Quoteಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮ
Quote11 ಸಂಪುಟಗಳ ಮೊದಲ ಸರಣಿ ಬಿಡುಗಡೆಯಾಗಲಿದೆ

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ' 11 ಸಂಪುಟಗಳ ಮೊದಲ ಸರಣಿಯನ್ನು 2023 ರ ಡಿಸೆಂಬರ್ 25 ರಂದು ಸಂಜೆ 4:30 ಕ್ಕೆ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರದ ಸೇವೆಗೆ ಅಪಾರ ಕೊಡುಗೆ ನೀಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಅಮೃತ್ ಕಾಲದಲ್ಲಿ, ಸೂಕ್ತ ಮಾನ್ಯತೆ ನೀಡಬೇಕು ಎನ್ನುವುದು ಪ್ರಧಾನ ಮಂತ್ರಿಯವರ ಚಿಂತನೆಯಾಗಿದೆ. 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳು' ಈ ದಿಕ್ಕಿನಲ್ಲಿ ಒಂದು ಪ್ರಯತ್ನವಾಗಿದೆ.

11 ಸಂಪುಟಗಳಲ್ಲಿ ಸುಮಾರು 4,000 ಪುಟಗಳಲ್ಲಿ ವಿಸ್ತಾರವಾಗಿ ಹರಡಿರುವ ದ್ವಿಭಾಷಾ (ಇಂಗ್ಲಿಷ್ ಮತ್ತು ಹಿಂದಿ) ಕೃತಿಯು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಬರಹಗಳು ಮತ್ತು ಭಾಷಣಗಳ ಸಂಗ್ರಹವಾಗಿದೆ, ಇವುಗಳನ್ನು ದೇಶದ ಮೂಲೆ ಮೂಲೆಗಳಿಂದ ಸಂಗ್ರಹಿಸಲಾಗಿದೆ. ಈ ಸಂಪುಟಗಳು ಜ್ಞಾಪಕ ಪತ್ರಗಳು/ಮನವಿಗಳು ಸೇರಿದಂತೆ ಅವರ ಅಪ್ರಕಟಿತ ಪತ್ರಗಳು, ಲೇಖನಗಳು ಮತ್ತು ಭಾಷಣಗಳನ್ನು ಒಳಗೊಂಡಿವೆ; 1907ರಲ್ಲಿ ಅವರು ಪ್ರಾರಂಭಿಸಿದ ಹಿಂದಿ ವಾರಪತ್ರಿಕೆ 'ಅಭ್ಯುದಯ'ದ ಸಂಪಾದಕೀಯ ವಿಷಯಗಳು; ಅವರು ಕಾಲಕಾಲಕ್ಕೆ ಬರೆದ ಲೇಖನಗಳು, ಕರಪತ್ರಗಳು ಮತ್ತು ಕಿರುಪುಸ್ತಕಗಳು; 1903 ಮತ್ತು 1910 ರ ನಡುವೆ ಆಗ್ರಾ ಮತ್ತು ಅವಧ್ ಸಂಯುಕ್ತ ಪ್ರಾಂತ್ಯಗಳ ವಿಧಾನ ಪರಿಷತ್ತಿನಲ್ಲಿ ಮಾಡಿದ ಎಲ್ಲಾ ಭಾಷಣಗಳು; ರಾಯಲ್ ಕಮಿಷನ್ ಮುಂದೆ ನೀಡಿದ ಹೇಳಿಕೆಗಳು; 1910 ಮತ್ತು 1920 ರ ನಡುವೆ ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ನಲ್ಲಿ ಮಸೂದೆಗಳನ್ನು ಮಂಡಿಸುವಾಗ ಮಾಡಿದ ಭಾಷಣಗಳು; ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸ್ಥಾಪನೆಯ ಮೊದಲು ಮತ್ತು ನಂತರ ಬರೆದ ಪತ್ರಗಳು, ಲೇಖನಗಳು ಮತ್ತು ಭಾಷಣಗಳು; ಮತ್ತು 1923 ಮತ್ತು 1925 ರ ನಡುವೆ ಅವರು ಬರೆದ ಡೈರಿ. ಇದರಲ್ಲಿ ಸೇರಿದೆ. 

ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಬರೆದ ಮತ್ತು ಮಾತನಾಡಿದ ದಾಖಲೆಗಳನ್ನು ಸಂಶೋಧಿಸುವ ಮತ್ತು ಸಂಕಲಿಸುವ ಕೆಲಸವನ್ನು ಮಹಾಮಾನ ಮಾಳವೀಯ ಮಿಷನ್ ಕೈಗೆತ್ತಿಕೊಂಡಿತು, ಇದು ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಆದರ್ಶಗಳು ಮತ್ತು ಮೌಲ್ಯಗಳನ್ನು ಪ್ರಚಾರ ಮಾಡಲು ಮೀಸಲಾಗಿರುವ ಸಂಸ್ಥೆಯಾಗಿದೆ.  ಖ್ಯಾತ ಪತ್ರಕರ್ತ ಶ್ರೀ ರಾಮ್ ಬಹದ್ದೂರ್ ರಾಯ್ ನೇತೃತ್ವದ ಮಿಷನ್ ನ ಕಟಿಬದ್ಧ ತಂಡವು ಭಾಷೆ ಮತ್ತು ಪಠ್ಯವನ್ನು ಬದಲಾಯಿಸದೆ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಮೂಲ ಸಾಹಿತ್ಯದ ಮೇಲೆ ಕೆಲಸ ಮಾಡಿದೆ. ಈ ಪುಸ್ತಕಗಳ ಪ್ರಕಟಣೆಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಬರುವ ಪ್ರಕಾಶನ ವಿಭಾಗವು ಮಾಡಿದೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಹೆಚ್ಚಿಸಲು ಅಪಾರವಾಗಿ ಕೆಲಸ ಮಾಡಿದ ಅತ್ಯುತ್ತಮ ವಿದ್ವಾಂಸ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿ ಅವರನ್ನು ಸ್ಮರಿಸಲಾಗುತ್ತದೆ.

 

  • Reena chaurasia September 09, 2024

    bjp
  • Amit Kumar August 25, 2024

    आदरणीय प्रधानमंत्री जी भारत सरकार मेरा नाम अमित कुमार मैं विकलांग हूं मेष बिहार सुपौल से निवासी हूं मैं आपके ऑफिस में एप्लीकेशन दिए थे इसलिए लगभग एक महीना से जय हो गया है मेरे पास दिक्कत परेशानी है तब हम आपको एप्लीकेशन आपके ऑफिस में दिए थे लेकिन हम बिहार से इतना दूर से चलकर आया हूं और यहीं पर रहते हैं स्टेशन पर जी आप लोग मुझे मेरे बर्थडे पर ध्यान देते हुए मैं आप लोगों से चरण में कोटि-कोटि नमन करता हूं जय हिंद जय भारत 9262955847
  • Dhajendra Khari February 20, 2024

    ओहदे और बड़प्पन का अभिमान कभी भी नहीं करना चाहिये, क्योंकि मोर के पंखों का बोझ ही उसे उड़ने नहीं देता है।
  • Dhajendra Khari February 19, 2024

    विश्व के सबसे लोकप्रिय राजनेता, राष्ट्र उत्थान के लिए दिन-रात परिश्रम कर रहे भारत के यशस्वी प्रधानमंत्री श्री नरेन्द्र मोदी जी का हार्दिक स्वागत, वंदन एवं अभिनंदन।
  • Dhajendra Khari February 13, 2024

    यह भारत के विकास का अमृत काल है। आज भारत युवा शक्ति की पूंजी से भरा हुआ है।
  • Dhajendra Khari February 10, 2024

    Modi sarkar fir ek baar
  • Raju Saha February 06, 2024

    bjp jindabad
  • Indrajit Das February 03, 2024

    joy Modiji
  • Ranjit Sarkar January 31, 2024

    🙏🙏
  • Ranjit Sarkar January 31, 2024

    🙏🙏
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Google CEO Sundar Pichai meets PM Modi at Paris AI summit:

Media Coverage

Google CEO Sundar Pichai meets PM Modi at Paris AI summit: "Discussed incredible opportunities AI will bring to India"
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಫೆಬ್ರವರಿ 2025
February 12, 2025

Appreciation for PM Modi’s Efforts to Improve India’s Global Standing