Quote​​​​​​​"ವಾಟರ್ ವಿಷನ್ @ 2047 ಮುಂದಿನ 25 ವರ್ಷಗಳ ಅಮೃತ ಕಾಲ ಪ್ರಯಾಣದ ಪ್ರಮುಖ ಆಯಾಮವಾಗಿದೆ"
Quote"ಸಾರ್ವಜನಿಕರು ಒಂದು ಅಭಿಯಾನದಲ್ಲಿ ಭಾಗವಹಿಸಿದಾಗ, ಅವರು ಆ ಅಭಿಯಾನದ ಗಂಭೀರತೆಯನ್ನು ಅರಿಯುತ್ತಾರೆ"
Quote"ಜನರು ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿದಾಗ, ಸಾರ್ವಜನಿಕರಲ್ಲಿಯೂ ಅದರ ಬಗ್ಗೆ ಒಂದು ಪ್ರಜ್ಞೆಯನ್ನು ಮೂಡಿಸಲಾಯಿತು"
Quote"ದೇಶವು ಪ್ರತಿ ಜಿಲ್ಲೆಯಲ್ಲೂ 75 ಅಮೃತ ಸರೋವರಗಳನ್ನು ನಿರ್ಮಿಸುತ್ತಿದೆ, ಈ ಹಾದಿಯಲ್ಲಿ ಈಗಾಗಲೇ 25 ಸಾವಿರ ಅಮೃತ ಸರೋವರಗಳನ್ನು ನಿರ್ಮಿಸಲಾಗಿದೆ."
Quote"ಜಲ ಜೀವನ್ ಮಿಷನ್ ಪ್ರತಿ ಮನೆಗೂ ನೀರನ್ನು ಒದಗಿಸುವಲ್ಲಿ ರಾಜ್ಯದ ಒಂದು ಪ್ರಮುಖ ಅಭಿವೃದ್ಧಿಯ ನಿಯತಾಂಕವಾಗಿದೆ"
Quote"'ಪ್ರತಿ ಹನಿಗೂ ಹೆಚ್ಚು ಬೆಳೆ' ಅಭಿಯಾನದಡಿ, ದೇಶದಲ್ಲಿ ಈ ವರೆಗೆ 70 ಲಕ್ಷ ಹೆಕ್ಟೇರ್ ಗೂ ಹೆಚ್ಚು ಭೂಮಿಯನ್ನು ಸೂಕ್ಷ್ಮ ನೀರಾವರಿಗೆ ಒಳಪಡಿಸಲಾಗಿದೆ."
Quote"ಗ್ರಾಮ ಪಂಚಾಯಿತಿಗಳು ಮುಂದಿನ 5 ವರ್ಷಗಳಲ್ಲಿ ನೀರು ಪೂರೈಕೆ, ಸ್ವಚ್ಛತೆ, ಮತ್ತು ತ್ಯಾಜ್ಯ ನಿರ್ವಹಣೆಯವರೆಗೆ ಮಾರ್ಗಸೂಚಿಯನ್ನು ಪರಿಗಣಿಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು."
Quote"ನಮ್ಮ ನದಿಗಳು, ನಮ್ಮ ಜಲಮೂಲಗಳು ಇಡೀ ಜಲ ಪರಿಸರ ವ್ಯವಸ್ಥೆಯ ಅತ್ಯಂತ ಪ್ರಮುಖ ಭಾಗವಾಗಿವೆ"
Quote"ನಮಾಮಿ ಗಂಗೆ ಮಿಷನ್ ಅನ್ನು ಉದಾಹರಣೆಯಾಗಿಟ್ಟುಕೊಂಡು, ಇತರ ರಾಜ್ಯಗಳು ನದಿಗಳ ಸಂರಕ್ಷಣೆಗಾಗಿ ಇದೇ ರೀತಿಯ ಅಭಿಯಾನಗಳನ್ನು ಪ್ರಾರಂಭಿಸಬಹುದು"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ನೀರಿನ ಪ್ರಥಮ ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಮ್ಮೇಳನದ ಧ್ಯೇಯವಾಕ್ಯ 'ವಾಟರ್ ವಿಷನ್ @ 2047' ಎಂಬುದಾಗಿದೆ.  ಸುಸ್ಥಿರ ಅಭಿವೃದ್ಧಿ ಮತ್ತು ಮಾನವ ಅಭಿವೃದ್ಧಿಗಾಗಿ ಜಲಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮಾರ್ಗಗಳ ಬಗ್ಗೆ ಚರ್ಚಿಸಲು ಪ್ರಮುಖ ನೀತಿ ನಿರೂಪಕರನ್ನು ಒಟ್ಟುಗೂಡಿಸುವುದು ವೇದಿಕೆಯ ಉದ್ದೇಶವಾಗಿದೆ.

