QuoteThe Constitution is our guiding light: PM Modi
QuoteA special website named constitution75.com has been created to connect the citizens of the country with the legacy of the Constitution: PM
QuoteMahakumbh Ka Sandesh, Ek Ho Poora Desh: PM Modi in Mann Ki Baat
QuoteOur film and entertainment industry has strengthened the sentiment of 'Ek Bharat - Shreshtha Bharat': PM
QuoteRaj Kapoor ji introduced the world to the soft power of India through films: PM Modi
QuoteRafi Sahab’s voice had that magic which touched every heart: PM Modi remembers the legendary singer during Mann Ki Baat
QuoteThere is only one mantra to fight cancer - Awareness, Action and Assurance: PM Modi
QuoteThe Ayushman Bharat Yojana has reduced the financial problems in cancer treatment to a great extent: PM Modi

ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. 2025 ಇನ್ನೇನು ಬಂದೆ ಬಿಟ್ಟಿತು, ನವ ಸಂವತ್ಸರ  ಬಾಗಿಲು ತಟ್ಟುತ್ತಿದೆ. 2025ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬುತ್ತವೆ. ನಮಗೆಲ್ಲರಿಗೂ ಇದು ಹೆಮ್ಮೆಯ ವಿಷಯ. ನಮ್ಮ ಸಂವಿಧಾನ ನಿರ್ಮಾತೃಗಳು ನಮಗೆ ಒಪ್ಪಿಸಿದ ಸಂವಿಧಾನವು ಎಲ್ಲಾ ಕಾಲದಲ್ಲು ಪ್ರಸ್ತುತವಾಗಿದೆ. ಸಂವಿಧಾನ ನಮಗೆ ದಿಕ್ಸೂಚಿಯಾಗಿದೆ, ಮಾರ್ಗದರ್ಶಕನಾಗಿದೆ. ಭಾರತದ ಸಂವಿಧಾನದಿಂದಾಗಿಯೇ  ಇಂದು ನಾನು ಇಲ್ಲಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ವರ್ಷ, ನವೆಂಬರ್ 26 ರ ಸಂವಿಧಾನ ದಿನದಿಂದ ಒಂದು ವರ್ಷದ ಅವಧಿಯವರೆಗೆ ಜರುಗುವ ಅನೇಕ ಚಟುವಟಿಕೆಗಳು ಪ್ರಾರಂಭವಾಗಿವೆ. ದೇಶದ ನಾಗರಿಕರನ್ನು ಸಂವಿಧಾನದ ಪರಂಪರೆಯೊಂದಿಗೆ ಜೋಡಿಸಲು, constitution75.com ಎಂಬ ವಿಶೇಷ ವೆಬ್‌ಸೈಟ್ ಅನ್ನು ಸಹ ರಚಿಸಲಾಗಿದೆ. ಇದರಲ್ಲಿ ನೀವು ಸಂವಿಧಾನದ ಪೀಠಿಕೆಯನ್ನು ಓದಿ ನಿಮ್ಮ ವೀಡಿಯೊವನ್ನು ಅಪ್‌ಲೋಡ್ ಮಾಡಬಹುದು. ನೀವು ವಿವಿಧ ಭಾಷೆಗಳಲ್ಲಿ ಸಂವಿಧಾನವನ್ನು ಓದಬಹುದು ಮತ್ತು ಸಂವಿಧಾನದ ಬಗ್ಗೆ ಪ್ರಶ್ನೆಗಳನ್ನು ಕೇಳಬಹುದು. ‘ಮನದ  ಮಾತಿನ’ ಕೇಳುಗರು, ಶಾಲಾ ವಿದ್ಯಾರ್ಥಿಗಳು, ಕಾಲೇಜಿಗೆ ಹೋಗುವ ಯುವಕರು, ಈ ವೆಬ್‌ಸೈಟ್‌ಗೆ ಖಂಡಿತಾ ಭೇಟಿ ನೀಡಿ ಮತ್ತು ಇದರಲ್ಲಿ ಪಾಲ್ಗೊಳ್ಳಿ ಎಂದು ನಾನು ಆಗ್ರಹಿಸುತ್ತೇನೆ.

ಸ್ನೇಹಿತರೇ, ಮುಂದಿನ ತಿಂಗಳು 13 ರಿಂದ ಪ್ರಯಾಗರಾಜ್‌ನಲ್ಲಿ ಮಹಾಕುಂಭವೂ ನಡೆಯಲಿದೆ. ಸದ್ಯ ಸಂಗಮದ ದಡದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ನನಗೆ ನೆನಪಿದೆ, ಕೆಲವೇ ದಿನಗಳ ಹಿಂದೆ, ನಾನು ಪ್ರಯಾಗರಾಜ್‌ಗೆ ಭೇಟಿ ನೀಡಿದಾಗ, ಹೆಲಿಕಾಪ್ಟರ್‌ನಿಂದ ಇಡೀ ಕುಂಭ ಜರುಗುವ ಪ್ರದೇಶವನ್ನು ವೀಕ್ಷಿಸಿ ನನಗೆ ತುಂಬಾ ಸಂತೋಷವಾಯಿತು. ಎಷ್ಟು ಬೃಹದಾದುದು! ಎಷ್ಟು ಸುಂದರ! ಎಂತಹ ಭವ್ಯತೆ!

ಸ್ನೇಹಿತರೇ, ಮಹಾಕುಂಭದ ವಿಶೇಷತೆ ಅದರ ಅಗಾಧತೆಯಲ್ಲಿ ಮಾತ್ರ ಅಡಗಿಲ್ಲ. ಅದರ ವೈವಿಧ್ಯತೆಯೂ ಕುಂಭದ ವಿಶೇಷತೆಯಾಗಿದೆ. ಈ ಕಾರ್ಯಕ್ರಮದಲ್ಲಿ ಕೋಟಿಗಟ್ಟಲೆ ಜನ ಒಗ್ಗೂಡುತ್ತಾರೆ. ಲಕ್ಷಗಟ್ಟಲೆ ಸಂತರು, ಸಾವಿರಾರು ಸಂಪ್ರದಾಯಗಳು, ನೂರಾರು ಪಂಥಗಳು, ಹಲವು ಅಖಾಡಗಳು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಮೇಳೈಸುತ್ತಾರೆ. ಯಾವುದೇ ತಾರತಮ್ಯವಿಲ್ಲ, ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಅನೇಕತೆಯಲ್ಲಿ ಏಕತೆಯ ಇಂತಹ ದೃಶ್ಯ ಜಗತ್ತಿನ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಆದ್ದರಿಂದಲೇ ನಮ್ಮ ಕುಂಭ ಏಕತೆಯ ಮಹಾಕುಂಭವಾಗಿದೆ. ಈ ಬಾರಿಯ ಮಹಾಕುಂಭವು ಏಕತೆಯ ಮಹಾಕುಂಭದ ಮಂತ್ರಕ್ಕೆ ಪುಷ್ಟಿ ನೀಡಲಿದೆ. ನಾವು ಕುಂಭದಲ್ಲಿ ಭಾಗವಹಿಸಿದಾಗ,  ಏಕತೆಯ ಸಂಕಲ್ಪದೊಂದಿಗೆ ಹಿಂತಿರುಗೋಣ ಎಂದು ನಾನು ನಿಮ್ಮೆಲ್ಲರನ್ನು ಕೇಳಿಕೊಳ್ಳುತ್ತೇನೆ. ಸಮಾಜದಲ್ಲಿನ ಒಡಕು ಮತ್ತು ದ್ವೇಷ ಭಾವನೆಯನ್ನು ತೊಡೆದುಹಾಕುವ ಪ್ರತಿಜ್ಞೆಯನ್ನೂ ತೆಗೆದುಕೊಳ್ಳೋಣ. ಕೆಲವೇ ಪದಗಳಲ್ಲಿ ಹೇಳುವುದಾದರೆ ನಾನು ಹೇಳಬಯಸುವುದು …

ಮಹಾಕುಂಭದ ಸಂದೇಶಒಂದಾಗಲಿ ಸಂಪೂರ್ಣ ದೇಶ.

ಮಹಾಕುಂಭದ ಸಂದೇಶಒಂದಾಗಲಿ ಸಂಪೂರ್ಣ ದೇಶ.

ಮತ್ತು ನಾನು ಅದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆನಾನು ಹೀಗೆ ಹೇಳುತ್ತೇನೆ ...

ಗಂಗೆಯ ನಿರಂತರ ಪ್ರವಾಹದಂತೆ ಇರಲಿ ಒಗ್ಗೂಡಿ ನಮ್ಮ ಸಮಾಜ ಇಬ್ಭಾಗವಾಗದಂತೆ.

ಗಂಗೆಯ ನಿರಂತರ ಪ್ರವಾಹದಂತೆ ಇರಲಿ ಒಗ್ಗೂಡಿ ನಮ್ಮ ಸಮಾಜ ಇಬ್ಭಾಗವಾಗದಂತೆ.

ಸ್ನೇಹಿತರೇ, ಈ ಬಾರಿ ದೇಶ ಮತ್ತು ಪ್ರಪಂಚದಾದ್ಯಂತದ ಭಕ್ತರು ಪ್ರಯಾಗರಾಜ್‌ನಲ್ಲಿ ಡಿಜಿಟಲ್ ಮಹಾಕುಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಡಿಜಿಟಲ್ ನ್ಯಾವಿಗೇಷನ್ ಸಹಾಯದಿಂದ, ನೀವು ವಿವಿಧ ಘಾಟ್‌ಗಳು, ದೇವಾಲಯಗಳು, ಸಾಧುಗಳ ಅಖಾಡಾಗಳನ್ನು ತಲುಪುವ ಮಾರ್ಗವು ಲಭಿಸಲಿದೆ. ಈ ನ್ಯಾವಿಗೇಷನ್ ಸಿಸ್ಟಮ್ ನಿಮಗೆ ಪಾರ್ಕಿಂಗ್ ತಲುಪಲು ಸಹಾಯ ಮಾಡುತ್ತದೆ. ಮೊದಲ ಬಾರಿಗೆ, ಮಹಾಕುಂಭ ಆಯೋಜನೆಯಲ್ಲಿ ಕೃತಕ ಬುದ್ಧಿಮತ್ತೆಯ ಚಾಟ್‌ಬಾಟ್ ಅನ್ನು ಬಳಸಲಾಗುವುದು. AI ಚಾಟ್‌ಬಾಟ್ ಮೂಲಕ, ಕುಂಭಕ್ಕೆ ಸಂಬಂಧಿಸಿದ ಪ್ರತಿಯೊಂದು ರೀತಿಯ ಮಾಹಿತಿಯನ್ನು 11 ಭಾರತೀಯ ಭಾಷೆಗಳಲ್ಲಿ ಪಡೆಯಬಹುದು.  ಈ ಚಾಟ್‌ಬಾಟ್‌ ಗೆ text ಟೈಪ್ ಮಾಡುವ ಮೂಲಕ ಅಥವಾ ಧ್ವನಿ ಮೂಲಕ ಯಾವುದೇ ರೀತಿಯ ಸಹಾಯವನ್ನು ಯಾಚಿಸಬಹುದು. ಕಾರ್ಯಕ್ರಮ ನಡೆಯುವ ಸಂಪೂರ್ಣ ಪ್ರದೇಶವನ್ನು AI ಚಾಲಿತ ಕ್ಯಾಮೆರಾಗಳಿಂದ ಅವರಿಸಲಾಗಿದೆ. ಕುಂಭದಲ್ಲಿ ಯಾರಾದರೂ ತಮ್ಮ ಬಂಧು ಬಳಗದಿಂದ ಬೇರ್ಪಟ್ಟರೆ, ಅವರನ್ನು ಹುಡುಕಲು ಈ ಕ್ಯಾಮೆರಾಗಳು ಸಹಾಯ ಮಾಡುತ್ತವೆ. ಭಕ್ತರು ಡಿಜಿಟಲ್ ಲಾಸ್ಟ್ & ಫೌಂಡ್ ಸೆಂಟರ್ ಸೌಲಭ್ಯವನ್ನೂ ಪಡೆಯಲಿದ್ದಾರೆ. ಸರ್ಕಾರದಿಂದ ಅನುಮೋದಿತ ಪ್ರವಾಸ ಪ್ಯಾಕೇಜ್‌ಗಳು, ವಸತಿ ಮತ್ತು ಹೋಂಸ್ಟೇಗಳ ಬಗ್ಗೆಯೂ ಭಕ್ತರಿಗೆ ಮೊಬೈಲ್‌ನಲ್ಲಿ ಮಾಹಿತಿ ನೀಡಲಾಗುವುದು.  ನೀವೂ ಸಹ ಮಹಾಕುಂಭಕ್ಕೆ ತೆರಳಿದರೆ, ಈ ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಳ್ಳಿ ಮತ್ತು ನಿಮ್ಮ ಸೆಲ್ಫಿಯನ್ನು #EktaKaMahaKumbh ಜೊತೆಗೆ ಅಪ್‌ಲೋಡ್ ಮಾಡಿ.     

