ಶುಭ ಶುಕ್ರವಾರದ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೇಸು ಕ್ರಿಸ್ತನ ಮಹತ್ತರ ತ್ಯಾಗವನ್ನು ಸ್ಮರಿಸಿದ್ದಾರೆ. ನಮ್ಮ ಜೀವನದಲ್ಲಿ ದಯೆ, ಸಹಾನುಭೂತಿ ಮತ್ತು ಔದಾರ್ಯವನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಈ ದಿನ ನೆನಪಿಸುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಶುಭ ಶುಕ್ರವಾರದಂದು, ನಾವು ಯೇಸು ಕ್ರಿಸ್ತನ ತ್ಯಾಗವನ್ನು ಸ್ಮರಿಸುತ್ತೇವೆ. ಈ ದಿನವು ದಯೆ, ಸಹಾನುಭೂತಿ ಮತ್ತು ಸದಾಕಾಲ ಔದಾರ್ಯದಿಂದಿರಲು ನಮಗೆ ಸ್ಫೂರ್ತಿ ನೀಡುತ್ತದೆ. ಶಾಂತಿ ಮತ್ತು ಒಗ್ಗಟ್ಟಿನ ಮನೋಭಾವ ಸದಾ ಇರಲಿ."
On Good Friday, we remember the sacrifice of Jesus Christ. This day inspires us to cherish kindness, compassion and always be large hearted. May the spirit of peace and togetherness always prevail.
— Narendra Modi (@narendramodi) April 18, 2025