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಜಲ ಭದ್ರತೆಯ ಕ್ಷೇತ್ರಗಳಲ್ಲಿ ಭಾರತ ಮಾಡಿದ ಅಭೂತಪೂರ್ವ ಕಾರ್ಯಗಳ ಮೇಲೆ ಬೆಳಕು ಚೆಲ್ಲುವ ಮೂಲಕ ದೇಶದ ಜಲ ಸಚಿವರ ಪ್ರಥಮ ಅಖಿಲ ಭಾರತ ಸಮ್ಮೇಳನದ ಮಹತ್ವವನ್ನು ಒತ್ತಿ ಹೇಳಿದರು.  ನಮ್ಮ ಸಾಂವಿಧಾನಿಕ ವ್ಯವಸ್ಥೆಯಲ್ಲಿ, ನೀರಿನ ವಿಷಯವು ಆಯಾ ರಾಜ್ಯಗಳ ನಿಯಂತ್ರಣಕ್ಕೆ ಬರುತ್ತದೆ ಮತ್ತು ಜಲ ಸಂರಕ್ಷಣೆಗಾಗಿ ರಾಜ್ಯಗಳ ಪ್ರಯತ್ನಗಳು ದೇಶದ ಸಾಮೂಹಿಕ ಗುರಿಗಳನ್ನು ಸಾಧಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಪ್ರಧಾನಿ ಗಮನಸೆಳೆದರು. "ಜಲ ವಿಷನ್ @ 2047 ಮುಂದಿನ 25 ವರ್ಷಗಳ ಅಮೃತ ಕಾಲದ ಪ್ರಯಾಣದ ಒಂದು ಪ್ರಮುಖ ಆಯಾಮವಾಗಿದೆ" ಎಂದು ಪ್ರಧಾನಿ ಹೇಳಿದರು.

'ಇಡೀ ಸರ್ಕಾರ' ಮತ್ತು 'ಇಡೀ ದೇಶ' ಎಂಬ ತಮ್ಮ ದೃಷ್ಟಿಕೋನವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿಯವರು, ಎಲ್ಲಾ ಸರ್ಕಾರಗಳು ಒಂದು ವ್ಯವಸ್ಥೆಯಂತೆ ಕೆಲಸ ಮಾಡಬೇಕು.  ಇದರಲ್ಲಿ ಜಲ ಸಂಪನ್ಮೂಲ ಸಚಿವಾಲಯ, ನೀರಾವರಿ ಸಚಿವಾಲಯ, ಕೃಷಿ ಸಚಿವಾಲಯ, ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಚಿವಾಲಯ ಮತ್ತು ವಿಪತ್ತು ನಿರ್ವಹಣೆಯಂತಹ ರಾಜ್ಯ ಸರ್ಕಾರಗಳ ವಿವಿಧ ಸಚಿವಾಲಯಗಳ ನಡುವೆ ನಿರಂತರ ಸಂವಹನ ಮತ್ತು ಸಂವಾದ ಇರಬೇಕು ಎಂದು ಒತ್ತಿ ಹೇಳಿದರು. ಈ ಇಲಾಖೆಗಳು ಪರಸ್ಪರ ಸಂಬಂಧಿಸಿದ ಮಾಹಿತಿ ಮತ್ತು ದತ್ತಾಂಶಗಳನ್ನು ಹೊಂದಿದ್ದರೆ ಯೋಜನಾ ವಿಭಾಗವು ಇದರಿಂದ ಸಹಾಯ ಪಡೆಯುತ್ತದೆ ಎಂದು ಅವರು ಹೇಳಿದರು.

ಕೇವಲ ಸರ್ಕಾರದ ಪ್ರಯತ್ನಗಳಿಂದ ಮಾತ್ರ ಯಶಸ್ಸು ಸಿಗುವುದಿಲ್ಲ ಎಂದು ಹೇಳಿದ ಪ್ರಧಾನಮಂತ್ರಿಯವರು, ಸಾರ್ವಜನಿಕ ಮತ್ತು ಸಾಮಾಜಿಕ ಸಂಘಟನೆಗಳು ಮತ್ತು ನಾಗರಿಕ ಸಮಾಜಗಳ ಪಾತ್ರದ ಬಗ್ಗೆಯೂ ಗಮನ ಸೆಳೆದರು. ಜಲ ಸಂರಕ್ಷಣೆಗೆ ಸಂಬಂಧಿಸಿದ ಅಭಿಯಾನಗಳಲ್ಲಿ ಸಾರ್ವಜನಿಕ ಮತ್ತು ಸಾಮಾಜಿಕ ಸಂಘಟನೆಗಳು ಮತ್ತು ನಾಗರಿಕ ಸಮಾಜಗಳ ಗರಿಷ್ಠ ಭಾಗವಹಿಸುವಿಕೆಯನ್ನು ಕೋರಿದರು. ಸಾರ್ವಜನಿಕ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದರಿಂದ ಸರ್ಕಾರದ ಉತ್ತರದಾಯಿತ್ವವು ಕಡಿಮೆಯಾಗುವುದಿಲ್ಲ, ಅಂದರೆ ಅದರರ್ಥ ಎಲ್ಲಾ ಜವಾಬ್ದಾರಿಗಳನ್ನು ಜನರ ಮೇಲೆ ಹಾಕುವುದು ಎಂದರ್ಥವಲ್ಲ ಎಂದು ಪ್ರಧಾನಮಂತ್ರಿಯವರು ವಿವರಿಸಿದರು. ಸಾರ್ವಜನಿಕ ಪಾಲ್ಗೊಳ್ಳುವಿಕೆಯ ಅತಿದೊಡ್ಡ ಪ್ರಯೋಜನವೆಂದರೆ ಈ ಅಭಿಯಾನದಲ್ಲಿ ಮಾಡಲಾಗುತ್ತಿರುವ ಪ್ರಯತ್ನಗಳು ಮತ್ತು ಖರ್ಚು ಮಾಡುತ್ತಿರುವ ಹಣದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು. "ಸಾರ್ವಜನಿಕರು ಇಂತಹ ಅಭಿಯಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ, ಅವರು ಕೆಲಸದ ಗಂಭೀರತೆಯನ್ನು ಸಹ ತಿಳಿದುಕೊಳ್ಳುತ್ತಾರೆ. ಈ ಕಾರಣದಿಂದಾಗಿ, ಯಾವುದೇ ಯೋಜನೆ ಅಥವಾ ಅಭಿಯಾನದ ಬಗ್ಗೆ ಮಾಲೀಕತ್ವದ ಪ್ರಜ್ಞೆ ಸಾರ್ವಜನಿಕರಲ್ಲಿ ಬರುತ್ತದೆ "ಎಂದು ಅವರು ತಿಳಿಸಿದರು.

