ಗೌರವಾನ್ವಿತ ಗಣ್ಯರೆ,

ಬ್ರಿಕ್ಸ್ ಉದ್ಯಮ ವ್ಯವಹಾರ ಸಮುದಾಯದ ನಾಯಕರೆ,

ಇಲ್ಲಿರುವ ಎಲ್ಲರಿಗೂ ನಮಸ್ಕಾರ!

ನಾವು ದಕ್ಷಿಣ ಆಫ್ರಿಕಾ ನೆಲಕ್ಕೆ ಕಾಲಿಟ್ಟ ತಕ್ಷಣ, ನಮ್ಮ ಕಾರ್ಯಕ್ರಮದ ಪ್ರಾರಂಭವನ್ನು ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆಯ ಮೂಲಕ ಮಾಡಲಾಗುತ್ತಿದೆ ಎಂಬುದು ನನಗೆ ಸಂತೋಷವಾಗಿದೆ.

ಮೊದಲನೆಯದಾಗಿ, ಅಧ್ಯಕ್ಷ ರಮಾಫೋಸಾ ಅವರ ಆಹ್ವಾನಕ್ಕಾಗಿ ಮತ್ತು ಈ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.

ಬ್ರಿಕ್ಸ್ ಉದ್ಯಮ ಮಂಡಳಿಯ 10ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ, ನಾನು ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಕಳೆದ 10 ವರ್ಷಗಳಲ್ಲಿ, ಬ್ರಿಕ್ಸ್ ಉದ್ಯಮ ಮಂಡಳಿ ನಮ್ಮ ಆರ್ಥಿಕ ಸಹಕಾರ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

2009ರಲ್ಲಿ ಮೊದಲ ಬ್ರಿಕ್ಸ್ ಶೃಂಗಸಭೆ ನಡೆದಾಗ, ಜಗತ್ತು ದೊಡ್ಡ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುತ್ತಿತ್ತು. ಆ ಸಮಯದಲ್ಲಿ, ಬ್ರಿಕ್ಸ್ ಜಾಗತಿಕ ಆರ್ಥಿಕತೆಯ ಭರವಸೆಯ ಆಶಾಕಿರಣವಾಗಿ ಕಂಡುಬಂದಿದೆ. ಸಮಕಾಲೀನ ಸಂದರ್ಭದಲ್ಲೂ ಕೋವಿಡ್ ಸಾಂಕ್ರಾಮಿಕ, ಉದ್ವಿಗ್ನತೆ ಮತ್ತು ಘರ್ಷಣೆಗಳ ಮಧ್ಯೆ, ಜಗತ್ತು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ. ಅಂತಹ ಸಮಯದಲ್ಲಿ, ಬ್ರಿಕ್ಸ್ ರಾಷ್ಟ್ರಗಳು ಮತ್ತೊಮ್ಮೆ ಮಹತ್ವದ ಪಾತ್ರ ವಹಿಸುತ್ತವೆ ಎಂಬ ಭಾವನೆ ತಮ್ಮದಾಗಿದೆ.

