और विपक्ष विरोध करे की यूपीएससी द्वारा न्यायाधीश का नियुक्ति नहीं करना चाहिए। तब बीजेपी को जनता के बीच कहना चाहिए की कॉलेजियम और कांग्रेस जनता को न्याय से वंचित कर रही है। देश में लंबित मुकदमे को खत्म करने तथा देश की जनता को न्याय दिलाने का प्रयास बीजेपी सरकार कर रही है। दस हजार न्यायाधीशों की नियुक्ति में, सभी एलएलबी किए हुए भारतीय नागरिक को आवेदन देने का मौका दिया जाए। इसमें यूपीएससी द्वारा प्रश्नपत्र में रीजनिंग, सामान्य ज्ञान, सामान्य गणित, भारतीय तथा विश्व न्याय व्यवस्था, भारतीय संविधान आदि से प्रश्न पूछा जाए। इसमें इंटरव्यू नहीं रखा जाए, जिससे सामान्य गरीब परिवार के बच्चे को इंटरव्यू में छटने से रोका जा सके। इस तरह कॉलेजियम सिस्टम का महत्व घटेगा, देश में रोजगार बढ़ेगा। अब न्यायाधीशों का स्थानांतरण में, उन न्यायाधीश को प्राथमिकता दिया जाए, जो अच्छा न्याय करता है। न्यायाधीश का प्रमोशन में उन्हें प्राथमिकता दिया जाए जो फैसला सुनाने में निष्पक्ष है और फैसला मिलने के बाद वादी प्रतिवादी संतुष्ट हो जाता है और उच्च न्यायालय में अपील नहीं करता है। इस तरह से कॉलेजियम सिस्टम का महत्व घटेगा और सरकार का माहत्व बढ़ेगा। आज कॉलेजियम सिस्टम के माध्यम से चंद्रचूड़ जैसा न्यायाधीश कांग्रेस पार्टी के समर्थन में सुप्रीम कोर्ट का उपयोग कर रहा है।
  • HARISH ARORA March 29, 2023

    जय हो 🇮🇳🚩🇮🇳🚩
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PLI is transforming India’s MSME landscape

Media Coverage

How PLI is transforming India’s MSME landscape
NM on the go

Nm on the go

Always be the first to hear from the PM. Get the App Now!
...
PM pays tribute to former PM Shri Chandrashekhar on his birth anniversary
April 17, 2025

The Prime Minister, Shri Narendra Modi paid tribute to former Prime Minister, Shri Chandrashekhar on his birth anniversary today.

He wrote in a post on X:

“पूर्व प्रधानमंत्री चंद्रशेखर जी को उनकी जयंती पर विनम्र श्रद्धांजलि। उन्होंने अपनी राजनीति में देशहित को हमेशा सर्वोपरि रखा। सामाजिक समरसता और राष्ट्र-निर्माण के उनके प्रयासों को हमेशा याद किया जाएगा।”