ಸ್ವಚ್ಛ ಭಾರತ ಅಭಿಯಾನದ ಉದಾಹರಣೆಯನ್ನು ನೀಡಿದ ಪ್ರಧಾನಮಂತ್ರಿಯವರು, "ಜನರು ಸ್ವಚ್ಛ ಭಾರತ ಅಭಿಯಾನಕ್ಕೆ ಸೇರಿದಾಗ, ಸಾರ್ವಜನಿಕರಲ್ಲಿಯೂ ಒಂದು ಪ್ರಜ್ಞೆ ಜಾಗೃತಗೊಳ್ಳಲಿದೆ" ಎಂದು ಹೇಳಿದರು. ಭಾರತದ ಜನತೆಯ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು, ಕೊಳಕನ್ನು ತೆಗೆದುಹಾಕಲು ಸಂಪನ್ಮೂಲಗಳನ್ನು ಸಂಗ್ರಹಿಸುವುದು, ವಿವಿಧ ಜಲ ಸಂಸ್ಕರಣಾ ಘಟಕಗಳನ್ನು ನಿರ್ಮಿಸುವುದು ಅಥವಾ ಶೌಚಾಲಯಗಳನ್ನು ನಿರ್ಮಿಸುವುದು ಸೇರಿದಂತೆ ಅನೇಕ ಉಪಕ್ರಮಗಳನ್ನು ಸರ್ಕಾರ ಕೈಗೊಂಡಿದೆ, ಆದರೆ ಸಾರ್ವಜನಿಕರು ಯಾವುದೇ ಕೊಳಕು ಇರಬಾರದು ಎಂದು ನಿರ್ಧರಿಸಿದಾಗ ಮಾತ್ರ ಈ ಅಭಿಯಾನ ಯಶಸ್ಸನ್ನು ಕಂಡಿದೆ ಎಂದು ಉಲ್ಲೇಖಿಸಿದರು. ಜಲಸಂರಕ್ಷಣೆಯ ಕಡೆಗೆ ಸಾರ್ವಜನಿಕರ ಪಾಲ್ಗೊಳ್ಳುವಿಕೆಯ ಈ ಕಲ್ಪನೆಯನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಅದರ ಬಗ್ಗೆ ಜಾಗೃತಿಯು ಉಂಟುಮಾಡಬಹುದಾದ ಪರಿಣಾಮವನ್ನು ಒತ್ತಿ ಹೇಳಿದರು.