ಸ್ನೇಹಿತರೆ,

ಜಾಗತಿಕ ಆರ್ಥಿಕತೆಯ ತಲ್ಲಣಗಳ ಹೊರತಾಗಿಯೂ, ಭಾರತವು ಪ್ರಸ್ತುತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಮುಂಬರುವ ವರ್ಷಗಳಲ್ಲಿ ಭಾರತವು ವಿಶ್ವದ ಬೆಳವಣಿಗೆಯ ಚಾಲನಾಶಕ್ತಿ(ವೇಗವರ್ಧಕ-ಎಂಜಿನ್) ಆಗುವುದರಲ್ಲಿ ಸಂದೇಹವಿಲ್ಲ. ಏಕೆಂದರೆ, ಭಾರತವು ಪ್ರತಿಕೂಲ ಮತ್ತು ಸವಾಲುಗಳ ಸಮಯವನ್ನು ಆರ್ಥಿಕ ಸುಧಾರಣೆಗಳ ಸದವಕಾಶವಾಗಿ ಪರಿವರ್ತಿಸಿದೆ. ಕಳೆದ ಕೆಲವು ವರ್ಷಗಳಲ್ಲಿ, ಕಾರ್ಯಾಚರಣೆ ಮಾದರಿಯಲ್ಲಿ ನಾವು ಕೈಗೊಂಡ ಸುಧಾರಣೆಗಳು ಭಾರತದಲ್ಲಿ ಸುಲಭವಾಗಿ ಉದ್ಯಮ ವ್ಯವಹಾರ ಮತ್ತು ವ್ಯಾಪಾರ ಮಾಡುವ ಸ್ಥಿರವಾದ ಸುಧಾರಣೆಗೆ ಕಾರಣವಾಗಿವೆ. ನಾವು ಕಾನೂನು ಅನುಸರಣೆ ಹೊರೆಯನ್ನು ಕಡಿಮೆ ಮಾಡಿದ್ದೇವೆ. ನಾವು ಕೆಂಪು ಟೇಪ್ ಅನ್ನು ರೆಡ್ ಕಾರ್ಪೆಟ್ ನೊಂದಿಗೆ ಬದಲಾಯಿಸುತ್ತಿದ್ದೇವೆ. ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಮತ್ತು ದಿವಾಳಿತನ ಮತ್ತು ಋಣಭಾರ ಸಂಹಿತೆಯ ಅನುಷ್ಠಾನವು ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿದೆ. ಈ ಹಿಂದೆ ನಿರ್ಬಂಧಿಸಲ್ಪಟ್ಟಿದ್ದ ರಕ್ಷಣಾ ಮತ್ತು ಬಾಹ್ಯಾಕಾಶ ಕ್ಷೇತ್ರಗಳು ಈಗ ಖಾಸಗಿ ವಲಯಕ್ಕೆ ಮುಕ್ತವಾಗಿವೆ. ನಾವು ವಿಶೇಷವಾಗಿ ಸಾರ್ವಜನಿಕ ಸೇವೆ ವಿತರಣೆ ಮತ್ತು ಉತ್ತಮ ಆಡಳಿತದ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ತಂತ್ರಜ್ಞಾನದ ಬಳಕೆಯ ಮೂಲಕ ಭಾರತವು ಆರ್ಥಿಕ ಒಳಗೊಳ್ಳುವಿಕೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಇದರ ಹೆಚ್ಚಿನ ಲಾಭವನ್ನು ನಮ್ಮ ಗ್ರಾಮೀಣ ಮಹಿಳೆಯರು ಪಡೆದುಕೊಂಡಿದ್ದಾರೆ. ಇಂದು, ಭಾರತದಲ್ಲಿ ಲಕ್ಷಾಂತರ ಜನರು ಕೇವಲ ಒಂದು ಕ್ಲಿಕ್‌ನಲ್ಲಿ ನೇರ ನಗದು(ಲಾಭ) ವರ್ಗಾವಣೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. 360 ಶತಕೋಟಿ ಡಾಲರ್‌ ಮೌಲ್ಯದ ಇಂತಹ ವರ್ಗಾವಣೆಗಳನ್ನು ಇದುವರೆಗೆ ಮಾಡಲಾಗಿದೆ. ಇದು ಸಾರ್ವಜನಿಕ ಸೇವಾ ವಿತರಣೆಯಲ್ಲಿ ಪಾರದರ್ಶಕತೆ ಹೆಚ್ಚಿಸಿದೆ, ಭ್ರಷ್ಟಾಚಾರ ಕಡಿಮೆ ಮಾಡಿದೆ ಮತ್ತು ಮಧ್ಯವರ್ತಿಗಳಿಗೆ ಕಡಿವಾಣ ಹಾಕಿದೆ.

ಭಾರತವು ಪ್ರತಿ ಗಿಗಾಬೈಟ್ ಡೇಟಾ ಬೆಲೆಗಳನ್ನು ಅತ್ಯಂತ ಕೈಗೆಟುಕುವ ಬೆಲೆಯನ್ನು ಹೊಂದಿದೆ. ಇಂದು ಬೀದಿ ಬದಿ ವ್ಯಾಪಾರಿಗಳಿಂದ ಹಿಡಿದು ದೊಡ್ಡ ಶಾಪಿಂಗ್ ಮಾಲ್‌ಗಳವರೆಗೆ, ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವಹಿವಾಟುಗಳನ್ನು ಬಳಸಲಾಗುತ್ತದೆ. ಇಂದು ಭಾರತ ವಿಶ್ವದಲ್ಲೇ ಅತಿ ಹೆಚ್ಚು ಡಿಜಿಟಲ್ ವಹಿವಾಟು ನಡೆಸುವ ದೇಶವಾಗಿ ಎದ್ದುನಿಂತಿದೆ. ಯುಎಇ, ಸಿಂಗಾಪುರ್ ಮತ್ತು ಫ್ರಾನ್ಸ್‌ನಂತಹ ದೇಶಗಳು ಸಹ ಈ ವೇದಿಕೆಗೆ ಸೇರುತ್ತಿವೆ. ಬ್ರಿಕ್ಸ್ ದೇಶಗಳೊಂದಿಗೆ ಸಹ ಈ ಕುರಿತು ಕೆಲಸ ಮಾಡಲು ಹಲವಾರು ಸಾಧ್ಯತೆಗಳಿವೆ. ಭಾರತದ ಮೂಲಸೌಕರ್ಯದಲ್ಲಿ ಮಾಡಲಾಗುತ್ತಿರುವ ದೊಡ್ಡ ಪ್ರಮಾಣದ ಹೂಡಿಕೆಗಳು ದೇಶದ ಭೂದೃಶ್ಯವನ್ನು ಬದಲಾಯಿಸುತ್ತಿವೆ.