ಸ್ನೇಹಿತರೇ, ‘ಮನ್ ಕಿ ಬಾತ್’ ಅಂದರೆ ಎಂಕೆಬಿಯಲ್ಲಿ ಈಗ ನಾವು ಕೆಟಿಬಿಯ ಬಗ್ಗೆ ಮಾತನಾಡೋಣ, ಹಿರಿಯರಲ್ಲಿ, ಅನೇಕರಿಗೆ ಕೆಟಿಬಿ ಬಗ್ಗೆ ತಿಳಿದಿಲ್ಲ. ಆದರೆ ಮಕ್ಕಳನ್ನು ಕೇಳಿ, ಕೆಟಿಬಿ ಅವರಲ್ಲಿ ಬಹಳ ಸೂಪರ್ಹಿಟ್ ಆಗಿದೆ. ಕೆಟಿಬಿ ಎಂದರೆ ಕ್ರಿಶ್, ತ್ರಿಶ್ ಮತ್ತು ಬಾಲ್ಟಿಬಾಯ್. ಮಕ್ಕಳ ಮೆಚ್ಚಿನ ಅನಿಮೇಷನ್ ಸರಣಿಯ ಬಗ್ಗೆ ನಿಮಗೆ ತಿಳಿದಿರಬಹುದು, ಅದರ ಹೆಸರು ಕೆಟಿಬಿ – ಭಾರತ್ ಹೈ ಹಮ್ ಮತ್ತು ಈಗ ಅದರ ಎರಡನೇ ಸೀಸನ್ ಕೂಡ ಬಂದಿದೆ. ಈ ಮೂರು ಅನಿಮೇಷನ್ ಪಾತ್ರಗಳು ಬೆಳಕಿಗೆ ಬಾರದ ಭಾರತೀಯ ಸ್ವಾತಂತ್ರ್ಯ ಹೋರಾಟದ ನಾಯಕರು ಮತ್ತು ನಾಯಕಿಯರ ಬಗ್ಗೆ ನಮಗೆ ಹೇಳುತ್ತವೆ. ಇತ್ತೀಚಿಗೆ ಗೋವಾದ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ವಿಶೇಷ ಶೈಲಿಯಲ್ಲಿ ಅದರ ಸೀಸನ್-2 ನ್ನು ಪ್ರಾರಂಭಿಸಲಾಯಿತು. ಈ ಸರಣಿಯು ಹಲವು ಭಾರತೀಯ ಭಾಷೆಗಳಲ್ಲಿ ಮಾತ್ರವಲ್ಲದೆ ವಿದೇಶಿ ಭಾಷೆಗಳಲ್ಲಿಯೂ ಪ್ರಸಾರವಾಗುತ್ತದೆ ಎಂಬುದು ಅತ್ಯಂತ ಅದ್ಭುತ ಸಂಗತಿ. ಇದನ್ನು ದೂರದರ್ಶನ ಮತ್ತು ಇತರ OTT ಪ್ಲಾಟ್‌ಫಾರ್ಮ್‌ಗಳಲ್ಲಿ ನೋಡಬಹುದು.

ಸ್ನೇಹಿತರೇ, ನಮ್ಮ ಅನಿಮೇಷನ್ ಚಲನಚಿತ್ರಗಳು, ಸಾಮಾನ್ಯ ಚಲನಚಿತ್ರಗಳು ಮತ್ತು ಟಿವಿ ಧಾರಾವಾಹಿಗಳ ಜನಪ್ರಿಯತೆಯು ಸೃಜನಶೀಲ ಉದ್ಯಮದಲ್ಲಿ ಭಾರತದ ಅದೆಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ತೋರಿಸುತ್ತದೆ. ಈ ಉದ್ಯಮವು ದೇಶದ ಪ್ರಗತಿಯಲ್ಲಿ ದೊಡ್ಡ ಕೊಡುಗೆಯನ್ನು ನೀಡುತ್ತಿದೆ ಅಲ್ಲದೆ ನಮ್ಮ ಆರ್ಥಿಕತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿದೆ. ನಮ್ಮ ಚಲನಚಿತ್ರ ಮತ್ತು ಮನರಂಜನಾ ಉದ್ಯಮವು ತುಂಬಾ ದೊಡ್ಡದಾಗಿದೆ. ದೇಶದ ಹಲವು ಭಾಷೆಗಳಲ್ಲಿ ಚಲನಚಿತ್ರಗಳನ್ನು ತಯಾರಿಸಲಾಗುತ್ತದೆ ಮತ್ತು creative content ಸಿದ್ಧಗೊಳಿಸಲಾಗುತ್ತದೆ. ನಾನು ನಮ್ಮ ಚಲನಚಿತ್ರ ಮತ್ತು ಮನರಂಜನಾ ಉದ್ಯಮವನ್ನು ಅಭಿನಂದಿಸುತ್ತೇನೆ ಏಕೆಂದರೆ ಅದು ‘ಏಕ್ ಭಾರತ್ – ಶ್ರೇಷ್ಠ ಭಾರತ’ ಎಂಬ ಭಾವನೆಗೆ ಪುಷ್ಟಿ ನೀಡುತ್ತದೆ.   

ಸ್ನೇಹಿತರೇ, 2024ರಲ್ಲಿ ನಾವು ಚಿತ್ರರಂಗದ ಅನೇಕ ಮಹಾನ್ ವ್ಯಕ್ತಿಗಳ 100 ನೇ ಜನ್ಮ ಜಯಂತಿಯನ್ನು ಆಚರಿಸುತ್ತಿದ್ದೇವೆ. ಈ ವ್ಯಕ್ತಿಗಳು ಭಾರತೀಯ ಚಿತ್ರರಂಗಕ್ಕೆ ವಿಶ್ವ ಮಟ್ಟದಲ್ಲಿ ಮನ್ನಣೆ ತಂದು ಕೊಟ್ಟರು. ರಾಜ್ ಕಪೂರ್ ಅವರು ಭಾರತದ ಸಾಫ್ಟ್ ಪವರ್ ಅನ್ನು ಚಲನಚಿತ್ರಗಳ ಮೂಲಕ ಜಗತ್ತಿಗೆ ಪರಿಚಯಿಸಿದರು. ರಫಿ ಸಾಹಬ್ ಅವರ ಧ್ವನಿಯಲ್ಲಿ ಎಂಥ ಮಾಂತ್ರಿಕತೆ ಇತ್ತೆಂದರೆ, ಎಲ್ಲರ ಹೃದಯವನ್ನು ಮುಟ್ಟುತ್ತಿತ್ತು. ಅವರ ಧ್ವನಿ ಅದ್ಭುತವಾಗಿತ್ತು. ಭಕ್ತಿಗೀತೆಗಳಾಗಲಿ, ಪ್ರಣಯ ಗೀತೆಗಳಾಗಲಿ, ನೋವಿನ ಗೀತೆಗಳಾಗಲಿ, ಪ್ರತಿಯೊಂದು ಭಾವಕ್ಕೆ ತಮ್ಮ ಕಂಠದಿಂದ ಅವರು ಜೀವ ತುಂಬುತ್ತಿದ್ದರು. ಇಂದಿಗೂ ಯುವ ಪೀಳಿಗೆ ಅವರ ಹಾಡುಗಳನ್ನು ಅಷ್ಟೇ ಪ್ರೀತಿಯಿಂದ ಕೇಳುತ್ತಾರೆ ಎಂದರೆ ಈ ಮೂಲಕ ಆ ಕಲಾವಿದನ ಹಿರಿಮೆಯನ್ನು ಅಳೆಯಬಹುದಾಗಿದೆ. ಇದೆ ಅಲ್ಲವೇ ಕಾಲಾತೀತವಾದ ಕಲೆಯಾ ಗುರುತು. ಅಕ್ಕಿನೇನಿ ನಾಗೇಶ್ವರ ರಾವ್ ಅವರು ತೆಲುಗು ಚಿತ್ರರಂಗವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಅವರ ಚಲನಚಿತ್ರಗಳು ಭಾರತೀಯ ಸಂಪ್ರದಾಯಗಳು ಮತ್ತು ಮೌಲ್ಯಗಳನ್ನು ಚೆನ್ನಾಗಿ ಪ್ರಸ್ತುತಪಡಿವೆ. ತಪನ್ ಸಿನ್ಹಾ ಅವರ ಚಿತ್ರಗಳು ಸಮಾಜಕ್ಕೆ ಹೊಸ ದೃಷ್ಟಿಕೋನ ನೀಡಿದವು. ಅವರ ಚಲನಚಿತ್ರಗಳು ಸಾಮಾಜಿಕ ಪ್ರಜ್ಞೆ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಒಳಗೊಂಡಿದ್ದವು. ಈ ಸೆಲೆಬ್ರಿಟಿಗಳ ಜೀವನ ನಮ್ಮ ಇಡೀ ಚಿತ್ರರಂಗಕ್ಕೆ ಸ್ಪೂರ್ತಿದಾಯಕ.

ಸ್ನೇಹಿತರೇ, ನಾನು ನಿಮಗೆ ಇನ್ನೊಂದು ಸಂತಸದಾ  ಸುದ್ದಿಯನ್ನು ನೀಡಲು ಬಯಸುತ್ತೇನೆ. ಭಾರತದ ಸೃಜನಶೀಲ ಪ್ರತಿಭೆಯನ್ನು ವಿಶ್ವದೆದುರು ಪ್ರದರ್ಶಿಸಲು ಒಂದು ದೊಡ್ಡ ಅವಕಾಶ ಒದಗಿ ಬಂದಿದೆ. ಮುಂದಿನ ವರ್ಷ, ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ ಅಂದರೆ ವೇವ್ಸ್ ಶೃಂಗಸಭೆಯನ್ನು ನಮ್ಮ ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುವುದು. ವಿಶ್ವದ ಆರ್ಥಿಕ ಕ್ಷೇತ್ರದ ದಿಗ್ಗಜರು ಒಗ್ಗೂಡುವ ದಾವೋಸ್ ಬಗ್ಗೆ ನೀವೆಲ್ಲರೂ ಕೇಳಿರಬಹುದು. ಅದೇ ರೀತಿ, ವೇವ್ಸ್ ಶೃಂಗಸಭೆಯಲ್ಲಿ, ವಿಶ್ವದ ಮಾಧ್ಯಮ ಮತ್ತು ಮನರಂಜನಾ ಉದ್ಯಮದ ದಿಗ್ಗಜರು ಮತ್ತು ಸೃಜನಶೀಲ ಪ್ರಪಂಚದ ಜನರು ಭಾರತಕ್ಕೆ ಬರುತ್ತಾರೆ. ಭಾರತವನ್ನು ಜಾಗತಿಕ content creation ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಶೃಂಗಸಭೆಯು ಪ್ರಮುಖ ಹೆಜ್ಜೆಯಾಗಿದೆ. ಈ ಶೃಂಗಸಭೆಯ ತಯಾರಿಯಲ್ಲಿ ನಮ್ಮ ದೇಶದ ಯುವ creator ಗಳು ಕೂಡಾ ಸಂಪೂರ್ಣ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಿದೆ. ನಾವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಸಾಗುತ್ತಿರುವಾಗ, ನಮ್ಮ creator  economy ಹೊಸ ಶಕ್ತಿಯನ್ನು ತುಂಬುತ್ತಿದೆ. ನೀವು ಯುವ creators ಆಗಿರಬಹುದು ಅಥವಾ ಪ್ರಸಿದ್ಧ ಕಲಾವಿದರಾಗಿರಬಹುದು, ಬಾಲಿವುಡ್ ಅಥವಾ ಪ್ರಾದೇಶಿಕ ಸಿನಿಮಾ ಕ್ಷೇತ್ರದವರಾಗಿರಬಹುದು, ಟಿವಿ ಉದ್ಯಮದಲ್ಲಿ ವೃತ್ತಿಪರರು ಅಥವಾ ಅನಿಮೇಷನ್, ಗೇಮಿಂಗ್ ಅಥವಾ ಮನರಂಜನಾ ತಂತ್ರಜ್ಞಾನದಲ್ಲಿ ಪರಿಣಿತರಾಗಿರಬಹುದು , ನೀವೆಲ್ಲರೂ ವೇವ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಎಂದು ನಾನು ಭಾರತದ ಸಂಪೂರ್ಣ ಮನರಂಜನೆ ಮತ್ತು ಸೃಜನಶೀಲ ಉದ್ಯಮವನ್ನು ಆಗ್ರಹಿಸುತ್ತೇನೆ .