"ನಾವು 'ಜಲ ಜಾಗೃತಿ ಉತ್ಸವಗಳನ್ನು' ಆಯೋಜಿಸಬಹುದು ಅಥವಾ ಜಲ ಜಾಗೃತಿಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ನಡೆಯುವ ಜಾತ್ರೆಗಳಲ್ಲಿ ಸೇರಿಸಬಹುದು" ಎಂದು ಪ್ರಧಾನಿ ಸಲಹೆ ನೀಡಿದರು. ಪಠ್ಯಕ್ರಮದಿಂದ ಹಿಡಿದು ಶಾಲೆಗಳಲ್ಲಿನ ಚಟುವಟಿಕೆಗಳವರೆಗೆ ನವೀನ ವಿಧಾನಗಳ ಮೂಲಕ ಯುವ ಪೀಳಿಗೆಗೆ ಈ ವಿಷಯದ ಬಗ್ಗೆ ಅರಿವು ಮೂಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ದೇಶವು ಪ್ರತಿ ಜಿಲ್ಲೆಯಲ್ಲೂ 75 ಅಮೃತ ಸರೋವರಗಳನ್ನು ನಿರ್ಮಿಸುತ್ತಿದ್ದು, ಇದರಲ್ಲಿ ಈಗಾಗಲೇ 25 ಸಾವಿರ ಅಮೃತ ಸರೋವರಗಳನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ತಂತ್ರಜ್ಞಾನ, ಕೈಗಾರಿಕೆ ಮತ್ತು ಸ್ಟಾರ್ಟ್ಅಪ್ ಗಳನ್ನು ಸಂಪರ್ಕಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಜಿಯೋ-ಸೆನ್ಸಿಂಗ್ ಮತ್ತು ಜಿಯೋ-ಮ್ಯಾಪಿಂಗ್ ನಂತಹ ತಂತ್ರಜ್ಞಾನಗಳನ್ನು ಉಲ್ಲೇಖಿಸಿದ ಅವರು, ಅದು ಹೆಚ್ಚಿನ ಸಹಾಯ ಮಾಡುತ್ತದೆ ಎಂದು ಹೇಳಿದರು. ಶಾಸನ ಮಟ್ಟದಲ್ಲಿ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸಲು ಸರ್ಕಾರದ ನೀತಿಗಳು ಮತ್ತು ಅಧಿಕಾರಶಾಹಿ ಕಾರ್ಯವಿಧಾನಗಳನ್ನು ರೂಪಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಪ್ರತಿ ಮನೆಗೂ ನೀರನ್ನು ಒದಗಿಸಲು ರಾಜ್ಯದ ಪ್ರಮುಖ ಅಭಿವೃದ್ಧಿ ಮಾನದಂಡವಾಗಿ 'ಜಲ ಜೀವನ್ ಮಿಷನ್' ನ ಯಶಸ್ಸನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಅನೇಕ ರಾಜ್ಯಗಳು ಉತ್ತಮ ಕೆಲಸವನ್ನು ಮಾಡಿವೆ ಮತ್ತು ಅನೇಕ ರಾಜ್ಯಗಳು ಈ ದಿಕ್ಕಿನಲ್ಲಿ ಮುನ್ನಡೆಯುತ್ತಿವೆ ಎಂದು ಹೇಳಿದರು. ಈ ವ್ಯವಸ್ಥೆ ಜಾರಿಗೆ ಬಂದ ನಂತರ ನಾವು ಭವಿಷ್ಯದಲ್ಲಿ ಅದೇ ರೀತಿಯಲ್ಲಿ ಅದರ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಶಿಫಾರಸು ಮಾಡಿದರು. ಗ್ರಾಮ ಪಂಚಾಯತಿಗಳು ಜಲ ಜೀವನ್ ಮಿಷನ್ ನ ನೇತೃತ್ವ ವಹಿಸಬೇಕು ಮತ್ತು ಕಾಮಗಾರಿ ಪೂರ್ಣಗೊಂಡ ನಂತರ, ಸಾಕಷ್ಟು ಶುದ್ಧ ನೀರು ಲಭ್ಯವಾಗಿದೆ ಎಂದು ಅವರು ಪ್ರಮಾಣೀಕರಿಸಬೇಕು ಎಂದು ಅವರು ಪ್ರಸ್ತಾಪಿಸಿದ ಅವರು "ಪ್ರತಿ ಗ್ರಾಮ ಪಂಚಾಯತಿಯು ಗ್ರಾಮದಲ್ಲಿ ನಲ್ಲಿ ನೀರನ್ನು ಪಡೆಯುತ್ತಿರುವ ಮನೆಗಳ ಸಂಖ್ಯೆಯನ್ನು ತಿಳಿಸುವ ಮಾಸಿಕ ಅಥವಾ ತ್ರೈಮಾಸಿಕ ವರದಿಯನ್ನು ಸಹ ಆನ್ಲೈನ್ ನಲ್ಲಿ ಸಲ್ಲಿಸಬಹುದು" ಎಂದು ತಿಳಿಸಿದರು. ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಆವರ್ತಕ ನೀರಿನ ಪರೀಕ್ಷೆಯ ವ್ಯವಸ್ಥೆಯನ್ನು ಸಹ ಅಭಿವೃದ್ಧಿಪಡಿಸಬೇಕು ಎಂದು ಅವರು ಹೇಳಿದರು.