ಈ ವರ್ಷದ ಬಜೆಟ್‌ನಲ್ಲಿ ನಾವು ಮೂಲಸೌಕರ್ಯಕ್ಕಾಗಿ ಸುಮಾರು 120 ಬಿಲಿಯನ್ ಡಾಲರ್‌ ಹಣವನ್ನು ಮೀಸಲಿಟ್ಟಿದ್ದೇವೆ. ಈ ಹೂಡಿಕೆಯ ಮೂಲಕ, ನಾವು ಭವಿಷ್ಯದ ಹೊಸ ಭಾರತ ನಿರ್ಮಾಣಕ್ಕೆ ಬಲವಾದ ಅಡಿಪಾಯ ಹಾಕುತ್ತಿದ್ದೇವೆ. ರೈಲು, ರಸ್ತೆ, ಜಲಮಾರ್ಗಗಳು ಮತ್ತು ವಾಯುಮಾರ್ಗಗಳಲ್ಲಿ ಪರಿವರರ್ತನೆಗಳು ವೇಗವಾಗಿ ನಡೆಯುತ್ತಿವೆ. ಭಾರತದಲ್ಲಿ ವರ್ಷಕ್ಕೆ 10 ಸಾವಿರ ಕಿಲೋಮೀಟರ್ ಹೊಸ ಹೆದ್ದಾರಿಗಳನ್ನು ವೇಗವಾಗಿ ನಿರ್ಮಿಸಲಾಗುತ್ತಿದೆ. ಕಳೆದ 9 ವರ್ಷಗಳಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ ದ್ವಿಗುಣಗೊಂಡಿದೆ. ಹೂಡಿಕೆ ಮತ್ತು ಉತ್ಪಾದನೆ ಹೆಚ್ಚಿಸಲು, ನಾವು ಉತ್ಪಾದನೆ ಸಂಪರ್ಕಿತ ಉತ್ತೇಜನಾ ಯೋಜನೆಯನ್ನು ಪರಿಚಯಿಸಿದ್ದೇವೆ. ಸರಕು ಸಾಗಣೆ ವೆಚ್ಚ ಕಡಿತವು ಭಾರತದ ಉತ್ಪಾದನಾ ವಲಯವನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸುತ್ತಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ವಿಶ್ವ ನಾಯಕರಲ್ಲಿ ಒಂದಾಗಿದೆ. ಸೌರ ಶಕ್ತಿ, ಪವನ ಶಕ್ತಿ, ವಿದ್ಯುಚ್ಛಾಲಿತ ವಾಹನಗಳು, ಹಸಿರು ಹೈಡ್ರೋಜನ್ ಮತ್ತು ಹಸಿರು ಅಮೋನಿಯದಂತಹ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ನಾವು ಸಕ್ರಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಇದು ಭಾರತದಲ್ಲಿ ನವೀಕರಿಸಬಹುದಾದ ತಂತ್ರಜ್ಞಾನಕ್ಕೆ ಗಣನೀಯ ಮಾರುಕಟ್ಟೆ ಸೃಷ್ಟಿಸುವುದು ಸಹಜ. ಇಂದು, ಭಾರತವು ವಿಶ್ವದ 3ನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆ ಹೊಂದಿದೆ. ಭಾರತದಲ್ಲಿ ನೂರಕ್ಕೂ ಹೆಚ್ಚು ಯುನಿಕಾರ್ನ್‌ಗಳಿವೆ. ಐಟಿ, ಟೆಲಿಕಾಂ, ಹಣಕಾಸು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಸೆಮಿಕಂಡಕ್ಟರ್‌ಗಳಂತಹ ಕ್ಷೇತ್ರಗಳಲ್ಲಿ ನಾವು "ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್" ಎಂಬ ದೃಷ್ಟಿಕೋನ ಪ್ರಚಾರ ಮಾಡುತ್ತಿದ್ದೇವೆ. ಈ ಎಲ್ಲಾ ಪ್ರಯತ್ನಗಳು ಸಾಮಾನ್ಯ ಜನರ ಜೀವನದ ಮೇಲೆ ನೇರ ಸಕಾರಾತ್ಮಕ ಪರಿಣಾಮ ಬೀರಿವೆ. ಕಳೆದ 9 ವರ್ಷಗಳಲ್ಲಿ ಜನರ ಆದಾಯದಲ್ಲಿ ಸುಮಾರು 3 ಪಟ್ಟು ಹೆಚ್ಚಳವಾಗಿದೆ. ಭಾರತದ ಆರ್ಥಿಕ ಅಭಿವೃದ್ಧಿಗೆ ಮಹಿಳೆಯರು ಮಹತ್ವದ ಕೊಡುಗೆ ನೀಡಿದ್ದಾರೆ. ಐಟಿಯಿಂದ ಬಾಹ್ಯಾಕಾಶದವರೆಗೆ, ಬ್ಯಾಂಕಿಂಗ್‌ನಿಂದ ಆರೋಗ್ಯದವರೆಗೆ, ಮಹಿಳೆಯರು ಪುರುಷರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುತ್ತಿದ್ದಾರೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಿಸಲು ಭಾರತದ ಜನರು ಪಣ ತೊಟ್ಟಿದ್ದಾರೆ.