ನನ್ನ ಪ್ರಿಯ ದೇಶವಾಸಿಗಳೇ, ಭಾರತೀಯ ಸಂಸ್ಕೃತಿಯ ಪ್ರಕಾಶ ಇಂದು ಪ್ರಪಂಚದ ಮೂಲೆ ಮೂಲೆಗಳಲ್ಲಿ ಹೇಗೆ ಹರಡುತ್ತಿದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನಮ್ಮ ಸಾಂಸ್ಕೃತಿಕ ಪರಂಪರೆಯ ಜಾಗತಿಕ ವಿಸ್ತರಣೆಗೆ ಸಾಕ್ಷಿಯಾಗಿರುವ ಮೂರು ಖಂಡಗಳಿಂದ ಅಂತಹ ಪ್ರಯತ್ನಗಳ ಬಗ್ಗೆ ಇಂದು ನಾನು ನಿಮಗೆ ಹೇಳಬಯಸುತ್ತೇನೆ. ಇವೆಲ್ಲವೂ ಒಂದಕ್ಕೊಂದು ಮೈಲುಗಟ್ಟಲೆ ದೂರದಲ್ಲಿದ್ದರೂ ಭಾರತದ  ಬಗ್ಗೆ ತಿಳಿದುಕೊಳ್ಳುವ ಮತ್ತು ನಮ್ಮ ಸಂಸ್ಕೃತಿಯಿಂದ ಕಲಿಯುವ ಅವರ ಬಯಕೆ ಒಂದೇ ರೀತಿಯದ್ದಾಗಿದೆ.

ಸ್ನೇಹಿತರೇ, ವರ್ಣಚಿತ್ರಗಳ ಪ್ರಪಂಚ ಎಷ್ಟು ಬಣ್ಣಗಳಿಂದ ತುಂಬಿರುತ್ತದೆಯೋ ಅಷ್ಟೇ ಸುಂದರವಾಗಿರುತ್ತದೆ. ಟಿವಿ ಮೂಲಕ ‘ಮನದ ಮಾತು’ ವೀಕ್ಷಿಸುತ್ತಿರುವ ಸ್ನೇಹಿತರು ಈಗ ಟಿವಿಯಲ್ಲಿ ಕೆಲವು ವರ್ಣಚಿತ್ರಗಳನ್ನು ವೀಕ್ಷಿಸಬಹುದು. ಈ ವರ್ಣಚಿತ್ರಗಳಲ್ಲಿ ನಮ್ಮ ದೇವ ದೇವತೆಗಳು, ನೃತ್ಯ ಕಲೆಗಳು ಮತ್ತು ಶ್ರೇಷ್ಠ ವ್ಯಕ್ತಿಗಳನ್ನು ನೋಡಿ ನಿಮಗೆ ತುಂಬಾ ಸಂತೋಷವಾಗಬಹುದು. ಇವುಗಳಲ್ಲಿ ನೀವು ಭಾರತದಲ್ಲಿ ಕಂಡುಬರುವ ಪ್ರಾಣಿ ಪಕ್ಷಿಗಳಲ್ಲದೆ ಇನ್ನು ಬಹಳಷ್ಟು ವಿಷಯಗಳನ್ನು ನೋಡಬಹುದು. ಇವುಗಳಲ್ಲಿ ತಾಜ್ ಮಹಲ್‌ನ ಭವ್ಯವಾದ ವರ್ಣಚಿತ್ರವೂ ಸೇರಿದೆ, ಇದನ್ನು 13 ವರ್ಷದ ಬಾಲಕಿ ರಚಿಸಿದ್ದಾಳೆ. ಈ ಅಂಗವಿಕಲ ಬಾಲಕಿ ತನ್ನ ಬಾಯಿಯಿಂದಲೇ ಈ ಪ್ಯಾಟಿಂಗ್ ಅನ್ನು ಸಿದ್ಧಪಡಿಸಿದ್ದಾಳೆ ಎಂದು ತಿಳಿದು ನಿಮಗೆ ಆಶ್ಚರ್ಯವಾಗಬಹುದು. ಅತ್ಯಂತ ಕುತೂಹಲಕಾರಿ ಸಂಗತಿಯೆಂದರೆ, ಈ ಚಿತ್ರಗಳನ್ನು ನಿರ್ಮಿಸಿದವರು ಭಾರತದವರಲ್ಲ ಹೊರತು ಈಜಿಪ್ಟ್‌ನ ವಿದ್ಯಾರ್ಥಿಗಳು. ಕೆಲವೇ ವಾರಗಳ ಹಿಂದೆ ಈಜಿಪ್ಟ್ ನ ಸುಮಾರು 23 ಸಾವಿರ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಭಾರತದ ಸಂಸ್ಕೃತಿ ಮತ್ತು ಉಭಯ ದೇಶಗಳ ಐತಿಹಾಸಿಕ ಸಂಬಂಧಗಳನ್ನು ಬಿಂಬಿಸುವ ಚಿತ್ರಗಳನ್ನು ಬರೆಯಬೇಕಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಯುವಕರನ್ನು ನಾನು ಅಭಿನಂದಿಸುತ್ತೇನೆ. ಅವರ ಸೃಜನಶೀಲತೆ ಬಗ್ಗೆ  ಎಷ್ಟು ಹೊಗಳಿದರೂ ಸಾಲದು.

ಸ್ನೇಹಿತರೇ, ಪರಾಗ್ವೆ, ದಕ್ಷಿಣ ಅಮೆರಿಕಾದಲ್ಲಿರುವ ಒಂದು ದೇಶ. ಅಲ್ಲಿ ವಾಸಿಸುವ ಭಾರತೀಯರ ಸಂಖ್ಯೆ ಸಾವಿರದಷ್ಟಿರಬಹುದು. ಪರಾಗ್ವೆಯಲ್ಲಿ ಒಂದು ಅದ್ಭುತ ಪ್ರಯತ್ನ ಮಾಡಲಾಗುತ್ತಿದೆ. ಎರಿಕಾ ಹ್ಯೂಬರ್, ಅಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಉಚಿತವಾಗಿ ಆಯುರ್ವೇದ ಸಮಾಲೋಚನೆ ಕೈಗೊಳ್ಳುತ್ತಿದ್ದಾರೆ. ಆಯುರ್ವೇದ ಸಲಹೆ ಪಡೆಯಲು ಅವರ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಆಗಮಿಸುತ್ತಿದ್ದಾರೆ. ಎರಿಕಾ ಹ್ಯೂಬರ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರೂ, ಅವರಿಗೆ ಆಯುರ್ವೇದದತ್ತ ಹೆಚ್ಚು ಒಲವು. ಆಯುರ್ವೇದಕ್ಕೆ ಸಂಬಂಧಿಸಿದ ಕೋರ್ಸ್‌ಗಳನ್ನು ಮಾಡಿದ್ದ ಅವರು ಕಾಲಕ್ರಮೇಣ ಅದರಲ್ಲಿ ಪ್ರಾವೀಣ್ಯತೆ ಸಾಧಿಸಿದ್ದಾರೆ.

ಸ್ನೇಹಿತರೇ, ಪ್ರಪಂಚದ ಅತ್ಯಂತ ಪುರಾತನ ಭಾಷೆ ತಮಿಳು ಮತ್ತು ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ವಿಷಯವಾಗಿದೆ. ಪ್ರಪಂಚದಾದ್ಯಂತದ ದೇಶಗಳಲ್ಲಿ ಇದನ್ನು ಕಲಿಯುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಕಳೆದ ತಿಂಗಳ ಕೊನೆಯಲ್ಲಿ, ಫಿಜಿಯಲ್ಲಿ ಭಾರತ ಸರ್ಕಾರದ ಸಹಾಯದಿಂದ ತಮಿಳು ಬೋಧನಾ ಕಾರ್ಯಕ್ರಮ ಪ್ರಾರಂಭವಾಯಿತು. ಕಳೆದ 80 ವರ್ಷಗಳಲ್ಲಿ ತಮಿಳು ಭಾಷೆಯಲ್ಲಿ ತರಬೇತಿ ಪಡೆದ ಶಿಕ್ಷಕರು ಫಿಜಿಯಲ್ಲಿ ಈ ಭಾಷೆಯನ್ನು ಕಲಿಸುತ್ತಿರುವುದು ಪ್ರಥಮ ಬಾರಿಯಾಗಿದೆ. ಇಂದು ಫಿಜಿಯನ್ ವಿದ್ಯಾರ್ಥಿಗಳು ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಕಲಿಯಲು ಉತ್ಸುಕರಾಗಿರುವುದ್ದನ್ನು ಅರಿತು ನನಗೆ ಸಂತೋಷವಾಯಿತು.

ಸ್ನೇಹಿತರೇ, ಈ ವಿಷಯಗಳು, ಈ ಘಟನೆಗಳು ಕೇವಲ ಯಶಸ್ಸಿನ ಕಥೆಗಳು ಮಾತ್ರವಲ್ಲ, ನಮ್ಮ ಸಾಂಸ್ಕೃತಿಕ ಪರಂಪರೆಯ ಗಾಥೆಗಳೂ ಆಗಿವೆ . ಈ ಉದಾಹರಣೆಗಳು ನಾವು ಹೆಮ್ಮೆ ಪಡುವಂತೆ ಮಾಡುತ್ತವೆ. ಕಲೆಯಿಂದ ಆಯುರ್ವೇದದವರೆಗೆ ಮತ್ತು ಭಾಷೆಯಿಂದ ಸಂಗೀತದವರೆಗೆ, ಭಾರತದಲ್ಲಿಯಾ ಅದೆಷ್ಟೋ ವಿಷಯಗಳು ವಿಶ್ವಾದ್ಯಂತ ಪ್ರಭಾವ ಬೀರುತ್ತಿವೆ. ಸ್ನೇಹಿತರೇ, ಚಳಿಗಾಲದ ಈ ಋತುವಿನಲ್ಲಿ ದೇಶಾದ್ಯಂತ ಕ್ರೀಡೆ ಮತ್ತು ಸದೃಢತೆ ಕುರಿತಂತೆ ಅನೇಕ ಚಟುವಟಿಕೆಗಳು ನಡೆಯುತ್ತಿವೆ. ಜನರು ಫಿಟ್ನೆಸ್ ಅನ್ನು ತಮ್ಮ ದಿನಚರಿಯ ಭಾಗವನ್ನಾಗಿಸಿಕೊಂಡಿರುವುದು ನನಗೆ ಸಂತಸ ತಂದಿದೆ. ಕಾಶ್ಮೀರದಲ್ಲಿ ಸ್ಕೀಯಿಂಗ್ ನಿಂದ ಹಿಡಿದು ಗುಜರಾತ್ ನಲ್ಲಿ ಗಾಳಿಪಟ ಸ್ಪರ್ಧೆಯವರೆಗೂ ಪ್ರತಿಯೊಂದು ವಿಧದ ಕ್ರೀಡೆಯಲ್ಲಿ ಉತ್ಸಾಹ ಕಂಡು ಬರುತ್ತಿದೆ. #SundayOnCycle ಮತ್ತು #CyclingTuesday ನಂತಹ ಅಭಿಯಾನಗಳಿಂದ ಸೈಕ್ಲಿಂಗ್ ಗೆ ಸಾಕಷ್ಟು ಪ್ರಚಾರ  ದೊರೆಯುತ್ತಿದೆ.