ಕೈಗಾರಿಕೆ ಮತ್ತು ಕೃಷಿ ವಲಯಗಳೆರಡರಲ್ಲೂ ನೀರಿನ ಅಗತ್ಯತೆಗಳನ್ನು ಗಮನಿಸಿದ ಪ್ರಧಾನಮಂತ್ರಿಯವರು, ಅವರಿಗೆ ನೀರಿನ ಭದ್ರತೆಯ ಬಗ್ಗೆ ಅರಿವು ಮೂಡಿಸಲು ವಿಶೇಷ ಅಭಿಯಾನಗಳನ್ನು ನಡೆಸುವಂತೆ ಶಿಫಾರಸು ಮಾಡಿದರು. ಅವರು ನೀರಿನ ಸಂರಕ್ಷಣೆಯಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡುವ ಬೆಳೆ ವೈವಿಧ್ಯೀಕರಣ ಮತ್ತು ನೈಸರ್ಗಿಕ ಕೃಷಿಯಂತಹ ತಂತ್ರಗಳ ಉದಾಹರಣೆಗಳನ್ನು ನೀಡಿದರು. ಪ್ರಧಾನಮಂತ್ರಿ ಕೃಷಿ ನೀರಾವರಿ ಯೋಜನೆಯಡಿ ಪ್ರಾರಂಭವಾದ 'ಪ್ರತಿ ಹನಿ ಹೆಚ್ಚು ಬೆಳೆ' ಅಭಿಯಾನವನ್ನು ಎತ್ತಿ ತೋರಿಸಿದ ಅವರು, ದೇಶದಲ್ಲಿ ಇದುವರೆಗೆ 70 ಲಕ್ಷ ಹೆಕ್ಟೇರ್ ಗೂ ಹೆಚ್ಚು ಭೂಮಿಯನ್ನು ಸೂಕ್ಷ್ಮ ನೀರಾವರಿಯಡಿ ತರಲಾಗಿದೆ ಎಂದು ಮಾಹಿತಿ ನೀಡಿದರು. "ಸೂಕ್ಷ್ಮ ನೀರಾವರಿಯನ್ನು ಎಲ್ಲಾ ರಾಜ್ಯಗಳು ನಿರಂತರವಾಗಿ ಉತ್ತೇಜಿಸಬೇಕು" ಎಂದು ಅವರು ತಿಳಿಸಿದರು. ಅಟಲ್ ಭೂಜಲ್ ಸಂರಕ್ಷಣಾ ಯೋಜನೆಯ ಉದಾಹರಣೆಯನ್ನು ನೀಡಿದ ಅವರು, ಅಂತರ್ಜಲ ಮರುಪೂರಣಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಶೇಖರಣಾ ಕೆಲಸದ ಅಗತ್ಯವಿದೆ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿನ ಸ್ಪ್ರಿಂಗ್ ಶೆಡ್ ಅನ್ನು ಪುನರುಜ್ಜೀವನಗೊಳಿಸಲು ಅಭಿವೃದ್ಧಿ ಕಾರ್ಯಗಳನ್ನು ತ್ವರಿತಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಜಲಸಂರಕ್ಷಣೆಗಾಗಿ ರಾಜ್ಯದಲ್ಲಿ ಅರಣ್ಯ ಪ್ರದೇಶವನ್ನು ಹೆಚ್ಚಿಸುವ ಅಗತ್ಯದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಪರಿಸರ ಸಚಿವಾಲಯ ಮತ್ತು ಜಲ ಸಂಪನ್ಮೂಲ ಸಚಿವಾಲಯದ ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು. ನೀರಿನ ಎಲ್ಲಾ ಸ್ಥಳೀಯ ಮೂಲಗಳ ಸಂರಕ್ಷಣೆಯ ಬಗ್ಗೆ ಗಮನ ಹರಿಸುವಂತೆ ಕರೆ ನೀಡಿದ ಅವರು, ಗ್ರಾಮ ಪಂಚಾಯಿತಿಗಳು ನೀರು ಪೂರೈಕೆಯಿಂದ ಹಿಡಿದು ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯವರೆಗೆ ಮಾರ್ಗಸೂಚಿಯನ್ನು ಪರಿಗಣಿಸಿ ಮುಂದಿನ 5 ವರ್ಷಗಳ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಪುನರುಚ್ಚರಿಸಿದರು. ಯಾವ ಗ್ರಾಮದಲ್ಲಿ ಎಷ್ಟು ನೀರಿನ ಅಗತ್ಯವಿದೆ ಮತ್ತು ಅದಕ್ಕಾಗಿ ಯಾವ ಕೆಲಸವನ್ನು ಮಾಡಬಹುದು ಎಂಬುದರ ಆಧಾರದ ಮೇಲೆ ಪಂಚಾಯತಿ ಮಟ್ಟದಲ್ಲಿ ನೀರಿನ ಬಜೆಟ್ ಅನ್ನು ತಯಾರಿಸುವ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಮಂತ್ರಿಯವರು ರಾಜ್ಯಗಳಿಗೆ ಸೂಚಿಸಿದರು. 'ಕ್ಯಾಚ್ ದಿ ರೈನ್' ಅಭಿಯಾನದ ಯಶಸ್ಸನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಇಂತಹ ಅಭಿಯಾನಗಳು ರಾಜ್ಯ ಸರ್ಕಾರದ ಅತ್ಯಗತ್ಯ ಭಾಗವಾಗಬೇಕು, ಅವುಗಳನ್ನು ವಾರ್ಷಿಕವಾಗಿ ಮೌಲ್ಯಮಾಪನ ಮಾಡಬೇಕು ಎಂದು ಪುನರುಚ್ಚರಿಸಿದರು. "ಮಳೆಗಾಗಿ ಕಾಯುವ ಬದಲು, ಮಳೆಗೆ ಮುಂಚಿತವಾಗಿ ಎಲ್ಲಾ ಯೋಜನೆಗಳನ್ನು ಮಾಡಿಕೊಳ್ಳಬೇಕು" ಎಂದು ಅವರು ಹೇಳಿದರು.

