Quoteಪುರಿ ಮತ್ತು ಹೌರಾ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರಧಾನಮಂತ್ರಿ ಚಾಲನೆ ನೀಡುವರು
Quoteಒಡಿಶಾದಲ್ಲಿ 100% ವಿದ್ಯುದ್ದೀಕೃತ ರೈಲ್ವೆ ಜಾಲವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ
Quoteಪುರಿ ಮತ್ತು ಕಟಕ್ ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 18 ರಂದು ಮಧ್ಯಾಹ್ನ ಸುಮಾರು 12.30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಡಿಶಾದಲ್ಲಿ ರೂ 8000 ಕೋಟಿಗೂ ಹೆಚ್ಚು ಮೌಲ್ಯದ ಹಲವಾರು ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪುರಿ ಮತ್ತು ಹೌರಾ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರಧಾನಮಂತ್ರಿ ಚಾಲನೆ ನೀಡಲಿದ್ದಾರೆ. ಈ ರೈಲು ಒಡಿಶಾದ ಖೋರ್ಧಾ, ಕಟಕ್, ಜಾಜ್ಪುರ್, ಭದ್ರಕ್, ಬಾಲಸೋರ್ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳದ ಪಶ್ಚಿಮ್ ಮೆದಿನಿಪುರ್, ಪುರ್ಬಾ ಮೇದಿನಿಪುರ್ ಜಿಲ್ಲೆಗಳ ಮೂಲಕ ಹಾದು ಹೋಗಲಿದೆ. ಈ ರೈಲು ಕಡಿಮೆ ಸಮಯದಲ್ಲಿ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಅನುಕೂಲಕರ ಪ್ರಯಾಣದ ಅನುಭವವನ್ನು ನೀಡುತ್ತದೆ.  ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಸ್ಥಳೀಯ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಚುರುಕುಗೊಳಿಸುತ್ತದೆ.

ಪುರಿ ಮತ್ತು ಕಟಕ್ ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪುನರಾಭಿವೃದ್ಧಿಗೊಂಡ ರೈಲ್ವೆ ನಿಲ್ದಾಣಗಳು ಪ್ರಯಾಣಿಕರಿಗೆ ವಿಶ್ವ ದರ್ಜೆಯ ಅನುಭವವನ್ನು ಒದಗಿಸಲು ಎಲ್ಲಾ ಆಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದಲ್ಲಿ 100% ವಿದ್ಯುದ್ದೀಕೃತ ರೈಲ್ವೆ ಜಾಲವನ್ನು ಉದ್ಘಾಟಿಸಲಿದ್ದಾರೆ. ಇದು ಕಾರ್ಯಾಚರಣೆ ಮತ್ತು ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ.

ಸಂಬಲ್ಪುರ-ತಿತ್ಲಗಢ್ ರೈಲು ಮಾರ್ಗದ ಡಬ್ಲಿಂಗ್ ಅನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ಅವರು ಅಂಗುಲ್-ಸುಕಿಂದಾ ನಡುವೆ ಹೊಸ ಬ್ರಾಡ್ ಗೇಜ್ ರೈಲು ಮಾರ್ಗವನ್ನು, ಮನೋಹರಪುರ-ರೂರ್ಕೆಲಾ-ಝಾರ್ಸುಗುಡ-ಜಮ್ಗಾವನ್ನು ಸಂಪರ್ಕಿಸುವ ಮೂರನೇ ಮಾರ್ಗ ಮತ್ತು ಬಿಚುಪಾಲಿ-ಜರ್ತರ್ಭ ನಡುವಿನ ಹೊಸ ಬ್ರಾಡ್ ಗೇಜ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದು ಒಡಿಶಾದಲ್ಲಿ ಉಕ್ಕು, ವಿದ್ಯುತ್ ಮತ್ತು ಗಣಿಗಾರಿಕೆ ವಲಯಗಳಲ್ಲಿ ತ್ವರಿತ ಕೈಗಾರಿಕಾ ಬೆಳವಣಿಗೆಯ ಪರಿಣಾಮವಾಗಿ ಹೆಚ್ಚುತ್ತಿರುವ ಸಂಚಾರಿ ಬೇಡಿಕೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಮತ್ತು ಈ ರೈಲು ವಿಭಾಗಗಳಲ್ಲಿ ಪ್ರಯಾಣಿಕರ ಸಂಖ್ಯೆಯ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

 

  • Jitendra Kumar May 22, 2025

    🙏🙏🙏
  • Tribhuwan Kumar Tiwari May 21, 2023

    वंदेमातरम सादर प्रणाम सर सादर त्रिभुवन कुमार तिवारी पूर्व सभासद लोहिया नगर वार्ड पूर्व उपाध्यक्ष भाजपा लखनऊ महानगर उप्र भारत
  • Rakesh Singh May 20, 2023

    जय हो 🙏🏻
  • Arun Gupta, Beohari (484774) May 19, 2023

    नमो नमो 🙏
  • JyothiJonnala May 18, 2023

    Jay Jagannath
  • Mitesh Mistri May 18, 2023

    જય શ્રી રામ
  • P M NATARAJAN May 18, 2023

    I feel so happy.
  • Rakesh Singh May 18, 2023

    बहुत बहुत बधाई 💐
  • Bhagat Ram Chauhan May 18, 2023

    बहुत बहुत बधाई एवं शुभकामनाएं
  • PRATAP SINGH May 18, 2023

    🚩🚩🚩🚩🚩🚩🚩🚩 श्री मोदी जी को जय श्री राम।
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
PLI Scheme - A Game Changer for India's Textile Sector

Media Coverage

PLI Scheme - A Game Changer for India's Textile Sector
NM on the go

Nm on the go

Always be the first to hear from the PM. Get the App Now!
...
PM welcomes Group Captain Shubhanshu Shukla on return to Earth from his historic mission to Space
July 15, 2025

The Prime Minister today extended a welcome to Group Captain Shubhanshu Shukla on his return to Earth from his landmark mission aboard the International Space Station. He remarked that as India’s first astronaut to have journeyed to the ISS, Group Captain Shukla’s achievement marks a defining moment in the nation’s space exploration journey.

In a post on X, he wrote:

“I join the nation in welcoming Group Captain Shubhanshu Shukla as he returns to Earth from his historic mission to Space. As India’s first astronaut to have visited International Space Station, he has inspired a billion dreams through his dedication, courage and pioneering spirit. It marks another milestone towards our own Human Space Flight Mission - Gaganyaan.”