ಸ್ನೇಹಿತರೇ, ನಾನು ಈಗ ನಿಮಗೆ ವಿಶೇಷವಾದ ವಿಷಯವೊಂದನ್ನು ಹೇಳಲು ಬಯಸುತ್ತೇನೆ. ಇದು ನಮ್ಮ ದೇಶದಲ್ಲಿ ಉಂಟಾಗುತ್ತಿರುವ ಬದಲಾವಣೆ ಮತ್ತು ಯುವಜನತೆಯ ಉತ್ಸಾಹದ ಸಂಕೇತವಾಗಿದೆ.  ನಮ್ಮ ಬಸ್ತರ್ ನಲ್ಲಿ ಒಂದು ವಿಶಿಷ್ಠ ಒಲಿಂಪಿಕ್ ಆರಂಭವಾಗಿದೆ ಎಂಬುದು ನಿಮಗೆ ಗೊತ್ತೇ! ಹೌದು, ಮೊದಲ ಬಾರಿಗೆ ಬಸ್ತರ್ ನಲ್ಲಿ ನಡೆದಿರುವ ಒಲಿಂಪಿಕ್ ನಿಂದ ಅಲ್ಲಿ ಹೊಸ ಕ್ರಾಂತಿ ಉದಯವಾಗುತ್ತಿದೆ. ಬಸ್ತರ್ ಒಲಿಂಪಿಕ್ಸ್ ನ ಕನಸು ನನಸಾಗುತ್ತಿರುವುದು ನನಗಂತೂ ಬಹಳ ಸಂತಸದ ವಿಷಯವಾಗಿದೆ. ಒಂದು ಕಾಲದಲ್ಲಿ ಮಾವೋವಾದಿಗಳ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಈ ಪ್ರದೇಶದಲ್ಲಿ ಈಗ ಒಲಿಂಪಿಕ್ಸ್ ನಡೆದಿರುವುದು ನಿಮಗೆ ಕೂಡಾ ಸಂತಸವೆನಿಸುತ್ತದೆ.  ಬಸ್ತರ್ ಒಲಿಂಪಿಕ್ಸ್ ನ ಅದೃಷ್ಟರೂಪಿ ಬೊಂಬೆ – ‘ಕಾಡೆಮ್ಮೆ’ ಮತ್ತು ‘ಗುಡ್ಡಗಾಡಿನ ಮೈನಾ ಆಗಿದೆ. ಇದರಲ್ಲಿ ಬಸ್ತರ್ ನ ಶ್ರೀಮಂತ ಸಂಸ್ಕೃತಿಯ ನೋಟ ಕಂಡುಬರುತ್ತದೆ. ಈ ಬಸ್ತರ್ ಕ್ರೀಡಾ ಮಹಾಕುಂಭದ ಘೋಷ ವಾಕ್ಯ ಇದಾಗಿದೆ–

ಕರಸಾಯ ತಾ ಬಸ್ತರ್ ಬರಸಾಯೇ ತಾ ಬಸ್ತರ್

ಅಂದರೆಆಡುತ್ತದೆ ಬಸ್ತರ್ – ಗೆಲ್ಲುತ್ತದೆ ಬಸ್ತರ್ |

ಮೊದಲ ಬಾರಿಗೆ ಬಸ್ತರ್ ಒಲಿಂಪಿಕ್ ನಲ್ಲಿ 7 ಜಿಲ್ಲೆಗಳ ಒಂದು ಲಕ್ಷ 65 ಸಾವಿರ ಆಟಗಾರರು ಪಾಲ್ಗೊಂಡಿದ್ದಾರೆ. ಇದು ಕೇವಲ ಅಂಕಿ-ಅಂಶ ಮಾತ್ರವಲ್ಲ – ಇದು ನಮ್ಮ ಯುವಜನತೆಯ ಸಂಕಲ್ಪದ – ಬದ್ಧತೆಯ ಕಥೆಯಾಗಿದೆ. ಅಥ್ಲೆಟಿಕ್ಸ್, ಬಿಲ್ಲುಗಾರಿಕೆ, ಬ್ಯಾಡ್ಮಿಂಟನ್, ಫುಟ್ಬಾಲ್, ಹಾಕಿ, ವೈಟ್ ಲಿಫ್ಟಿಂಗ್, ಕರಾಟೆ, ಕಬಡ್ಡಿ, ಖೋ-ಖೋ, ಮತ್ತು ವಾಲೀಬಾಲ್ – ಹೀಗೆ ಪ್ರತಿಯೊಂದು ಆಟದಲ್ಲಿ ನಮ್ಮ ಯುವಜನತೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಕಾರಿ ಕಶ್ಯಪ್ ಅವರ ಕತೆಯು ನನ್ನಲ್ಲಿ ಬಹಳ ಸ್ಫೂರ್ತಿ ತುಂಬುತ್ತದೆ. ಒಂದು ಸಣ್ಣ ಗ್ರಾಮದಿಂದ ಬಂದಿರುವ ಕಾರೀ ಅವರು ಬಿಲ್ಲುಗಾರಿಕೆಯಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಅವರು ಹೀಗೆ ಹೇಳುತ್ತಾರೆ – “ಬಸ್ತರ್ ಒಲಿಂಪಿಕ್ ನಮಗೆ ಕೇವಲ ಆಟದ ಮೈದಾನ ಮಾತ್ರವಲ್ಲದೇ ಜೀವನದಲ್ಲಿ ಮುಂದೆ ಸಾಗುವ ಅವಕಾಶವನ್ನೂ ನೀಡಿದೆ ಸುಕ್ಮಾ ದ ಪಾಯಲ್ ಕವಾಸೀ ಅವರ ಮಾತುಗಳು ಕೂಡಾ ಬಹಳ ಸ್ಫೂರ್ತಿದಾಯಕವಾಗಿದೆ. Javelin ಎಸೆತದಲ್ಲಿ ಚಿನ್ನದ ಪದಕ ವಿಜೇತೆ ಪಾಯಲ್ ಹೀಗೆನ್ನುತ್ತಾರೆ – “ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಯಾವುದೇ ಗುರಿ ಸಾಧನೆ ಅಸಂಭವವಲ್ಲ” ಸುಕ್ಮಾದ ದೋರನ್ ಪಾಲ್ ನ ಪುನೆಮ್ ಸನ್ನಾ ಅವರ ಕತೆಯಂತೂ ನವಭಾರತದ ಪ್ರೇರಣಾದಾಯಕ ಕತೆಯಾಗಿದೆ. ಒಂದೊಮ್ಮೆ ನಕ್ಸಲರ ಪ್ರಭಾವಕ್ಕೆ ಒಳಗಾಗಿದ್ದ ಪುನೇಮ್ ಅವರು ಇಂದು ಗಾಲಿಕುರ್ಚಿಯಲ್ಲಿ ಓಡಿ ಪದಕ ಗೆಲ್ಲುತ್ತಿದ್ದಾರೆ. ಅವರ ಧೈರ್ಯ ಮತ್ತು ಸಾಹಸ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿದೆ. ಕೋಡ್ ಗಾಂವ್ ನ ಬಿಲ್ಲುಗಾರ್ತಿ ರಂಜು ಸೋರಿ ಅವರನ್ನು ಬಸ್ತರ್ ಯೂತ್ ಐಕಾನ್ ಎಂದು ಆಯ್ಕೆ ಮಾಡಲಾಯಿತು. ಬಸ್ತರ್ ಒಲಿಂಪಿಕ್ ದೂರ ದೂರದ ಪ್ರದೇಶಗಳ ಯುವಜನತೆಗೆ ರಾಷ್ಟ್ರೀಯ ವೇದಿಕೆ ತಲುಪುವ ಅವಕಾಶವನ್ನು ನೀಡುತ್ತಿದೆ ಎನ್ನುವುದು ಅವರು ಭಾವಿಸುತ್ತಾರೆ.   

ಸ್ನೇಹಿತರೇ, ಒಲಿಂಪಿಕ್ ಕೇವಲ ಒಂದು ಕ್ರೀಡಾ ಆಯೋಜನೆ ಮಾತ್ರವಲ್ಲ. ಇದು ಅಭಿವೃದ್ಧಿ ಮತ್ತು ಕ್ರೀಡೆಯ ಸಂಗಮದ ವೇದಿಕೆಯಾಗಿದೆ. ಇಲ್ಲಿ ನಮ್ಮ ಯುವಜನತೆ ತಮ್ಮ ಪ್ರತಿಭೆಯನ್ನು ಮೆರೆಯುತ್ತಿದ್ದಾರೆ ಮತ್ತು ಒಂದು ನವ ಭಾರತ ನಿರ್ಮಾಣ ಮಾಡುತ್ತಿದ್ದಾರೆ.

ನೀವಿರುವ ಪ್ರದೇಶದಲ್ಲಿ ಇಂತಹ ಕ್ರೀಡಾಕೂಟಗಳಿಗೆ ಪ್ರೋತ್ಸಾಹಿಸಿ.

ಆಡುತ್ತದೆ ಭಾರತ – ಗೆಲ್ಲುತ್ತದೆ ಭಾರತದೊಂದಿಗೆ ನಿಮ್ಮ ಪ್ರದೇಶದ ಕ್ರೀಡಾ ಪ್ರತಿಭೆಗಳ ಗಾಥೆಗಳನ್ನು ಹಂಚಿಕೊಳ್ಳಿ.

ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಮುನ್ನಡೆಯುವ ಅವಕಾಶ ನೀಡಿ ಎಂದು ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ.

ನೆನಪಿಡಿ, ಕ್ರೀಡೆಗಳಿಂದ ಕೇವಲ ದೈಹಿಕ ಬೆಳವಣಿಗೆ ಮಾತ್ರವಲ್ಲದೇ, ಇದು ಕ್ರೀಡಾಕಾರ ಮನೋಭಾವದೊಂದಿಗೆ ಸಮಾಜವನ್ನು ಜೋಡಿಸುವ ಒಂದು ಪ್ರಬಲ ಮಾಧ್ಯಮವೂ ಆಗಿದೆ. ಚೆನ್ನಾಗಿ ಆಟವಾಗಿ – ಚೆನ್ನಾಗಿ ಆಟವಾಡಿ.