ಜಲಸಂರಕ್ಷಣೆ ಕ್ಷೇತ್ರದಲ್ಲಿ ವೃತ್ತಾಕಾರದ ಆರ್ಥಿಕತೆಯ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಈ ಬಜೆಟ್ ನಲ್ಲಿ ಸರ್ಕಾರವು ವೃತ್ತಾಕಾರದ ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡಿದೆ ಎಂದು ಮಾಹಿತಿ ನೀಡಿದರು. "ನೀರನ್ನು ಸಂಸ್ಕರಿಸಿದಾಗ, ನೀರನ್ನು ಮರುಬಳಕೆ ಮಾಡಲಾಗುತ್ತದೆ. ಶುದ್ಧ ನೀರನ್ನು ಸಂರಕ್ಷಿಸಲಾಗುತ್ತದೆ. ಇದು ಇಡೀ ಪರಿಸರ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ. ಅಂತೆಯೇ ನೀರಿನ ಸಂಸ್ಕರಣೆ, ನೀರಿನ ಮರುಬಳಕೆ ಅತ್ಯಗತ್ಯ" ಎಂದು ಅವರು ಹೇಳಿದರು. ವಿವಿಧ ಉದ್ದೇಶಗಳಿಗಾಗಿ ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಲು ರಾಜ್ಯಗಳು ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಅವರು ಪುನರುಚ್ಚರಿಸಿದರು. "ನಮ್ಮ ನದಿಗಳು, ನಮ್ಮ ಜಲಮೂಲಗಳು ಇಡೀ ಜಲ ಪರಿಸರ ವ್ಯವಸ್ಥೆಯ ಅತ್ಯಂತ ಪ್ರಮುಖ ಭಾಗವಾಗಿದೆ" ಎಂದು ಹೇಳಿದ ಪ್ರಧಾನಮಂತ್ರಿಯವರು, ಪ್ರತಿಯೊಂದು ರಾಜ್ಯದಲ್ಲೂ ತ್ಯಾಜ್ಯ ನಿರ್ವಹಣೆ ಮತ್ತು ಒಳಚರಂಡಿ ಸಂಸ್ಕರಣೆಯ ಜಾಲವನ್ನು ರಚಿಸಲು ಒತ್ತು ನೀಡಿದರು. "'ನಮಾಮಿ ಗಂಗೆ ಮಿಷನ್' ಅನ್ನು ಒಂದು ಮಾದರಿಯಾಗಿ ತೆಗೆದುಕೊಂಡು, ಇತರ ರಾಜ್ಯಗಳು ಸಹ ನದಿಗಳ ಸಂರಕ್ಷಣೆಗಾಗಿ ಇದೇ ರೀತಿಯ ಅಭಿಯಾನಗಳನ್ನು ಪ್ರಾರಂಭಿಸಬಹುದು. ನೀರನ್ನು ಸಹಕಾರ ಮತ್ತು ಸಮನ್ವಯದ ವಿಷಯವನ್ನಾಗಿ ಮಾಡುವುದು ಪ್ರತಿಯೊಂದು ರಾಜ್ಯದ ಜವಾಬ್ದಾರಿಯಾಗಿದೆ," ಎಂದು ಪ್ರಧಾನ ಮಂತ್ರಿಯವರು ಮುಕ್ತಾಯಗೊಳಿಸಿದರು.

ಎಲ್ಲಾ ರಾಜ್ಯಗಳ ಜಲಸಂಪನ್ಮೂಲ ಸಚಿವರು ಪ್ರಥಮ ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ಜಲ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • చెచర్ల ఉమాపతి January 30, 2023