ಸ್ನೇಹಿತರೆ,

ಭಾರತದ ಅಭಿವೃದ್ಧಿಯ ಪಯಣದ ಭಾಗವಾಗಲು ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ಕೋವಿಡ್ ಸಾಂಕ್ರಾಮಿಕ ರೋಗವು ಚೇತರಿಸಿಕೊಳ್ಳುವ ಮತ್ತು ಎಲ್ಲರನ್ನೂ ಒಳಗೊಂಡ ಪೂರೈಕೆ ಸರಪಳಿಗಳ ಪ್ರಾಮುಖ್ಯತೆಯನ್ನು ನಮಗೆ ಕಲಿಸಿದೆ. ಇದಕ್ಕೆ ಪರಸ್ಪರ ನಂಬಿಕೆ ಮತ್ತು ಪಾರದರ್ಶಕತೆ ಬಹುಮುಖ್ಯ. ಪರಸ್ಪರರ ಸಾಮರ್ಥ್ಯಗಳನ್ನು ಸಂಯೋಜಿಸುವ ಮೂಲಕ, ನಾವು ಇಡೀ ಪ್ರಪಂಚದ ಯೋಗಕ್ಷೇಮಕ್ಕೆ ಗಮನಾರ್ಹ ಕೊಡುಗೆ ನೀಡಬಹುದು, ವಿಶೇಷವಾಗಿ ಜಾಗತಿಕ ದಕ್ಷಿಣ ಭಾಗಕ್ಕೆ.

ಗೌರವಾನ್ವಿತ ಗಣ್ಯರೆ,

ಮತ್ತೊಮ್ಮೆ, ಬ್ರಿಕ್ಸ್ ಉದ್ಯಮ ವ್ಯವಹಾರ ಮತ್ತು ವ್ಯಾಪಾರ ಸಮುದಾಯದ ನಾಯಕರಿಗೆ ಅವರ ಕೊಡುಗೆಗಳಿಗಾಗಿ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮಹೋನ್ನತ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ರಾಮಾಫೋಸಾ ಅವರಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ತುಂಬು ಧನ್ಯವಾದಗಳು

 ಹಕ್ಕು ನಿರಾಕರಣೆ: ಪ್ರಧಾನ ಮಂತ್ರಿ ಅವರ ಭಾಷಣದ ಅಂದಾಜು ಇಂಗ್ಲೀಷ್ ಅನುವಾದದ ಕನ್ನಡ ರೂಪಾಂತರ ಇದಾಗಿದೆ. ಅವರು ಮೂಲ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ.

 

  • कृष्ण सिंह राजपुरोहित भाजपा विधान सभा गुड़ामा लानी November 21, 2024

    जय श्री राम 🚩 वन्दे मातरम् जय भाजपा विजय भाजपा
  • Devendra Kunwar October 08, 2024