ನನ್ನ ಪ್ರೀತಿಯ ದೇಶವಾಸಿಗಳೇ, ಭಾರತದ ಎರಡು ದೊಡ್ಡ ಸಾಧನೆಗಳು ಇಂದು ವಿಶ್ವದ ಗಮನವನ್ನು ಸೆಳೆಯುತ್ತಿವೆ. ಇದನ್ನು  ಕೇಳಿದರೆ ನೀವು ಕೂಡಾ ಹೆಮ್ಮೆ ಪಡುತ್ತೀರಿ - ಈ ಎರಡೂ ಯಶಸ್ಸುಗಳು  ಸಾಧನೆಯಾಗಿರುವುದು ಆರೋಗ್ಯ ಕ್ಷೇತ್ರದಲ್ಲಿ.  ಮೊದಲ ಯಶಸ್ತು ದೊರೆತಿರುವುದು ಮಲೇರಿಯಾ ವಿರುದ್ಧದ ಹೋರಾಟದಲ್ಲಿ. ಮಲೇರಿಯಾ ರೋಗವು ನಾಲ್ಕು ಸಾವಿರ ವರ್ಷಗಳಿಂದ ಮಾನವಕುಲಕ್ಕೆ ಒಂದು ದೊಡ್ಡ ಸವಾಲಾಗಿದೆ. ಸ್ವಾತಂತ್ರ್ಯದ ಸಮಯದಲ್ಲಿ ಕೂಡಾ ಇದು ನಮ್ಮ ಆರೋಗ್ಯ ಸಂಬಂಧಿತ ಸವಾಲುಗಳ ಪೈಕಿ ಒಂದೆನಿಸಿತ್ತು. ಒಂದು ತಿಂಗಳ ಶಿಶುವಿನಿಂದ ಹಿಡಿದು ಐದು ವರ್ಷ ವಯಸ್ಸಿನ ಮಕ್ಕಳ ಪ್ರಾಣ ಹರಣ ಮಾಡುವ ಎಲ್ಲಾ ಸಾಂಕ್ರಾಮಿಕ ರೋಗಗಳ ಪೈಕಿ ಮಲೇರಿಯಾ ರೋಗಕ್ಕೆ ಮೂರನೇ ಸ್ಥಾನ. ಇಂದು, ದೇಶವಾಸಿಗಳೆಲ್ಲಾ ಒಗ್ಗಟ್ಟಾಗಿ ಈ ಸವಾಲನ್ನು ಎದುರಿಸಿದ್ದಾರೆಂದು ನಾನು ಸಂತೋಷದಿಂದ ಹೇಳಬಲ್ಲೆ. ವಿಶ್ವ ಆರೋಗ್ಯ ಸಂಘಟನೆ -WHO ವರದಿ ಹೀಗೆನ್ನುತ್ತದೆ “ಭಾರತದಲ್ಲಿ 2015 ರಿಂದ 2023 ರ ಮಧ್ಯೆ ಮಲೇರಿಯಾ ರೋಗ ಮತ್ತು ಅದರಿಂದ ಸಂಭವಿಸುವ ಸಾವುಗಳ ಸಂಖ್ಯೆಯಲ್ಲಿ ಶೇಕಡಾ 80 ರಷ್ಟು ಕಡಿಮೆಯಾಗಿದೆ” ಇದು ಒಂದು ಸಣ್ಣ ಸಾಧನೆಯಲ್ಲ. ಅತ್ಯಂತ ಸಂತಸದ ವಿಷಯವೆಂದರೆ, ಈ ಯಶಸ್ಸು ಜನರ ಭಾಗೀದಾರಿಯಿಂದ ದೊರೆತಿದೆ. ಭಾರತ ಮೂಲೆ ಮೂಲೆಯಿಂದ, ಪ್ರತಿ ಜಿಲ್ಲೆಯಿಂದ, ಪ್ರತಿಯೊಬ್ಬರೂ ಆ ಅಭಿಯಾನದ ಭಾಗವಾಗಿದ್ದಾರೆ. ಅಸ್ಸಾಂನಲ್ಲಿ ಜೋರ್ ಹಾಟ್ ನ ಚಹಾ ತೋಟಗಳಲ್ಲಿ ನಾಲ್ಕು ವರ್ಷಗಳ ಹಿಂದಿನವರೆಗೂ ಮಲೇರಿಯಾ ರೋಗ ಜನರ ಚಿಂತೆಯ ಬಹು ದೊಡ್ಡ ಕಾರಣವಾಗಿತ್ತು. ಆದರೆ ಅದನ್ನು ನಿರ್ಮೂಲಸಲು ಚಹಾ ತೋಟದಲ್ಲಿ ವಾಸಿಸುವ ಜನರು ಒಗ್ಗಟ್ಟಿನಿಂದ ಮುಂದೆ ಬಂದಾಗ, ಇದರಲ್ಲಿ ಸಾಕಷ್ಟು ಯಶಸ್ಸು ದೊರೆಯಲಾರಂಭಿಸಿತು. ಅವರು ತಮ್ಮ ಈ ಪ್ರಯತ್ನದಲ್ಲಿ ತಂತ್ರಜ್ಞಾನದ ಜೊತೆಗೆ ಸಾಮಾಜಿಕ ಮಾಧ್ಯಮವನ್ನು ಬಹಳಷ್ಟು ಉಪಯೋಗಿಸಿದ್ದಾರೆ. ಇದೇ ರೀತಿ ಹರಿಯಾಣಾದ ಕುರುಕ್ಷೇತ್ರ ಜಿಲ್ಲೆಯು ಮಲೇರಿಯಾ ರೋಗದ ನಿಯಂತ್ರಣಕ್ಕಾಗಿ ಉತ್ತಮ ಮಾದರಿಯನ್ನು ಪ್ರಸ್ತುತಪಡಿಸಿದೆ. ಇಲ್ಲಿ ಮಲೇರಿಯಾ ರೋಗದ ಮೇಲೆ ನಿಗಾ ಇರಿಸುವುದಕ್ಕೆ ಜನರ ಸಹಭಾಗಿತ್ವ ಸಾಕಷ್ಟು ಯಶಸ್ವಿಯಾಗಿದೆ. ಬೀದಿ ನಾಟಕಗಳು ಮತ್ತು ರೇಡಿಯೋ ಮೂಲಕ ಇಂತಹ ಸಂದೇಶಗಳಿಗೆ ಒತ್ತು ನೀಡಲಾಯಿತು. ಸೊಳ್ಳೆಗಳ ಸಂತಾನೋತ್ಪತ್ತಿ ಕಡಿಮೆ ಮಾಡುವಲ್ಲಿ ಇವು ಸಾಕಷ್ಟು ಸಹಾಯಕವಾಯಿತು. ದೇಶಾದ್ಯಂತ ಇಂತಹ ಪ್ರಯತ್ನಗಳಿಂದಲೇ ನಾವು ಮಲೇರಿಯಾ ವಿರುದ್ಧದ ಹೋರಾಟವನ್ನು ಮತ್ತಷ್ಟು ವೇಗವಾಗಿ ಮುನ್ನಡೆಸಲು ಸಾಧ್ಯವಾಯಿತು.

ಸ್ನೇಹಿತರೇ, ನಾವು ನಮ್ಮ ತಿಳುವಳಿಕೆ ಮತ್ತು ಸಂಕಲ್ಪ ಶಕ್ತಿಯಿಂದ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಎಂದರೆ ಅದು ಕ್ಯಾನ್ಸರ್ ವಿರುದ್ಧದ ಹೋರಾಟ. ವಿಶ್ವದ ಪ್ರಸಿದ್ಧ ಮೆಡಿಕಲ್ ಜರ್ನಲ್ ಲ್ಯಾನ್ಸೆಟ್ ನ ಅಧ್ಯಯನ ನಿಜಕ್ಕೂ ಬಹಳ ಭರವಸೆದಾಯಕವಾಗಿದೆ. ಈ ಪತ್ರಿಕೆಯ ಅನುಸಾರ ಈಗ ಭಾರತದಲ್ಲಿ ಸಕಾಲದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಆರಂಭಿಸುವ ಸಾಧ್ಯತೆ ಬಹಳಷ್ಟು ಹೆಚ್ಚಾಗಿದೆ.  ಸಕಾಲದಲ್ಲಿ ಚಿಕಿತ್ಸೆ ಎಂದರೆ– ಕ್ಯಾನ್ಸರ್ ರೋಗಿಯ ಚಿಕಿತ್ಸೆ 30 ದಿನಗಳೊಳಗಾಗಿ ಆರಂಭವಾಗುವುದು ಎಂದರ್ಥ ಹಾಗೂ ಇದರಲ್ಲಿ ‘ಆಯುಷ್ಮಾನ್ ಭಾರತ್ ಯೋಜನೆ‘ ಬಹು ದೊಡ್ಡ ಪಾತ್ರ ನಿರ್ವಹಿಸಿದೆ. ಈ ಯೋಜನೆಯಿಂದಾಗಿ ಶೇಕಡಾ 90 ರಷ್ಟು ಕ್ಯಾನ್ಸರ್ ರೋಗಿಗಳು ಸಕಾಲದಲ್ಲಿ ತಮ್ಮ ಚಿಕಿತ್ಸೆ ಆರಂಭಿಸಲು ಸಾಧ್ಯವಾಗುತ್ತಿದೆ. ಹೀಗಾಗಿ ಈ ಮೊದಲು ಹಣದ ಕೊರತೆಯಿಂದಾಗಿ ಬಡ ರೋಗಿಗಳು ಕ್ಯಾನ್ಸರ್ ರೋಗಕ್ಕಾಗಿ ತಪಾಸಣೆ ಮತ್ತು ಅದರ ಚಿಕಿತ್ಸೆಗೆ ಹಿಂಜರಿಯುತ್ತಿದ್ದರು. ಈಗ ‘ಆಯುಷ್ಮಾನ್ ಭಾರತ್ ಯೋಜನೆ’ ಅವರಿಗೆ ಬಹು ದೊಡ್ಡ ಆಸರೆಯಾಗಿದೆ. ಈಗ ಅವರು ತಮ್ಮ ರೋಗಕ್ಕೆ ಚಿಕಿತ್ಸೆ ಪಡೆಯಲು ಮುಂದಾಗುತ್ತಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯು ಕ್ಯಾನ್ಸರ್ ರೋಗದ ಚಿಕಿತ್ಸೆಗೆ ಉಂಟಾಗುವ ಖರ್ಚಿನ ಆತಂಕವನ್ನು ಸಾಕಷ್ಟು ಕಡಿಮೆ ಮಾಡಿದೆ. ಇಂದು ಸಕಾಲದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಕುರಿತು ಜನರು ಹಿಂದೆಂದಿಗಿಂತಲೂ ಹೆಚ್ಚು ಜಾಗರೂಕರಾಗಿದ್ದಾರೆ ಎನ್ನುವುದು ಉತ್ತಮ ವಿಚಾರವಾಗಿದೆ. ಈ ಸಾಧನೆಯು ನಮ್ಮ ಆರೋಗ್ಯರಕ್ಷಣೆ ವ್ಯವಸ್ಥೆಯಷ್ಟೇ, ನಮ್ಮ ವೈದ್ಯರು, ದಾದಿಯರು ಮತ್ತು ತಾಂತ್ರಿಕ ಸಿಬ್ಬಂದಿಯದ್ದೂ ಆಗಿದೆ, ಅಷ್ಟೇ ಅಲ್ಲ ನಿಮ್ಮೆಲ್ಲರದ್ದೂ, ನನ್ನ ನಾಗರಿಕ ಸೋದರ ಸೋದರಿಯರದ್ದೂ ಆಗಿದೆ. ಎಲ್ಲರ ಪ್ರಯತ್ನದಿಂದ ಕ್ಯಾನ್ಸರ್ ರೋಗವನ್ನು ಹಿಮ್ಮೆಟ್ಟಿಸುವ ಸಂಕಲ್ಪ ಮತ್ತಷ್ಟು ಬಲವಾಗಿದೆ. ಅರಿವು ಮೂಡಿಸಲು ಪ್ರಮುಖ ಕೊಡುಗೆ ನೀಡಿದ ಎಲ್ಲರಿಗೂ ಆ ಯಶಸ್ಸಿನ ಶ್ರೇಯ ಸಲ್ಲುತ್ತದೆ.

ಕ್ಯಾನ್ಸರ್ ವಿರುದ್ಧ ಹೋರಾಡಲು ಒಂದೇ ಒಂದು ಮಂತ್ರವಿದೆ – ಅದೆಂದರೆ ಅರಿವು, ಕ್ರಮ ಮತ್ತು ಭರವಸೆ – ಅವೇರ್ನೆಸ್, ಆಕ್ಷನ್ ಮತ್ತು ಅಶ್ಯೂರೆನ್ಸ್. ಅವೇರ್ನೆಸ್ ಎಂದರೆ ಕ್ಯಾನ್ಸರ್ ಮತ್ತು ಅದರ ಲಕ್ಷಣಗಳ ಕುರಿತ ಅರಿವು, ಆಕ್ಷನ್ ಎಂದರೆ ಸಮಯಕ್ಕೆ ಸರಿಯಾಗಿ ತಪಾಸಣೆ ಮತ್ತು ಚಿಕಿತ್ಸೆ, ಅಶ್ಯೂರೆನ್ಸ್ ಎಂದರೆ ರೋಗಿಗೆ ಪ್ರತಿಯೊಂದು ಸಹಾಯವೂ ಲಭ್ಯವಿದೆ ಎನ್ನುವ ಭರವಸೆ. ಬನ್ನಿ, ನಾವೆಲ್ಲರೂ ಒಗ್ಗಟ್ಟಾಗಿ ಕ್ಯಾನ್ಸರ್ ವಿರುದ್ಧದ ಈ ಹೋರಾಟವನ್ನು ವೇಗದಿಂದ ಮುನ್ನಡೋಸೋಣ ಮತ್ತು ಹೆಚ್ಚು ಹೆಚ್ಚು ರೋಗಿಗಳಿಗೆ ಸಹಾಯ ಮಾಡೋಣ.