    🙏🚩🌹🌹🛕🇮🇳🇮🇳🇮🇳🛕🌹🌹🚩👏
  • S Babu January 09, 2023

    🙏
  • CHANDRA KUMAR January 07, 2023

    Double Spirals Cone Economy (द्वि चक्रीय शंकु अर्थव्यवस्था) वर्तमान समय में भारतीय अर्थव्यवस्था को नई आकृति प्रदान करने की जरूरत है। अभी भारतीय अर्थव्यवस्था वृत्ताकार हो गया है, भारतीय किसान और मजदूर प्राथमिक वस्तु का उत्पादन करता है, जिसका कीमत बहुत कम मिलता है। फिर उसे विश्व से महंगी वस्तु खरीदना पड़ता है, जिसका कीमत अधिक होता है। इस चक्रीय अर्थव्यवस्था में प्राथमिक सस्ता उत्पाद विदेश जाता है और महंगा तृतीयक उत्पाद विदेश से भारत आता है। यह व्यापार घाटा को जन्म देता है। विदेशी मुद्रा को कमी पैदा करता है। अब थोड़ा अर्थव्यवस्था को आकृति बदलकर देखिए, क्योंकि अर्थव्यवस्था का आकृति बदलना आसान है। लेकिन भारत सरकार अर्थव्यवस्था का आकार बढ़ाने के प्रयास में लगा है, वह भी विदेशी निवेश से, यह दूरदर्शिता नहीं है। भारतीय अर्थव्यवस्था में दो तरह की मुद्रा का प्रचलन शुरू करना चाहिए, 80% मुद्रा डिजिटल करेंसी के रूप में और 20% मुद्रा वास्तविक मुद्रा के रूप में। 1. इसके लिए, भारत सरकार अपने कर्मचारियों को वेतन के रूप में 80% वेतन डिजिटल करेंसी में और 20% वेतन भारतीय रुपए में दिया जाए। 2. अनुदान तथा ऋण भी 80% डिजिटल करेंसी के रूप में और 20% भारतीय रुपए के रूप में दिया जाए। 3. इसका फायदा यह होगा कि भारतीय मुद्रा दो भागों में बंट जायेगा। 80% डिजिटल करेंसी से केवल भारत में निर्मित स्वदेशी सामान ही खरीदा और बेचा जा सकेगा। 4. इससे स्वदेशी वस्तुओं का उपभोग बढ़ेगा, व्यापार घाटा कम होगा। 5. महंगे विदेशी सामान को डिजिटल करेंसी से नहीं खरीदा जा सकेगा। 6. वर्तमान समय में सरकारी कर्मचारी अपने धन का 70 से 80% का उपयोग केवल विदेशी ब्रांडेड सामान खरीदने में खर्च होता है। इससे घरेलू अर्थव्यवस्था पर नकारात्मक प्रभाव पड़ता है और सरकार का अधिकतम धन विदेशी अर्थव्यवस्था को गति प्रदान करता है। इसीलिए भारत सरकार को चाहिए की जो वेतन सरकारी कर्मचारियों को दिया जा रहा है उसका उपयोग घरेलू अर्थव्यवस्था को गति देने में किया जाना चाहिए। 7. भारत के उद्योगपति और अत्यधिक संपन्न व्यक्ति अपने धन का उपयोग स्वदेशी वस्तुओं को खरीदने में करे। व्यर्थ का सम्मान पाने के लिए विदेशी ब्रांड पर पैसा खर्च न करे। इसके लिए भी, यह अनिवार्य कर दिया जाए कि यदि किसी व्यक्ति को 20% से अधिक का लाभ प्राप्त होता है तो उसके लाभ का धन दो भागों में बदल दिया जायेगा, 80% भाग डिजिटल करेंसी में और 20% भाग वास्तविक रुपए में। 8. वर्तमान समय में जब वैश्विक मंदी दस्तक देने वाला है, ऐसी समय में भारतीयों को ब्रांडेड वस्तुओं को तरफ आकर्षित होने के बजाय, घरेलू अर्थव्यवस्था को गति देने के लिए, स्वदेशी वस्तुओं का खरीद करना चाहिए। इससे रोजगार सृजन होगा। अब थोड़ा समझते हैं, द्वि चक्रीय शंकु अर्थव्यवस्था को। 1. इसमें दो शंकु है, एक शंकु विदेशी अर्थव्यवस्था को दर्शाता है, और दूसरा शंकु घरेलू अर्थव्यवस्था को दर्शाता है। 2. दोनों शंकु के मध्य में भारत सरकार है, जिसे दोनों अर्थव्यवस्था को नियंत्रित करना चाहिए। यदि आप नाव को नियंत्रित नहीं करेंगे, तब वह नाव दिशाहीन होकर समुद्र में खो जायेगा, इसका फायदा समुद्री डाकू उठायेगा। 3. भारत सरकार को चाहिए की वह दोनों शंकु को इस तरह संतुलित करे की , धन का प्रवाह विदेश अर्थव्यवस्था की तरफ नकारात्मक और घरेलू अर्थव्यवस्था की तरफ सकारात्मक हो। 4. इसके लिए, भारत सरकार को चाहिए की वह अपना बजट का 80% हिस्सा डिजिटल करेंसी के रूप में घरेलू अर्थव्यवस्था को दे, जबकि 20% छपाई के रुपए के रूप में विदेशी अर्थव्यवस्था हेतु उपलब्ध कराए। 5. घरेलू अर्थव्यवस्था को विदेशी अर्थव्यवस्था से अलग किया जाए। विदेशी वस्तुओं की बिक्री हेतु भारत में अलग स्टोर बनाने के लिए बाध्य किया जाए। विदेशी वस्तुओं को खरीदने के लिए अलग मुद्रा (छपाई के रुपए) का इस्तेमाल को ही स्वीकृति दिया जाए। 6. जब दूसरा देश दबाव डाले की हमें भारत में व्यापार करने में बढ़ा उत्पन्न किया जा रहा है, तब उन्हें स्पष्ट कहा जाना चाहिए की हम अपने देश में रोजगार सृजन करने , भुखमरी को खत्म करने का प्रयास कर रहे हैं। 7. दूसरे देशों के राष्ट्रध्यक्ष को धोखा देने के लिए, उन्हें कहा जाए की अभिभ्रात में लोकसभा चुनाव है। लोकसभा चुनाव खत्म होते ही भारतीय अर्थव्यवस्था आप सभी के लिए खोल देंगे, ताकि विदेशियों को भारत में व्यापार करना सुगम हो जाए। 8. अभी भारतीय श्रमिक और मजदूर स्पाइरल शंकु के सबसे नीचे है और एक बार हाथ से पैसा बाजार में खर्च हो गया तो अगले कई दिनों बाद अथवा अगले वर्ष ही पैसा हाथ में आता है। क्योंकि कृषि उत्पाद वर्ष में 2 बार हो बेचने का मौका मिलता है किसानों को। 9. spiral cone में पैसा जितनी तेजी से निम्न वर्ग से उच्च वर्ग को तरफ बढ़ता है, उतनी ही तेजी से निम्न वर्ग का गरीबी बढ़ता है, परिणाम स्वरूप स्वदेशी अर्थव्यवस्था का शंकु का शीर्ष छोटा होता जाता है और निम्न वर्ग का व्यास बढ़ता जाता है। 10. भारत सरकार को अब अनुदान देने के बजाय, निवेश कार्य में धन लगाना चाहिए। ताकि घरेलू अर्थव्यवस्था में वृद्धि हो। 11. अभी भारत सरकार का पैसे जैसे ही भारतीय श्रमिक, भारतीय नौकरशाह को मिलता है। वैसे ही विदेशी कंपनियां, ब्रांडेड सामान का चमक दिखाकर( विज्ञापन द्वारा भ्रमित कर), उस धन को भारतीय घरेलू अर्थव्यवस्था से चूस लेता है और विदेश भेज देता है। 12. ऐसा होने से रोकने के लिए, भारतीयों को दो प्रकार से धन मुहैया कराया जाए। ताकि विदेशी ब्रांडेड सामान खरीद ही न पाए। जो भारतीय फिर भी अपने धन का बड़ा हिस्सा विदेशी सामान खरीदने का प्रयास करे उन्हें अलग अलग तरीके से हतोत्साहित करने का उपाय खोजा जाए। 13. भारत में किसी भी वस्तु के उत्पादन लागत का 30% से अधिक लाभ अर्जित करना, अपराध घोषित किया जाए। इससे भारतीय निम्न वर्ग कम धन में अधिक आवश्यक सामग्री खरीद सकेगा। 14. विदेश में कच्चा कृषि उत्पाद की जगह पैकेट बंद तृतियक उत्कृष्ट उत्पाद भेजा जाए। डोमिनोज पिज्जा की जगह देल्ही पिज्जा को ब्रांड बनाया जाए। 15. कच्चा धात्विक खनिज विदेश भेजने के बजाय, घरेलू उद्योग से उत्कृष्ट धात्वीक सामग्री बनाकर निर्यात किया जाए। 16. उद्योग में अकुशल मजदूर को बुलाकर ट्रेनिंग देकर कुशल श्रमिक बनाया जाए। 17. विदेशी अर्थव्यवस्था वाले से शंकु से धन चूसकर, घरेलू अर्थव्यवस्था वाले शंकु की तरफ प्रवाहित किया जाए। यह कार्य दोनों शंकु के मध्य बैठे भारत सरकार को करना ही होगा। 18. यदि भारत सरकार चीन को सरकार की तरह सक्रियता दिखाए तो भारतीय अर्थव्यवस्था का स्वर्णिम दौर शुरू हो सकता है। 19. अभी तो भारतीय अर्थव्यवस्था से धन तेजी से विदेश को ओर जा रहा है, और निवेश एक तरह का हवा है जो मोटर से पानी निकालने के लिए भेजा जाता है। 20. बीजेपी को वोट भारतीय बेरोजगारों, श्रमिकों और किसानों से ही मांगना है तो एक वर्ष इन्हें ही क्यों न तृप्त किया जाए। फिर चुनाव जीतकर आएंगे, तब उद्योगपतियों और पूंजीपतियों के लिए चार वर्ष तक जी भरकर काम कीजिएगा।
  • Vishal Kumar January 07, 2023