    BJP
  • दिग्विजय सिंह राना September 20, 2024

    हर हर महादेव
  • JBL SRIVASTAVA May 27, 2024

    मोदी जी 400 पार
  • Vaishali Tangsale February 12, 2024

    🙏🏻🙏🏻
  • ज्योती चंद्रकांत मारकडे February 11, 2024

    जय हो
  • Shyam Mohan Singh Chauhan mandal adhayksh January 11, 2024

    जय हो
  • Mintu Kumar September 01, 2023

    नमस्कार सर, मैं कुलदीप पिता का नाम स्वर्गीय श्री शेरसिंह हरियाणा जिला महेंद्रगढ़ का रहने वाला हूं। मैं जून 2023 में मुम्बई बांद्रा टर्मिनस रेलवे स्टेशन पर लिनेन (LILEN) में काम करने के लिए गया था। मेरी ज्वाइनिंग 19 को बांद्रा टर्मिनस रेलवे स्टेशन पर हुई थी, मेरा काम ट्रेन में चदर और कंबल देने का था। वहां पर हमारे ग्रुप 10 लोग थे। वहां पर हमारे लिए रहने की भी कोई व्यवस्था नहीं थी, हम बांद्रा टर्मिनस रेलवे स्टेशन पर ही प्लेटफार्म पर ही सोते थे। वहां पर मैं 8 हजार रूपए लेकर गया था। परंतु दोनों समय का खुद के पैसों से खाना पड़ता था इसलिए सभी पैसै खत्म हो गऍ और फिर मैं 19 जुलाई को बांद्रा टर्मिनस से घर पर आ गया। लेकिन मेरी सैलरी उन्होंने अभी तक नहीं दी है। जब मैं मेरी सैलरी के लिए उनको फोन करता हूं तो बोलते हैं 2 दिन बाद आयेगी 5 दिन बाद आयेगी। ऐसा बोलते हुए उनको दो महीने हो गए हैं। लेकिन मेरी सैलरी अभी तक नहीं दी गई है। मैंने वहां पर 19 जून से 19 जुलाई तक काम किया है। मेरे साथ में जो लोग थे मेरे ग्रुप के उन सभी की सैलरी आ गई है। जो मेरे से पहले छोड़ कर चले गए थे उनकी भी सैलरी आ गई है लेकिन मेरी सैलरी अभी तक नहीं आई है। सर घर में कमाने वाला सिर्फ मैं ही हूं मेरे मम्मी बीमार रहती है जैसे तैसे घर का खर्च चला रहा हूं। सर मैंने मेरे UAN नम्बर से EPFO की साइट पर अपनी डिटेल्स भी चैक की थी। वहां पर मेरी ज्वाइनिंग 1 जून से दिखा रखी है। सर आपसे निवेदन है कि मुझे मेरी सैलरी दिलवा दीजिए। सर मैं बहुत गरीब हूं। मेरे पास घर का खर्च चलाने के लिए भी पैसे नहीं हैं। वहां के accountant का नम्बर (8291027127) भी है मेरे पास लेकिन वह मेरी सैलरी नहीं भेज रहे हैं। वहां पर LILEN में कंपनी का नाम THARU AND SONS है। मैंने अपने सारे कागज - आधार कार्ड, पैन कार्ड, बैंक की कॉपी भी दी हुई है। सर 2 महीने हो गए हैं मेरी सैलरी अभी तक नहीं आई है। सर आपसे हाथ जोड़कर विनती है कि मुझे मेरी सैलरी दिलवा दीजिए आपकी बहुत मेहरबानी होगी नाम - कुलदीप पिता - स्वर्गीय श्री शेरसिंह तहसील - कनीना जिला - महेंद्रगढ़ राज्य - हरियाणा पिनकोड - 123027
  • Ambikesh Pandey August 25, 2023

    👌
  • sunil keshri August 25, 2023

    modi modi modi
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Manufacturing sector pushes India's industrial output growth to 5% in Jan

Media Coverage

Manufacturing sector pushes India's industrial output growth to 5% in Jan
NM on the go

Nm on the go

Always be the first to hear from the PM. Get the App Now!
...
Prime Minister condoles passing of Dr. Shankar Rao Tatwawadi Ji
March 13, 2025

The Prime Minister, Shri Narendra Modi condoled passing of Dr. Shankar Rao Tatwawadi Ji, today. Shri Modi stated that Dr. Shankar Rao Tatwawadi Ji will be remembered for his extensive contribution to nation-building and India's cultural regeneration."I consider myself fortunate to have interacted with him on several occasions, both in India and overseas. His ideological clarity and meticulous style of working always stood out" Shri Modi added.

The Prime Minister posted on X :

"Pained by the passing away of Dr. Shankar Rao Tatwawadi Ji. He will be remembered for his extensive contribution to nation-building and India's cultural regeneration. He dedicated himself to RSS and made a mark by furthering its global outreach. He was also a distinguished scholar, always encouraging a spirit of enquiry among the youth. Students and scholars fondly recall his association with BHU. His various passions included science, Sanskrit and spirituality.

I consider myself fortunate to have interacted with him on several occasions, both in India and overseas. His ideological clarity and meticulous style of working always stood out.

Om Shanti