ನನ್ನ ಪ್ರೀತಿಯ ದೇಶವಾಸಿಗಳೇ, ನಾನು ಇಂದು ನಿಮಗೆ ಒಡಿಶಾದ ಕಾಲಾಹಾಂಡಿಯಲ್ಲಿ ಅತ್ಯಂತ ಕಡಿಮೆ ನೀರು ಮತ್ತು ಕಡಿಮೆ ಸಂಪನ್ಮೂಲಗಳಿದ್ದರೂ ಕೂಡಾ ಅವಿರತ ಪ್ರಯತ್ನದಿಂದ ಸಾಧಿಸಿರುವ ಯಶಸ್ಸಿನ ಕತೆಯೊಂದನ್ನು ನಿಮಗೆ ಹೇಳಲು ಬಯಸುತ್ತೇನೆ. ಇದು ಕಾಲಾಹಾಂಡಿಯ ತರಕಾರಿ ಕ್ರಾಂತಿ. ಒಂದು ಕಾಲದಲ್ಲಿ ರೈತರು ಜಾಗ ತೊರೆದು ಬೇರೆಡೆಗೆ ಹೋಗಬೇಕಾಗಿತ್ತೋ ಅದೇ ಜಾಗ ಇಂದು, ಕಾಲಾಹಾಂಡಿಯ ಗೋಲಾ ಮುಂಡಾ ಬ್ಲಾಕ್ ನ ಒಂದು ತರಕಾರಿ ಹಬ್ ಆಗಿ ಪರಿವರ್ತನೆಯಾಗಿದೆ. ಈ ಪರಿವರ್ತನೆಯಾದದ್ದು ಹೇಗೆ? ಇದು ಕೇವಲ 10 ಮಂದಿ ರೈತರ ಒಂದು ಸಣ್ಣ ಗುಂಪಿನಿಂದ ಆರಂಭವಾಯಿತು. ಈ ಗುಂಪು ಒಂದುಗೂಡಿ ಒಂದು FPO - ‘ರೈತ ಉತ್ಪನ್ನ ಸಂಘ’ ಸ್ಥಾಪಿಸಿತು, ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಶುರು ಮಾಡಿತು, ಮತ್ತು ಇಂದು ಅವರ ಈ FPO ಕೋಟಿಗಟ್ಟಲೆ ವಹಿವಾಟು ನಡೆಸುತ್ತಿದೆ. ಇಂದು 200 ಕ್ಕೂ ಅಧಿಕ ರೈತರು FPO ನೊಂದಿಗೆ ಜೋಡಣೆಯಾಗಿದ್ದಾರೆ, ಇದರಲ್ಲಿ 45 ಮಂದಿ ಮಹಿಳಾ ರೈತರೂ ಇದ್ದಾರೆ. ಇವರೆಲ್ಲರೂ ಸೇರಿ 200 ಎಕರೆ ಪ್ರದೇಶದಲ್ಲಿ ಟೊಮ್ಯಾಟೋ ಕೃಷಿ ಮಾಡುತ್ತಿದ್ದಾರೆ, 150 ಎಕರೆ ಜಾಗದಲ್ಲಿ ಹಾಗಲಕಾಯಿ ಬೆಳೆಯುತ್ತಿದ್ದಾರೆ. ಈಗ ಈ FPO ದ ವಾರ್ಷಿಕ ವಹಿವಾಟು ಕೂಡಾ ಅಧಿಕವಾಗಿ, ಒಂದೂವರೆ ಕೋಟಿಗೆ ತಲುಪಿದೆ. ಇಂದು ಕಾಲಾಹಾಂಡಿಯ ತರಕಾರಿಗಳು ಕೇವಲ ಒಡಿಶಾದ ಬೇರೆ ಬೇರೆ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ಬೇರೆ ರಾಜ್ಯಗಳಿಗೂ ತಲುಪುತ್ತಿವೆ, ಮತ್ತು ಅಲ್ಲಿನ ರೈತ ಈಗ ಆಲೂಗಡ್ಡೆ ಮತ್ತು ಈರುಳ್ಳಿಯ ಕೃಷಿಯ ಹೊಸ ತಂತ್ರಗಳನ್ನು ಕೂಡಾ ಕಲಿಯುತ್ತಿದ್ದಾನೆ.

ಸ್ನೇಹಿತರೇ, ಸಂಕಲ್ಪ ಶಕ್ತಿ ಮತ್ತು ಸಾಮೂಹಿಕ ಪ್ರಯತ್ನದಿಂದ ಏನೆಲ್ಲಾ ಸಾಧಿಸಬಹುದು ಎಂಬುದನ್ನು ಕಾಲಾಹಾಂಡಿಯ ಈ ಯಶಸ್ಸು ನಮಗೆ ಕಲಿಸುತ್ತದೆ. ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುವುದೇನೆಂದರೆ :-

  • ನೀವಿರುವ ಪ್ರದೇಶದಲ್ಲಿ FPO ಅನ್ನು ಪ್ರೋತ್ಸಾಹಿಸಿ.
  • ರೈತ ಉತ್ಪನ್ನ ಸಂಘಗಳೊಂದಿಗೆ ಸೇರಿಕೊಳ್ಳಿ ಮತ್ತು ಅವುಗಳನ್ನು ಬಲಪಡಿಸಿ. 

ನೆನಪಿಡಿ – ಸಣ್ಣ ಆರಂಭದಿಂದಲೇ ಭಾರೀ ಪರಿವರ್ತನೆಗಳು ಸಾಧ್ಯವಾಗುತ್ತವೆ. ಅದಕ್ಕಾಗಿ ನಮಗೆ ದೃಢ ಸಂಕಲ್ಪ ಮತ್ತು ಒಗ್ಗಟ್ಟಿನ ಭಾವನೆಯ ಅಗತ್ಯವಿರುತ್ತದೆ.

ಸ್ನೇಹಿತರೇ, ಇಂದು ‘ಮನದ ಮಾತಿನಲ್ಲಿ’ ನಮ್ಮ ಭಾರತ ವಿವಿಧತೆಯಲ್ಲಿ ಏಕತೆ ಎಂಬ ಭಾವನೆಯಿಂದ ಯಾವರೀತಿ ಮುಂದೆ ಸಾಗುತ್ತಿದೆ ಎಂಬುದನ್ನು ಆಲಿಸಿದೆವು. ಅದು ಆಟದ ಮೈದಾನವಿರಲಿ, ಅಥವಾ ವಿಜ್ಞಾನ ಕ್ಷೇತ್ರವೇ ಆಗಲಿ, ಆರೋಗ್ಯ ಅಥವಾ ಶಿಕ್ಷಣ ಕ್ಷೇತ್ರವೇ ಆಗಲಿ, ಪ್ರತಿಯೊಂದು ಕ್ಷೇತ್ರದಲ್ಲಿ ಭಾರತ ಉನ್ನತ ಶಿಖರಗಳನ್ನು ತಲುಪುತ್ತಿದೆ. ನಾವು ಒಂದು ಕುಟುಂಬದಂತೆ ಒಂದುಗೂಡಿ ಪ್ರತಿಯೊಂದು ಸವಾಲನ್ನೂ ಎದುರಿಸಿದ್ದೇವೆ ಮತ್ತು ಹೊಸ ಸಾಧನೆಗಳನ್ನು ನಮ್ಮದಾಗಿಸಿಕೊಂಡಿದ್ದೇವೆ. 2014 ರಲ್ಲಿ ಆರಂಭವಾದ ‘ಮನದ ಮಾತಿನ’ 116 ಸಂಚಿಕೆಗಳಲ್ಲಿ ‘ಮನದ ಮಾತು’ ದೇಶದ ಸಾಮೂಹಿಕ ಶಕ್ತಿಯು ಜೀವಂತ ದಾಖಲೆಯಾಗಿರುವುದನ್ನು ನಾನು ನೋಡಿದ್ದೇನೆ.  ತಾವೆಲ್ಲರೂ ಈ ಕಾರ್ಯಕ್ರಮವನ್ನು ತಮ್ಮದಾಗಿಸಿಕೊಂಡಿರುವಿರಿ. ಪ್ರತಿ ತಿಂಗಳೂ ನಿಮ್ಮ ನಿಮ್ಮ ಚಿಂತನೆಗಳು ಮತ್ತು ಪ್ರಯತ್ನಗಳನ್ನು ಹಂಚಿಕೊಳ್ಳುತ್ತಿದ್ದೀರಿ. ಕೆಲವೊಮ್ಮೆ ಯುವ ಆವಿಷ್ಕಾರಕನ ಚಿಂತನೆಯಿಂದ ಪ್ರಭಾವಿತನಾದರೆ, ಮತ್ತೊಮ್ಮೆ ಹೆಣ್ಣು ಮಗಳೊಬ್ಬಳ ಸಾಧನೆ ನನಗೆ ಹೆಮ್ಮೆ ತಂದಿದೆ. ನಿಮ್ಮೆಲ್ಲರ ಸಹಭಾಗಿತ್ವವೇ ದೇಶದ ಮೂಲೆ ಮೂಲೆಯಿಂದ ಸಕಾರಾತ್ಮಕ ಶಕ್ತಿಯನ್ನು ಒಟ್ಟುಗೂಡಿಸುತ್ತದೆ. 'ಮನದ ಮಾತು' ಈ ಸಕಾರಾತ್ಮಕ ಶಕ್ತಿ ವರ್ಧನೆಯ ವೇದಿಕೆಯಾಗಿ ಮಾರ್ಪಟ್ಟಿದೆ ಮತ್ತು ಈಗ, 2025 ಬಾಗಿಲು ತಟ್ಟುತ್ತಿದೆ. ಮುಂಬರುವ ವರ್ಷದಲ್ಲಿ ‘ಮನದ ಮಾತಿನ’ ಮೂಲಕ ನಾವೆಲ್ಲರೂ ಮತ್ತಷ್ಟು ಪ್ರೇರಣಾದಾಯಕ ಪ್ರಯತ್ನಗಳನ್ನು ಹಂಚಿಕೊಳ್ಳೋಣ. ದೇಶವಾಸಿಗಳ ಸಕಾರಾತ್ಮಕ ಚಿಂತನೆ ಮತ್ತು ಆವಿಷ್ಕಾರದ ಭಾವನೆಯಿಂದ ಭಾರತ ಹೊಸ ಶಿಖರಗಳನ್ನು ತಲುಪುತ್ತದೆ ಎಂಬ ವಿಶ್ವಾಸ ನನಗಿದೆ. ನೀವೆಲ್ಲರೂ ನಿಮ್ಮ ಸುತ್ತಮುತ್ತಲಿನ ವಿಶಿಷ್ಠ ಪ್ರಯತ್ನಗಳ ಬಗ್ಗೆ #Mannkibaat  ನಲ್ಲಿ ಹಂಚಿಕೊಳ್ಳುತ್ತಿರಿ. ಮುಂದಿನ ವರ್ಷದ ಪ್ರತಿಯೊಂದು ಮನದ ಮಾತಿನಲ್ಲಿ ನಮ್ಮಲ್ಲಿ ಪರಸ್ಪರ ಹಂಚಿಕೊಳ್ಳಲು ಬಹಳಷ್ಟು ವಿಷಯಗಳಿರುತ್ತವೆ ಎಂದು ನನಗೆ ಗೊತ್ತು. ನಿಮ್ಮೆಲ್ಲರಿಗೂ 2025 ನೂತನ ವರ್ಷಕ್ಕಾಗಿ ಅನೇಕಾನೇಕ ಶುಭಾಕಾಂಕ್ಷೆಗಳು. ಆರೋಗ್ಯದಿಂದಿರಿ, ಸಂತೋಷದಿಂದಿರಿ. Fit India Movement ನೊಂದಿಗೆ ನೀವೆಲ್ಲರೂ ಸೇರಿಕೊಳ್ಳಿ, ನೀವೆಲ್ಲರೂ ಸದೃಢರಾಗಿರಿ. ಜೀವನದಲ್ಲಿ ಅಭಿವೃದ್ಧಿ ಹೊಂದುತ್ತಿರಿ. ಅನೇಕಾನೇಕ ಧನ್ಯವಾದ.

 

 

 

 

 

 

 

 

 

  • अमित प्रेमजी | Amit Premji March 03, 2025

    nice👍
  • રબારી પાચા જીભા લાખણી March 02, 2025

    if free sz
  • Jitender Kumar BJP Haryana State Gurgaon MP and President February 27, 2025

    PM India 🇮🇳
  • Rambabu Gupta BJP IT February 25, 2025

    जय श्री राम
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • kranthi modi February 22, 2025

    ram ram modi ji🚩🙏
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Laying the digital path to a developed India

Media Coverage

Laying the digital path to a developed India
NM on the go

Nm on the go

Always be the first to hear from the PM. Get the App Now!
...
India is driving global growth today: PM Modi at Republic Plenary Summit
March 06, 2025
QuoteIndia's achievements and successes have sparked a new wave of hope across the globe: PM
QuoteIndia is driving global growth today: PM
QuoteToday's India thinks big, sets ambitious targets and delivers remarkable results: PM
QuoteWe launched the SVAMITVA Scheme to grant property rights to rural households in India: PM
QuoteYouth is the X-Factor of today's India, where X stands for Experimentation, Excellence, and Expansion: PM
QuoteIn the past decade, we have transformed impact-less administration into impactful governance: PM
QuoteEarlier, construction of houses was government-driven, but we have transformed it into an owner-driven approach: PM

नमस्कार!