    Jai ho
  • प्रकाश सिंह January 07, 2023

    प्रकाश सिंह ग्राम पंचायत पाली जिला नागौर तहसील डेगाना किसान छोटा सा मोदी जी नमन नमन नमस्कार आप ऐसे दासा दे रहे हो किसान लोगों को किसी के खाते में छोटे-मोटे गरीब आदमी को कोई के भी पैसा आ रहा है तो आ रहा है किसी के नहीं आ रहा था राशन कार्ड बनाओ तो जनता को राशन कार्ड बना लिया था अभी किसी का है किसी के नहीं आया ऐसा क्या है बताते तो आप बड़ी बड़ी बातें फेंक देते हैं करते कुछ भी नहीं है जय हिंद जय भारत
  • virender gihara January 07, 2023

    modi ji jindabad BJP virendar gihara zila upadhyax zila uttar paschim Delhi
  • Dr Upendra Kumar Oli January 07, 2023

    माननीय प्रधान मंत्री महोदय इतना अधिक विकास होने के बाद भी हम दिल्ली , हिमाचल एवम अन्य जगह अपना विश्वास क्यों नही बना पा रहे हैं यह एक बहुत बड़ी सोचने की बात है , मैं बहुत व्यथित हूं, इस पर अलग से कार्य करने की जरूरत है हम क्यों उन समर्थन न करने बालों के दिलों में जगह नहीं बना पा रहे हैं जो की सब कुछ मिलने के बाद भी सरकार को समर्थन नहीं दे रहे हैं डा उपेंद्र कुमार ओली हल्द्वानी उत्तराखंड।
  • Narayan Singh Chandana January 07, 2023

    जल ही जीवन है माननीय प्रधानमंत्री जी का संदेश एवं पहल आमजन के हित में
  • Hanif Ansari January 06, 2023

    Jai hind Jai bjp manniya modi ji
  • Hanif Ansari January 06, 2023

    Namaste bharat bhumi hindu
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How has India improved its defence production from 2013-14 to 2023-24 since the launch of

Media Coverage

How has India improved its defence production from 2013-14 to 2023-24 since the launch of "Make in India"?
NM on the go

Nm on the go

Always be the first to hear from the PM. Get the App Now!
...
PM Modi pays tribute to Shree Shree Harichand Thakur on his Jayanti
March 27, 2025

The Prime Minister, Shri Narendra Modi paid tributes to Shree Shree Harichand Thakur on his Jayanti today. Hailing Shree Thakur’s work to uplift the marginalised and promote equality, compassion and justice, Shri Modi conveyed his best wishes to the Matua Dharma Maha Mela 2025.

In a post on X, he wrote:

"Tributes to Shree Shree Harichand Thakur on his Jayanti. He lives on in the hearts of countless people thanks to his emphasis on service and spirituality. He devoted his life to uplifting the marginalised and promoting equality, compassion and justice. I will never forget my visits to Thakurnagar in West Bengal and Orakandi in Bangladesh, where I paid homage to him.

My best wishes for the #MatuaDharmaMahaMela2025, which will showcase the glorious Matua community culture. Our Government has undertaken many initiatives for the Matua community’s welfare and we will keep working tirelessly for their wellbeing in the times to come. Joy Haribol!

@aimms_org”