ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಮತ್ತು ಹಿರಿಯ ಮುಖಂಡ ಶ್ರೀ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, "ನಾನು ಪದಗಳಿಗೆ ಮೀರಿ ದುಃಖಿತನಾಗಿದ್ದೇನೆ. ಕಲ್ಯಾಣ್ ಸಿಂಗ್ ಜೀ... ಮುತ್ಸದ್ದಿ, ಹಿರಿಯ ಆಡಳಿತಗಾರ, ತಳಮಟ್ಟದ ನಾಯಕ ಮತ್ತು ಮಹಾನ್ ವ್ಯಕ್ತಿ. ಅವರು ಉತ್ತರ ಪ್ರದೇಶದ ಅಭಿವೃದ್ಧಿಗೆ ಅಳಿಸಲಾಗದ ಕೊಡುಗೆಯನ್ನು ಬಿಟ್ಟುಹೋಗಿದ್ದಾರೆ. ಅವರ ಪುತ್ರ ಶ್ರೀ ರಾಜ್‌ವೀರ್ ಸಿಂಗ್ ಅವರೊಂದಿಗೆ ಮಾತನಾಡಿ ಸಂತಾಪ ವ್ಯಕ್ತಪಡಿಸಿದೆ. ಓಂ ಶಾಂತಿ.”

“ಭಾರತದ ಸಾಂಸ್ಕೃತಿಕ ಪುನರುತ್ಥಾನಕ್ಕೆ ನೀಡಿದ ಕೊಡುಗೆಗಳಿಗಾಗಿ ಮುಂದಿನ ಪೀಳಿಗೆಗಳು ಕಲ್ಯಾಣ್ ಸಿಂಗ್ ಅವರಿಗೆ ಎಂದೆಂದಿಗೂ ಆಭಾರಿಯಾಗಿರಲಿವೆ. ಭಾರತೀಯ ಮೌಲ್ಯಗಳಲ್ಲಿ ಅವರ ನಂಬಿಕೆ  ಆಳವಾಗಿ ಬೇರೂರಿತ್ತು ಮತ್ತು ನಮ್ಮ ಶತಮಾನಗಳ ಹಿಂದಿನ ಸಂಪ್ರದಾಯಗಳ ಬಗ್ಗೆ ಅವರು ಹೆಮ್ಮೆ ಹೊಂದಿದ್ದರು.”

ಕಲ್ಯಾಣ್ ಸಿಂಗ್ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ಸೇರಿದ ಕೋಟ್ಯಂತರ ಜನರಿಗೆ ಧ್ವನಿಯಾದರು . ರೈತರು, ಯುವಕರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಅವರು ನಾನಾ ಪ್ರಯತ್ನಗಳನ್ನು ಮಾಡಿದರು." ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
MSME exports touch Rs 9.52 lakh crore in April–September FY26: Govt tells Parliament

Media Coverage

MSME exports touch Rs 9.52 lakh crore in April–September FY26: Govt tells Parliament
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಡಿಸೆಂಬರ್ 2025
December 21, 2025

Assam Rising, Bharat Shining: PM Modi’s Vision Unlocks North East’s Golden Era