आप लोग सब थक गए होंगे, अर्णब की ऊंची आवाज से कान तो जरूर थक गए होंगे, बैठिये अर्णब, अभी चुनाव का मौसम नहीं है। सबसे पहले तो मैं रिपब्लिक टीवी को उसके इस अभिनव प्रयोग के लिए बहुत बधाई देता हूं। आप लोग युवाओं को ग्रासरूट लेवल पर इन्वॉल्व करके, इतना बड़ा कंपटीशन कराकर यहां लाए हैं। जब देश का युवा नेशनल डिस्कोर्स में इन्वॉल्व होता है, तो विचारों में नवीनता आती है, वो पूरे वातावरण में एक नई ऊर्जा भर देता है और यही ऊर्जा इस समय हम यहां महसूस भी कर रहे हैं। एक तरह से युवाओं के इन्वॉल्वमेंट से हम हर बंधन को तोड़ पाते हैं, सीमाओं के परे जा पाते हैं, फिर भी कोई भी लक्ष्य ऐसा नहीं रहता, जिसे पाया ना जा सके। कोई मंजिल ऐसी नहीं रहती जिस तक पहुंचा ना जा सके। रिपब्लिक टीवी ने इस समिट के लिए एक नए कॉन्सेप्ट पर काम किया है। मैं इस समिट की सफलता के लिए आप सभी को बहुत-बहुत बधाई देता हूं, आपका अभिनंदन करता हूं। अच्छा मेरा भी इसमें थोड़ा स्वार्थ है, एक तो मैं पिछले दिनों से लगा हूं, कि मुझे एक लाख नौजवानों को राजनीति में लाना है और वो एक लाख ऐसे, जो उनकी फैमिली में फर्स्ट टाइमर हो, तो एक प्रकार से ऐसे इवेंट मेरा जो यह मेरा मकसद है उसका ग्राउंड बना रहे हैं। दूसरा मेरा व्यक्तिगत लाभ है, व्यक्तिगत लाभ यह है कि 2029 में जो वोट करने जाएंगे उनको पता ही नहीं है कि 2014 के पहले अखबारों की हेडलाइन क्या हुआ करती थी, उसे पता नहीं है, 10-10, 12-12 लाख करोड़ के घोटाले होते थे, उसे पता नहीं है और वो जब 2029 में वोट करने जाएगा, तो उसके सामने कंपैरिजन के लिए कुछ नहीं होगा और इसलिए मुझे उस कसौटी से पार होना है और मुझे पक्का विश्वास है, यह जो ग्राउंड बन रहा है ना, वो उस काम को पक्का कर देगा।

साथियों,

आज पूरी दुनिया कह रही है कि ये भारत की सदी है, ये आपने नहीं सुना है। भारत की उपलब्धियों ने, भारत की सफलताओं ने पूरे विश्व में एक नई उम्मीद जगाई है। जिस भारत के बारे में कहा जाता था, ये खुद भी डूबेगा और हमें भी ले डूबेगा, वो भारत आज दुनिया की ग्रोथ को ड्राइव कर रहा है। मैं भारत के फ्यूचर की दिशा क्या है, ये हमें आज के हमारे काम और सिद्धियों से पता चलता है। आज़ादी के 65 साल बाद भी भारत दुनिया की ग्यारहवें नंबर की इकॉनॉमी था। बीते दशक में हम दुनिया की पांचवें नंबर की इकॉनॉमी बने, और अब उतनी ही तेजी से दुनिया की तीसरी सबसे बड़ी अर्थव्यवस्था बनने जा रहे हैं।

|

साथियों,

मैं आपको 18 साल पहले की भी बात याद दिलाता हूं। ये 18 साल का खास कारण है, क्योंकि जो लोग 18 साल की उम्र के हुए हैं, जो पहली बार वोटर बन रहे हैं, उनको 18 साल के पहले का पता नहीं है, इसलिए मैंने वो आंकड़ा लिया है। 18 साल पहले यानि 2007 में भारत की annual GDP, एक लाख करोड़ डॉलर तक पहुंची थी। यानि आसान शब्दों में कहें तो ये वो समय था, जब एक साल में भारत में एक लाख करोड़ डॉलर की इकॉनॉमिक एक्टिविटी होती थी। अब आज देखिए क्या हो रहा है? अब एक क्वार्टर में ही लगभग एक लाख करोड़ डॉलर की इकॉनॉमिक एक्टिविटी हो रही है। इसका क्या मतलब हुआ? 18 साल पहले के भारत में साल भर में जितनी इकॉनॉमिक एक्टिविटी हो रही थी, उतनी अब सिर्फ तीन महीने में होने लगी है। ये दिखाता है कि आज का भारत कितनी तेजी से आगे बढ़ रहा है। मैं आपको कुछ उदाहरण दूंगा, जो दिखाते हैं कि बीते एक दशक में कैसे बड़े बदलाव भी आए और नतीजे भी आए। बीते 10 सालों में, हम 25 करोड़ लोगों को गरीबी से बाहर निकालने में सफल हुए हैं। ये संख्या कई देशों की कुल जनसंख्या से भी ज्यादा है। आप वो दौर भी याद करिए, जब सरकार खुद स्वीकार करती थी, प्रधानमंत्री खुद कहते थे, कि एक रूपया भेजते थे, तो 15 पैसा गरीब तक पहुंचता था, वो 85 पैसा कौन पंजा खा जाता था और एक आज का दौर है। बीते दशक में गरीबों के खाते में, DBT के जरिए, Direct Benefit Transfer, DBT के जरिए 42 लाख करोड़ रुपए से ज्यादा ट्रांसफर किए गए हैं, 42 लाख करोड़ रुपए। अगर आप वो हिसाब लगा दें, रुपये में से 15 पैसे वाला, तो 42 लाख करोड़ का क्या हिसाब निकलेगा? साथियों, आज दिल्ली से एक रुपया निकलता है, तो 100 पैसे आखिरी जगह तक पहुंचते हैं।

साथियों,

10 साल पहले सोलर एनर्जी के मामले में भारत दुनिया में कहीं गिनती नहीं होती थी। लेकिन आज भारत सोलर एनर्जी कैपेसिटी के मामले में दुनिया के टॉप-5 countries में से है। हमने सोलर एनर्जी कैपेसिटी को 30 गुना बढ़ाया है। Solar module manufacturing में भी 30 गुना वृद्धि हुई है। 10 साल पहले तो हम होली की पिचकारी भी, बच्चों के खिलौने भी विदेशों से मंगाते थे। आज हमारे Toys Exports तीन गुना हो चुके हैं। 10 साल पहले तक हम अपनी सेना के लिए राइफल तक विदेशों से इंपोर्ट करते थे और बीते 10 वर्षों में हमारा डिफेंस एक्सपोर्ट 20 गुना बढ़ गया है।

|

साथियों,

इन 10 वर्षों में, हम दुनिया के दूसरे सबसे बड़े स्टील प्रोड्यूसर हैं, दुनिया के दूसरे सबसे बड़े मोबाइल फोन मैन्युफैक्चरर हैं और दुनिया का तीसरा सबसे बड़ा स्टार्टअप इकोसिस्टम बने हैं। इन्हीं 10 सालों में हमने इंफ्रास्ट्रक्चर पर अपने Capital Expenditure को, पांच गुना बढ़ाया है। देश में एयरपोर्ट्स की संख्या दोगुनी हो गई है। इन दस सालों में ही, देश में ऑपरेशनल एम्स की संख्या तीन गुना हो गई है। और इन्हीं 10 सालों में मेडिकल कॉलेजों और मेडिकल सीट्स की संख्या भी करीब-करीब दोगुनी हो गई है।

साथियों,

आज के भारत का मिजाज़ कुछ और ही है। आज का भारत बड़ा सोचता है, बड़े टार्गेट तय करता है और आज का भारत बड़े नतीजे लाकर के दिखाता है। और ये इसलिए हो रहा है, क्योंकि देश की सोच बदल गई है, भारत बड़ी Aspirations के साथ आगे बढ़ रहा है। पहले हमारी सोच ये बन गई थी, चलता है, होता है, अरे चलने दो यार, जो करेगा करेगा, अपन अपना चला लो। पहले सोच कितनी छोटी हो गई थी, मैं इसका एक उदाहरण देता हूं। एक समय था, अगर कहीं सूखा हो जाए, सूखाग्रस्त इलाका हो, तो लोग उस समय कांग्रेस का शासन हुआ करता था, तो मेमोरेंडम देते थे गांव के लोग और क्या मांग करते थे, कि साहब अकाल होता रहता है, तो इस समय अकाल के समय अकाल के राहत के काम रिलीफ के वर्क शुरू हो जाए, गड्ढे खोदेंगे, मिट्टी उठाएंगे, दूसरे गड्डे में भर देंगे, यही मांग किया करते थे लोग, कोई कहता था क्या मांग करता था, कि साहब मेरे इलाके में एक हैंड पंप लगवा दो ना, पानी के लिए हैंड पंप की मांग करते थे, कभी कभी सांसद क्या मांग करते थे, गैस सिलेंडर इसको जरा जल्दी देना, सांसद ये काम करते थे, उनको 25 कूपन मिला करती थी और उस 25 कूपन को पार्लियामेंट का मेंबर अपने पूरे क्षेत्र में गैस सिलेंडर के लिए oblige करने के लिए उपयोग करता था। एक साल में एक एमपी 25 सिलेंडर और यह सारा 2014 तक था। एमपी क्या मांग करते थे, साहब ये जो ट्रेन जा रही है ना, मेरे इलाके में एक स्टॉपेज दे देना, स्टॉपेज की मांग हो रही थी। यह सारी बातें मैं 2014 के पहले की कर रहा हूं, बहुत पुरानी नहीं कर रहा हूं। कांग्रेस ने देश के लोगों की Aspirations को कुचल दिया था। इसलिए देश के लोगों ने उम्मीद लगानी भी छोड़ दी थी, मान लिया था यार इनसे कुछ होना नहीं है, क्या कर रहा है।। लोग कहते थे कि भई ठीक है तुम इतना ही कर सकते हो तो इतना ही कर दो। और आज आप देखिए, हालात और सोच कितनी तेजी से बदल रही है। अब लोग जानते हैं कि कौन काम कर सकता है, कौन नतीजे ला सकता है, और यह सामान्य नागरिक नहीं, आप सदन के भाषण सुनोगे, तो विपक्ष भी यही भाषण करता है, मोदी जी ये क्यों नहीं कर रहे हो, इसका मतलब उनको लगता है कि यही करेगा।

|

साथियों,

आज जो एस्पिरेशन है, उसका प्रतिबिंब उनकी बातों में झलकता है, कहने का तरीका बदल गया , अब लोगों की डिमांड क्या आती है? लोग पहले स्टॉपेज मांगते थे, अब आकर के कहते जी, मेरे यहां भी तो एक वंदे भारत शुरू कर दो। अभी मैं कुछ समय पहले कुवैत गया था, तो मैं वहां लेबर कैंप में नॉर्मली मैं बाहर जाता हूं तो अपने देशवासी जहां काम करते हैं तो उनके पास जाने का प्रयास करता हूं। तो मैं वहां लेबर कॉलोनी में गया था, तो हमारे जो श्रमिक भाई बहन हैं, जो वहां कुवैत में काम करते हैं, उनसे कोई 10 साल से कोई 15 साल से काम, मैं उनसे बात कर रहा था, अब देखिए एक श्रमिक बिहार के गांव का जो 9 साल से कुवैत में काम कर रहा है, बीच-बीच में आता है, मैं जब उससे बातें कर रहा था, तो उसने कहा साहब मुझे एक सवाल पूछना है, मैंने कहा पूछिए, उसने कहा साहब मेरे गांव के पास डिस्ट्रिक्ट हेड क्वार्टर पर इंटरनेशनल एयरपोर्ट बना दीजिए ना, जी मैं इतना प्रसन्न हो गया, कि मेरे देश के बिहार के गांव का श्रमिक जो 9 साल से कुवैत में मजदूरी करता है, वह भी सोचता है, अब मेरे डिस्ट्रिक्ट में इंटरनेशनल एयरपोर्ट बनेगा। ये है, आज भारत के एक सामान्य नागरिक की एस्पिरेशन, जो विकसित भारत के लक्ष्य की ओर पूरे देश को ड्राइव कर रही है।

साथियों,

किसी भी समाज की, राष्ट्र की ताकत तभी बढ़ती है, जब उसके नागरिकों के सामने से बंदिशें हटती हैं, बाधाएं हटती हैं, रुकावटों की दीवारें गिरती है। तभी उस देश के नागरिकों का सामर्थ्य बढ़ता है, आसमान की ऊंचाई भी उनके लिए छोटी पड़ जाती है। इसलिए, हम निरंतर उन रुकावटों को हटा रहे हैं, जो पहले की सरकारों ने नागरिकों के सामने लगा रखी थी। अब मैं उदाहरण देता हूं स्पेस सेक्टर। स्पेस सेक्टर में पहले सबकुछ ISRO के ही जिम्मे था। ISRO ने निश्चित तौर पर शानदार काम किया, लेकिन स्पेस साइंस और आंत्रप्रन्योरशिप को लेकर देश में जो बाकी सामर्थ्य था, उसका उपयोग नहीं हो पा रहा था, सब कुछ इसरो में सिमट गया था। हमने हिम्मत करके स्पेस सेक्टर को युवा इनोवेटर्स के लिए खोल दिया। और जब मैंने निर्णय किया था, किसी अखबार की हेडलाइन नहीं बना था, क्योंकि समझ भी नहीं है। रिपब्लिक टीवी के दर्शकों को जानकर खुशी होगी, कि आज ढाई सौ से ज्यादा स्पेस स्टार्टअप्स देश में बन गए हैं, ये मेरे देश के युवाओं का कमाल है। यही स्टार्टअप्स आज, विक्रम-एस और अग्निबाण जैसे रॉकेट्स बना रहे हैं। ऐसे ही mapping के सेक्टर में हुआ, इतने बंधन थे, आप एक एटलस नहीं बना सकते थे, टेक्नॉलाजी बदल चुकी है। पहले अगर भारत में कोई मैप बनाना होता था, तो उसके लिए सरकारी दरवाजों पर सालों तक आपको चक्कर काटने पड़ते थे। हमने इस बंदिश को भी हटाया। आज Geo-spatial mapping से जुडा डेटा, नए स्टार्टअप्स का रास्ता बना रहा है।

|

साथियों,

न्यूक्लियर एनर्जी, न्यूक्लियर एनर्जी से जुड़े सेक्टर को भी पहले सरकारी कंट्रोल में रखा गया था। बंदिशें थीं, बंधन थे, दीवारें खड़ी कर दी गई थीं। अब इस साल के बजट में सरकार ने इसको भी प्राइवेट सेक्टर के लिए ओपन करने की घोषणा की है। और इससे 2047 तक 100 गीगावॉट न्यूक्लियर एनर्जी कैपेसिटी जोड़ने का रास्ता मजबूत हुआ है।

साथियों,

आप हैरान रह जाएंगे, कि हमारे गांवों में 100 लाख करोड़ रुपए, Hundred lakh crore rupees, उससे भी ज्यादा untapped आर्थिक सामर्थ्य पड़ा हुआ है। मैं आपके सामने फिर ये आंकड़ा दोहरा रहा हूं- 100 लाख करोड़ रुपए, ये छोटा आंकड़ा नहीं है, ये आर्थिक सामर्थ्य, गांव में जो घर होते हैं, उनके रूप में उपस्थित है। मैं आपको और आसान तरीके से समझाता हूं। अब जैसे यहां दिल्ली जैसे शहर में आपके घर 50 लाख, एक करोड़, 2 करोड़ के होते हैं, आपकी प्रॉपर्टी की वैल्यू पर आपको बैंक लोन भी मिल जाता है। अगर आपका दिल्ली में घर है, तो आप बैंक से करोड़ों रुपये का लोन ले सकते हैं। अब सवाल यह है, कि घर दिल्ली में थोड़े है, गांव में भी तो घर है, वहां भी तो घरों का मालिक है, वहां ऐसा क्यों नहीं होता? गांवों में घरों पर लोन इसलिए नहीं मिलता, क्योंकि भारत में गांव के घरों के लीगल डॉक्यूमेंट्स नहीं होते थे, प्रॉपर मैपिंग ही नहीं हो पाई थी। इसलिए गांव की इस ताकत का उचित लाभ देश को, देशवासियों को नहीं मिल पाया। और ये सिर्फ भारत की समस्या है ऐसा नहीं है, दुनिया के बड़े-बड़े देशों में लोगों के पास प्रॉपर्टी के राइट्स नहीं हैं। बड़ी-बड़ी अंतरराष्ट्रीय संस्थाएं कहती हैं, कि जो देश अपने यहां लोगों को प्रॉपर्टी राइट्स देता है, वहां की GDP में उछाल आ जाता है।

|

साथियों,

भारत में गांव के घरों के प्रॉपर्टी राइट्स देने के लिए हमने एक स्वामित्व स्कीम शुरु की। इसके लिए हम गांव-गांव में ड्रोन से सर्वे करा रहे हैं, गांव के एक-एक घर की मैपिंग करा रहे हैं। आज देशभर में गांव के घरों के प्रॉपर्टी कार्ड लोगों को दिए जा रहे हैं। दो करोड़ से अधिक प्रॉपर्टी कार्ड सरकार ने बांटे हैं और ये काम लगातार चल रहा है। प्रॉपर्टी कार्ड ना होने के कारण पहले गांवों में बहुत सारे विवाद भी होते थे, लोगों को अदालतों के चक्कर लगाने पड़ते थे, ये सब भी अब खत्म हुआ है। इन प्रॉपर्टी कार्ड्स पर अब गांव के लोगों को बैंकों से लोन मिल रहे हैं, इससे गांव के लोग अपना व्यवसाय शुरू कर रहे हैं, स्वरोजगार कर रहे हैं। अभी मैं एक दिन ये स्वामित्व योजना के तहत वीडियो कॉन्फ्रेंस पर उसके लाभार्थियों से बात कर रहा था, मुझे राजस्थान की एक बहन मिली, उसने कहा कि मैंने मेरा प्रॉपर्टी कार्ड मिलने के बाद मैंने 9 लाख रुपये का लोन लिया गांव में और बोली मैंने बिजनेस शुरू किया और मैं आधा लोन वापस कर चुकी हूं और अब मुझे पूरा लोन वापस करने में समय नहीं लगेगा और मुझे अधिक लोन की संभावना बन गई है कितना कॉन्फिडेंस लेवल है।

साथियों,

ये जितने भी उदाहरण मैंने दिए हैं, इनका सबसे बड़ा बेनिफिशरी मेरे देश का नौजवान है। वो यूथ, जो विकसित भारत का सबसे बड़ा स्टेकहोल्डर है। जो यूथ, आज के भारत का X-Factor है। इस X का अर्थ है, Experimentation Excellence और Expansion, Experimentation यानि हमारे युवाओं ने पुराने तौर तरीकों से आगे बढ़कर नए रास्ते बनाए हैं। Excellence यानी नौजवानों ने Global Benchmark सेट किए हैं। और Expansion यानी इनोवेशन को हमारे य़ुवाओं ने 140 करोड़ देशवासियों के लिए स्केल-अप किया है। हमारा यूथ, देश की बड़ी समस्याओं का समाधान दे सकता है, लेकिन इस सामर्थ्य का सदुपयोग भी पहले नहीं किया गया। हैकाथॉन के ज़रिए युवा, देश की समस्याओं का समाधान भी दे सकते हैं, इसको लेकर पहले सरकारों ने सोचा तक नहीं। आज हम हर वर्ष स्मार्ट इंडिया हैकाथॉन आयोजित करते हैं। अभी तक 10 लाख युवा इसका हिस्सा बन चुके हैं, सरकार की अनेकों मिनिस्ट्रीज और डिपार्टमेंट ने गवर्नेंस से जुड़े कई प्रॉब्लम और उनके सामने रखें, समस्याएं बताई कि भई बताइये आप खोजिये क्या सॉल्यूशन हो सकता है। हैकाथॉन में हमारे युवाओं ने लगभग ढाई हज़ार सोल्यूशन डेवलप करके देश को दिए हैं। मुझे खुशी है कि आपने भी हैकाथॉन के इस कल्चर को आगे बढ़ाया है। और जिन नौजवानों ने विजय प्राप्त की है, मैं उन नौजवानों को बधाई देता हूं और मुझे खुशी है कि मुझे उन नौजवानों से मिलने का मौका मिला।

|

साथियों,

बीते 10 वर्षों में देश ने एक new age governance को फील किया है। बीते दशक में हमने, impact less administration को Impactful Governance में बदला है। आप जब फील्ड में जाते हैं, तो अक्सर लोग कहते हैं, कि हमें फलां सरकारी स्कीम का बेनिफिट पहली बार मिला। ऐसा नहीं है कि वो सरकारी स्कीम्स पहले नहीं थीं। स्कीम्स पहले भी थीं, लेकिन इस लेवल की last mile delivery पहली बार सुनिश्चित हो रही है। आप अक्सर पीएम आवास स्कीम के बेनिफिशरीज़ के इंटरव्यूज़ चलाते हैं। पहले कागज़ पर गरीबों के मकान सेंक्शन होते थे। आज हम जमीन पर गरीबों के घर बनाते हैं। पहले मकान बनाने की पूरी प्रक्रिया, govt driven होती थी। कैसा मकान बनेगा, कौन सा सामान लगेगा, ये सरकार ही तय करती थी। हमने इसको owner driven बनाया। सरकार, लाभार्थी के अकाउंट में पैसा डालती है, बाकी कैसा घर बनेगा, ये लाभार्थी खुद डिसाइड करता है। और घर के डिजाइन के लिए भी हमने देशभर में कंपीटिशन किया, घरों के मॉडल सामने रखे, डिजाइन के लिए भी लोगों को जोड़ा, जनभागीदारी से चीज़ें तय कीं। इससे घरों की क्वालिटी भी अच्छी हुई है और घर तेज़ गति से कंप्लीट भी होने लगे हैं। पहले ईंट-पत्थर जोड़कर आधे-अधूरे मकान बनाकर दिए जाते थे, हमने गरीब को उसके सपनों का घर बनाकर दिया है। इन घरों में नल से जल आता है, उज्ज्वला योजना का गैस कनेक्शन होता है, सौभाग्य योजना का बिजली कनेक्शन होता है, हमने सिर्फ चार दीवारें खड़ी नहीं कीं है, हमने उन घरों में ज़िंदगी खड़ी की है।

साथियों,

किसी भी देश के विकास के लिए बहुत जरूरी पक्ष है उस देश की सुरक्षा, नेशनल सिक्योरिटी। बीते दशक में हमने सिक्योरिटी पर भी बहुत अधिक काम किया है। आप याद करिए, पहले टीवी पर अक्सर, सीरियल बम ब्लास्ट की ब्रेकिंग न्यूज चला करती थी, स्लीपर सेल्स के नेटवर्क पर स्पेशल प्रोग्राम हुआ करते थे। आज ये सब, टीवी स्क्रीन और भारत की ज़मीन दोनों जगह से गायब हो चुका है। वरना पहले आप ट्रेन में जाते थे, हवाई अड्डे पर जाते थे, लावारिस कोई बैग पड़ा है तो छूना मत ऐसी सूचनाएं आती थी, आज वो जो 18-20 साल के नौजवान हैं, उन्होंने वो सूचना सुनी नहीं होगी। आज देश में नक्सलवाद भी अंतिम सांसें गिन रहा है। पहले जहां सौ से अधिक जिले, नक्सलवाद की चपेट में थे, आज ये दो दर्जन से भी कम जिलों में ही सीमित रह गया है। ये तभी संभव हुआ, जब हमने nation first की भावना से काम किया। हमने इन क्षेत्रों में Governance को Grassroot Level तक पहुंचाया। देखते ही देखते इन जिलों मे हज़ारों किलोमीटर लंबी सड़कें बनीं, स्कूल-अस्पताल बने, 4G मोबाइल नेटवर्क पहुंचा और परिणाम आज देश देख रहा है।

साथियों,

सरकार के निर्णायक फैसलों से आज नक्सलवाद जंगल से तो साफ हो रहा है, लेकिन अब वो Urban सेंटर्स में पैर पसार रहा है। Urban नक्सलियों ने अपना जाल इतनी तेज़ी से फैलाया है कि जो राजनीतिक दल, अर्बन नक्सल के विरोधी थे, जिनकी विचारधारा कभी गांधी जी से प्रेरित थी, जो भारत की ज़ड़ों से जुड़ी थी, ऐसे राजनीतिक दलों में आज Urban नक्सल पैठ जमा चुके हैं। आज वहां Urban नक्सलियों की आवाज, उनकी ही भाषा सुनाई देती है। इसी से हम समझ सकते हैं कि इनकी जड़ें कितनी गहरी हैं। हमें याद रखना है कि Urban नक्सली, भारत के विकास और हमारी विरासत, इन दोनों के घोर विरोधी हैं। वैसे अर्नब ने भी Urban नक्सलियों को एक्सपोज करने का जिम्मा उठाया हुआ है। विकसित भारत के लिए विकास भी ज़रूरी है और विरासत को मज़बूत करना भी आवश्यक है। और इसलिए हमें Urban नक्सलियों से सावधान रहना है।

साथियों,

आज का भारत, हर चुनौती से टकराते हुए नई ऊंचाइयों को छू रहा है। मुझे भरोसा है कि रिपब्लिक टीवी नेटवर्क के आप सभी लोग हमेशा नेशन फर्स्ट के भाव से पत्रकारिता को नया आयाम देते रहेंगे। आप विकसित भारत की एस्पिरेशन को अपनी पत्रकारिता से catalyse करते रहें, इसी विश्वास के साथ, आप सभी का बहुत-बहुत आभार, बहुत-बहुत शुभकामनाएं।

धन्यवाद!